ಸಿದ್ದರಾಮಯ್ಯ ಸೋಲು ನನ್ನ ಸಾವಿಗಿಂತ ನೋವು: ಸ್ವೀಕರ್ ರಮೇಶ್ ಕುಮಾರ್
Team Udayavani, Dec 9, 2018, 5:20 PM IST
ಕೋಲಾರ: ಸ್ಪೀಕರ್ ರಮೇಶ್ ಕುಮಾರ್ ಅವರು ಮಾಜಿ ಸಿಎಂ ಸಿದ್ದರಾಮಯ್ಯ ಅವರ ಚಾಮುಂಡೇಶ್ವರಿ ಕ್ಷೇತ್ರದ ಸೋಲನ್ನು ನೆನೆದು ವೇದಿಕೆಯಲ್ಲೇ ಕಣ್ಣೀರು ಹಾಕಿದ ಘಟನೆ ಭಾನುವಾರ ನಡೆದಿದೆ.
ಕುರುಬ ಸಮುದಾಯದವರು ಆಯೋಜಿಸಿದ್ದ ಕನಕ ಜಯಂತಿ ಸಮಾರಂಭದಲ್ಲಿ ಮಾತನಾಡಿದ ಅವರು ಕುರಿಕಾಯೋ ಸಮುದಾಯದಲ್ಲಿ ಹುಟ್ಟಿ 13 ಬಾರಿ ಬಜೆಟ್ ಮಂಡಿಸಿದ ಧೀಮಂತ ನಾಯಕ ಸಿದ್ದರಾಮಯ್ಯ ಅವರು ಎಂದು ಹಾಡಿ ಹೊಗಳಿದರು.
ಸಿದ್ದರಾಮಯ್ಯ ಅವರನ್ನು ಏಕವಚನದಲ್ಲಿ ಮಾತನಾಡುವವರಿಗೆ ಪರೋಕ್ಷವಾಗಿ ನಾವು ಬೆಂಬಲ ಕೊಡುತ್ತೇವಾ ಎಂದು ವರ್ತೂರು ಪ್ರಕಾಶ್ ಅವರಿಗೆ ಟಾಂಗ್ ನೀಡಿದರು.
ನಾವು ಸಿದ್ದರಾಮಯ್ಯ ಅವರಿಗೆ ಕಾಲೊಂದು ಹಿಡಿಯಲಿಲ್ಲ. ಕೋಲಾರಕ್ಕೆ ಬನ್ನಿ ಅಂದು ಆದರೆ ಅವರು ಇಲ್ಲ ಕಣಯ್ಯ ನಾನು ಚಾಮುಂಡೇಶ್ವರಿಯಲ್ಲೇ ಸ್ಪರ್ಧಿಸುವುದು ಎಂದಿದ್ದರು. ಕೋಲಾರಕ್ಕೆ ಬಂದಿದ್ದರೆ ಅವರ ಸೋಲು ಆಗುತ್ತಿರಲಿಲ್ಲ. ಅವರ ಸೋಲು ನನಗೆ ನನ್ನ ಸಾವಿಗಿಂತಲೂ ಹೆಚ್ಚು ನೋವು ಎಂದು ವೇದಿಕೆಯಲ್ಲೇ ಕಣ್ಣೀರಿಟ್ಟರು.
ದಯಮಾಡಿ ಪ್ರತಿಜ್ಞೆ ಮಾಡಿ ಈ ಸಮಾಜದ ಜನ ಇಂತಹ ಅನರ್ಘ್ಯ ರತ್ನವನ್ನು ಯಾವ ಕಾರಣಕ್ಕೂ ಕೆಳಕ್ಕೆ ಬೀಳಲು ಬಿಡಬಾರದು ಎಂದು ಮನವಿ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ
Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ
Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್ ಹೇಳಿಕೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
MUST WATCH
ಹೊಸ ಸೇರ್ಪಡೆ
ಬಿಜೆಪಿಗೆ ಆಶೀರ್ವಾದ ಮಾಡಲು ವಚನಾನಂದ ಶ್ರೀ ಕಾತರ: ಯತ್ನಾಳ್
Road Mishap: ಭೀಕರ ರಸ್ತೆ ಅಪಘಾತ… ಬೈಕ್ ಸವಾರ ಸ್ಥಳದಲ್ಲೇ ಮೃತ್ಯು
WhatsApp ಚಾಟ್ ನಿಯಮ ಉಲ್ಲಂಘನೆ: ಬಳಕೆದಾರರಿಗೆ ತಾತ್ಕಾಲಿಕ ನಿರ್ಬಂಧ
LPG Cylinder: ವಾಣಿಜ್ಯ ಎಲ್ಪಿಜಿ ಸಿಲಿಂಡರ್ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.
Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ