ನಾಳೆಯಿಂದ ಕಬ್ಬು ಕಟಾವು ಆರಂಭಿಸಿ: ಜಿಲ್ಲಾಧಿಕಾರಿ


Team Udayavani, Dec 11, 2018, 3:43 PM IST

bell-2.jpg

ಬಳ್ಳಾರಿ: ಎನ್‌ಎಸ್‌ಎಲ್‌ ಶುಗರ್ ಕಾರ್ಖಾನೆಯಲ್ಲಿ ಲಭ್ಯವಿರುವ ಕಬ್ಬು ಕಟಾವು ಮಾಡುವ ಗ್ಯಾಂಗ್‌ಗಳನ್ನು ಕ್ರೋಢಿಕರಿಸಿ ಡಿ.12ರಿಂದ ಅಕ್ಟೋಬರ್‌-2017 ಮತ್ತು ನವೆಂಬರ್‌-2017ರಲ್ಲಿ ಬಿತ್ತನೆ ಮಾಡಿದ ರೈತರ ಕಬ್ಬು ಕಟಾವು ಪ್ರಾರಂಭ ಮಾಡತಕ್ಕದ್ದು. ಯಾವುದೇ ಕಾರಣಕ್ಕೂ ನಿರ್ಲಕ್ಷ ತೋರದೇ ಕ್ರಮ ವಹಿಸಬೇಕೆಂದು ಜಿಲ್ಲಾಧಿಕಾರಿ ಡಾ| ರಾಮ್‌ ಪ್ರಸಾತ್‌ ಮನೋಹರ್‌ ಖಡಕ್‌ ಸೂಚನೆ ನೀಡಿದ್ದಾರೆ.

ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ಸಂಜೆ ನಡೆದ ಕಬ್ಬು ಬೆಳೆಗಾರರ ಸಂಘದ ಮುಖಂಡರು ಹಾಗೂ ವಿವಿಧ ಸಕ್ಕರೆ ಕಾರ್ಖಾನೆಗಳ ಪ್ರತಿನಿಧಿಗಳು ಮತ್ತು ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.
 
ಡಿ.15ರಿಂದ ಮೈಲಾರ್‌ ಶುಗರ್ನವರು 5 ಕಬ್ಬು ಕಟಾವು ಮಾಡುವ ಗ್ಯಾಂಗ್‌, ವಿಜಯನಗರ ಶುಗರ್ 5, ಶಾಮನೂರು ಶುಗರ್ 10, ಕೋರ್‌ ಗ್ರೀನ್‌ ಶುಗರ್ 10 ಹಾಗೂ ದಾವಣಗೆರೆ ಶುಗರ್ 10 ಕಬ್ಬು ಕಟಾವು ಮಾಡುವ ಗ್ಯಾಂಗ್‌ಗಳನ್ನು ಎನ್‌ಎಸ್‌ಎಲ್‌ ಶುಗರ್ ಕಾರ್ಖಾನೆಯ ನೋಂದಾಯಿತ ರೈತರ ಕಬ್ಬು ಕಟಾವು ಮಾಡಲು ಎನ್‌ಎಸ್‌ಎಲ್‌ ಶುಗರ್ರವರು ತಯಾರಿಸಿದ ರೈತರ ಪಟ್ಟಿ ಪ್ರಕಾರ ನಿಯೋಜಿಸತಕ್ಕದ್ದು ಎಂದು ಅವರು ಸೂಚಿಸಿದರು.

ಈ ವಿವಿಧ ಸಕ್ಕರೆ ಕಾರ್ಖಾನೆಗಳಿಗೆ ಕಟಾವು ಮಾಡಿದ ಕಬ್ಬು ಪೂರೈಸುವ ಸಾಗಾಣಿಕೆ ವೆಚ್ಚ ಹಾಗೂ ಟೋಲ್‌ಗೇಟ್‌ ಶುಲ್ಕ ಮತ್ತು ಇತರೆ ಖರ್ಚುಗಳನ್ನು ದೇಶನೂರು ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆ ಭರಿಸುವುದಕ್ಕೆ ಜಿಲ್ಲಾಧಿಕಾರಿಗಳು ಸೂಚನೆ ನೀಡಿದರು. ಇದಕ್ಕೆ ಎನ್‌ಎಸ್‌ಎಲ್‌ ಕಾರ್ಖಾನೆ ಅಧಿಕಾರಿಗಳು ಒಪ್ಪಿಗೆ ಸೂಚಿಸಿದರು. ಹಿಂದಿನ ವರ್ಷದ ರೈತರಿಗೆ ನೀಡಬೇಕಾದ ಬಾಕಿ ಹಣವನ್ನು ಈ ವರ್ಷದ ಕಬ್ಬು ಸಾಗಾಣಿಕೆ ಮಾಡುವಲ್ಲಿ ಬರುವ ವ್ಯತ್ಯಾಸದ ಮೊತ್ತವನ್ನು ರೈತರೊಗೆ ಭರಿಸಿದ ನಂತರ ನೀಡತಕ್ಕದ್ದು ಎಂದು ತಿಳಿಸಿದ ಅವರು ರೈತರಿಗೆ ಸಾಗಾಣಿಕೆ ವ್ಯತ್ಯಾಸದ ಮೊತ್ತ ಹಾಗೂ ಇತರೆ ಬಾಕಿ ಸಂಪೂರ್ಣವಾಗಿ ಭರಿಸಿದ ನಂತರ ಎನ್‌ ಎಸ್‌ಎಲ್‌ ಶುಗರ್ ಕಾರ್ಖಾನೆಯವರು ಮುಟ್ಟುಗೋಲು ಹಾಕಿಕೊಂಡ ಆಸ್ತಿಗಳನ್ನು ತೆರವುಗೊಳಿಸಲಾಗುವುದು ಎಂದು ತಿಳಿಸಿದರು.

ಎನ್‌ಎಸ್‌ಎಲ್‌ ಶುಗರ್ ಕಾರ್ಖಾನೆಯವರು ಎಲ್ಲ ಅಧಿಕಾರಿ ಮತ್ತು ಸಿಬ್ಬಂದಿಗಳು ರೈತರೊಂದಿಗೆ ಸಹಕರಿಸಿ ನಿಗದಿತ ಸಮಯದಲ್ಲಿ ರೈತರ ಕಬ್ಬಿನ ಕಟಾವು ಮತ್ತು ಸಾಗಾಣಿಕೆಯಲ್ಲಿ ಯಾವುದೇ ತೊಂದರೆಯಾಗದಂತೆ ಕ್ರಮ ವಹಿಸಿ ಎಲ್ಲ ರೈತರ ಕಬ್ಬು ಕಟಾವು ಮುಕ್ತಾಯಗೊಳ್ಳುವವರೆಗೆ ಕಾರ್ಯನಿರ್ವಹಿಸಬೇಕು ಎಂದು ಸೂಚನೆ ನೀಡಿದರು. ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆಯವರು ಸಿಬ್ಬಂದಿಯವರ ಸಮಕ್ಷಮ ಹಾಗೂ ಜವಾಬ್ದಾರಿಯಲ್ಲಿ ಕಬ್ಬು ಕಟಾವು ಹಾಗೂ ಸಾಗಣಿಕೆಗೆ ಕ್ರಮ ಕೈಗೊಳ್ಳತಕ್ಕದ್ದು ಎಂದರು.

ಸಭೆಯಲ್ಲಿ ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆ, ಮೈಲಾರ ಶುಗರ್, ವಿಜಯನಗರ ಶುಗರ್, ದಾವಣಗೆರೆ ಶುಗರ್, ಶಾಮನೂರು ಶುಗರ್,ಕೋರಗ್ರೀನ್‌ ಶುಗರ್ ಪ್ರತಿನಿಧಿಗಳು, ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷರು ಮತ್ತು ಮುಖಂಡರು ಹಾಗೂ ಕೃಷಿ ಇಲಾಖೆ ಅಧಿಕಾರಿಗಳು ಇದ್ದರು. 

ಕಬ್ಬು ಕಟಾವಿಗೆ ಮೊದಲು ನಾಟಿ ಮಾಡಿದವರಿಗೆ ಆದ್ಯತೆ
ಕಬ್ಬು ನಾಟಿ ಮಾಡಿದ ಪ್ರಕಾರ ಕಬ್ಬು ಕಟಾವಿನ ಪರ್ಮಿಟ್‌ನ್ನು ಕಾರ್ಖಾನೆಯಿಂದ ಪರಿಶೀಲಿಸಿ ಮೊದಲು ನಾಟಿ ಮಾಡಿದವರಿಗೆ ಮೊದಲ ಆದ್ಯತೆ ಪ್ರಕಾರ ಕೊಡತಕ್ಕದ್ದು ಎಂದು ತಿಳಿಸಿದರು. ಎನ್‌ಎಸ್‌ಎಲ್‌ ಸಕ್ಕರೆ ಕಾರ್ಖಾನೆ ವ್ಯಾಪ್ತಿಯಲ್ಲಿ ನೋಂದಾಯಿತ ಕಬ್ಬನ್ನು ಬೇರೆ ಕಾರ್ಖಾನೆಗಳಿಗೆ
ಸಾಗಿಸುವಾಗ ಸಂಬಂಧಿಸಿದ ರೈತರು ಕಬ್ಬನ್ನು ಸ್ವೀಕರಿಸುವ ಕಾರ್ಖಾನೆಯವರೆಗೆ ಸಂಬಂಧಿಸಿದ ವಾಹನದಲ್ಲಿ ಖುದ್ದಾಗಿ ಇದ್ದು, ಕಬ್ಬಿನ ತೂಕವನ್ನು ಸ್ವೀಕರಿಸುವ ಕಾರ್ಖಾನೆಯಲ್ಲಿಯೇ ತೂಕ ಮಾಡಿಸಿ ರೈತರು ದೃಢೀಕರಿಸಿಕೊಂಡು ರಸೀದಿಯನ್ನು ಕಾರ್ಖಾನೆ ವತಿಯಿಂದ ಪಡೆಯತಕ್ಕದ್ದು.

ಸಾಮಾನ್ಯವಾಗಿ ರೈತರ ಜಮೀನಿನಲ್ಲಿ ವಾಹನಕ್ಕೆ ಕಬ್ಬು ಲೋಡ್‌ ಆದ ನಂತರ 08-12 ಗಂಟೆಗಳೊಳಗಾಗಿ ಕಬ್ಬು ಸ್ವೀಕರಿಸುವ ಕಾರ್ಖಾನೆಗಳು ತೂಕ ಮಾಡಿ ರೈತರಿಗೆ ರಸೀದಿ ನೀಡತಕ್ಕದ್ದು. ಒಂದು ವೇಳೆ ಸ್ವೀಕರಿಸುವ ಕಾರ್ಖಾನೆಯವರು ಟೋಕನ್‌ ಪದ್ಧತಿ ವ್ಯವಸ್ಥೆ ಅನುಸರಿಸುತ್ತಿದ್ದಲ್ಲಿ ಅದೇ ಪದ್ಧತಿ ಅನುಸರಿಸಿ ತೂಕ ಮಾಡತಕ್ಕದ್ದು ಎಂದು ಜಿಲ್ಲಾಧಿಕಾರಿಗಳು ಸೂಚಿಸಿದರು. 

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.