ಕೊಡಿಮರ ಸಾಗಿಸುವ ವಾಹನ ಸಾರಥಿ ಸಾಹಸ ವೈರಲ್‌


Team Udayavani, Dec 11, 2018, 3:50 AM IST

kodimara-10-12.jpg

ನಗರ: ಅಗಲ ಕಿರಿದಾದ ರಸ್ತೆ, ಬಲ ಭಾಗದಲ್ಲಿ ಕೆರೆ, ಎಡ ಭಾಗದಲ್ಲಿ ಹೊಳೆ, ಜತೆಗೆ ದೊಡ್ಡ ತಿರುವು. ಇಂತಹ ರಸ್ತೆಯಲ್ಲಿ ದೊಡ್ಡ ಭಾರದ ಮರವನ್ನು ತುಂಬಿಕೊಂಡ 18 ಚಕ್ರದ ಟ್ರೈಲರ್‌ ಅನ್ನು ಅದರ ಚಾಲಕ ಯಶಸ್ವಿಯಾಗಿ ಮುನ್ನಡೆಸುವ ದೃಶ್ಯ ಈಗ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದೆ. ಈ ವಿಶೇಷ ನಡೆದಿರುವುದು ಬಡಗನ್ನೂರು ಗ್ರಾಮದ ಪಟ್ಟೆಯಲ್ಲಿ. ಅವಳಿ ವೀರ ಪುರುಷರಾದ ಕೋಟಿ – ಚೆನ್ನಯರು ಹಾಗೂ ತಾಯಿ ದೇಯಿ ಬೈದ್ಯೆತಿಯ ಮೂಲಸ್ಥಾನ ಗೆಜ್ಜೆಗಿರಿ ಕ್ಷೇತ್ರಕ್ಕೆ ಬಿಂಬಮರ ಮತ್ತು ಕೊಡಿ ಮರವನ್ನು ಮೆರವಣಿಗೆಯ ಮೂಲಕ ಸಾಗಿಸುವಾಗ ನಡೆದ ಘಟನೆಯಿದು. ಟ್ರೈಲರನ್ನು ಚಾಲನೆ ಮಾಡಿರುವುದು ನುರಿತ ಚಾಲಕ ಮಂಗಳೂರು ಪಣಂಬೂರು ನಿವಾಸಿ ದಿವಾಕರ ಪೂಜಾರಿ.

289ನೇ ಅನುಭವ
ದಿವಾಕರ ಪೂಜಾರಿ ಅವರು ರಾಜ್ಯ, ಹೊರ ರಾಜ್ಯಗಳಲ್ಲಿ 289 ದೈವ, ದೇವಸ್ಥಾನಗಳಿಗೆ ಕೊಡಿಮರ ಸಾಗಿಸಿ ಅನುಭವ ಇರುವ ಚಾಲಕ. ಈ ಸೇವೆಯನ್ನು ಭಕ್ತಿಯಿಂದ ಮಾಡಿರುವ ಅವರು ಕೋಟಿ – ಚೆನ್ನಯ ಮೂಲಸ್ಥಾನಕ್ಕೆ 28ನೇ ಕೊಡಿಮರ ಸಾಗಿಸುವ ಅವಕಾಶ ಸಿಕ್ಕಿದ್ದು ನನ್ನ ಭಾಗ್ಯ ಎನ್ನುತ್ತಾರೆ. ದೈವಸ್ಥಾನ, ದೇವಸ್ಥಾನಗಳಿಗೆ ಉಚಿತವಾಗಿ ಟ್ರೈಲರ್‌ ಒದಗಿಸುವ ಮಾಲಕ ಮಾಜಿ ಸಚಿವ ನಾಗರಾಜ ಶೆಟ್ಟಿ ಅವರ ಭಕ್ತಿಯ ಸೇವೆಯನ್ನು ನೆನೆಯುತ್ತಾರೆ. ರಾಜ್ಯದೊಳಗೆ ದೇವಾಲಯಗಳಿಗೆ ಕೊಡಿಮರ ಕೊಂಡೊಯ್ಯುವ ಸಂದರ್ಭ ಉಚಿತ ವಾಹನದ ವ್ಯವಸ್ಥೆ ಮಾಡುವ ಇವರು ಹೊರರಾಜ್ಯಗಳಿಗೆ ಮಾತ್ರ ಲೋಡ್‌ ಆದ ಬಳಿಕದ ಖರ್ಚು ತೆಗೆದುಕೊಳ್ಳುತ್ತಾರೆ.

ಯಶಸ್ವಿ ಪಯಣ
ಪೊಳಲಿ ದೇವಸ್ಥಾನ, ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನ, ಶರವು ಮಹಾಗಣಪತಿ ದೇವಸ್ಥಾನ ಸಹಿತ ಜಿಲ್ಲೆಯ-ಹೊರಜಿಲ್ಲೆಗಳ ದೇವಾಲಯದ ಕೊಡಿಮರ, ಮೈಸೂರು ಚಾಮುಂಡಿ ಬೆಟ್ಟ, ಆಂಧ್ರಪ್ರದೇಶದ ಶ್ರೀ ಶೈಲಂ ಮಹಾನಂದಿ ದೇವಾಲಯ, ಮಹಾರಾಷ್ಟ್ರ  ಜಿ.ಎಸ್‌.ಬಿ. ದೇವಾಲಯಗಳಿಗೆ ಕೊಡಿಮರ, ದೊಡ್ಡ ಗಾತ್ರದ ಶಿಲೆಗಳನ್ನು ಸಾಗಿಸಿದ ಹೆಗ್ಗಳಿಕೆ ದಿವಾಕರ ಪೂಜಾರಿ ಅವರದ್ದು. ಕಾರ್ಕಳದಿಂದ ಸಾವಿರ ಕಂಬ ಬಸದಿಗೆ ಗೊಮಟೇಶ್ವರ ಮೂರ್ತಿ ಕೊಂಡೊಯ್ದಿರುವುದು, ವಿವಿಧ ಕಡೆಗಳಿಗೆ ಸುಮಾರು 5 ರಥಗಳನ್ನು ವಾಹನದ ಸಾರಥಿಯಾಗಿ ಇವರು ಯಶಸ್ವಿಯಾಗಿ ಸಾಗಿಸಿದ್ದಾರೆ.

ರಿಸ್ಕ್ ಇದೆ
ಈ ಜವಾಬ್ದಾರಿಯಲ್ಲಿ ಸಾಕಷ್ಟು ರಿಸ್ಕ್ ಇದೆ. ವರ್ಷದಲ್ಲಿ 10 -20 ಕ್ಷೇತ್ರಗಳಿಗೆ ಕೊಡಿಮರಗಳನ್ನು ಸಾಗಿಸುತ್ತೇನೆ. ಎಷ್ಟೇ ಅನುಭವ ಇದ್ದರೂ ಟ್ರೇಲರ್‌ಗೆ ಲೋಡ್‌ ಮಾಡಿದ ಬಳಿಕ ದೈವ, ದೇವರ ಕಾರಣಿಕದಿಂದ ಯಶಸ್ಸು ಲಭಿಸುತ್ತದೆ. ಶ್ರದ್ಧೆ, ನಿಷ್ಠೆಯ ಜತೆಗೆ ಶುದ್ಧತೆಯ ವ್ರತವನ್ನು ಕೊಡಿಮರ ಸಾಗಿಸುವ ಸಂದರ್ಭ ಪಾಲಿಸುತ್ತೇನೆ. 
– ದಿವಾಕರ ಪೂಜಾರಿ, ಟ್ರೇಲರ್‌ ಚಾಲಕ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.