ಬಲಿಗಾಗಿ ಕಾದಿವೆ ಕೆರೆ ಕಟ್ಟೆ


Team Udayavani, Dec 10, 2018, 4:47 PM IST

ray-1.jpg

ಮಾಗಡಿ: ತಾಲೂಕಿನಲ್ಲಿರುವ ಬಹುತೇಕ ಕೆರೆ, ಕಟ್ಟೆಗಳಿಗೆ ತಡೆಗೋಡೆ ನಿರ್ಮಿಸಿಲ್ಲ. ಇದರಿಂದ ಅಪಘಾತಗಳು ಸಂಭವಿಸುವ ಸಾಧ್ಯತೆ ಹೆಚ್ಚಾಗಿದೆ. ಕೂಡಲೇ ಪಿಡಬ್ಲ್ಯೂಡಿ, ಸಣ್ಣ ನೀರಾವರಿ ಇಲಾಖೆ ಅಧಿಕಾರಿಗಳು ತಡೆಗೋಡೆ ನಿರ್ಮಿಸಬೇಕು ಎಂದು ಸಾರ್ವಜನಿಕರು ಮನವಿ ಮಾಡಿದ್ದಾರೆ.

ಮಾಗಡಿ ಬೆಂಗಳೂರು ಮುಖ್ಯ ರಸ್ತೆಯಲ್ಲಿ ಪ್ರತಿದಿನ ಸಾವಿರಾರೂ ವಾಹನಗಳು ಸಂಚರಿ ಸುತ್ತವೆ. ಬೆಂಗಳೂರು ಕಡೆಯಿಂದ ಹುಲಿ ಯೂರುದುರ್ಗ, ಕುಣಿಗಲ್‌ ಸೇರಿದಂತೆ ಹಲವು ಪಟ್ಟಣಗಳನ್ನು ಬೆಸೆಯುವ ರಸ್ತೆ ಇದಾಗಿದೆ. ಅಲ್ಲದೇ ರಜಾ ದಿನಗಳಲ್ಲಿ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ದಟ್ಟಣೆ ಇರುವುದ ರಿಂದ ಧರ್ಮಸ್ಥಳ, ಕುಕ್ಕೆ ಸುಬ್ರಹ್ಮಣ್ಯ ಮುಂತಾದ ಕಡೆಗಳಿಗೆ ತೆರಳುವವರು ಹೆಚ್ಚಾಗಿ ಮಾಗಡಿ ಬೆಂಗಳೂರು ರಸ್ತೆ ಬಳಸುತ್ತಾರೆ. 

ರಸ್ತೆ ಪಕ್ಕದಲ್ಲೇ ಇದೆ ಕಟ್ಟೆ: ಮಾಗಡಿಯ ತಿರುಮಲೆ ಹೆಬ್ಟಾಗಿ ಲಿನಿಂದ ಕೂಗಳತೆ ದೂರದಲ್ಲಿರುವ ಅಂಬಾ ರಯ್ಯನ ಕಟ್ಟೆ ರಸ್ತೆ ಪಕ್ಕದಲ್ಲಿಯೇ ಇದೆ. ಇದಕ್ಕೆ ತಡೆಗೋಡೆ ನಿರ್ಮಿಸಿಲ್ಲ, ಈ ಕಟ್ಟೆಯ ಬಳಿ ತಿರುವು ಹಾಗೂ ಇಳಿಜಾರು ಇದೆ. ಮಾಗಡಿ ಯಿಂದ ವೇಗವಾಗಿ ಬರುವ ವಾಹನಗಳ ಚಾಲಕರು
ಸ್ವಲ್ಪ ಯಾಮಾರಿದರೂ ವಾಹನ ನೇರವಾಗಿ ಕಟ್ಟೆಗೆ ಉರುಳಲಿದೆ. ಈ ಕಟ್ಟೆಗೆ ತಡೆಗೋಡೆ ನಿರ್ಮಿಸಲು ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ನಿರ್ಲಕ್ಷ್ಯ ತನ ತೋರುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ.

ತಡೆಗೋಡೆ ಇಲ್ಲದ ಕೆರೆಗಳು: ತಾಲೂಕಿನ ತಗ್ಗೀಕುಪ್ಪೆ ಗ್ರಾಮದ ಸರ್ಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿಯ ತಿರುವಿನಲ್ಲಿ ಒಂದು ಕಟ್ಟೆ ಇದೆ. ಇದಕ್ಕೂ ತಡೆಗೋಡೆ ನಿರ್ಮಿಸಿಲ್ಲ. ಹೇಳಿಗೆಹಳ್ಳಿ ಕಾಲೋನಿಗೆ ತೆರಳುವ ರಸ್ತೆಯ ಬದಿಯ ಲ್ಲಿರುವ ಕೆರೆಗೂ ತಡೆಗೋಡೆ ನಿರ್ಮಿಸಿಲ್ಲ. ಪಟ್ಟಣದಿಂದ ಮಾಡಬಾಳ್‌ಗೆ ತೆರಳುವ ರಸ್ತೆಯ ಪಕ್ಕದಲ್ಲಿರುವ ಭರ್ಗಾವತಿ ಕೆರೆಗೂ ಯಾವುದೇ ತಡೆಯಿಲ್ಲ. ಕಲ್ಯಾದಿಂದ ಶ್ರೀಪತಿಹಳ್ಳಿಗೆ ತೆರಳುವ ರಸ್ತೆ ಪಕ್ಕದಲ್ಲಿರುವ ಕೆರೆ ಅಪಾಯಕ್ಕೆ ಆಹ್ವಾನಿಸುತ್ತಿದೆ. ಈ ಎಲ್ಲಾ ಕಡೆಗಳಲ್ಲಿ ರಸ್ತೆ ಪಕ್ಕದಲ್ಲಿರುವ ಕೆರೆ, ಕಟ್ಟೆಗಳಿಗೆ ತಡೆಗೋಡೆಯನ್ನು ನಿರ್ಮಿಸಬೇಕಿದೆ. 

ದುರಂತ ನಡೆದ್ರೂ ಕ್ರಮಕೈಗೊಂಡಿಲ್ಲ: ಇತ್ತೀಚೆಗೆ ಮಂಡ್ಯದ ಪಾಂಡವಪುರ ತಾಲೂಕಿ ನಲ್ಲಿ ವಿಸಿ ನಾಲೆಗೆ ಬಸ್‌ ಬಿದ್ದು ಮಕ್ಕಳು, ಮಹಿಳೆಯರು ಸೇರಿ 30 ಮಂದಿ ಮೃತ ಪಟ್ಟಿದ್ದರು. ನಾಲೆಗೆ ತಡೆಗೋಡೆ ನಿರ್ಮಿಸಿದ್ದರೆ ಅಷ್ಟು ಮಂದಿ ಬದುಕುವ ಸಾಧ್ಯತೆ ಇತ್ತು. ಈ ಘಟನೆ ನಂತರವಾದ್ರೂ ಅಧಿಕಾರಿಗಳು ಎಚ್ಚೆತ್ತುಕೊಂಡು ರಸ್ತೆ ಪಕ್ಕದಲ್ಲಿರುವ ಕೆರೆ ಕಟ್ಟೆ, ಹಳ್ಳಗಳಿಗೆ ತಡೆಗೋಡೆ ನಿರ್ಮಿಸಿ, ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು ಎಂದು ಸ್ಥಳೀಯರು ಒತ್ತಾಯಿಸಿದ್ದಾರೆ. 

ಕಳೆದ ವಾರವಷ್ಟೇ ಮಂಡ್ಯ ಜಿಲ್ಲೆಯ ಕನಗನಮರಡಿ ಗ್ರಾಮದಲ್ಲಿ ಬಸ್‌ ನಾಲೆಗೆ ಬಿದ್ದು, 30 ಮಂದಿ ಸಾವನ್ನಪ್ಪಿದ್ದಾರೆ. ಅದೇ ರೀತಿಯ ಇಂತಹ ಘಟನೆಗಳು ರಾಜ್ಯದ ವಿವಿಧೆಡೆ ಬಹಳಷ್ಟು ನಡೆದಿವೆ. ಆದರೂ ಅಧಿಕಾರಿಗಳು ಪಾಠ ಕಲಿತ್ತಿಲ್ಲ. ಕೂಡಲೇ ರಸ್ತೆ ಪಕ್ಕದಲ್ಲಿರುವ ಕೆರೆಗಳ ಏರಿಗೆ ತಡೆಗೋಡೆ ನಿರ್ಮಿಸಿ ಮುಂದೆ ಸಂಭವಿಸಬಹುದಾದ ಅಪಾಯ ತಪ್ಪಿಸಬೇಕು.
 ಅರುಂಧತಿ ಚಿಕ್ಕಣ್ಣ, ಹನುಮಾಪುರ.

ಮಾಗಡಿಯಿಂದ ಬೆಂಗಳೂರಿಗೆ ತೆರಳುವ ಮಾರ್ಗದಲ್ಲಿರುವ ಅಂಬಾರಯ್ಯನ ಕಟ್ಟೆಗೆ ತಡೆಗೋಡೆ ಇಲ್ಲ. ಈಗಾಗಲೇ ವಾಹನಗಳು ಈ ಕಟ್ಟೆಗೆ ಉರುಳಿ ಬಿದ್ದಿವೆ. ಅದೃಷ್ಟವಶಾತ್‌ ಕಟ್ಟೆಯಲ್ಲಿ ನೀರಿಲ್ಲದ ಕಾರಣ ಪ್ರಾಣಾಪಾಯ ಸಂಭವಿಸಿಲ್ಲ. ರಜಾ ದಿನಗಳಲ್ಲಿ ಈ ರಸ್ತೆಯಲ್ಲಿ ಹೆಚ್ಚು ವಾಹನಗಳು ಸಂಚರಿಸುತ್ತವೆ. ಚಾಲಕ ಅಜಾಗರೂಕತೆಯಿಂದ ವಾಹನ ಓಡಿಸಿದರೆ ಅಪಾಯ ಕಟ್ಟಿಟ್ಟ ಬುತ್ತಿ. ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ತಡೆಗೋಡೆ ನಿರ್ಮಿಸಬೇಕು.
 ಡಿ.ಜಿ. ಕುಮಾರ್‌, ದಂಡಿಗೆಪುರ 

ಟಾಪ್ ನ್ಯೂಸ್

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?

Kollywood: ದಳಪತಿ ವಿಜಯ್‌ ʼGOATʼ ಸಿನಿಮಾದಲ್ಲಿ ಧೋನಿ, ರುತ್‌ ರಾಜ್ ನಟನೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

LPG Cylinder: ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ 19 ರೂ. ಇಳಿಕೆ; ಬೆಂಗಳೂರಿನಲ್ಲಿ 1825 ರೂ.

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Notice: ವಿವಾದಾತ್ಮಕ ಹೇಳಿಕೆ… ಕಾಗವಾಡ ಶಾಸಕ ರಾಜು ಕಾಗೆ ಗೆ ನೋಟಿಸ್ ಜಾರಿ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Congress ನಾಯಕರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ: ಕೆಸಿಆರ್‌ಗೆ 48 ಗಂಟೆ ಪ್ರಚಾರ ನಿಷೇಧ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Yadgiri:ಹಾಸನದ ಸಂತ್ರಸ್ತೆಯರ ಪರವಾಗಿ ಬಿಜೆಪಿ-ಕುಮಾರಸ್ವಾಮಿ ಮಾತಾಡಲಿ: ಡಿಕೆಶಿ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Belagavi: ಮರುಭೂಮಿಯ ದಾಹವಾದ ಪ್ರಧಾನಿ ಮೋದಿ ಭರವಸೆ: ಶರದ್ ಪವಾರ್‌ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.