ವಿದ್ಯಾರ್ಥಿಗಳಿಂದ ಆಕರ್ಷಕ ಪ್ರತಿಭಾ ಪ್ರದರ್ಶನ


Team Udayavani, Dec 11, 2018, 1:50 AM IST

kalladka-school-10-12.jpg

ಬಂಟ್ವಾಳ: ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದ ಕ್ರೀಡೋತ್ಸವ ಡಿ. 9ರಂದು ರಾತ್ರಿ ಸಂಪನ್ನಗೊಂಡಿತು. ಕ್ರೀಡೋತ್ಸವದಲ್ಲಿ 3,316ಕ್ಕೂ ಅಧಿಕ ವಿದ್ಯಾರ್ಥಿಗಳು ಪ್ರತಿಭಾ ಪ್ರದರ್ಶನ ನೀಡಿದರು. ಪೋಕ್ರಾನ್‌ ಅಣು ಪರೀಕ್ಷೆ, ಸಂಸತ್ತಿನಲ್ಲಿ ವಾಜಪೇಯಿ ಭಾಷಣ, ಕೇರಳ ಸರಕಾರ ಮತ್ತು ಅಯ್ಯಪ್ಪ ಭಕ್ತರ ನಡುವಿನ ಸಂಘರ್ಷ ಮತ್ತು ಸರದಾರ್‌ ವಲ್ಲಭಭಾಯಿ ಪಟೇಲ್‌ ಸ್ಮರಣಿಯ ಸನ್ನಿವೇಶಗಳು ಪ್ರಸ್ತುತಗೊಂಡವು. ಕೇಂದ್ರ ಸಚಿವ ಅನಂತಕುಮಾರ್‌ ಹೆಗಡೆ ಸಹಿತ ಹಲವು ಅತಿಥಿಗಳ ಸಮಕ್ಷಮ ಕಲ್ಲಡ್ಕ ಡಾ| ಪ್ರಭಾಕರ ಭಟ್‌ ನಿರ್ದೇಶನದಲ್ಲಿ, ಸಂಚಾಲಕ ವಸಂತ ಮಾಧವ, ಅಧ್ಯಕ್ಷ ನಾರಾಯಣ ಸೋಮಾಯಾಜಿ, ಸಹ ಸಂಚಾಲಕ ರಮೇಶ್‌ ಮಾರ್ಗದರ್ಶನದಲ್ಲಿ ಸುಮಾರು 19ಕ್ಕೂ ಅಧಿಕ ಬಗೆಯ ವಿವಿಧ ಕಸರತ್ತು ವಿದ್ಯಾರ್ಥಿಗಳು ಪ್ರದರ್ಶಿಸಿದರು.

ಕಾಲೇಜು ವಿದ್ಯಾರ್ಥಿಗಳು ನೀಲಿ, ಕೆಂಪು ಬೆಳಕಿನ ಎಲ್‌ಇಡಿ ದಂಡ ಗಳೊಂದಿಗೆ ಪ್ರದರ್ಶನ, ಕನ್ನಡ, ತುಳು, ಹಿಂದಿ, ಭಾಷಾ ಭಜನೆಗೆ ನೃತ್ಯ, ಮಲ್ಲಕಂಬ ಪ್ರದರ್ಶನ, ಬಾಟಲಿಗಳ ಮೇಲೆ ಜೋಡಿಸಿದ ತಿರುಗುವ ಮಲ್ಲಕಂಬಗಳಲ್ಲಿ ವಿಶೇಷ ಯೋಗಾಸನ ಪ್ರದರ್ಶನ, ಘೋಷ್‌ ಟಿಕ್‌ ಟಿಕ್‌ ಪ್ರದರ್ಶನ, ಕಾಲೇಜು ವಿದ್ಯಾರ್ಥಿಗಳಿಂದ ಜಾತ್ರೆ ವೈಭವ ಪ್ರದರ್ಶನ, ದ್ವಿಚಕ್ರ, ಏಕಚಕ್ರ ವಾಹನಗಳ ಕಸರತ್ತು, ಬೈಕ್‌ಗಳಲ್ಲಿ ಸಾಹಸಮಯ ಸವಾರಿ, ಬೆಂಚಿನ ಮೇಲೆ ಏಕಚಕ್ರದಲ್ಲಿ ಸವಾರಿ, ಬಾಲಕಿಯರು ಟ್ಯೂಬ್‌ ಲೈಟ್‌ ಒಡೆಯುವ ಸನ್ನಿವೇಶ ರೋಮಾಂಚನಕಾರಿಯಾಗಿದ್ದವು. ಬೆಂಕಿ ಚಕ್ರದೊಳಗೆ ಧುಮುಕುವ ಸನ್ನಿವೇಶ, ಕೇರಳದ ಚೆಂಡೆ ವಾದನ, ಚಕ್ರ ತಾಳ ಮೆರುಗು, ಕಾಲ್ಚಕ್ರ ಪ್ರದರ್ಶನ, ಕೂಪಿಕಾ ಸಮತೋಲನ ಏಕಾಗ್ರತೆಗೆ ನಿದರ್ಶನ ನೀಡಿದವು. ಪ್ರೌಢಶಾಲೆಯ 935 ವಿದ್ಯಾರ್ಥಿಗಳು ಮೈದಾನದ ಹೊನಲು ಬೆಳಕಿನಲ್ಲಿ ಲಯಬದ್ಧವಾಗಿ ಕುಣಿದು ನಿರ್ಮಿಸುವ ರಂಗೋಲಿ ಚಿತ್ತಾರ, ಸಾಲುಸಾಲಾಗಿ ಕುಳಿತು ಮಾಡುವ ಸಾಮೂಹಿಕ ರಚನೆಗಳು ಗಮನ ಸೆಳೆದವು.


ಪಥಸಂಚಲನ, ನೃತ್ಯ ವೈಭವ

ಸಮವಸ್ತ್ರಧಾರಿ ಕಾಲೇಜು ವಿದ್ಯಾರ್ಥಿಗಳು ಘೋಷ್‌ ತಾಳಕ್ಕೆ ಸರಿಯಾಗಿ ಹೆಜ್ಜೆ ಹಾಕಿ ಆಕರ್ಷಕವಾಗಿ ಪಥಸಂಚಲನ ನಡೆಸಿದರು. ಶ್ರೀರಾಮ ಶಿಶು ಮಂದಿರ ವಿದ್ಯಾರ್ಥಿಗಳಿಂದ ಆಕರ್ಷಕ ನೃತ್ಯ, ಸಂಸ್ಥೆಯ ಬಾಲಕ, ಬಾಲಕಿಯರಿಂದ ಘೋಷ್‌ ಪ್ರದರ್ಶನ ನಡೆಯಿತು. ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಂದ ಜಡೆ ಕೋಲಾಟ ವಿಶೇಷ ನೃತ್ಯ ವೈಭವವಿತ್ತು. ಭಾರತೀಯ ನಿಶ್ಯಸ್ತ್ರ ಯುದ್ಧ ಕಲೆ, ವಿದ್ಯಾರ್ಥಿಗಳಲ್ಲಿ ಆತ್ಮಸ್ಥೈರ್ಯ ಹೋರಾಟದ ಮನೋಭಾವ ಬೆಳೆಸುವ ನಿಯುದ್ಧ, ವಿದ್ಯಾರ್ಥಿನಿಯರಿಂದ ಕರಾಟೆ ಪ್ರಯೋಗ ಆಕರ್ಷಣೀಯವಾಗಿತ್ತು. ಯೋಗಾಸನ, ರಥ, ಶಿವಲಿಂಗ, ತಾವರೆ, ರಚನೆಗಳೊಂದಿಗೆ ಪ್ರಾಥಮಿಕ ವಿದ್ಯಾರ್ಥಿಗಳಿಂದ ವಿಶೇಷ ಪ್ರದರ್ಶನ ನಡೆಯಿತು.

ಟಾಪ್ ನ್ಯೂಸ್

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

1-qewqeqw

Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು

1-wqwqeqw

RCB ಕಮಾಲ್; ವಿಲ್ ಜಾಕ್ಸ್ ರೋಮಾಂಚನಕಾರಿ ಶತಕ: ಗುಜರಾತ್ ವಿರುದ್ಧ ಅತ್ಯಮೋಘ ಜಯ

1-ewqeqwew

Congress ಸರ್ಕಾರದಿಂದ ‘ಧರ್ಮ; ಸಂಕಷ್ಟ ನಿವಾರಣೆ: ಪ್ರಿಯಾಂಕ್ ಖರ್ಗೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Belthangady ಓರ್ವ ಮತದಾರನಿಂದ ಕೈ ತಪ್ಪುತ್ತಿತ್ತು ಶೇ.100 ಸಾಧನೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

Uppinangady ಮದುವೆ ಆಮಂತ್ರಣ: ನೀತಿ ಸಂಹಿತೆಯಡಿ ಕೇಸು ದಾಖಲು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

1-qeeqwewqwqe

Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!

1-qqwewqeeqwe

Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ

1-qqewewqe

Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ

1-qweqwqe

Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.