ಸಂಸತ್‌ನಲ್ಲಿ ಕಾವೇರಿ ಗದ್ದಲ


Team Udayavani, Dec 13, 2018, 6:00 AM IST

d-130.jpg

ನವದೆಹಲಿ: ಲೋಕಸಭೆ ಮತ್ತು ರಾಜ್ಯಸಭೆಗಳಲ್ಲಿ ಬುಧವಾರ ಕಾವೇರಿ ವಿಚಾರಕ್ಕೆ ಸಂಬಂಧಿಸಿದಂತೆ ಎಐಎಡಿಎಂಕೆ, ಡಿಎಂಕೆ ಸಂಸದರು ಗಲಾಟೆ ಎಬ್ಬಿಸಿದ್ದಾರೆ. ಇದರ ಜತೆಗೆ ರಫೇಲ್‌ ಡೀಲ್‌, ರಾಮ ಮಂದಿರ ವಿವಾದ ವಿಚಾರಗಳೂ ಪ್ರಸ್ತಾಪವಾಗಿವೆ. ತೀವ್ರ ಗದ್ದಲದ ಹಿನ್ನೆಲೆಯಲ್ಲಿ ಲೋಕಸಭೆಯ ಕಲಾಪ ದಿನದ ಮಟ್ಟಿಗೆ ಮುಂದೂಡಲ್ಪಟ್ಟರೆ, ರಾಜ್ಯಸಭೆ ಕಲಾಪಕ್ಕೆ ಕೊಂಚ ಕಾಲ ಅಡ್ಡಿಯಾಯಿತು. 

ಲೋಕಸಭೆಯಲ್ಲಿ ಕಾಂಗ್ರೆಸ್‌, ಶಿವಸೇನೆ, ಟಿಡಿಪಿ, ಎಐಎಡಿಎಂಕೆ ಸಂಸದರು ಅವರವರ ರಾಜ್ಯಗಳ ಬೇಡಿಕೆಗಳನ್ನು ಮುಂದಿಟ್ಟು ಕೊಂಡು ಗದ್ದಲ ಎಬ್ಬಿಸಿದರು. ಬುಧವಾರ ಲೋಕಸಭೆಯಲ್ಲಿ ಕಲಾಪ ಆರಂಭಿಸುತ್ತಲೇ ಅಗಲಿದ ಗಣ್ಯರಿಗೆ ಅಂತಿಮ ನಮನ ಸಲ್ಲಿಸಲಾಯಿತು. ಪ್ರಶ್ನೋತ್ತರ ಕಲಾಪದ ವೇಳೆ ಶಿವಸೇನೆ ಸಂಸದರು ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣ, ಎಐಎಡಿಎಂಕೆ ಸಂಸದರು ಕಾವೇರಿ ಮುಖಜ ಭೂಮಿಯ ರೈತರ ಹಿತ ಕಾಯಬೇಕು, ಕಾಂಗ್ರೆಸ್‌ ಸಂಸದರು ರಫೇಲ್‌ ಡೀಲ್‌ ವಿರುದ್ಧ ಸಂಸತ್‌ ಸಮಿತಿಯಿಂದ ತನಿಖೆ ನಡೆಸಬೇಕು, ಟಿಡಿಪಿ ಸದಸ್ಯರು ವಿಶಾಖ ಪಟ್ಟಣದಲ್ಲಿ ರೈಲ್ವೇ ವಲಯ ಸ್ಥಾಪಿಸಬೇಕೆಂದು ಒತ್ತಾಯಿಸಿ ಗದ್ದಲ ಎಬ್ಬಿಸಿದರು. ಸ್ಪೀಕರ್‌ ಸುಮಿತ್ರಾ ಮಹಾಜನ್‌ ಸದಸ್ಯರ ಮನವೊಲಿಸಲು ಪ್ರಯತ್ನಿಸಿದರೂ, ಪ್ರಯೋಜನವಾಗಲಿಲ್ಲ. ಮಧ್ಯಾಹ್ನ 12 ಗಂಟೆಯ ಬಳಿಕ ಸದನ ಸಮಾವೇಶಗೊಂಡಾಗಲೂ ಪರಿಸ್ಥಿತಿ ಯಥಾ ಸ್ಥಿತಿ ಇದ್ದ ಕಾರಣ ಲೋಕಸಭೆ ಕಲಾಪವನ್ನು ಗುರುವಾರಕ್ಕೆ ಸ್ಪೀಕರ್‌ ಮುಂದೂಡಿದರು.

ಅಣೆಕಟ್ಟೆ ಸುರಕ್ಷತೆಗೆ ಮಸೂದೆ
ದೇಶದಲ್ಲಿರುವ 5 ಸಾವಿರಕ್ಕೂ ಹೆಚ್ಚು ಅಣೆಕಟ್ಟೆಗಳಿಗೆ ರಕ್ಷಣೆ ಒದಗಿಸುವ ಸಮಗ್ರ ಕಾರ್ಯತಂತ್ರವನ್ನು ಒಳಗೊಂಡ ಮಸೂದೆಯನ್ನು ಕೇಂದ್ರ ಸರ್ಕಾರ ಲೋಕಸಭೆಯಲ್ಲಿ ಬುಧವಾರ ಮಂಡಿಸಿದೆ. ಈ ಮಸೂದೆ ಅಡಿಯಲ್ಲಿ ರಾಜ್ಯ ಮತ್ತು ಕೇಂದ್ರ ಸರ್ಕಾರಗಳು ಒಂದೇ ರೀತಿಯ ಆಣೆಕಟ್ಟೆ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬಹುದಾಗಿದೆ. ವಿಪತ್ತಿನ ಸಂದರ್ಭದಲ್ಲಿ ಆಣೆಕಟ್ಟೆಗೆ ಹಾನಿ ಉಂಟಾಗುವುದನ್ನು ತಡೆಯುವ ಕ್ರಮಗಳನ್ನೂ ಇದು ಒಳಗೊಂಡಿದೆ. ಕಾಂಗ್ರೆಸ್‌, ಟಿಡಿಪಿ ಹಾಗೂ ಎಐಎಡಿಎಂಕೆ ಸೇರಿದಂತೆ ವಿವಿಧ ಪಕ್ಷಗಳು ವಿವಿಧ ವಿಚಾರಗಳಿಗೆ ವಿರೋಧ ವ್ಯಕ್ತಪಡಿಸುತ್ತಿರುವ ಮಧ್ಯೆಯೇ ಮಸೂದೆಯನ್ನು ಮಂಡಿಸಲಾಯಿತು.

ಸರ್ಕಾರದ ಒಪ್ಪಿಗೆ
ಕರ್ನಾಟಕದ ಗುಲ್ಬರ್ಗಾ ರೈಲು ನಿಲ್ದಾಣದ ಹೆಸರನ್ನು ಕಲಬುರಗಿ ಎಂದು ಬದಲಾಯಿಸುವುದೂ ಸೇರಿ, 5 ರಾಜ್ಯಗಳ ಒಟ್ಟು 22 ಗ್ರಾಮಗಳು, ಪಟ್ಟಣಗಳು ಮತ್ತು ರೈಲ್ವೇ ನಿಲ್ದಾಣಗಳ ಹೆಸರುಗಳನ್ನು ಬದಲಿಸುವಂತೆ ಕೋರಿ ಸಲ್ಲಿಸಿದ್ದ ಪ್ರಸ್ತಾವನೆಗೆ ಕೇಂದ್ರ ಒಪ್ಪಿಗೆ ಸೂಚಿಸಿದೆ. ಇದರ ಜತೆಗೆ 11 ಅರ್ಜಿಗಳು ಕೇಂದ್ರ ಸರ್ಕಾರದ ಬಳಿ ಬಾಕಿ ಇವೆ ಎಂದು ಗೃಹ ಸಚಿವಾಲಯ ಲೋಕಸಭೆಗೆ ಬುಧವಾರ ತಿಳಿಸಿದೆ. ಪ್ರಸ್ತಾವನೆಗಳಲ್ಲಿರುವ 22 ಹಳ್ಳಿ ಅಥವಾ ಪಟ್ಟಣಗಳ ಹೆಸರು ಬದಲಾವಣೆಗೆ ಯಾವುದೇ ಆಕ್ಷೇಪಣೆ ಇಲ್ಲ ಎಂದು 2017ರ ಡಿಸೆಂಬರ್‌ನಲ್ಲಿಯೇ ಕೇಂದ್ರ ಸರ್ಕಾರ ಹೇಳಿತ್ತು.

ಟಾಪ್ ನ್ಯೂಸ್

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Hubli; ರಾಜಕಾರಣಕ್ಕಾಗಿ ರಾಜ್ಯವನ್ನು ಬಳಸಿಕೊಂಡಿದ್ದೆ ಜೋಶಿ ಸಾಧನೆ: ವಿನಯ ಕುಮಾರ್ ಸೊರಕೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.