ಸರ್ವಋತುವಿಗೆ ಇನ್ನೂ ತೆರೆದುಕೊಳ್ಳದ ರಾಜ್ಯದ ಏಕೈಕ ಹೊರ ಬಂದರು


Team Udayavani, Dec 13, 2018, 2:10 AM IST

sarvaruthu-12-12.jpg

ಕುಂದಾಪುರ: ರಾಜ್ಯದ ಏಕೈಕ ಹೊರ ಬಂದರು ಆಗಿರುವ ಮರವಂತೆಯಲ್ಲಿ ಬ್ರೇಕ್‌ ವಾಟರ್‌ ಕಾಮಗಾರಿ ವಿಳಂಬದಿಂದಾಗಿ ಸರ್ವಋತುವಿಗೆ ಈ ಬಂದರು ಇನ್ನೂ ತೆರೆದುಕೊಂಡಿಲ್ಲ. ಬಂದರು ಮತ್ತು ಒಳನಾಡು ಜಲ ಸಾರಿಗೆ ಇಲಾಖೆಯ ವತಿಯಿಂದ 55 ಕೋ. ರೂ. ವೆಚ್ಚದಲ್ಲಿ ಹೊರ ಬಂದರು (ಔಟ್‌ಡೋರ್‌) ನಿರ್ಮಾಣ ಕಾಮಗಾರಿ ಆರಂಭಗೊಂಡು 6 ವರ್ಷ ಕಳೆದರೂ ಇನ್ನೂ ಪೂರ್ಣಗೊಂಡಿಲ್ಲ. ಗುತ್ತಿಗೆ ಪಡೆದ ಸಂಸ್ಥೆಯ ವಿರುದ್ಧ ಮೀನುಗಾರರಿಗೆ ಅಸಮಾಧಾನದಿಂದಾಗಿ ಕೆಲವು ಸಮಯದಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಆ ಕಾರಣದಿಂದ ಈ ಬಂದರು ಎಲ್ಲ ಸಮಯದಲ್ಲಿಯೂ ಮೀನುಗಾರರರಿಗೆ ಪ್ರಯೋಜನಕ್ಕೆ ಸಿಗುತ್ತಿಲ್ಲ.

ಏನಿದು ಹೊರ ಬಂದರು?
ಇತರ ಮೀನುಗಾರಿಕಾ ಬಂದರು ಹಾಗೂ ಇಲ್ಲಿಗೂ ಇರುವ ಪ್ರಮುಖ ವ್ಯತ್ಯಾಸವೆಂದರೆ, ಬೇರೆಲ್ಲ ಬಂದರುಗಳು ಸಹಜ ಬಂದರು ಆಗಿದ್ದರೆ, ಇದು ಕೃತಕವಾಗಿ ನಿರ್ಮಿಸಿದ ಬಂದರು ಆಗಿದೆ. ಅಂದರೆ ಮರವಂತೆಯಲ್ಲಿ ಇಲ್ಲಿನ ಮೀನುಗಾರರು ಬೇರೆ ಬಂದರನ್ನು ಅವಲಂಬಿಸುವ ಬದಲು ತಮ್ಮ ಅನುಕೂಲಕ್ಕಾಗಿ ಸ್ವತಃ ಕೃತಕವಾಗಿ ನಿರ್ಮಿಸಿಕೊಂಡ ಬಂದರು ಇದಾಗಿದೆ. ನಾಡದೋಣಿ ಮೀನುಗಾರಿಕೆ ಇಲ್ಲಿನ ವೈಶಿಷ್ಟ್ಯವಾಗಿದೆ. 300ಕ್ಕೂ ಹೆಚ್ಚು ನಾಡದೋಣಿಗಳಿದ್ದು, ಸುಮಾರು 2 ಸಾವಿರಕ್ಕೂ ಹೆಚ್ಚಿನ ಮೀನುಗಾರರು ಇಲ್ಲಿದ್ದಾರೆ. ಇದಲ್ಲದೆ ಬೇರೆ ಕಡೆಗಳ ಮೀನುಗಾರರು ಕೂಡ ಇಲ್ಲಿಗೆ ಬರುತ್ತಾರೆ.

ಇದು ಮೀನುಗಾರರೇ ಸಮುದ್ರ ಅಲೆಗಳನ್ನು ತಡೆಯಲು ತಡೆಗೋಡೆ ಹಾಕಿ ನಿರ್ಮಿಸಿದ ಬಂದರು ಇದಾಗಿದೆ. ಆದರೆ ಅಲೆಗಳ ಅಬ್ಬರ ತಡೆಯಲು 6 ವರ್ಷಗಳ ಹಿಂದೆ ಆರಂಭವಾದ ಹೊಸ ಯೋಜನೆಯ ಬ್ರೇಕ್‌ ವಾಟರ್‌ ಕಾಮಗಾರಿ ಇನ್ನೂ ಪೂರ್ಣಗೊಂಡಿಲ್ಲ. ಇದರಿಂದ ಸಮುದ್ರದಲ್ಲಿ ಅಲೆಗಳ ಅಬ್ಬರ ಜಾಸ್ತಿಯಾದಾಗ ಗಂಗೊಳ್ಳಿ, ಕೊಡೇರಿ ಸಹಿತ ಇನ್ನಿತರ ಬಂದರುಗಳನ್ನು ಅವಲಂಬಿಸಬೇಕಾದ ಅನಿವಾರ್ಯತೆಯಿದೆ.

ಏಕೈಕ ಹೊರ ಬಂದರು
ನೆರೆಯ ರಾಜ್ಯ ಕೇರಳದಲ್ಲಿ 3 ಹೊರ ಬಂದರುಗಳಿದ್ದರೆ, ರಾಜ್ಯದ ಏಕೈಕ ಹೊರ ಬಂದರು ಮರವಂತೆಯಲ್ಲಿ ಮಾತ್ರ ಇರುವುದು. ಕೇರಳದ ಕರಾವಳಿಯ ಪ್ರತಿ 30 ಕಿ.ಮೀ. ಗೊಂದು ಬಂದರು ನಿರ್ಮಿಸಲಾಗಿದೆ.

ಮೀನುಗಾರರಿಗೆ ತೊಂದರೆ
ಹೊರ ಬಂದರಿನ ಬ್ರೇಕ್‌ ವಾಟರ್‌ ಕಾಮಗಾರಿ ವಿಳಂಬದಿಂದಾಗಿ ಮೀನುಗಾರರಿಗೆ ಎಲ್ಲ ಸಮಯದಲ್ಲಿಯೂ ಮೀನುಗಾರಿಕೆ ನಡೆಸಲು ಸಾಧ್ಯವಾಗುತ್ತಿಲ್ಲ. ಕೂಡಲೇ ಸ್ಥಗಿತಗೊಂಡ ಕಾಮಗಾರಿಯನ್ನೂ ತ್ವರಿತಗತಿಯಲ್ಲಿ ಆರಂಭಿಸಿ, ಪೂರ್ಣಗೊಳಿಸಿ, ಮೀನುಗಾರರಿಗೆ ಅನುಕೂಲ ಮಾಡಿಕೊಡಲಿ.
– ಸಂಜೀವ ಖಾರ್ವಿ, ಮೀನುಗಾರರು, ಮರವಂತೆ 

ಮಾರ್ಚ್‌ನೊಳಗೆ ಪೂರ್ಣ
ಮರವಂತೆಯ ಹೊರ ಬಂದರು ಕಾಮಗಾರಿ ಕಳೆದ 3-4 ತಿಂಗಳಿಂದ ಸ್ಥಗಿತಗೊಂಡಿತ್ತು. ಈಗ ಮತ್ತೆ ಅಲ್ಲಿನ ಮೀನುಗಾರರ ಅಭಿಪ್ರಾಯಗಳನ್ನು ಪಡೆದು ಶೀಘ್ರ ಕಾಮಗಾರಿ ಆರಂಭಿಸಲಾಗುವುದು. ಈಗಾಗಲೇ ಸುಮಾರು 45 ಕೋ.ರೂ. ವೆಚ್ಚದ ಕಾಮಗಾರಿ ಮುಗಿದಿದ್ದು, ಇನ್ನೂ ಸುಮಾರು 9 ಕೋ.ರೂ. ವೆಚ್ಚದ ಕಾಮಗಾರಿ ಬಾಕಿಯಿದೆ. ಅದು ಮುಂದಿನ ಮಾರ್ಚ್‌ ತಿಂಗಳೊಳಗೆ ಪೂರ್ಣಗೊಳ್ಳಲಿದೆ. ಅದಲ್ಲದೆ ಎರಡನೇ ಹಂತದ ಯೋಜನೆಗೂ ಪ್ರಸ್ತಾವನೆ ಸಲ್ಲಿಸಲು ತಯಾರಿ ನಡೆಯುತ್ತಿದೆ. 
– ಕ್ಸೇವಿಯರ್‌ ಡಯಾಸ್‌, ಸಹಾಯಕ ಎಂಜಿನಿಯರ್‌, ಬಂದರು ಮತ್ತು ಮೀನುಗಾರಿಕಾ ಇಲಾಖೆ

— ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Hebri ತೆಂಕೂಲ: ಆಲಮಡ್ಡಿ ಮೇಣ ಸಂಗ್ರಹಿಸುತ್ತಿದ್ದವರ ಸೆರೆ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Veerappa Moily ಯುಪಿಎ ಬರ ಪರಿಹಾರ ಬಾಕಿ ಇಟ್ಟಿರಲಿಲ್ಲ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Kundapura: ಪಾದಚಾರಿಗೆ ಬೈಕ್‌ ಢಿಕ್ಕಿ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

bjp-congress

E.C.ನೋಟಿಸ್‌ಗೆ ಉತ್ತರಿಸಲು ಸಮಯ ಕೇಳಿದ ಬಿಜೆಪಿ, ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.