ಟ್ಯಾಂಕರ್‌ ನೀರಿನ ಲಾಬಿಗೆ ಅವಕಾಶವಿಲ್ಲ


Team Udayavani, Dec 13, 2018, 4:21 PM IST

kol-1.jpg

ಕೋಲಾರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆಗೆ ವಿಪತ್ತು ಪರಿಹಾರ ನಿಧಿಯಡಿ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸಿ ಒಂದು ವಾರದೊಳಗೆ ಪರಿಹಾರ ಒದಗಿಸಬೇಕು ಎಂದು ಜಿಪಂ ಸಿಇಒ ಜಿ.ಜಗದೀಶ್‌ ಸೂಚಿಸಿದರು.

 ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ನಡೆದ ಜಿಲ್ಲಾ ಬರ ಪರಿಸ್ಥಿತಿ ನಿರ್ವಹಣಾ ಸಭೆಯಲ್ಲಿ ಅವರು ಸಂಬಂಧಪಟ್ಟ ಅಧಿಕಾರಿಗಳಿಗೆ ಹಾಗೂ ತಾಪಂ ಇಒಗಳಿಗೆ ಸೂಚನೆ ನೀಡಿದರು. ಈ ಕೂಡಲೇ ಸಂಬಂಧಪಟ್ಟದ ಅಧಿಕಾರಿಗಳು ಕುಡಿಯುವ ನೀರಿನ ಸಮಸ್ಯೆಗೆ ಪರಿಹಾರ ಒದಗಿಸಲು ಸಿದ್ಧಪಡಿಸಿರುವ ಕ್ರಿಯಾಯೋಜನೆಯನ್ನು ಆಡಳಿತಾತ್ಮಕ ಅನುಮೋದನೆಗಾಗಿ ಸಲ್ಲಿಸುವಂತೆ ತಿಳಿಸಿದ ಅವರು, ಪ್ರಸಕ್ತ ವರ್ಷ ಯಾವುದೇ ಕಾರಣಕ್ಕೂ ಟ್ಯಾಂಕರ್‌ ಲಾಬಿಗೆ ಅವಕಾಶ ಇಲ್ಲ. ಬಂಗಾರಪೇಟೆ ಡಿ.ಕೆ. ಹಳ್ಳಿಯಲ್ಲಿ ಉದ್ಬವಿಸಿದ್ದ ಟ್ಯಾಂಕರ್‌ ಸಮಸ್ಯೆಗೆ ಈಗ ಕಡಿವಾಣ ಹಾಕಲಾಗಿದೆ ಎಂದು ಸಭೆಗೆ ತಿಳಿಸಿದರು. 

ಹಲವಾರು ಕಡೆ ಕೊಳವೆ ಬಾವಿಗಳು ನಿಷ್ಕ್ರಿಯಗೊಂಡಿರುವ ಕಾರಣ ಹೊಸದಾಗಿ ಕೊಳವೆ ಬಾವಿ ತೆರೆಸಲು ಓರ್ವ ಭೂ ವಿಜ್ಞಾನಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವರು ಸೂಚಿಸಿದ್ದಾರೆ. ಈ ಬಗ್ಗೆ ಟೆಂಡರ್‌ ಜಾಹೀರಾತು ನೀಡಲು ಕೂಡಲೇ ಕ್ರಮ ಕೈಗೊಳ್ಳುವಂತೆ ತಿಳಿಸಿದರು.

ರಾಜ್ಯದಲ್ಲಿ ಹಲವಾರು ಕಡೆ ತೀವ್ರ ಬರಗಾಲ ಎದುರಾಗಿರುವ ಕಾರಣ ಸರ್ಕಾರ ನರೇಗಾ ಅಡಿಯಲ್ಲಿ ಈ ಹಿಂದೆ ಇದ್ದ 100 ಕಡ್ಡಾಯ ಮಾನವ ದಿನಗಳ ಬದಲಾಗಿ ಕನಿಷ್ಠ 150 ಮಾನವ ದಿನಗಳನ್ನು ಸೃಜಿಸುವಂತೆ ಸೂಚನೆ ನೀಡಿದೆ. ಅರ್ಜಿ ಸಲ್ಲಿಸಿರುವವರಿಗೆ ಯಾವುದೇ ಕಾರಣಕ್ಕೂ ಕೆಲಸ ತಪ್ಪಿಸುವಂತಿಲ್ಲ. ಈ ಬಗ್ಗೆ ಬರ ಪರಿಸ್ಥಿತಿ ನಿರ್ವಹಣಾ ಹೋಬಳಿ ಮಟ್ಟದ ನೋಡಲ್‌ ಅಧಿಕಾರಿಗಳು ಗ್ರಾಪಂಗಳಿಗೆ ಭೇಟಿ ನೀಡಿ ಪರಿಶೀಲಿಸಬೇಕೆಂದರು. 

ಸ್ಥಳಕ್ಕೆ ಭೇಟಿ ನೀಡಿ ಸಮಸ್ಯೆ ಗುರುತಿಸಿ ಹೋಬಳಿ ಮಟ್ಟದ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಪ್ರತಿ ಶನಿವಾರ ಸಭೆ ಸೇರಿ ಕೈಗೊಳ್ಳಬಹುದಾದ ಪರಿಹಾರ ಕಾರ್ಯಗಳ ಬಗ್ಗೆ ಚರ್ಚಿಸುವಂತೆ ಅವರು ನೋಡಲ್‌ ಅಧಿಕಾರಿಗಳಿಗೆ ತಿಳಿಸಿದರು.

ಸಭೆಯ ಅಧ್ಯಕ್ಷತೆ ವಹಿಸಿದ್ದ ಜಿಲ್ಲಾಧಿಕಾರಿ ಜೆ.ಮಂಜುನಾಥ್‌, ಮೇವು ಬೆಳೆಯಲು ಮಿನಿ ಕಿಟ್‌ಗಳನ್ನು ಆದಷ್ಟು ಬೇಗ ರೈತರಿಗೆ ವಿತರಿಸಿ. ಈ ಹಿಂದೆ ಬೆಳೆದಿರುವ ಬೆಳೆ
ಕಟಾವು ಹಂತ ತಲುಪುವ ಸಮಯಕ್ಕೆ ಮಿನಿಕಿಟ್‌ ವಿತರಿಸಿದ್ದಲ್ಲಿ ಕಟಾವಿನ ಕೂಡಲೇ ಹೊಸದಾಗಿ ಬೀಜ ಬಿತ್ತನೆಗೆ ರೈತರಿಗೆ ಅನುಕೂಲವಾಗಲಿದೆ. ಈ ನಿಟ್ಟಿನಲ್ಲಿ ಮಿನಿಕಿಟ್‌ ವಿತರಣೆಗೆ ಮುಂಚಿತವಾಗಿಯೇ ಯೋಜನೆ ರೂಪಿಸುವಂತೆ ಪಶು ವೈದ್ಯಕೀಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಸಭೆಯಲ್ಲಿ ನೋಡಲ್‌ ಅಧಿಕಾರಿಗಳು ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು. 

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

Kolar; ಮೋದಿ ಶನಿ: ಮಾಜಿ ಸ್ಪೀಕರ್‌ ರಮೇಶ್‌ ಕುಮಾರ್‌ ಹೇಳಿಕೆ

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

CM Siddaramaiah ಚೊಂಬು ಅಕ್ಷಯಪಾತ್ರೆ ಆಗಿದ್ದರೆ ಬರ ಪರಿಹಾರ ಯಾಕೆ ಕೊಡಲಿಲ್ಲ?

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

ಕುಟುಂಬ ಬೆಳೆದರೆ ಒಕ್ಕಲಿಗರು ಬೆಳೆದಂತೆಂಬ ಮನಃಸ್ಥಿತಿ ಜೆಡಿಎಸ್‌ದು: ಕೃಷ್ಣಬೈರೇ ಗೌಡ

DR SUDHA

Corruption ಸಮರ್ಥಿಸಿಕೊಳ್ಳಲು ಮೋದಿ ರಾಜ್ಯಕ್ಕೆ: ಡಾ| ಎಂ.ಸಿ.ಸುಧಾಕರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.