ಭತ್ತಕ್ಕೆ ಬೆಂಬಲ ಬೆಲೆ : ಹಲ್ಲಿಂಗ್‌ ಮಾಡಿಸಲು ನೋಂದಣಿ


Team Udayavani, Dec 14, 2018, 1:10 AM IST

paddy-crop-600.jpg

ಉಡುಪಿ: 2018-19ನೇ ಸಾಲಿನಲ್ಲಿ ರೈತರಿಂದ ಕನಿಷ್ಠ ಬೆಂಬಲ ಬೆಲೆಯಲ್ಲಿ ಭತ್ತ ಖರೀದಿಸಲು ಸರಕಾರ‌ದಿಂದ ಆದೇಶವಾಗಿದೆ. ಸಾಮಾನ್ಯ ಭತ್ತವನ್ನು ಕ್ವಿಂಟಾಲ್‌ಗೆ 1,750 ರೂ. ಹಾಗೂ ಗ್ರೇಡ್‌ ‘ಎ’ ಭತ್ತವನ್ನು  ಕ್ವಿಂಟಾಲ್‌ಗೆ 1,770 ರೂ. ದರದಲ್ಲಿ ಸಣ್ಣ ಮತ್ತು ಅತಿ ಸಣ್ಣ ರೈತರಿಂದ ಗರಿಷ್ಠ 40 ಕ್ವಿಂಟಾಲ್‌ವರೆಗೆ ಡಿ. 16ರಿಂದ 2019ನೇ ಮಾರ್ಚ್‌ 31ರವರೆಗೆ ಖರೀದಿಸಲಾಗುತ್ತದೆ ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಭತ್ತ ಖರೀದಿಸಲು ಆನ್‌ಲೈನ್‌ ವ್ಯವಸ್ಥೆ ಮಾಡಲಾಗಿದ್ದು, ಭತ್ತ ನೀಡಲು ಇಚ್ಛಿಸುವ ರೈತರು ಆಧಾರ್‌ ಕಾರ್ಡ್‌ ಹಾಗೂ ಭತ್ತ ಬೆಳೆದ ಬಗ್ಗೆ ಕಂದಾಯ ಇಲಾಖೆ ಪ್ರಮಾಣ ಪತ್ರವನ್ನು ತಾಲೂಕು ನೊಂದಣಿ ಕೇಂದ್ರದಲ್ಲಿ ನೀಡಿ ನೋಂದಣಿ ಮಾಡಿಕೊಳ್ಳಬೇಕು. ಅದರಂತೆ ಭತ್ತ ಮಿಲ್ಲಿಂಗ್‌ ಮಾಡಲು ಇಚ್ಛಿಸುವ ಅಕ್ಕಿ ಗಿರಣಿ ಮಾಲಕರು ಪಾನ್‌ಕಾರ್ಡ್‌ ನಂಬರ್‌ ಹಾಗೂ ಆಧಾರ್‌ ನಂಬರ್‌ ನೀಡಿ ನೋಂದಣಿ ಮಾಡಿಕೊಳ್ಳಬೇಕು. ನೋಂದಣಿ ಮಾಡಿಕೊಂಡ ರೈತರು ಸರಕಾರಕ್ಕೆ ನೀಡುವ ಭತ್ತದ ಸ್ಯಾಂಪಲ್‌ನ್ನು ನೋಂದಣಿ ಕೇಂದ್ರಕ್ಕೆ ತಂದು ನೀಡಬೇಕು. ಭತ್ತದ ಗುಣಮಟ್ಟ, ಅಕ್ಕಿ ಗುಣಮಟ್ಟದ್ದಾಗಿದ್ದಲ್ಲಿ ನೋಂದಾಯಿತ ಅಕ್ಕಿ ಗಿರಣಿ ಮಾಲಕರಿಗೆ ಭತ್ತ ನೀಡಿ ಸ್ವೀಕೃತಿಯನ್ನು ರೈತರು ನೋಂದಣಿ ಕೇಂದ್ರಕ್ಕೆ ನೀಡಿ ಮೊತ್ತ ಪಡೆಯಬೇಕು.

ಭತ್ತ ಖರೀದಿಗೆ ರೈತರ ನೋಂದಣಿ ಕೇಂದ್ರವನ್ನು ಉಡುಪಿ  ಮತ್ತು  ಕಾರ್ಕಳ ತಾಲೂಕಿನ ಎಪಿಎಂಸಿ ಯಾರ್ಡ್‌ನಲ್ಲಿರುವ ಕೆ.ಎಫ್.ಸಿ.ಎಸ್‌.ಸಿ. ಗೋದಾಮು ಹಾಗೂ ಕುಂದಾಪುರ ತಾಲೂಕಿನ ಕೋಟೇಶ್ವರ ಬೀಚ್‌ ರಸ್ತೆಯಲ್ಲಿರುವ ಕೆ.ಎಫ್.ಸಿ.ಎಸ್‌.ಸಿ. ಅಕ್ಷರ ದಾಸೋಹ ಕೇಂದ್ರದಲ್ಲಿ ತೆರೆಯುವಂತೆ ವ್ಯವಸ್ಥಾಪಕರು ಕೆ.ಎಫ್.ಸಿ.ಎಸ್‌.ಸಿ. ಮಂಗಳೂರಿಗೆ ಆದೇಶಿಸಲಾಗಿದೆ.

ಪ್ರಸ್ತುತ ಬೆಳ್ತಿಗೆ ಅಕ್ಕಿ ತಯಾರಿಸಬಹುದಾದ ಭತ್ತ ಖರೀದಿಸಲಾಗುತ್ತಿದ್ದು, ಕುಚ್ಚಲು ಅಕ್ಕಿ ತಯಾರಿಸಬಹುದಾದ ಭತ್ತ ಖರೀದಿಸಲು ಅವಕಾಶ ಕಲ್ಪಿಸುವಂತೆ ಬೆಂಗಳೂರಿನ ಆಯುಕ್ತರು, ಆಹಾರ, ನಾಗರಿಕ ಸರಬರಾಜು ಮತ್ತು  ಗ್ರಾಹಕ ವ್ಯವಹಾರಗಳ ಇಲಾಖೆಯನ್ನು ಕೋರಲಾಗಿದೆ. ಸರಕಾರಕ್ಕೆ ಭತ್ತ ನೀಡಲಿಚ್ಛಿಸುವ ರೈತರು ನೋಂದಣಿ ಮಾಡಿಕೊಳ್ಳುವಂತೆ ಉಡುಪಿ ಜಿಲ್ಲಾಧಿಕಾರಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Terror Attack On IAF Convoy In poonch

Poonch; ವಾಯುಸೇನೆ ವಾಹನದ ಮೇಲೆ ಉಗ್ರ ದಾಳಿ; ಓರ್ವ ಹುತಾತ್ಮ, ನಾಲ್ವರಿಗೆ ಗಾಯ

2-vitla

Vitla: ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

Agumbe Ghat; ಘನವಾಹನಗಳ ಸಂಚಾರದಿಂದ ಘಾಟಿ ಬಂದ್‌ ಆಗುವ ಭೀತಿ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

State Government School; ದಸರಾ ರಜೆ ಕ್ರಿಸ್ಮಸ್‌ಗೆ ಹೊಂದಿಸಲು ಅವಕಾಶ

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

ಜನಾಭಿಪ್ರಾಯಕ್ಕೆ ಸ್ಪಂದಿಸಿ ಅಭಿವೃದ್ಧಿ ಕಾರ್ಯ ಕೈಗೊಳ್ಳಲು ಕಾಂಗ್ರೆಸ್‌ ಆಗ್ರಹ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

Fraud Case ಆನ್‌ಲೈನ್‌ ಮೂಲಕ ಲಕ್ಷಾಂತರ ರೂಪಾಯಿ ವಂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Passenger hiding snakes in pants intercepted at Miami airport

Miami; ವಿಮಾನ ಪ್ರಯಾಣಿಕನ ಪ್ಯಾಂಟ್ ನಲ್ಲಿ ಹಾವುಗಳು! ಮಿಯಾಮಿ ಏರ್ಪೋರ್ಟ್ ನಲ್ಲಿ ಆಗಿದ್ದೇನು?

dandeli

Dandeli: ನಾಲೆಗೆಸೆದ ಮಗುವಿನ ಮೃತದೇಹ ಪತ್ತೆ

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

IPL 2024; ನಮ್ಮ ಜ್ಞಾನಕ್ಕೆ ಮಾಡಿದ ಅಪಮಾನ..: ವಿರಾಟ್ ವಿರುದ್ಧ ಸಿಟ್ಟಾದ ಸುನೀಲ್ ಗಾವಸ್ಕರ್

3-dandeli

Dandeli: 6 ವರ್ಷದ ಮಗುವನ್ನು ನಾಲಾಕ್ಕೆಸೆದ ತಾಯಿ: ಮುಂದುವರಿದ ಮಗುವಿನ ಶೋಧ ಕಾರ್ಯಾಚರಣೆ

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

T20 Cricket; ಈ ದಿನಗಳಲ್ಲಿ ಮೈದಾನ ಗಾತ್ರ ಅಪ್ರಸ್ತುತ: ಅಶ್ವಿ‌ನ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.