ಮಾರ್ಕೆಟ್‌ ರಸ್ತೆ ಪೂರ್ಣಗೊಳ್ಳದೆ ಸಮಸ್ಯೆ: ಅಸಮಾಧಾನ


Team Udayavani, Dec 13, 2018, 2:25 AM IST

karkala-12-12.jpg

ಕಾರ್ಕಳ: ನಗರದ ಮಾರ್ಕೆಟ್‌ ರಸ್ತೆಯ ಕಾಮಗಾರಿ ವಿಷಯಕ್ಕೆ ಸಂಬಂಧಿಸಿದಂತೆ ರಸ್ತೆ ಕೆಲಸ ಪೂರ್ಣಗೊಂಡು ಬಿಟ್ಟುಕೊಡಬೇಕಾದ ಸಮಯ ಕಳೆದರೂ ಕೆಲಸ ಮುಗಿದಿಲ್ಲ. ಹೀಗಾಗಿ ಜನರಿಗೆ ಹಲವು ರೀತಿಯಲ್ಲಿ ತೊಂದರೆ ಉಂಟಾಗುತ್ತಿದೆ. ಜತೆಗೆ ಇತರ ಯಾವ ಕೆಲಸಗಳೂ ನಡೆಯುತ್ತಿಲ್ಲ ಎಂದು ಪುರಸಭೆಯ ಸದಸ್ಯರು ಕುಂದುಕೊರತೆ ಸಭೆಯಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರ್ಕಳ ಪುರಸಭೆಯ ಸದಸ್ಯರಿಗೆ ಬುಧವಾರ ಆಡಳಿತಾಧಿಕಾರಿ ಅವರ ಅಧ್ಯಕ್ಷತೆಯಲ್ಲಿ ಕುಂದು ಕೊರತೆ ಸಭೆ ನಡೆಯಿತು. ಪುರಸಭೆ  ಮುಖ್ಯಾಧಿಕಾರಿ ಮೇಬಲ್‌ ಮಾತನಾಡಿ, ನ. 25ಕ್ಕೆ ರಸ್ತೆ ಬಿಟ್ಟು ಕೊಡಬೇಕಿತ್ತು. ಆದರೆ ಸಂಬಂಧಿತ ಗುತ್ತಿಗೆದಾರರು ಸರಿಯಾಗಿ ಸ್ಪಂದಿಸುತ್ತಿಲ್ಲ ಎಂದು ತಿಳಿಸಿದರು. ಸದಸ್ಯರು ಪ್ರತಿಕ್ರಿಯಿಸಿ ಕಾಳಿಕಾಂಬ ಭಾಗದಲ್ಲೂ ಅರ್ಧದಲ್ಲೇ ಕಾಮಗಾರಿ ನಿಲ್ಲಿಸಲಾಗಿದೆ ಎಂದು ತಿಳಿಸಿದರು.

ಪುರಸಭೆಯಲ್ಲಿ ಖಾತೆ ಬದಲಾವಣೆಗೆ ಒಂದು ತಿಂಗಳ ಅವಧಿ ಬೇಕಾಗುತ್ತದೆ. ಆದರೆ ವ್ಯಕ್ತಿಯೊಬ್ಬರು ಕೇವಲ 4 ದಿನದಲ್ಲಿ ಖಾತೆ ಬದಲಾವಣೆ ಮಾಡಿರುವುದು ತಿಳಿದು ಬಂದಿದೆ. ಅದು ಹೇಗೆ ಸಾಧ್ಯ ವಾಯಿತು ಎಂದು ಸದಸ್ಯ ಶುಭದ ರಾವ್‌ ಪ್ರಶ್ನಿಸಿದರು. ಅಲ್ಲದೇ, ಅವರು ಅರ್ಜಿ ಹಾಕಿದ ದಿನಾಂಕ ಮತ್ತು ನೊಟೀಸ್‌ ಬೋರ್ಡ್‌ಗೆ ಹಾಕಿರುವುದು ಕೂಡ ಯಾವುದೂ ತಾಳೆಯಾಗುತ್ತಿಲ್ಲ. ಫೈಲ್‌ ಕೇಳಿದರೂ ಸಿಗುತ್ತಿಲ್ಲ, ಕೂಡಲೇ ಸಭೆಗೆ ತರಿಸಿ ಎಂದು ಆಕ್ರೋಶ ವ್ಯಕ್ತಪಡಿಸಿದರು. ಈ ವೇಳೆ ಆಡಳಿತಾಧಿಕಾರಿ ಭೂಬಾಲನ್‌ ಅವರು ಮಾತನಾಡಿ, ಖಾತೆ ಬದಲಾವಣೆಗೆ ಸಂಬಂಧಿಸಿದಂತೆ ಮೊದಲು ಬಂದವರಿಗೆ ಕ್ರಮ ಪ್ರಕಾರವಾಗಿ ನೀಡಬೇಕು. ಅದರಲ್ಲಿ ಯಾವುದೇ ಗೊಂದಲ ಉಂಟು ಮಾಡಬಾರದು ಎಂದು ಸಂಬಂಧಿತ ಅಧಿಕಾರಿಗೆ ತಿಳಿಸಿದರು. 4ನೇ ವಾರ್ಡ್‌ನಲ್ಲಿ ನೀರಿನ ಸಮಸ್ಯೆ ಉಂಟಾಗಿದ್ದು, ಸೂಕ್ತ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಸದಸ್ಯೆ ತಿಳಿಸಿದರು. ನಗರದಲ್ಲಿ ಕಳೆದ ಒಂದೂವರೆ ತಿಂಗಳಿಂದ ಬೀದಿ ನಾಯಿಗಳ ಕಾಟ ಹೆಚ್ಚಾಗಿದೆ ಎಂದು ಸದಸ್ಯರು ತಿಳಿಸಿದರು.

ಮೋರಿಯಲ್ಲಿ ಮಣ್ಣು
ಸದಸ್ಯ ಅಶ್ಫಕ್‌ ಅಹ್ಮದ್‌ ಮಾತನಾಡಿ, ಬಂಗ್ಲೆಗುಡ್ಡೆ ವಾರ್ಡ್‌ ನಲ್ಲಿ ಮೋರಿಗಳಲ್ಲಿ ಮಣ್ಣು ತುಂಬಿಕೊಂಡಿದೆ. ಅಲ್ಲದೇ ಜನರು ಓಡಾಡುವ ಪ್ರದೇಶದಲ್ಲಿ ಕಳೆ, ಹುಲ್ಲು ತುಂಬಿಕೊಂಡಿದ್ದು, ನೂರಾರು ಜನರು ಓಡಾಡುವ ಪ್ರದೇಶದಲ್ಲಿ ಸಮಸ್ಯೆ ಉಂಟಾಗಿದೆ ಎಂದರು. ಮೂರನೇಯ ವಾರ್ಡ್‌ನ ರಸ್ತೆ ಬದಿಯಲ್ಲಿ  ಕೂಡ ಕಳೆ ತುಂಬಿದ್ದು, ರಸ್ತೆಗಳೂ ಕೂಡ ಕೆಟ್ಟು ಹೋಗಿವೆ  ಎಂದು ಸ್ಥಳೀಯ ಸದಸ್ಯೆ ಸಭೆಗೆ ತಿಳಿಸಿದರು.

ನಿಧಾನಗತಿಯ ಕೆಲಸ
ಪುರಸಭೆ ಸದಸ್ಯ ಶುಭದರಾವ್‌ ವಿಷಯ ಪ್ರಸ್ತಾವಿಸಿ, ನಗರೋತ್ಥಾನ ಯೋಜನೆಯಡಿ ನಡೆಯುತ್ತಿರುವ ಹಲವು ಕೆಲಸಗಳು ಅತ್ಯಂತ ನಿಧಾನಗತಿಯಿಂದ ನಡೆಯುತ್ತಿವೆ. ಮಾರ್ಕೆಟ್‌ ರಸ್ತೆ ಈಗಾಗಲೇ ನಿಗದಿತ ಸಮಯವನ್ನು ಕಳೆದಿದ್ದು, ಇನ್ನೂ ಕಾಮಗಾರಿ ಮುಗಿದಿಲ್ಲ. ಅಲ್ಲಿನ ವ್ಯಾಪಾರ ವಹಿವಾಟುಗಳು ಪೂರ್ಣ ಸ್ಥಗಿತಗೊಂಡಿವೆ ಎಂದರು. ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಬೇಕು ಎಂದು ಒತ್ತಾಯಿಸಿದರು.

ಟಾಪ್ ನ್ಯೂಸ್

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

5

ಜಾರ್ಜಿಯಾದಲ್ಲಿ ಕಾರು ಪಲ್ಟಿಯಾಗಿ ಮೂವರು ಇಂಡೋ-ಅಮೆರಿಕನ್‌ ವಿದ್ಯಾರ್ಥಿಗಳು ದುರ್ಮರಣ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ

Sandalwood: ರಿಷಿ ಖುಷಿ!: ಅಕೌಂಟ್‌ಗೆ ಮತ್ತೊಂದು ಚಿತ್ರ ತ್ತೊ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-doddanagudde

ದೊಡ್ಡಣ್ಣಗುಡ್ಡೆ: ಕ್ಷೇತ್ರದಲ್ಲಿ ಬ್ರಹ್ಮಕಲಾಶೋತ್ಸವದ ಪೂರ್ವಭಾವಿ ಕಾರ್ಯಕ್ರಮ ಸಂಪನ್ನ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

SSLC ಪರೀಕ್ಷೆ -2, 3ಕ್ಕೆ ಕೃಪಾಂಕ ಇಲ್ಲ; ಸಚಿವ ಮಧು ಬಂಗಾರಪ್ಪ

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Madhu Bangarappa ಎಲ್ಲ ಕ್ಷೇತ್ರಗಳಲ್ಲೂ ಕಾಂಗ್ರೆಸ್‌ಗೆ ಗೆಲುವು

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Shirva ಮರಳು ಅಕ್ರಮ ಸಾಗಾಟ: ಟಿಪ್ಪರ್‌ ವಶ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

Theft Case ಬುಡ್ನಾರು: ಮನೆಗೆ ನುಗ್ಗಿ ಕಳವು; ಆರೋಪಿಯ ಬಂಧನ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

Hasan: ಲೈಂಗಿಕ ದೌರ್ಜನ್ಯ ಪ್ರಕರಣ; 20 ದಿನಗಳ ನಂತರ ತವರಿಗೆ ಆಗಮಿಸಿದ ಎಚ್.ಡಿ.ರೇವಣ್ಣ

9

ಹಲ್ಲೆಗೊಳಗಾಗಿ ಆಸ್ಪತ್ರೆಯಲ್ಲಿದ್ದ ಪತ್ನಿ ಮೇಲೆ ಬ್ಲೇಡ್‌ನಿಂದ ಹಲ್ಲೆ ಮಾಡಿ ಪರಾರಿಯಾದ ಪತಿ

8

ಪತಿಯಿಂದಲೇ ಭೀಕರವಾಗಿ ಹತ್ಯೆಗೀಡಾದ ಸ್ಯಾಂಡಲ್‌ ವುಡ್‌ ನಟಿ, ಕಾಂಗ್ರೆಸ್‌ ಮುಖಂಡೆ

7

ಬಿಜೆಪಿಯವರು ಬಜೆಟ್ ಓದುವುದಿಲ್ಲ,ಅವರಿಗೆ ಎಕನಾಮಿಕ್ಸ್ ಗೊತ್ತಾಗುವುದಿಲ್ಲ: ಸಿಎಂ ಸಿದ್ದರಾಮಯ್ಯ

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

ಅಪಘಾತದಿಂದ ತೀವ್ರ ಗಾಯ: ಆಂಬ್ಯುಲೆನ್ಸ್ ಬರುವವರೆಗೆ ಸೆಲ್ಫಿಗೆ ಪೋಸ್‌ ಕೊಟ್ಟ ಯುವತಿಯರು.!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.