ಹಿರಿಯರ ಮನೆಯಲ್ಲಿ ಕರಾವಳಿಗರದ್ದೇ ಪಾರಮ್ಯ
Team Udayavani, Dec 13, 2018, 6:00 AM IST
ಬೆಂಗಳೂರು: ಹಿರಿಯರ ಮನೆ ಎಂದೇ ಕರೆಸಿಕೊಳ್ಳುವ ವಿಧಾನ ಪರಿಷತ್ತಿನಲ್ಲಿ ಈಗ ಕರಾವಳಿಗರದೇ ಪಾರಮ್ಯ.ಇದು ಕರಾವಳಿಗರ ಹೆಮ್ಮೆಯೂ ಹೌದು. ಒಂದೇ ಅವಧಿಯಲ್ಲಿ ಸಭಾಪತಿ, ಸಭಾ ನಾಯಕಿ ಹಾಗೂ ಪ್ರತಿಪಕ್ಷ ನಾಯಕನ ಸ್ಥಾನವನ್ನು ಕರಾವಳಿಗರು ಅಲಂಕರಿಸಿದ್ದು ವಿಧಾನ ಪರಿಷತ್ತಿನ ಇತಿಹಾಸದಲ್ಲೇ ಮೊದಲು.
ಸಭಾಪತಿ ಸ್ಥಾನದಲ್ಲಿ ಕೆ.ಪ್ರತಾಪ್ಚಂದ್ರ ಶೆಟ್ಟಿಯವರಿದ್ದರೆ, ಪರಿಷತ್ತಿನ ಸಭಾನಾಯಕಿಯಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಡಾ.ಜಯಮಾಲಾ ಹಾಗೂ ಪ್ರತಿಪಕ್ಷದ ನಾಯಕರಾಗಿ ಕೋಟ ಶ್ರೀನಿವಾಸ ಪೂಜಾರಿಯವರು ಸೇವೆ ಸಲ್ಲಿಸುತ್ತಿದ್ದಾರೆ. ಹಂಗಾಮಿ ಸಭಾಪತಿಯಾಗಿದ್ದ ಬಸವರಾಜ ಹೊರಟ್ಟಿಯವರಿಂದ ತೆರವಾದ ಸ್ಥಾನಕ್ಕೆ ಕುಂದಾಪುರ ತಾಲೂಕಿನ ಹುಯ್ನಾರು ಮನೆತನದ ಕೆ.ಪ್ರತಾಪ್ಚಂದ್ರ ಶೆಟ್ಟಿ ಅನಿರೀಕ್ಷಿತ ಆಯ್ಕೆಯಾಗಿದ್ದಾರೆ.
ಕರಾವಳಿಯ ಉಭಯ ಜಿಲ್ಲೆಯಲ್ಲಿ ಕಾಂಗ್ರೆಸ್ ನಿಂದ ಈ ಭಾರಿ ವಿಧಾನಸಭೆಗೆ ಆಯ್ಕೆಯಾಗಿರುವುದು ಯು.ಟಿ.ಖಾದರ್ ಮಾತ್ರ. ಅವರೀಗ ಮೈತ್ರಿ ಸರ್ಕಾರದಲ್ಲಿ ನಗರಾಭಿವೃದ್ಧಿ ಸಚಿವರಾಗಿದ್ದಾರೆ. ಉಡುಪಿ ಜಿಲ್ಲೆಯ ಐದು ವಿಧಾನಸಭಾ ಕ್ಷೇತ್ರಗಳು ಬಿಜೆಪಿ ಶಾಸಕರ ವಶದಲ್ಲಿವೆ. ಕೆ.ಪ್ರತಾಪ್ಚಂದ್ರ ಶೆಟ್ಟಿಯವರ ಆಯ್ಕೆ ಕರಾವಳಿ ಕಾಂಗ್ರೆಸ್ಗೂ ಶಕ್ತಿ ತುಂಬಿದಂತಾಗಿದೆ ಎಂದು ವಿಶ್ಲೇಷಿಸಲಾಗುತ್ತಿದೆ.
ಕೆ.ಎಸ್.ಈಶ್ವರಪ್ಪ ಅವರು ವಿಧಾನ ಪರಿಷತ್ನ ಪ್ರತಿಪಕ್ಷ ನಾಯಕರಾಗಿದ್ದರು. ಕಳೆದ ಚುನಾವಣೆಯಲ್ಲಿ ಶಿವಮೊಗ್ಗ ನಗರದಿಂದ ವಿಧಾನಸಭೆಗೆ ಆಯ್ಕೆಯಾಗಿದ್ದರಿಂದ ವಿಧಾನ ಪರಿಷತ್ತಿನ ಪ್ರತಿಪಕ್ಷದ ಸ್ಥಾನ ಹಿರಿಯ ಶಾಸಕ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಲಭಿಸಿದೆ.
ಪಂಚಾಯತ್ ರಾಜ್ ಮತ್ತು ಗ್ರಾಮೀಣಾಭಿವೃದ್ಧಿ, ಕಂದಾಯ, ಧಾರ್ಮಿಕ ದತ್ತಿ ಇಲಾಖೆ ಸಹಿತವಾಗಿ ಎಲ್ಲ ವಿಷಯದ ಬಗ್ಗೆ ಅಗಾಧ ಜ್ಞಾನ ಮತ್ತು ಪ್ರಖರ ವಾಕ್ಚಾತುರ್ಯ ಹೊಂದಿದ್ದಾರೆ.
ಹಿಂದಿನ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ಎಂ.ಆರ್.ಸೀತಾರಾಂ ಅವರು ವಿಧಾನ ಪರಿಷತ್ನ ಸಭಾನಾಯಕರಾಗಿದ್ದರು. ಅವರ ಅವಧಿ ಮುಗಿದ ನಂತರ ಆ ಸ್ಥಾನ ಕೂಡ ಹಿರಿಯ ನಟಿ ಹಾಗೂ ಮಹಿಳಾ ಮತ್ತು ಮಕ್ಕಳ ಕಲ್ಯಾಣಾಭಿವೃದ್ಧಿ ಸಚಿವೆ ಡಾ.ಜಯಮಾಲಾ ಅವರ ಪಾಲಿಗೆ ಒದಗಿ ಬಂದಿದೆ. ಇವರು ಕನ್ನಡ ಚಿತ್ರರಂಗಕ್ಕೆ ತಮ್ಮದೇ ಕೊಡುಗೆ ನೀಡಿದ್ದು, ಸಚಿವೆಯಾಗಿಯೂ ಉತ್ತಮ ಸಾಧನೆ ಮಾಡುತ್ತಿದ್ದಾರೆ. ಹೀಗಾಗಿ ಪರಿಷತ್ತಿನ ಮೂರು ಆಯಕಟ್ಟಿನ ಹುದ್ದೆಗಳು ಕರಾವಳಿಯ ಧುರೀಣರಿಗೆ ಲಭಿಸಿರುವುದು ವಿಶೇಷವಾಗಿದೆ. ಕಾಂಗ್ರೆಸ್ ಸರ್ಕಾರದಲ್ಲಿ ವಿಧಾನಪರಿಷತ್ ಮುಖ್ಯ ಸಚೇತಕರಾಗಿ ಐವನ್ ಡಿಸೋಜಾ ಹಾಗೂ ಪ್ರತಿಪಕ್ಷದ ಗಣೇಶ್ ಕಾರ್ಣಿಕ್ ಇದ್ದರು.
– ರಾಜು ಖಾರ್ವಿ ಕೊಡೇರಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Lok Sabha Election: ತಾಂತ್ರಿಕ-ಉನ್ನತ ಶಿಕ್ಷಣಕ್ಕೆ ಆದ್ಯತೆ: ಗಾಯತ್ರಿ ಸಿದ್ದೇಶ್ವರ್
Lok Sabha Election ಮುಗಿದ ಮತದಾನ, ಈಗ ಸೋಲು-ಗೆಲುವಿನ ಲೆಕ್ಕಾಚಾರ
ಕೆಲವೆಡೆ ಹಿಂಸಾಚಾರ, ಕೈ ಕೊಟ್ಟ ಮತಯಂತ್ರ; ಬಿಸಿಲಿನಿಂದ ತಡವಾಗಿ ಬಂದ ಮತದಾರರು
MUST WATCH
ಹೊಸ ಸೇರ್ಪಡೆ
Rakshit Shetty: ʼರಿಚರ್ಡ್ ಆಂಟನಿʼಯಲ್ಲಿ ಈ ಕರಾವಳಿಯ ನಟಿಯರಿಗೆ ಸಿಗುತ್ತಾ ಅವಕಾಶ?
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
Desi Swara: ಬುಚ್ಚಿ ನೀಡಿದ ಭರವಸೆಯ ಬೆಳಕು
Sindhanur; ಹಾಸ್ಟೆಲ್ ವಿದ್ಯಾರ್ಥಿನಿಯರು ಅಸ್ವಸ್ಥ: ಆಸ್ಪತ್ರೆಗೆ ದಾಖಲು
IPL 2024; ಪಂಜಾಬ್ ವಿರುದ್ಧ ಸೋಲು; ಅಂಪೈರ್ ಜತೆ ವಾಗ್ವಾದಕ್ಕಿಳಿದ ಗೌತಮ್ ಗಂಭೀರ್