ಕಲಾಸೇವೆಗೆ ಸಂದ ಗೌರವ 


Team Udayavani, Dec 10, 2018, 4:52 PM IST

10-december-19.gif

ಬನಹಟ್ಟಿ: ಸಂಬಾಳ ವಾದನವನ್ನು ಉಸಿರಾಗಿಸಿಕೊಂಡಿರುವ ನಾವಲಗಿ ಗ್ರಾಮದ ಮಲ್ಲಪ್ಪ ಬಾಳಪ್ಪ ಹೂಗಾರ ಅವರಿಗೆ ರಾಜ್ಯ ಸರ್ಕಾರದ ಕೊಡಮಾಡುವ 2018ನೇ ಸಾಲಿನ ಪ್ರತಿಷ್ಠಿತ ಕರ್ನಾಟಕ ಜಾನಪದ ಅಕಾಡೆಮಿ ಪ್ರಶಸ್ತಿ ಲಭಿಸಿದೆ. 47 ವರ್ಷಗಳಿಂದ ಸಂಬಾಳ ವಾದನದ ಕಲೆಯಲ್ಲಿ ತೊಡಗಿಸಿಕೊಂಡಿರುವ ಮಲ್ಲಪ್ಪ ಹೂಗಾರ ಅವರಿಗೆ ತಂದೆ ಬಾಳಪ್ಪ ಅವರಿಂದ ಬಳುವಳಿಯಾಗಿ ಬಂದ ಕಲೆಯನ್ನು ಈಗಲೂ ಮುಂದುವರಿಸಿಕೊಂಡು ಬರುವ ಜೊತೆಗೆ ಅದನ್ನು ಮುಂದಿನ ಪೀಳಿಗೆಗೆ ಕಲಿಸುತ್ತಿದ್ದಾರೆ.

ಹದಿನೈದನೇ ವಯಸ್ಸಿನಲ್ಲಿ ಸಂಬಾಳ ವಾದನ ನುಡಿಸಲು ಆರಂಭಿಸಿದ ಅವರು, ತಮ್ಮ 62 ವಯಸ್ಸಿನಲ್ಲಿ ಸಂಬಾಳವನ್ನು ಹೆಗಲಿಗೆ ಏರಿಸಿ ನುಡಿಸಲು ನಿಂತರೆ ಅದರಲ್ಲಿ ತಲ್ಲೀನರಾಗುತ್ತಾರೆ ಮತ್ತು ಕೇಳುಗರನ್ನು ಮಂತ್ರ ಮುಗ್ಧರನ್ನಾಗಿಸುತ್ತಾರೆ. ಈ ವಯಸ್ಸಿನಲ್ಲಿಯೂ ಅವರ ಸಾಂಬಳ ವಾದನ ಕೇಳಲು ಜನ ಸಾಗವೇ ಸೇರುತ್ತದೆ. ಸಂಬಾಳ ವಾದನವೇ ಅವರ ಉಸಿರು ಮತ್ತು ಬದುಕಾಗಿದೆ. ವರ್ಷದ ವಿವಿಧ ಕಡೆಗಳಲ್ಲಿ ಸಂಬಾಳ ವಾದನದ ಕಲೆ ಪ್ರದರ್ಶನ ಮಾಡುತ್ತಿದ್ದಾರೆ.

ಬನಹಟ್ಟಿಯಲ್ಲಿ 1980ರಲ್ಲಿ ನಡೆದ 9ನೇ ಅಖಿಲ ಭಾರತ ಕರ್ನಾಟಕ ಜಾನಪದ ಸಮ್ಮೇಳನ, ಮುಂಬೈನ ರವೀಂದ್ರ ನಾಟ್ಯ ಮಂದಿರದಲ್ಲಿ, ಕೇರಳದ ಕೊಚ್ಚಿ, ಶ್ರೀಶೈಲದ ಮಲ್ಲಿಕಾರ್ಜುನ ದೇವರ ಜಾತ್ರೆ, ಕರಾವಳಿ ಉತ್ಸವ, ಮೈಸೂರು ದಸರಾ, ನಾಡಿನ ಪ್ರಮುಖ ಉತ್ಸವ, ಅಖಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಗಳ ಅಧ್ಯಕ್ಷರ ಮೆರವಣಿಗೆಯ ಸಂದರ್ಭದಲ್ಲಿ, ಕೃಷ್ಣ ದೇವರಾಯನ ಐದು ನೂರನೇ ವರ್ಷಚಾರಣೆ ಸಂದರ್ಭದಲ್ಲಿ ಕಲೆ ಪ್ರದರ್ಶನ ಮಾಡಿ ಮೆಚ್ಚುಗೆ ಪಡೆದಿದ್ದಾರೆ. 1986ರಲ್ಲಿ ದೆಹಲಿಯಲ್ಲಿ ನಡೆದ ಅಪನಾ ಉತ್ಸವ ಕಾರ್ಯಕ್ರಮದಲ್ಲಿ ಅಂದಿನ ರಾಷ್ಟ್ರಪತಿ ಡಾ| ಶಂಕರ ದಯಾಳ ಶರ್ಮಾ, ಮಾಜಿ ಪ್ರಧಾನಿ ರಾಜೀವ ಗಾಂಧಿ, ದಿ| ಪಿ.ವಿ. ನರಸಿಂಹರಾವ್‌, ಕಾಂಗ್ರೆಸ್‌ ಮುಖಂಡೆ ಸೋನಿಯಾ ಗಾಂಧಿ, ಮಾಜಿ ಮುಖ್ಯಮಂತ್ರಿಗಳಾದ ರಾಮಕೃಷ್ಣ ಹೆಗಡೆ, ಜಿ.ಎಚ್‌. ಪಟೇಲ ಸೇರಿದಂತೆ ಅನೇಕ ಪ್ರಮುಖ ರಾಜಕೀಯ ವ್ಯಕ್ತಿಗಳ ಎದುರು ಪ್ರದರ್ಶನ ಮಾಡಿ ಸೈ ಎನಿಸಿಕೊಂಡಿದ್ದಾರೆ.

ಗಾನಯೋಗಿ ಪುಟ್ಟರಾಜ ಗವಾಯಿಗಳು, ಇಂಚಲದ ಶಿವಾನಂದ ಭಾರತಿ, ಗದುಗಿನ ಲಿ| ತೋಂಟದ ಸಿದ್ಧಲಿಂಗ ಸ್ವಾಮೀಜಿ, ಧಾರವಾಡದ ಮೃತ್ಯುಂಜಯ ಸ್ವಾಮೀಜಿ, ಇಳಕಲ್‌ದ ಲಿ| ಡಾ| ವಿಜಯಮಹಾಂತೇಶ ಸ್ವಾಮೀಜಿ ಸೇರಿದಂತೆ ನಾಡಿನ ಹಲವಾರು ಸ್ವಾಮೀಜಿಗಳ ಮುಂದೆ ಪ್ರದರ್ಶನ ಮಾಡಿದ್ದಾರೆ. ಸಂಬಾಳ ವಾದನದ ಕಲೆ ಮೆಚ್ಚಿ ಸಂಬಾಳ ಭಾಸ್ಕರ ಮತ್ತು ಬ್ರಹ್ಮಶ್ರೀ ಪ್ರಶಸ್ತಿಗಳು ಬಂದಿವೆ. ಮಲ್ಲಪ್ಪ ಹೂಗಾರ ಅವರಿಗೆ ಪ್ರಶಸ್ತಿ ಬಂದಿರುವುದು ನಿಜಕ್ಕೂ ಪ್ರಶಸ್ತಿ ಮೌಲ್ಯ ಹೆಚ್ಚಾಗಿದೆ.

ಮನೆಯಲ್ಲಿಯ ಪರಂಪರೆಯನ್ನು ಮಲ್ಲಪ್ಪ ಮುಂದುವರಿಸಿಕೊಂಡು ಬಂದಿದ್ದಾರೆ. ಕಲೆಗಾಗಿ ತಮ್ಮ ಜೀವನ ಸಮರ್ಪಣೆ ಮಾಡಿಕೊಂಡಿದ್ದಾರೆ. ಬಡತನದಲ್ಲಿಯೇ ಸಂಬಾಳ ವಾದನ ನುಡಿಸುತ್ತ ಇಂದು ಸಂಬಾಳ ವಾದನದ ಕಲೆಯನ್ನು ಶ್ರೀಮಂತಗೊಳಿಸಿದ್ದಾರೆ. ಅವರೊಬ್ಬ ಸಂಬಾಳ ವಾದನದ ಶ್ರೇಷ್ಠ ಕಲಾವಿದರು.
 ಮಲ್ಲಪ್ಪ ಗಣಿ, ಜಾನಪದ ಕಲಾವಿದ

ಮಲ್ಲಪ್ಪ ಅವರು ನಾಡಿನ ಶ್ರೇಷ್ಠ ಸಂಬಾಳ ಕಲಾವಿದರಲ್ಲಿ ಒಬ್ಬರು, ಬಾಲ್ಯದಿಂದಲೇ ಸಂಬಾಳ ಕಲೆ ಕರಗತ ಮಾಡಿಕೊಂಡವರು. ನಾಡಿನ ಗ್ರಾಮ, ನಗರ, ಖಾಸಗಿ ಕಾರ್ಯಕ್ರಮ, ಜಿಲ್ಲಾ ಹಾಗೂ ರಾಜ್ಯ ಮಟ್ಟದ ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಅನೇಕ ವಿಮರ್ಶಕರು ಹಾಗೂ ಪ್ರೇಕ್ಷಕರ ಗಮನ ಸೆಳೆದಿದ್ದಾರೆ. ಅವರು ಎಲ್ಲ ತಾಳಗಳಲ್ಲಿ ಪ್ರವೀಣರಾಗಿದ್ದಾರೆ.
 ಸಿದ್ಧರಾಜ ಪೂಜಾರಿ, ಹಿರಿಯ ಸಾಹಿತಿ

ಪ್ರಶಸ್ತಿ ದೊರಕಿರುವುದು ಖುಷಿ ತಂದಿದೆ. ಕಲೆ ಮತ್ತು ಕಲಾವಿದರನ್ನು ಪ್ರೋತ್ಸಾಹಿಸುವ ಕಾರ್ಯವನ್ನು ಸರಕಾರ ಕೈಗೊಂಡರೆ ಕಲೆ ಮತ್ತು ಕಲಾವಿದರು ಇನ್ನಷ್ಟು ಶ್ರೀಮಂತರಾಗುತ್ತಾರೆ.
. ಮಲ್ಲಪ್ಪ ಬಾಳಪ್ಪ ಹೂಗಾರ
  ಪ್ರಶಸ್ತಿ ವಿಜೇತರು.

ಕಿರಣ ಶ್ರೀಶೈಲ ಆಳಗಿ

ಟಾಪ್ ನ್ಯೂಸ್

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

17

Justice: ಕೋಮು ದ್ವೇಷದಿಂದ ಹತ್ಯೆ ಪ್ರಕರಣ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Central Govt ನಾಲ್ಕಾನೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

Central Govt ನಾಲ್ಕಾಣೆಯಷ್ಟೂ ಬರ ಪರಿಹಾರ ನೀಡಿಲ್ಲ: ಸಿಎಂ ಸಿದ್ದರಾಮಯ್ಯ

1-wwwqee

ರಬಕವಿ-ಬನಹಟ್ಟಿ; ಅರಿಸಿನ ಬೀಜಗಳ ಕೊರತೆ: ಗಗನಕ್ಕೇರುತ್ತಿರುವ ಬೆಲೆ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ

3-

Bagalkote: ಯತ್ನಾಳ ಗೊಡ್ಡ ಎಮ್ಮಿ ಇದ್ದಂಗ: ಕಾಶಪ್ಪನವರ ಟೀಕೆ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

ತೇರದಾಳ: ಇಂದಿನಿಂದ ಚಿನಗುಂಡಿ ಗುಡಿದೇವಿ ಜಾತ್ರಾ ಮಹೋತ್ಸವ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

4-by-ragh

LS Polls: ಮೋದಿ ಆಡಳಿತದಲ್ಲಿ ಭಾರತ 3ನೇ ಆರ್ಥಿಕ ಶಕ್ತಿ

3-huliyaru

Huliyar: ಮರದ ಕೊಂಬೆ ಬಿದ್ದು ಕಾರು ಜಖಂ

2-

LS Polls: ಸಂಸದರ ಅಭಿವೃದ್ಧಿ ಕಾರ್ಯದಿಂದ ಕಾಂಗ್ರೆಸ್‌ಗೆ ನಡುಕ: ಗಾಯತ್ರಿ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

ಪ್ರಯಾಣಿಕರ ಗಮನಕ್ಕೆ; ಮಂಗಳೂರಿನಲ್ಲಿ ರೈಲ್ವೇ ಕಾಮಗಾರಿ : ಹಲವು ರೈಲುಗಳ ಸಂಚಾರದಲ್ಲಿ ವ್ಯತ್ಯಯ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Tulu Movie ಮೇ 3: “ಗಬ್ಬರ್‌ ಸಿಂಗ್‌’ ತುಳು ಸಿನೆಮಾ ತೆರೆಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.