ಒಂದು ಬಿಸ್ಕೆಟ್‌ ಭಾಷಣ


Team Udayavani, Dec 11, 2018, 11:55 AM IST

ondu-bisket.jpg

ನಾವು ನಮ್ಮ ಮನಸ್ಸಿಗೆ ಹಿಡಿಸುವ ಕೆಲಸ ಮಾಡಬೇಕು. ಆಗ ಮಾತ್ರವೇ ನೆಮ್ಮದಿಯಿಂದ ಇರಲು ಸಾಧ್ಯ. ಅದು ಬಿಟ್ಟು ಸಿಕ್ಕಿದ ಕೆಲಸ ಮಾಡಿದರಾಯಿತೆಂದುಕೊಂಡು ಬೇರಾವುದೋ ಕೆಲಸದಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡರೆ ಅಲ್ಲಿ ನೆಮ್ಮದಿ ಸಿಗುವುದಿಲ್ಲ…

ಅದು ಸಂಜೆ 6ರ ಸಮಯ. ಮನೆಯಿಂದ ಹಬ್ಬ ಮುಗಿಸಿ ಹೊರಟಾಗ ದಾರಿ ಮಧ್ಯೆ ಬಸ್ಸಿನ ಟಯರ್‌ ಪಂಕ್ಚರ್‌ ಆಗಿತ್ತು. ಬೇರೆ ಬಸ್‌ ಇಲ್ಲದ ಕಾರಣ ಅದೇ ಬಸ್‌ ರಿಪೇರಿ ಅಗುವವರೆಗೆ ಕಾದು ಮುಂದುವರಿಯಬೇಕಾದ ಅನಿವಾರ್ಯತೆ. ಸುಮಾರು ಒಂದು ತಾಸಿನ ನಂತರ ಬಸ್ಸು ರೆಡಿಯಾಗಿ ಹೊರಟಾಗ ಅಲ್ಲೋಲ ಕಲ್ಲೋಲವಾಗಿದ್ದ ಮನಸ್ಸು ತಹಬದಿಗೆ ಬಂತು. ಅಂತೂ ಇಂತೂ ಬಸ್ಸು ನಿಧಾನವಾಗಿ ಉಡುಪಿಗೆ ಬಂದು ತಲುಪಿದಾಗ ನಿರುಮ್ಮಳವಾಗಿದ್ದ ಮನಕ್ಕೆ ಮಗದೊಮ್ಮೆ ಆತಂಕ.

ಮೊದಲ ಬಸ್‌ ತಡವಾದ್ದರಿಂದ ಧರ್ಮಸ್ಥಳಕ್ಕೆ ಹೋಗಬೇಕಾದ ಮತ್ತೂಂದು ಬಸ್ಸು “ನೀನು ಬರುವವರೆಗೂ ಕಾಯಲಾಗುವುದಿಲ್ಲ’ ಅಂದುಕೊಂಡು ಅದಾಗಲೇ ಹೊರಟು ಹೋಗಿತ್ತು. ಇವತ್ತು ಹೊರಟ ಗಳಿಗೆಯೇ ಸರಿ ಇಲ್ಲ ಎಂದು ನನ್ನನ್ನು ನಾನು ಹಳಿದುಕೊಳ್ಳುತ್ತಾ ನೇರವಾಗಿ ಒಂದು ಅಂಗಡಿಯೊಳಗೆ ನುಗ್ಗಿದೆ. ಅಂಗಡಿಯವನು ನನ್ನನ್ನು ನೋಡಿದವನೇ ತುಳುವಿನಲ್ಲಿ “ದಾದ ಬೋಡಿತ್ತಂಡ್‌?’ ಎಂದು ಕೇಳಿದ. ಅವರು ಕೇಳಿದ ಪ್ರಶ್ನೆಗೆ ನನಗೆ ಬರುತ್ತಿದ್ದ ಚೂರುಪಾರು ತುಳುವಿನಲ್ಲಿ ನಿಜವಾದ ಸುಂದರ ತುಳು ವಿಕಾರವಾಗದಂತೆ,

“ಒಂದು ಬಾಟಲಿ ಜ್ಯೂಸ್‌ ಕೊಡಿ ಅಣ್ಣಾ’ ಎಂದೆ. ನಾನು ಕೇಳಿದ ಜ್ಯೂಸ್‌ ನೀಡಿದ ಅಂಗಡಿಯವನು, ಬಿಸ್ಕೆಟ್‌ ಬಾಕ್ಸ್‌ ಒಂದನ್ನು ತೋರಿಸಿ, “ಇದು ತುಂಬಾ ಚೆನ್ನಾಗಿದೆ, ತೆಗೊಳ್ಳಿ ಟೇಸ್ಟ್‌ ನೋಡಿ’ ಎನ್ನುತ್ತಾ ತನ್ನ ವ್ಯಾಪಾರಿ ಗುಣ ಮೆರೆದ. ನಾನು ಬೇಡವೆಂದರೂ ಕೇಳದೆ ಒಮ್ಮೆ ತಿಂದು ನೋಡಿ ಎಂದು ಒತ್ತಾಯಿಸಿ ಕೈಗೆ ಬಿಸ್ಕೆಟ್‌ ಪ್ಯಾಕೆಟ್‌ ನೀಡಿಯೇಬಿಟ್ಟರು. ನಾನು ಅವರ ಒತ್ತಾಯಕ್ಕೆ ಮಣಿದು ಒಲ್ಲದ ಮನಸ್ಸಿನಿಂದ ಅದನ್ನ ತೆಗೆದುಕೊಂಡು ಅರ್ಧ ಗಂಟೆ ಬಸ್ಸಿಗಾಗಿ ಕಾದು ಕೊನೆಗೂ ಬಂದ ಬಸ್‌ ಹತ್ತಿ ಮುಂದಿನ ಸೀಟಿನಲ್ಲಿ ಕುಳಿತೆ.

ಆಗಲೇ ಬಸ್‌ ಹತ್ತಿದ ಮತ್ತೂಬ್ಬ ವ್ಯಕ್ತಿಯೂ ಸೀದಾ ಬಂದು, ನಾನು ಕುಳಿತಿದ್ದ ಸೀಟ್‌ನಲ್ಲೇ ಬಂದು ಆಸೀನರಾದರು. ಅವರ ಮುಖ ತೀರಾ ಗಂಭೀರತೆಯಿಂದ ಕೂಡಿತ್ತು. ನಾನೂ ಅವರ ಗಂಭೀರತೆಗೆ ಮಣಿದು ಸುಮ್ಮನೆ ಕುಳಿತು ಕಿವಿಗೆ ಇಯರ್‌ ಫೋನ್‌ ಸಿಕ್ಕಿಸಿಕೊಂಡು ಇಂಪಾದ ಹಾಡನ್ನು ಗುನುಗುತ್ತಿದ್ದೆ. ಮೇಲ್ನೋಟಕ್ಕೆ ನಾನು ಹಾಡು ಕೇಳುವುದರಲ್ಲಿ ಮಗ್ನನಾಗಿದ್ದರೂ ನನ್ನ ಮನಸ್ಸು ಮಾತ್ರ ಪಕ್ಕದಲ್ಲಿ ಕುಳಿತಿದ್ದ ದೈತ್ಯ ವ್ಯಕ್ತಿಯ ಕಡೆಗಿತ್ತು. ಇವರನ್ನು ನೋಡಿದರೆ ಸೇನೆಯಲ್ಲಿದ್ದಿರಬಹುದು,

ಹಬ್ಬದ ಪ್ರಯುಕ್ತ ಮನೆಗೆ ಬಂದಿರಬಹುದು ಎಂಬಂಥ ನಾನಾ ಆಲೋಚನೆಗಳು ಮನದಲ್ಲಿ ಮೂಡಿ ಮರೆಯಾದವು. ಮೊದಲಿನಿಂದಲೂ ಯೋಧರ ಬಗ್ಗೆ ಉತ್ಕಟ ಅಭಿಮಾನವಿದ್ದ ನನಗೆ ಅವರನ್ನು ಒಮ್ಮೆಯಾದರೂ ಮಾತನಾಡಿಸಬೇಕೆನಿಸಿತು. ಆದರೆ, ಹೇಗೆ ಆರಂಭಿಸುವುದೆಂದು ತಿಳಿಯದೆ, ಮತ್ತದೇ ಆಲೋಚನೆಯಲ್ಲಿ ಮುಳುಗಿದೆ. ಕೊನೆಗೆ ನನ್ನಲ್ಲಿದ್ದ “ಬಿಸ್ಕೆಟ್‌ ಪ್ಯಾಕ್‌ ತೆಗೆದು, ತೆಗೆದುಕೊಳ್ಳಿ…’ ಎಂದು ಮುಗುಳುನಗೆ ಬೀರುತ್ತ ಕೈ ಚಾಚಿದೆ. ಅವರು ನನ್ನತ್ತ ನೋಡಿ ಒಮ್ಮೆ ಕಿರುನಗೆ ಬೀರಿ, “ಇಲ್ಲಾ ಪರವಾಗಿಲ್ಲ, ತಿನ್ನಿ…’ ಎಂದರು.

ನನಗೂ ಅಷ್ಟೇ ಬೇಕಾಗಿತ್ತು. ತತ್‌ಕ್ಷಣ ಒತ್ತಾಯ ಮಾಡಿ ಅವರಿಗೆ ಬಿಸ್ಕೆಟ್‌ ನೀಡಿ ನನ್ನ ಮಾತುಗಳಿಗೆ ಪೀಠಿಕೆ ಹಾಕಿದೆ. ಅವರೂ ನನ್ನೊಂದಿಗೆ ಅಲ್ಪ ಸ್ವಲ್ಪವೇ ಮಾತಾಡುತ್ತ ತಮ್ಮ ಪೂರ್ವಾಪರ ಬಿಚ್ಚಿಟ್ಟರು. “ನಾನು ಎಂಜಿನಿಯರಿಂಗ್‌ ಮುಗಿಸಿ ಇವಾಗ ಧಾರವಾಡದಲ್ಲಿ ಲೆಕ್ಚರರ್‌ ಆಗಿದ್ದೇನೆ. ನನ್ನ ಮನೆಯೂ ಅಲ್ಲೇ ಇದೆ’ ಅಂದಾಗ ನನ್ನ ಮನದಲ್ಲಿ ಆಗಲೇ ಮೂಡಿದ ಅಲೋಚನೆಗಳು ಥಟ್ಟನೆ ಮರೆಯಾದವು. ಅವರು ಮಾತು ಮುಂದುವರಿಸಿ, “ಮೊದಲು ಬೆಂಗಳೂರಿನಲ್ಲಿದ್ದೆ.

ಆದರೆ, ಅಲ್ಲಿಯ ಜೀವನಕ್ಕಿಂಥ ನನ್ನ ಊರು ನೆಮ್ಮದಿ ಕೊಡುತ್ತೆ’ ಅಂದಾಗ, ನಾನು ಮಾತಿನ ಮಧ್ಯೆ ಕುತೂಹಲಕ್ಕೆ, “ನೀವು ಯಾಕೆ ಟೀಚಿಂಗ್‌ ಜಾಬ್‌ ಆರಿಸಿಕೊಂಡಿರಿ?’ ಎಂದು ಕೇಳಿದೆ. ನನ್ನ ಮಾತಿಗೆ ಅವರು ನಗುತ್ತ, “ಯಾವಾಗಲೂ ನಾವು ನಮ್ಮ ಮನಸ್ಸಿಗೆ ಹಿಡಿಸುವ ಕೆಲಸ ಮಾಡಬೇಕು. ಆಗ ಮಾತ್ರ ನೆಮ್ಮದಿಯಿಂದ ಇರಲು ಸಾಧ್ಯ. ಅದು ಬಿಟ್ಟು ಸಿಕ್ಕಿದ ಕೆಲಸ ಮಾಡಿದರಾಯಿತೆಂದುಕೊಂಡು ಬೇರಾವುದೋ ಕೆಲಸದಲ್ಲಿ ನಮ್ಮನ್ನು ನಾವು ತೊಡಗಿಸಿಕೊಂಡರೆ ಅಲ್ಲಿ ಸುಖ- ಶಾಂತಿ- ನೆಮ್ಮದಿ ಯಾವುದೂ ಸಿಗುವುದಿಲ್ಲ.

ಆದ್ದರಿಂದ ಆಸಕ್ತಿ ಇರುವ ಕ್ಷೇತ್ರದಲ್ಲಿ ಮುನ್ನುಗ್ಗಿ ಜೀವನದಲ್ಲಿ ಯಶಸ್ಸು ಗಳಿಸಬೇಕು. ನನಗೆ ಮಕ್ಕಳಿಗೆ ಪಾಠ ಮಾಡುವುದರಲ್ಲಿರುವ ನೆಮ್ಮದಿ ಬೇರೆ ಯಾವ ಕೆಲಸದಲ್ಲಿಯೂ ಸಿಗುವುದಿಲ್ಲ. ಹಣ ಮಾಡಲು ಬೇಕಾದಷ್ಟು ದಾರಿ ಇದೆ. ಆದರೆ, ಅದು ಯಾವುದೂ ಮನಸ್ಸಿಗೆ ಹಿಡಿಸಲ್ಲ. ನಾನು ನನ್ನಲ್ಲಿರುವ ವಿದ್ಯೆಯನ್ನು ಒಂದಷ್ಟು ಜನರಿಗೆ ನೀಡುವುದರಲ್ಲಿಯೇ ಹೆಚ್ಚು ಸಂತೋಷ ಪಡುತ್ತೇನೆ’ ಅಂದರು. ಅವರ ಮಾತು ಭಾಷಣದಂತೆ ಕಂಡರೂ, ನನಗೆ ಅಕ್ಷರಶಃ ಸತ್ಯ ಅನ್ನಿಸಿತು.

* ಆದರ್ಶ ಕೆ.ಜಿ., ಉಜಿರೆ

ಟಾಪ್ ನ್ಯೂಸ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

Koppala; ಅಮೃತಕಾಲ ಅಲ್ಲ, ಇದು ಅನ್ಯಾಯದ ಕಾಲ, ಬರ್ಬಾದ್ ಕಾಲ: ಹರಿಪ್ರಸಾದ್ ಟೀಕೆ

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್

‘ತಾರಕ್​ ಮೆಹ್ತಾ ಕಾ ಉಲ್ಟಾ ಚಶ್ಮಾ’ ನಟ ಗುರುಚರಣ್​ ಸಿಂಗ್​ ನಾಪತ್ತೆ… ಮೊಬೈಲ್ ಸ್ವಿಚ್ ಆಫ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ತತ್ವಜ್ಞಾನಿ ಶಾಲಾ ಮಾಸ್ತರ

ತತ್ವಜ್ಞಾನಿ ಶಾಲಾ ಮಾಸ್ತರ

ಬದುಕು ಬದಲಿಸಿದ ತಂದೂರಿ ಚಹಾ!

ಬದುಕು ಬದಲಿಸಿದ ತಂದೂರಿ ಚಹಾ!

ಮೂರ್ಖರ ದಿನ ಹುಟ್ಟಿದ್ದು ಹೀಗೆ…

ಮೂರ್ಖರ ದಿನ ಹುಟ್ಟಿದ್ದು ಹೀಗೆ…

Untitled-1

ಬಾಂಬರ್‌ ಬಾವಲಿ!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

ಅಜ್ಜನನ್ನು ನೋಡಿಯೇ ಮಾತಾಡಲು ಕಲಿತೆವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

13-bk-hariprasad

ಇದು ದೇಶದ ಚುನಾವಣೆ, ಸಿಎಂ ಸ್ಥಾನದ ಮಾಧ್ಯಮಗಳ ಚರ್ಚೆ ಅಪ್ರಸ್ತುತ: ಬಿ.ಕೆ.ಹರಿಪ್ರಸಾದ್

Hubli; ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡ ಶಕ್ತಿ: ದಿಂಗಾಲೇಶ್ವರ ಸ್ವಾಮೀಜಿ

ಪ್ರಹ್ಲಾದ ಜೋಶಿ ವೀರಶೈವ ಲಿಂಗಾಯತರ ಅವನತಿಗಾಗಿ‌ ಹುಟ್ಟಿಕೊಂಡವರು: ದಿಂಗಾಲೇಶ್ವರ ಸ್ವಾಮೀಜಿ

12-prakash-raj

April 28 ರಂದು ರಾಜ್ಯಮಟ್ಟದ ವಿದ್ಯಾರ್ಥಿ ಸಮಾವೇಶಕ್ಕೆ ಚಿತ್ರನಟ ಪ್ರಕಾಶ ರೈ ಆಗಮನ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.