ಕ್ರಿಮಿನಲ್‌ಗ‌ಳ ಮಟ್ಟಹಾಕಲು ಟ್ರಿಗರ್‌ ಟೆಕ್ನಿಕ್‌


Team Udayavani, Dec 10, 2018, 11:51 AM IST

blore-4.jpg

ಬೆಂಗಳೂರು: ಸಮಾಜದ ಸ್ವಾಸ್ಥ್ಯ ಕದಡುತ್ತಿರುವ ಕ್ರಿಮಿ ನಲ್‌ಗ‌ಳನ್ನು ಮಟ್ಟ ಹಾಕಲು “ಗುಂಡೇಟಿನ’ ಅಸ್ತ್ರವನ್ನು ನಗರ ಪೊಲೀಸರು ಈ ವರ್ಷ ಪ್ರಬಲವಾಗಿ ಬಳಸಿದ್ದಾರೆ!

ಕಳೆದ ಜನವರಿಯಿಂದ ಭಾನುವಾರ ಮುಂಜಾನೆ ನಡೆದ ರೈಸ್‌ಫ‌ುಲ್ಲಿಂಗ್‌ ವಂಚನೆಕೋರ, ದರೋಡೆಕೋರ ರಾಜೇಶ್‌ ಅಲಿಯಾಸ್‌ ಪ್ರತಾಪ್‌ ಸೇರಿದಂತೆ ಒಟ್ಟು 26 ಮಂದಿ ಕ್ರಿಮಿನಲ್‌ಗ‌ಳಿಗೆ ಗುಂಡೇಟಿನ ಮೂಲಕ ಉತ್ತರ ನೀಡಿದ್ದಾರೆ. ಒಂದೇ ತಿಂಗಳ ಅವಧಿಯಲ್ಲಿ ನಗರದಲ್ಲಿ ನಡೆದ ಆರನೇ ಶೂಟೌಟ್‌ ಪ್ರಕರಣ ಇದಾಗಿದೆ.

ಜುಲೈ ತಿಂಗಳಲ್ಲಿ ವ್ಯಕ್ತಿಯೊಬ್ಬರ ಮನೆಯಿಂದ 50 ಲಕ್ಷ. ರೂ. ದರೋಡೆ ಮಾಡಿ ತಲೆ ಮರೆಸಿಕೊಂಡಿದ್ದ ರಾಜೇಶ್‌ ಹಾಗೂ ಆತನ ಭಾಮೈದ ನಂದಕುಮಾರ್‌ ಕಳೆದ ನಾಲ್ಕು ತಿಂಗಳಿನಿಂದ ತಲೆಮರೆಸಿಕೊಂಡಿದ್ದರು. ಈ ಪ್ರಕರಣದ ತನಿಖೆ ನಡೆಸುತ್ತಿದ್ದ ಅನ್ನಪೂರ್ಣೇಶ್ವರಿ ನಗರ ಠಾಣೆಯ ಈ ಹಿಂದಿನ ಇನ್ಸ್‌ಪೆಕ್ಟರ್‌ಗೆ ಜೀವ ಬೆದರಿಕೆ ಹಾಕಿದ್ದ.
 
ಕೆಲ ದಿನಗಳ ಹಿಂದಷ್ಟೇ ನಗರಕ್ಕೆ ಬಂದಿದ್ದ ರಾಜೇಶ್‌, ಭಾನುವಾರ ಮುಂಜಾನೆ ವಿಶ್ವೇಶ್ವರಯ್ಯ ಲೇಔಟ್‌ನ 8ನೇ ಬ್ಲಾಕ್‌ನಲ್ಲಿದ್ದಾನೆ ಎಂಬ ಮಾಹಿತಿ ಮೇರೆಗೆ ಪಿಎಸ್‌ಐ ರಾಜಶೇಖರಯ್ಯ ನೇತೃತ್ವದ ತಂಡ ಅಲ್ಲಿಗೆ ತೆರಳಿತ್ತು. ಈ ವೇಳೆ ಪೊಲೀಸರನ್ನು ಕಂಡ ಕೂಡಲೇ ಪರಾರಿ ಯಾಗಲು ಯತ್ನಿಸಿದ ರಾಜೇಶ್‌, ಹಿಡಿಯಲು ಹೋದ ಪೇದೆ ಮಹೇಶ್‌ ಕೈಗೆ ಡ್ರ್ಯಾಗರ್‌ನಿಂದ ಹಲ್ಲೆ ನಡೆಸಿ ತಪ್ಪಿಸಿಕೊಳ್ಳಲು ಯತ್ನಿಸಿದ್ದಾನೆ. ಶರಣಾಗುವಂತೆ ಪಿಎಸ್‌ಐ ರಾಜಶೇಖರಯ್ಯ ಗಾಳಿಯಲ್ಲಿ ಗುಂಡು ಹಾರಿಸಿ ಸೂಚಿಸಿದರೂ ಅವರ ಮೇಲೆಯೇ ಹಲ್ಲೆಗೆ ಮುಂದಾಗಿದ್ದಾನೆ. ಈ ವೇಳೆ ಪ್ರಾಣ ರಕ್ಷಣೆ ಸಲುವಾಗಿ
ಆತನ ಬಲಗಾಲಿಗೆ ಸರ್ವೀಸ್‌ ಪಿಸ್ತೂಲ್‌ನಿಂದ ಗುಂಡು ಹಾರಿಸಿ ಬಂಧಿಸಿದ್ದು. ವಿಕ್ಟೋರಿಯಾ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಆಧಿಕಾರಿಯೊಬ್ಬರು ತಿಳಿಸಿದ್ದಾರೆ.

ಕಾರಿನಲ್ಲೇ ಊಟ, ನಿದ್ದೆ, ವಾಸ್ತವ್ಯ!: ರಾಜೇಶ್‌ ಅಲಿಯಾಸ್‌ ಪ್ರತಾಪ್‌ ವಿರುದ್ಧ ರೈಸ್‌ಪುಲ್ಲಿಂಗ್‌ ಹೆಸರಲ್ಲಿ ವಂಚನೆ, ವನ್ಯಜೀವಿ ಸಂರಕ್ಷಣಾ ಕಾಯಿದೆ, ಪೋಕ್ಸೋ, ದರೋಡೆ ಕೃತ್ಯಗಳಲ್ಲಿ ಭಾಗಿಯಾಗಿದ್ದ ಸಂಬಂಧ ಕೊಪ್ಪ ಪೊಲೀಸ್‌ ಠಾಣೆ, ಶಿವಮೊಗ್ಗ ಸೇರಿ ಹಲವು ಕಡೆ 8 ಪ್ರಕರಣಗಳಲ್ಲಿ ಭಾಗಿಯಾಗಿದ್ದಾನೆ. 10 ವರ್ಷಗಳ ಹಿಂದೆ ಹುಬ್ಬಳ್ಳಿ ಪೊಲೀಸರ ಕಸ್ಟಡಿಯಿಂದಲೇ ತಪ್ಪಿಸಿಕೊಂಡಿದ್ದು. ಪ್ರತಿ ಪ್ರಕರಣದಲ್ಲಿ ಜಾಮೀನು ಪಡೆದು ಹೊರಗೆ ಬರುತ್ತಲೇ ಅಪರಾಧ ಕೃತ್ಯಗಳಲ್ಲಿ ತೊಡಗಿಸಿಕೊಳ್ಳುತ್ತಿದ್ದ. ಈ ಪ್ರಕರಣದಲ್ಲಿ ಪೊಲೀಸರಿಗೆ ದಿಕ್ಕುತಪ್ಪಿಸಲು ಎಲ್ಲಿಯೂ ಆತ ವಾಸ್ತವ್ಯ ಹೂಡುತ್ತಿರಲಿಲ್ಲ. ಕ್ಯಾರವಾನ್‌ ರೀತಿ¿ ವಾಹನದಲ್ಲಿ ಊಟ, ನಿದ್ದೆ, ಮಾಡುತ್ತಿದ್ದ. ಮಂಗಳೂರು, ಚೆನೈ, ಮುಂಬೈ ಸೇರಿ ಹಲವೆಡೆ ತಿರುಗಾಡಿ ತಲೆಮರೆಸಿಕೊಂಡಿದ್ದ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.
 
ಗುಂಡೇಟು ತಿಂದ ಆರೋಪಿಗಳು ಪಶ್ಚಿಮ ವಿಭಾಗ: ಮೈಸೂರು ಮೂಲದ ರೌಡಿಶೀಟರ್‌ ಕಿರಣ್‌ ಅಲಿಯಾಸ್‌ ಕಿರ್ಬ, ಮೋಸ್ಟ್‌ ವಾಂಟೆಡ್‌ ಸರಚೋರ ಅಚ್ಯುತ್‌ಕುಮಾರ್‌, ಮುಜಾಫ‌ರ್‌ ನಗರದ ಸರಕಳ್ಳ ಶಾಕೀರ್‌, ರೌಡಿಶೀಟರ್‌ಳಾದ ಬಬ್ಲಿ, ದಿವ್ಯತೇಜ್‌, ರೂಪೇಶ್‌ ಅಲಿಯಾಸ್‌ ನಿರ್ಮಲ್‌
ಕುಮಾರ್‌, ದರೋಡೆಕೋರ ರಾಜೇಶ್‌ ಸೇರಿದಂತೆ ಹಲವು ಕ್ರಿಮಿನಲ್‌ಗ‌ಳು. 

ಉತ್ತರ ವಿಭಾಗ: ಕುಖ್ಯಾತ ಬಾವಾರಿಯಾ ಗ್ಯಾಂಗ್‌ನ ರಾಮ್‌ಸಿಂಗ್‌ ರೌಡಿಶೀಟರ್‌ಗಳಾದ ಬಸವೇಶ್ವರ ನಗರದ ರಫಿಕ್‌, ಸುಧಾಕರ್‌ ಕೇಂದ್ರ ಅಪರಾಧ ವಿಭಾಗ (ಸಿಸಿಬಿ): ಕುಖ್ಯಾತ ರೌಡಿಶೀಟರ್‌ ಸೈಕಲ್‌ ರವಿ ಹಾಗೂ ಜಾರ್ಜ್‌ ಈಶಾನ್ಯ ವಿಭಾಗ: ಮಧ್ಯಪ್ರದೇಶದ ನಟೋರಿಯಸ್‌
“ಭಿಲ್‌ ಗ್ಯಾಂಗ್‌’ ಮೂವರು, ರೌಡಿಶೀಟರ್‌ ಮನೋಜ್‌ ಅಲಿಯಾಸ್‌ ಕೆಂಚ, ಅಶ್ರಫ್ ಖಾನ್‌ ವೈಟ್‌ಫಿಲ್ಡ್‌ ವಿಭಾಗ: ತಮಿಳುನಾಡಿನ ಧರ್ಮ ಪುರಿಯ ಶಂಕರ್‌,ಸೆಲ್ವಕುಮಾರ್‌ರ್‌, ರೌಡಿಶೀಟರ್‌ ನವೀನ್‌ ಅಲಿಯಾಸ್‌ ಅಪ್ಪು ದಕ್ಷಿಣ ವಿಭಾಗ: ಕೆಂಬತ್ತಹಳ್ಳಿ ಪರಮೇಶ್‌ ಅಲಿಯಾಸ್‌ ಪರ್ಮಿ ಹಾಗೂ ಸಂತೋಷ್‌, ಬಿಟಿಎಸ್‌ ಮಂಜ ಪೂರ್ವ ವಿಭಾಗ: ಸರಚೋರ ಸೈಯದ್‌ ಸುಹೇಲ್‌, ಕುಖ್ಯಾತ ಮನೆಗಳ್ಳ ದಿನೇಶ್‌ ಬೋರ 

ಟಾಪ್ ನ್ಯೂಸ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

ಅನ್ಯ ರಾಜ್ಯದ ಅಪರಿಚಿತ ಶಸ್ತ್ರಧಾರಿಗಳಿಂದ ಜೀವಬೆದರಿಕೆ: ಕಾಂಗ್ರೆಸ್ ವಿಪ ಸದಸ್ಯ ಸುನೀಲಗೌಡ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Stock Market: ಆರಂಭಿಕ ವಹಿವಾಟಿನಲ್ಲಿ ಮುಗ್ಗರಿಸಿದ ಷೇರುಪೇಟೆ ಸೆನ್ಸೆಕ್ಸ್;‌ ಭಾರೀ ನಷ್ಟ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Pendrive Case; ನಿರೀಕ್ಷಣಾ ಜಾಮೀನು ಅರ್ಜಿ ವಾಪಾಸ್ ಪಡೆದ ರೇವಣ್ಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

Kantara-Chapter 1: 600 ಮಂದಿ ಬಡಗಿಗಳು, ಕಳರಿಪಯಟ್ಟು ಕಲಾವಿದರು; ಬೃಹತ್ ಸೆಟ್ ನಿರ್ಮಾಣ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

8-

KEA ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ವಿರುದ್ದ ತನಿಖೆಗೆ ಆಗ್ರಹ

7-bng-crime

Bengaluru: ವಿವಾಹಕ್ಕೆ ಒಪ್ಪದ ಮಹಿಳೆ ಮನೆಗೆ ಬೆಂಕಿ ಹಚ್ಚಿದ

6-

Bengaluru: ವಿಮಾನ ಹಾರಾಟದ ವೇಳೆ ತುರ್ತು ಬಾಗಿಲು ತೆರೆಯಲು ಯತ್ನಿಸಿದ ಯುವಕ ಸೆರೆ

5-fir

Bengaluru: ಠಾಣೆಯಲ್ಲೇ ಮಹಿಳಾ ಪಿಎಸ್‌ಐಗೆ ಕಪಾಳಮೋಕ್ಷ, ಪೊಲೀಸರ ಮೇಲೆ ಹಲ್ಲೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

9

Borewell: ಬರದ ಮಧ್ಯೆ ಜಲಮಂಡಳಿ ಕೊರೆಸಿದ ಶೇ.90 ಬೋರ್‌ಗಳು ಸಕ್ಸಸ್‌

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

Kannada Cinema; ನಮ್ ಜನ, ನಮ್ ಸಿನಿಮಾ… ತಗ್ಗಿದ ಪ್ಯಾನ್ ಇಂಡಿಯಾ ಕ್ರೇಜ್

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

ಕಾಂಗ್ರೆಸ್‌ನಿಂದ ಮತ ಬ್ಯಾಂಕ್‌ ರಾಜಕಾರಣ; ನೇಹಾ ಹತ್ಯೆ ಲವ್‌ ಜೆಹಾದ್‌:ಅಮಿತ್‌ ಶಾ ಆರೋಪ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

Thomas Cup: ಬ್ಯಾಡ್ಮಿಂಟನ್‌; ಭಾರತದ ಆಟಕ್ಕೆ ತೆರೆ

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

ಮಣಿಪುರ ಹಿಂಸಾಚಾರಕ್ಕೆ ವರ್ಷ; ಕುಕಿ ಪತ್ನಿ, ಮೈತೇಯಿ ಪತಿ ವರ್ಷದಿಂದ ಭೇಟಿ ಇಲ್ಲ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.