ಬಿಜೆಪಿಯವರು ಮೊದಲು ಸಿಎಜಿ ವರದಿ ಅಧ್ಯಯನ ಮಾಡಲಿ


Team Udayavani, Dec 9, 2018, 6:00 AM IST

vr-sudarshan.jpg

ಬೆಂಗಳೂರು: ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದಾಗ 35 ಸಾವಿರ ಕೋಟಿ ರೂ. ಹಣ ದುರುಪಯೋಗವಾಗಿದೆ ಎಂದು ಬಿಜೆಪಿಯವರು ಆರೋಪ ಮಾಡುವ ಮುನ್ನ ಅಧ್ಯಯನ ಮಾಡಬೇಕಿತ್ತು ಎಂದು ಕೆಪಿಸಿಸಿ ಉಪಾಧ್ಯಕ್ಷ ಹಾಗೂ ವಿಧಾನಪರಿಷತ್‌ ಮಾಜಿ ಸಭಾಪತಿ ವಿ.ಆರ್‌.ಸುದರ್ಶನ್‌ ಹೇಳಿದ್ದಾರೆ.

ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸರ್ಕಾರದಲ್ಲಿ ಯಾವುದೇ ಹಣ ದುರುಪಯೋಗವಾದರೂ ಅದರ ಅಧ್ಯಯನಕ್ಕೆ ಸಾರ್ವಜನಿಕ ಲೆಕ್ಕಪತ್ರ ಸಮಿತಿ ಇದೆ. ಬಿಜೆಪಿಯ ಆರ್‌.ಅಶೋಕ್‌ ಅವರೇ ಆ ಸಮಿತಿ ಅಧ್ಯಕ್ಷರಾಗಿದ್ದಾರೆ. ಆದರೂ ಮತ್ತೂಂದು ಸದನ ಸಮಿತಿ ರಚನೆಗೆ ಬಿಜೆಪಿ ನಾಯಕರು ಆಗ್ರಹಿಸುವ ಮೂಲಕ ಅಶೋಕ್‌ ಅವರ ಸಾಮರ್ಥ್ಯ ಅನುಮಾನಿಸುತ್ತಿದ್ದಾರೆ ಎಂದು ಲೇವಡಿ ಮಾಡಿದರು.

ಸಿಎಜಿ ವರದಿ ಆಧರಿಸಿ ಪುಸ್ತಕ ಬಿಡುಗಡೆ ಮಾಡಿ ರಾಜಕೀಯ ಲಾಭ ಮಾಡಿಕೊಳ್ಳಲು ಬಿಜೆಪಿಯವರು ಮುಂದಾಗಿದ್ದಾರೆ. ಆದರೆ, ಅವರ ಮಾತುಗಳು ಬಾಲಿಶತನದ್ದು . ಕನಿಷ್ಠ ಆಡಳಿತದ ಅನುಭವ ಇರುವ ಯಡಿಯೂರಪ್ಪ, ಜಗದೀಶ್‌ ಶೆಟ್ಟರ್‌ ಅವರ ಜತೆಯಲ್ಲಾದರೂ ಮಾತುಕತೆ ನಡೆಸಬೇಕಿತ್ತು. ಇದ್ಯಾವುದೂ ಮಾಡದೆ ಅನನುಭವಿಗಳಂತೆ ಸಿ.ಟಿ.ರವಿ ಅವರಂತಹ ನಾಯಕರು ಮಾತನಾಡುತ್ತಾರೆ ಎಂದರೆ ಹೇಗೆ ಎಂದು ಪ್ರಶ್ನಿಸಿದರು.

ಪ್ರತಿ ವರ್ಷ ಆಡಳಿತ ವ್ಯವಸ್ಥೆಯಲ್ಲಿ  ಕೆಲವು ಹೊಂದಾಣಿಕೆಗಳು ನಡೆಯುತ್ತವೆ. ಖರ್ಚು, ವೆಚ್ಚಕ್ಕೆ ಅನುಪಾಲನಾ ವರದಿಯನ್ನು ನೀಡುವುದು ವಿಳಂಬವಾಗುತ್ತದೆ. 2001ರಿಂದಲೂ ಈ ರೀತಿ ಬಹಳಷ್ಟು ಅನುಪಾಲನಾ ವರದಿಗಳು ಸಲ್ಲಿಕೆಯಾಗಿಲ್ಲ. ಅದರಲ್ಲೂ ಬಿಜೆಪಿ ಆಡಳಿತದ್ದ ಅವಧಿಯಲ್ಲಿಯೇ ಹೆಚ್ಚು ವರದಿಗಳು ಸಲ್ಲಿಕೆಯಾಗಿಲ್ಲ. ಇನ್ನು ಲೆಕ್ಕ ಹೊಂದಾಣಿಕೆಯಾಗದ ಸಾಕಷ್ಟು ವಿಷಯಗಳು ಪ್ರತಿ ವರ್ಷವೂ ಇದ್ದೇ ಇರುತ್ತದೆ. ಬಿಜೆಪಿ ಸರ್ಕಾರದಲ್ಲಿ ಯಡಿಯೂರಪ್ಪ, ಸದಾನಂದಗೌಡ, ಜಗದೀಶ್‌ ಶೆಟ್ಟರ್‌ ಅವರು ಮುಖ್ಯಮಂತ್ರಿಯಾಗಿದ್ದಾಗ ಸರಾಸರಿ ಶೇ.42ರಷ್ಟು ಖರ್ಚು, ವೆಚ್ಚಗಳ ಲೆಕ್ಕ ಹೊಂದಾಣಿಕೆಯಾಗಿಲ್ಲ. ಸಿದ್ದರಾಮಯ್ಯ ಮುಖ್ಯಮಂತ್ರಿ ಆದ ಮೇಲೆ ಅದರ ಪ್ರಮಾಣ ಶೇ.19ರಷ್ಟಾಗಿದೆ ಎಂದು ತಿರುಗೇಟು ನೀಡಿದರು.

ಖರ್ಚು ಮಾಡಿದ ವೆಚ್ಚಗಳ ಬಗ್ಗೆ ಅಧಿಕಾರಿಗಳು ಆಯಾ ಹಣಕಾಸಿನ ವರ್ಷದಲ್ಲೇ ವರದಿ ಸಲ್ಲಿಸದೇ ಇರುವುದರಿಂದ  ಈ ರೀತಿಯ ವ್ಯತ್ಯಾಸಗಳಾಗಿರುತ್ತವೆ. ಅದು ಯಾವುದೇ ಹಗರಣ, ಭ್ರಷ್ಟಾಚಾರವೂ ಅಲ್ಲ. ಆರೋಪ ಮಾಡಿರುವ ಬಿಜೆಪಿ ಶಾಸಕರಿಗೆ ಈ ಬಗ್ಗೆ ಸರಿಯಾದ ಮಾತಿ ಇಲ್ಲ ಎಂದರು.

ಈ ರೀತಿಯ ಆರ್ಥಿಕ ವ್ಯತ್ಯಯಗಳ ಬಗ್ಗೆ ಅಧ್ಯಯನ ಮಾಡಲು ವಿಧಾನಮಂಡಲದ 20  ಶಾಸಕರಿರುವ ಲೆಕ್ಕ ಪತ್ರ ಸಮಿತಿ ರಚಿಸಲಾಗುತ್ತದೆ. ಎಲ್ಲ ಪಕ್ಷದ ಸದಸ್ಯರು ಇರುತ್ತಾರೆ. ಪ್ರಮುಖವಾಗಿ  ವಿರೋಧ ಪಕ್ಷದ ನಾಯಕರೇ ಅಧ್ಯಕ್ಷರಾಗಿರುತ್ತಾರೆ.ಆ ಸಮಿತಿಯು ಸಭೆಗಳಲ್ಲಿ ಆರ್ಥಿಕ ವ್ಯತ್ಯಾಸಗಳ ಬಗ್ಗೆ ಅಧ್ಯಯನ ಮಾಡಬಹುದು. ತಪ್ಪುಗಳು ಆಗಿದ್ದರೆ  ಸರ್ಕಾರಕ್ಕೆ ತಪ್ಪಿತಸ್ಥರ ರುದ್ದ ಕ್ರಮ ಕೈಗೊಳ್ಳಲು ಶಿಫಾರಸು ಮಾಡಬಹುದು. ಅದು ಬಿಟ್ಟು ಬಿಜೆಪಿಯವರು ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುವುದು ಸರಿಯಲ್ಲ ಎಂದು ಹೇಳಿದರು.

ಪ್ರಧಾನಿ ಸ್ಥಾನದ ಘನತೆಗೆ ಕುಂದು
*ಚುನಾವಣಾ ಪ್ರಚಾರದ ಸಭೆಯಲ್ಲಿ ಪ್ರಧಾನಿ ಮೋದಿ ಸೋನಿಯಾ ಗಾಂಧಿ ಅವರನ್ನು ವಿಧವೆ ಎಂದು ಪರೋಕ್ಷವಾಗಿ ಲೇವಡಿ ಮಾಡಿ ತಮ್ಮ ಘನತೆಗೆ ಕುಂದು ತಂದಿದ್ದಾರೆ . ಸೋನಿಯಾ ಗಾಂಧಿ ಅವರು ವಿಧವೆಯಾಗಿದ್ದು ಯಾಕೆ ಎಂದು ದೇಶಕ್ಕೆ ಗೋತ್ತಿದೆ. ದೇಶಕ್ಕಾಗಿ ಯಾವುದೇ ಬಲಿದಾನ ಮಾಡದ ಮೋದಿ ಅವರು ಹಗುರವಾಗಿ ಮಾತನಾಡಿ ದೇಶದ ಮಳೆಯರಿಗೆ ಅಪಮಾನ ಮಾಡಿದ್ದಾರೆ.
– ರಿಜ್ವಾನ್‌ ಅರ್ಷದ್‌, ವಿಧಾನಪರಿಷತ್‌ ಸದಸ್ಯ

ಟಾಪ್ ನ್ಯೂಸ್

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD Kumaraswamy ಮೈತ್ರಿ ಮುಂದುವರಿಕೆ ಉದ್ದೇಶ

BJP-JDS ಮೈತ್ರಿ ಮುಂದುವರಿಕೆ ಉದ್ದೇಶ; ಎಚ್‌.ಡಿ. ಕುಮಾರಸ್ವಾಮಿ

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಅಶೋಕ್‌

Randeep Surjewala ಚಿತ್ರಕಥೆ, ಡಿಕೆಶಿ ನಿರ್ಮಾಪಕ: ಆರ್‌. ಅಶೋಕ್‌

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

Prajwal ಪತ್ತೆಗೆ ಎಸ್‌ಐಟಿ ತಂಡ ವಿದೇಶಕ್ಕೆ ಯಾನ?8 ಅಧಿಕಾರಿಗಳ ತಂಡ ಪ್ರಯಾಣ ಸಾಧ್ಯತೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.