ಕಟ್ಟಡ ತ್ಯಾಜ್ಯ ನಿರ್ವಹಣೆಗೆ ಚೀನ ಎಕ್ಸ್ ಪ್ರೆಸ್‌ ವೇ ಮಾದರಿ


Team Udayavani, Dec 9, 2018, 1:29 PM IST

9-december-8.gif

ದೇಶದಲ್ಲಿ ಕಟ್ಟಡ ತ್ಯಾಜ್ಯ ನಿರ್ವಹಣೆ ಇಂದು ಬಹುದೊಡ್ಡ ಸಮಸ್ಯೆಯಾಗಿ ಪರಿಣಮಿಸಿದೆ. ಹೊಸ ಕಟ್ಟಡ ನಿರ್ಮಾಣ ಮಾಡುವಾಗ ಹಳೆ ಕಟ್ಟಡದ ಕಬ್ಬಿಣದಂಥ ಲೋಹಗಳನ್ನು ಗುಜರಿಗೆ ಹಾಕಿದರೆ, ಇನ್ನು ಸಿಮೆಂಟ್‌ ಗೋಡೆಗಳ ತ್ಯಾಜ್ಯವನ್ನು ಪರಿಸರದ ಎಲ್ಲೆಂದರಲ್ಲಿ ಸುರಿಯಲಾಗುತ್ತಿದೆ. ಇದರ ವಿಲೇವಾರಿ ಬಗ್ಗೆ ಕಠಿನ ಆದೇಶವಿದ್ದರೂ ಕೂಡ ಉಲ್ಲಂಘಿ ಸಿ, ಎಲ್ಲೆಂದರಲ್ಲಿ ಕಟ್ಟಡ ತ್ಯಾಜ್ಯವನ್ನು ವಿಲೇವಾರಿ ಮಾಡಲಾಗುತ್ತಿದೆ. ಇದು ಪರಿಸರ ಮಾಲಿನ್ಯಕ್ಕೂ ಕಾರಣವಾಗುತ್ತಿದೆ.

ಕಟ್ಟಡ ತ್ಯಾಜ್ಯ ನಿರ್ವಹಣೆ ತಲೆನೋವಾಗಿ ಪರಿಣಮಿಸಿರುವುದರಿಂದ ಆಡಳಿತ ವ್ಯವಸ್ಥೆ ಅಗತ್ಯವಾದ ಯೋಚನೆ ಮಾಡಬೇಕಿದೆ. ಅಂತಹ ಯೋಚನೆಗಳಲ್ಲಿ ನಮಗೆ ಚೀನ ದೇಶವು ಕಟ್ಟಡ ತ್ಯಾಜ್ಯವನ್ನೇ ಬಳಸಿಕೊಂಡೇ ರಸ್ತೆ ಹೆದ್ದಾರಿಯನ್ನೇ ನಿರ್ಮಿಸಿರುವುದು ನಮಗೆ ಮಾದರಿಯಾಗಬೇಕಿದೆ.

ಚೀನದ ಮಾದರಿ ಎಕ್ಸ್‌ಪ್ರೆಸ್‌ ವೇ
ಹೊಸತನಕ್ಕೆ ಮಾದರಿಯಾಗಿರುವ ಚೀನ ದೇಶದಲ್ಲಿ ಒಂದು ಕಾಲದಲ್ಲಿ ತ್ಯಾಜ್ಯ ನಿರ್ವಹಣೆ ಕಷ್ಟಕರವಾಗಿತ್ತು. ಅಂಥ ಸಂದರ್ಭದಲ್ಲಿ ಅವರಿಗೆ ಉಪಾಯಕ್ಕೆ ಬಂದಿದ್ದು, ಈ ತ್ಯಾಜ್ಯವನ್ನು ಮರುಪೂರಣ ಮಾಡಬೇಕು ಎಂಬ ಆಲೋಚನೆ. ಇದಕ್ಕೆ ಚೀನ ದೇಶವೂ ಸುಮಾರು 200 ಹೆಕ್ಟೇರ್‌ ಪ್ರದೇಶದಲ್ಲಿ ಸಂಗ್ರಹಿಸಬಹುದಾಗಿದ್ದ ಕಟ್ಟಡ ತ್ಯಾಜ್ಯವನ್ನೇ ಬಳಸಿಕೊಂಡು ದೇಶದಲ್ಲಿ 122 ಕಿ.ಮೀ. ನಷ್ಟು ಉದ್ದದ ಎಕ್ಸ್‌ಪ್ರೆಸ್‌ ವೇಯನ್ನು ಆಗ್ನೇಯ ಚೀನದ ಶಾನ್ಸ್‌ಕೀ ಪ್ರ್ಯಾಂತದ ಲಿನ್‌ಟಾಂಗ್‌ ಎಂಬ ಜಿಲ್ಲೆಯಲ್ಲಿ ನಿರ್ಮಿಸಲಾಯಿತು. ಈ ರಸ್ತೆ ನಿರ್ಮಾಣಕ್ಕೆ ಸುಮಾರು 57 ಲಕ್ಷ ಟನ್‌ ಕಟ್ಟಡ ತ್ಯಾಜ್ಯವನ್ನು ಬಳಸಲಾಗಿದೆ. ಇದರಿಂದಾಗಿ 34 ಲಕ್ಷ ಕ್ಯುಬಿಕ್‌ ಮೀಟರ್‌ ಮರಳು ಹಾಗೂ 32,000 ಟನ್‌ ಕಲ್ಲಿದ್ದಲು ಉಳಿಸಲಾಗಿದ್ದು, ಕಡಿಮೆ ಖರ್ಚಿನಲ್ಲಿ ನಿರ್ಮಿಸಲಾಗಿರುವ ಈ ಎಕ್ಸ್‌ಪ್ರೆಸ್‌ ವೇಯೂ ಸಂಚಾರಕ್ಕೆ ಯೋಗ್ಯವಾಗಿರುವುದಲ್ಲದೇ ದೇಶದ ತ್ಯಾಜ್ಯ ಮರುಪೂರಣ ಮಾಡಿದ್ದಕ್ಕಾಗಿ ಚೀನ ಇಂದು ಜಗತ್ತಿಗೆ ಮಾದರಿಯಾಗುತ್ತದೆ. ಈ ಮಾದರಿ ನಡೆಯಿಂದಾಗಿ ಪರಿಸರ ಸಂರಕ್ಷಣೆಯೆ ಜತೆ ಜತೆಗೆ ವಿನೂತನ ಪ್ರಯೋಗದ ಪಾಠವನ್ನು ನಾವು ಕಲಿಯಬಹುದಾಗಿದೆ.

ಭಾರತ ದೇಶವೂ ಕೂಡ ಇಂದು ನಗರೀಕರಣಕ್ಕೆ ತೆರೆದುಕೊಂಡಿದೆ. ಗಗನಚುಂಬಿ ಹಾಗೂ ಬಹುಮಹಡಿ ಕಟ್ಟಡಗಳ ನಿರ್ಮಾಣಕ್ಕೆ ಆದ್ಯತೆ ನೀಡಲಾಗುತ್ತಿದೆ. ಈ ಮಧ್ಯೆ ಹಳೆಯ ಕಟ್ಟಡಗಳನ್ನೇ ಬೀಳಿಸಿ, ಹೊಸ ಕಟ್ಟಡಗಳನ್ನು ನಿರ್ಮಿಸಲಾಗುತ್ತಿದೆ. ಹಳೆಯ ಕಟ್ಟಡದ ತ್ಯಾಜ್ಯದ ನಿರ್ವಹಣೆಗೆ ಮಾಡಲಾಗದೇ ಪರಿಸರದಲ್ಲಿ ತ್ಯಾಜ್ಯವಾಗುತ್ತಿರುವುದು ನಾವು ನೋಡಬಹುದು.

ಇನ್ನು ಸ್ಮಾರ್ಟ್‌ಸಿಟಿ ಪಟ್ಟಿಯಲ್ಲಿರುವ ಮಂಗಳೂರು ಮಹಾನಗರದ ಕಥೆಯೂ ಕೂಡ ಬೇರೆಯೇನಿಲ್ಲ. ಕಟ್ಟಡ ತ್ಯಾಜ್ಯ ನಿರ್ವಹಣೆ ಅದೇನೂ ದೊಡ್ಡ ಸವಾಲೇನೂ ಅಲ್ಲ, ಅದನ್ನು ನಿರ್ವಹಣೆ ಮಾಡಲು ಆಡಳಿತ ವ್ಯವಸ್ಥೆ ಮನಸ್ಸು ಮಾಡಿ, ಎಕ್ಸ್‌ಪ್ರೆಸ್‌ ವೇಯನ್ನು ನಿರ್ಮಿಸುವ ಯೋಜನೆಯನ್ನು ರೂಪಿಸಿಬಹುದು. ಈ ಮೂಲಕ ಸ್ಮಾರ್ಟ್‌ ನಗರಿಯಲ್ಲೊಂದು ಸ್ಮಾರ್ಟ್‌ ಚಿಂತನೆ ಬೆಳೆಯಬಲ್ಲದು.

 ಶಿವ ಸ್ಥಾವರಮಠ 

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ಬೀಚ್‌ ಪ್ರವಾಸೋದ್ಯಮಕ್ಕೆ ಸ್ವಚ್ಛತೆಯ ಸ್ಪರ್ಶ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

ತುಂಬೆ: 7 ಮೀ. ನೀರು ಸಂಗ್ರಹಕ್ಕೆ ಕ್ರಮ ಅಗತ್ಯ

Mangalore-railway

ಮಂಗಳೂರು: ರೈಲ್ವೇ ಸಂಪರ್ಕ ಜಾಲ ವಿಸ್ತರಣೆಗೆ ಹೊಸ ಸಾಧ್ಯತೆಗಳ ಪರಿಶೀಲನೆ

ನಗರ 24×7 ಪರಿಕಲ್ಪನೆಗೆ ಒಲವು

ನಗರ 24×7 ಪರಿಕಲ್ಪನೆಗೆ ಒಲವು

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

ಅಂಗಡಿ ಬದಿಗಳ ಶುಚಿತ್ವಕ್ಕೆ ಮಹತ್ವ ನೀಡಲಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.