ನೀರುಣಿಸಿ.. ಕಾಡು ಪ್ರಾಣಿ ಜೀವ ಉಳಿಸಿ


Team Udayavani, Dec 9, 2018, 11:17 AM IST

bid-1.jpg

ಬೀದರ: ಬೇಸಿಗೆ ಬಂದರೆ ಬಿಸಿ ತಾಳಲಾರದೆ ವನ್ಯ ಜೀವಿಗಳು ನೀರಿಗಾಗಿ ಕಾಡಿನಿಂದ ನಾಡಿನಕಡೆಗೆ ಬರುವುದು ಸಾಮಾನ್ಯ. ಆದರೆ, ಚಳಿಗಾಲದಲ್ಲಿಯೇ ಕುಡಿಯಲು ನೀರು ಸಿಗದೇ ಕಾಡುಪ್ರಾಣಿಗಳು ನಾಡಿನ ಕಡೆಗೆ ಮುಖ ಮಾಡಿದ್ದು, ಬರಗಾಲದ ಭೀಕರತೆಯನ್ನು ತೋರುವಂತಿದೆ.

ಬೀದರ್‌ ತಾಲೂಕಿನ ವಿವಿಧ ಅರಣ್ಯ ಪ್ರದೇಶ, ಹುಮನಾಬಾದ, ಬಸವಕಲ್ಯಾಣ, ಔರಾದ ತಾಲೂಕು ಸೇರಿದಂತೆ ವಿವಿಧೆಡೆ ಇರುವ ಅರಣ್ಯ ಪ್ರದೇಶದ ವನ್ಯ ಜೀವಿಗಳು ಕುಡಿಯಲು ನೀರು ಸಿಗದೆ ನಾಡಿನ ಕಡೆಗೆ ಮುಖ ಮಾಡುತ್ತಿವೆ. ಕಾಡು ಪ್ರಾಣಿಗಳು ಹಾಡುಹಗಲೆ ರಸ್ತೆಗೆ ಬರುತ್ತಿದ್ದು, ಎಲ್ಲಿ ಅಪಘಾತಕ್ಕೆ ತುತ್ತಾಗುತ್ತವೆಯೋ ಎಂಬ ಭಯ ವಾಹನ ಸವಾರರಿಗೆ ಕಾಡುತ್ತಿದೆ. ಕಾಡಿನಲ್ಲಿ ಸ್ವತ್ಛಂದವಾಗಿ ಕುಣಿಯುತ್ತಿರುವ ಕಾಡು ಪ್ರಾಣಿಗಳು ಈಗ ಆಹಾರ, ನೀರಿಗಾಗಿ ಪ್ರಾಣ ಕಳೆದುಕೊಳ್ಳುವ ಸ್ಥಿತಿ ನಿರ್ಮಾಣಗೊಳ್ಳುತ್ತಿದೆ. 

ಕಾಡಿನಲ್ಲಿರುವ ಕೆರೆ, ಕುಂಟೆಗಳು ಬತ್ತಿ ಹೋಗಿವೆ. ಹನಿ ನೀರು ಹುಡುಕಿಕೊಂಡು ಅನೇಕ ಜಿಂಕೆ, ಕೃಷ್ಣಮೃಗ, ನವಿಲು ರಸ್ತೆಗಳಲ್ಲಿ ಕಂಡುಬರುತ್ತಿವೆ. ಜಿಲ್ಲೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಜಿಂಕೆ, ಕೃಷ್ಣಮೃಗ, ನವಿಲು ಸೇರಿದಂತೆ ಇತರೆ ಕಾಡು ಪ್ರಾಣಿಗಳು ಇವೆ. ಸದ್ಯದ ಸ್ಥಿತಿಯಲ್ಲಿ ಅವುಗಳ
ರಕ್ಷಣೆ ಮಾಡುವುದು ಅತಿ ಅವಶ್ಯಕವಾಗಿದೆ. ಅರಣ್ಯ ಇಲಾಖೆ ಅಧಿಕಾರಿಗಳ ಪ್ರಕಾರ, ಬೀದರ್‌ ತಾಲೂಕಿನ ಬೆಳೂರ್‌ ಅರಣ್ಯ ಪ್ರದೇಶದಲ್ಲಿ ಪ್ರಾಣಿಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡುತ್ತಿರುವುದಾಗಿ ಹೇಳಲಾಗುತ್ತಿದೆ. ಆದರೆ, ಕಾಡು ಪ್ರಾಣಿಗಳು ಮಾತ್ರ ನಾಡಿನ ಕಡೆಗೆ ಮುಖಮಾಡುತ್ತಿರುವುದು ಅನೇಕ ಅನುಮಾನಕ್ಕೆ ಕಾರಣವಾಗಿದೆ.

ಬೇಕಿದೆ ನೀರು: ಬರದಿಂದ ಪರಿತಪಿಸುತ್ತಿರುವ ಕಾಡು ಪ್ರಾಣಿಗಳಿಗೆ ಬೇಸಿಗೆ ಮುಗಿಯುವವರೆಗೂ ನೀರು ಒದಗಿಸುವ ಕೆಲಸ ಆಗಬೇಕಾಗಿದೆ. ಈ ಮೂಲಕ ಪ್ರಾಣಿ, ಪಕ್ಷಿಗಳು ನಾಡಿನತ್ತ ಮುಖ ಮಾಡುವುದನ್ನು ತಪ್ಪಿಸಬೇಕಾಗಿದೆ. ಅಲ್ಲದೆ, ಪ್ರಾಣಿಗಳು ರಸ್ತೆಗೆ ಬಂದು ಪ್ರಾಣ ಕಳೆದುಕೊಳ್ಳುವುದನ್ನು ಕೂಡ ಅಧಿಕಾರಿಗಳು ತಪ್ಪಿಸುವ ಪ್ರಾಮಾಣಿಕ ಪ್ರಯತ್ನ ಮಾಡಬೇಕಾಗಿದೆ.

ಇಲ್ಲದಿದ್ದರೆ ನೀರು ಹುಡುಕಿಕೊಂಡು ಬಂದು ನಾಯಿಗಳ ದಾಳಿಯಿಂದ ಅಥವಾ ರಸ್ತೆ ಅಪಘಾತದಲ್ಲಿ ಸಾವನ್ನಪ್ಪುವುದು ನಿಶ್ಚಿತವಾಗಿದೆ. ಅರಣ್ಯ ಪ್ರದೇಶಗಳಲ್ಲಿ ಕೃತಕವಾಗಿ ಕೆರೆ, ಚೆಕ್‌ಡ್ಯಾಂ ಹಾಗೂ ಹೊಂಡಗಳನ್ನು ನಿರ್ಮಿಸುವ ಕಾರ್ಯಕ್ಕೆ ಅಧಿಕಾರಿಗಳು ಮುಂದಾಗಬೇಕಾಗಿದೆ. ಹೊಂಡಗಳಲ್ಲಿ ಟ್ಯಾಂಕರ್‌ ಮೂಲಕ ನೀರು ಹರಿಸಿ ಪ್ರಾಣಿಗಳ ದಾಹ ಇಂಗಿಸುವ ಕೆಲಸವನ್ನು ಅರಣ್ಯ ಇಲಾಖೆ ಮಾಡಬೇಕಿದೆ. ಬರುವ ಬೇಸಿಗೆಯ ತೀವ್ರತೆ ಅರಿತು ಆ ದಿನಗಳಲ್ಲಿ ವನ್ಯಜೀವಿಗಳ ರಕ್ಷಣೆಯ ಹೊಣೆ ಹೊರಬೇಕಾಗಿದೆ. ಅತಿ ಅಮೂಲ್ಯದ ಪ್ರಾಣಿಗಳು ಜಿಲ್ಲೆಯಲ್ಲಿದ್ದು, ಸಂಬಂಧಿಸಿದ ಅಧಿಕಾರಿಗಳು ಅವುಗಳ ಸಂರಕ್ಷಣೆಗೆ ಸೂಕ್ತ ಕ್ರಮಗಳು ಕೈಗೊಳ್ಳಬೇಕಾಗಿದೆ. 

ಕೆಲ ವರ್ಷಗಳ ಹಿಂದೆ ಎದುರಾದ ಬರಕ್ಕಿಂತ ಇದೀಗ ಬರದ ಭೀಕರತೆ ಹೆಚ್ಚಿದ್ದು, ಪ್ರಾಣಿ ಪಕ್ಷಿಗಳಿಗೆ ನೀರಿನ ವ್ಯವಸ್ಥೆ ಮಾಡವ ಕಾರ್ಯಕ್ಕೆ ವಿವಿಧ ಸಂಘ, ಸಂಸ್ಥೆಗಳು ಕೂಡ ಶ್ರಮಿಸಬೇಕಾಗಿದೆ. ಮಾನವೀಯತೆ ಆಧಾರದಲ್ಲಾದರೂ ಕೂಡ ಪ್ರಾಣಿಗಳ ಪ್ರಾಣ ಉಳಿಸುವ ಪ್ರಾಮಾಣಿಕ ಪ್ರಯತ್ನ ನಡೆಯಬೇಕು ಎಂಬುದು ಪ್ರಾಣಿ ಪ್ರಿಯರ ಅಳಲು.

ಪ್ರಾಣಿಗಳಿಗೆ ಕುಡಿಯುವ ನೀರಿನ ಸಮಸ್ಯೆ ಎದುರಾಗುತ್ತಿರುವುದು ಗಮನಕ್ಕೆ ಬಂದಿದೆ. ಈಗಾಗಲೇ ಬೀದರ ತಾಲೂಕಿನ ಬೆಳೂರ್‌ ಅರಣ್ಯ ಪ್ರದೇಶದಲ್ಲಿ ಪ್ರಾಣಿಗಳಿಗೆ ಕುಡಿಯು ನೀರು ಪೂರೈಕೆ ಮಾಡಲುವ ಕೆಲಸ ನಡೆಯುತ್ತಿದೆ. ಜಿಲ್ಲೆಯ ವಿವಿಧೆಡೆ ಕೂಡ ನೀರು ಪೂರೈಸುವ ಕೆಲಸ ನಡೆಯಲಿದೆ. ಸಿಮೆಂಟ್‌ ಟ್ಯಾಂಕ್‌ಗಳನ್ನು ನಿರ್ಮಿಸಿದ್ದು, ಅವುಗಳಲ್ಲಿ ನೀರು ಹರಿಸುವ ಕೆಲಸ ನಡೆಯಲಿದೆ.
 ಎಂ.ಡಿ. ತೊಡುಲಕರ್‌, ಜಿಲ್ಲಾ ಅರಣ್ಯಾಧಿಕಾರಿ

ದುರ್ಯೋಧನ ಹೂಗಾರ

ಟಾಪ್ ನ್ಯೂಸ್

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Water Corridor: ಭಾರತಕ್ಕೆ ಅಗತ್ಯವಿದೆ ವಿಶೇಷ ವಾಟರ್‌ ಕಾರಿಡಾರ್‌!

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Kangana Ranaut: ಚಿತ್ರರಂಗದಲ್ಲಿ ಅಮಿತಾಭ್ ಗೆ ಸಮಾನವಾದ ಗೌರವ ನನಗೆ ಸಿಗುತ್ತಿದೆ; ಕಂಗನಾ

Farooq Abdullah

ಪಾಕಿಸ್ತಾನದವರೇನು ಬಳೆ ಧರಿಸಿ ಕುಳಿತಿಲ್ಲ..; ವಿವಾದಾತ್ಮಕ ಹೇಳಿಕೆ ನೀಡಿದ ಫಾರೂಕ್ ಅಬ್ದುಲ್ಲಾ

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…

Threat: ಅಹ್ಮದಾಬಾದ್ ನ ಹಲವು ಶಾಲೆಗಳಿಗೆ ಇಮೇಲ್‌ ಮೂಲಕ ಬಾಂಬ್ ಬೆದರಿಕೆ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Bidar; ಪ್ರಜ್ವಲ್ ನನ್ನು ವಿದೇಶಕ್ಕೆ ಕಳುಹಿಸಿದ್ದೇ ಸಿದ್ದರಾಮಯ್ಯ: ಆರ್.ಅಶೋಕ್ ಆರೋಪ

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Jignesh Mevani: ಮೋದಿ ಪರಿವಾರ ಎಂದರೆ ಪ್ರಜ್ವಲ್‌ ರೇವಣ್ಣನಂಥವರಾ?; ಜಿಗ್ನೇಶ್‌

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar; ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಕ್ರೂಸರ್ ವಾಹನ; ಮೂವರು ಸ್ಥಳದಲ್ಲೇ ಸಾವು

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್‌ಗೆ ಗೆಲುವು: ಮುನಿಯಪ್ಪ ವಿಶ್ವಾಸ

14-bidar

Prajwal Pendrive Case: ವಿಶ್ವದ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ಘಟನೆ ಇದು

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

Mangaluru; ಕೊಂಕಣಿ ಸಾಹಿತಿ ರೊನಾಲ್ಡ್ ಸಿಕ್ವೇರಾ ನಿಧನ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

ಮುಗಿದ ಅಬ್ಬರ; ಎರಡು ದಿನ ಮನೆ-ಮನೆ ಸಂದಾಯ! 1992ರ ಚುನಾವಣೆ ನೆನಪಿಸಿದ ರಣತಂತ್ರ

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Lok Sabha Election: ಮತಗಟ್ಟೆಗಳಿಗೆ ತೆರಳಿದ ಅಧಿಕಾರಿಗಳು, ಸಿಬ್ಬಂದಿಗಳು

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Housefull 5: ಕಾಮಿಡಿ ಜರ್ನಿಯ ‌ʼಹೌಸ್‌ ಫುಲ್‌ʼ ಕುಟುಂಬಕ್ಕೆ ಅಭಿಷೇಕ್‌ ಬಚ್ಚನ್ ಎಂಟ್ರಿ

Team India’s T20 World Cup 2024 Jersey Leaked

T20 World Cup; ಹೊರಬಿತ್ತು ಭಾರತ ತಂಡದ ಜೆರ್ಸಿ ಫೋಟೊ: ಹೇಗಿದೆ ನೋಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.