ಮೂವರು ಉಗ್ರರ ಹತ್ಯೆ
Team Udayavani, Dec 10, 2018, 9:05 AM IST
ಶ್ರೀನಗರ: ಜಮ್ಮು ಮತ್ತು ಕಾಶ್ಮೀರ ರಾಜಧಾನಿ ಶ್ರೀನಗರದ ಹೊರವಲಯದಲ್ಲಿ ರವಿವಾರ 18 ತಾಸುಗಳು ಗುಂಡಿನ ಚಕಮಕಿ ಬಳಿಕ ಮೂವರು ಉಗ್ರರನ್ನು ಹತ್ಯೆಗೈಯ್ಯಲಾಗಿದೆ. ಮುಜ್ಗುಂಡ್ ಎಂಬಲ್ಲಿ ಶನಿವಾರ ತಡರಾತ್ರಿ ಉಗ್ರರು ಇರುವ ಬಗ್ಗೆ ಮಾಹಿತಿ ಸಿಕ್ಕಿತ್ತು. ಹೀಗಾಗಿ ಕಾರ್ಯಾಚರಣೆ ಆರಂಭಿಸಲಾಯಿತು. ಮೂವರು ಉಗ್ರರನ್ನು ಹೊಡೆದುರುಳಿಸಲಾಗಿದ್ದು, ಕಾರ್ಯಾಚರಣೆಯಲ್ಲಿ ಯೋಧರೊಬ್ಬರು ಹಾಗೂ ಮೂವರು ನಾಗರಿಕರು ಗಾಯಗೊಂಡಿದ್ದಾರೆ. ಗುಂಡಿನ ಚಕಮಕಿ ಮುಗಿಯುತ್ತಿದ್ದಂತೆಯೇ ಯುವಕರು ಮತ್ತು ಭದ್ರತಾ ಪಡೆಗಳ ನಡುವೆ ಘರ್ಷಣೆಯೂ ನಡೆದಿದೆ. ಮತ್ತೂಂದು ಮಹತ್ವದ ಕಾರ್ಯಾಚರಣೆಯಲ್ಲಿ ಹಿಜ್ಬುಲ್ ಮುಜಾಹಿದೀನ್ ಉಗ್ರ ಸಂಘಟನೆಯ ರಿಯಾಜ್ ಅಹ್ಮದ್ ಎಂಬಾತನನ್ನು ಕಿಶ್ವಾರ್ನಲ್ಲಿ ಬಂಧಿಸಲಾಗಿದೆ.