ಮತ್ತೆ ಮೊಳಗಿದ ಉ.ಕ.‌ ಅನ್ಯಾಯದ ಕೂ‌ಗು‌


Team Udayavani, Dec 14, 2018, 6:00 AM IST

42.jpg

ಬೆಳಗಾವಿ: ಎಸ್‌.ಆರ್‌.ಪಾಟೀಲರಿಗೆ ಸಭಾಪತಿ ಸ್ಥಾನ ಕೈತಪ್ಪಿರುವುದು ರಾಜ್ಯದ ಕಾಂಗ್ರೆಸ್‌ ನಾಯಕರಿಗೆ ಬಿಸಿ ತುಪ್ಪವಾಗಿ ಪರಿಣಮಿಸಿದೆ. ಈ ನಿರ್ಧಾರವನ್ನು ಶಾಸಕಾಂಗ ಪಕ್ಷದ ಸಭೆಯಲ್ಲೂ ಪ್ರಸ್ತಾಪಿಸಿ, ಎಐಸಿಸಿ ಅಧ್ಯಕ್ಷ ರಾಹುಲ್‌ ಗಾಂಧಿ ಗಮನಕ್ಕೆ ತರಲು ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್‌ ಶಾಸಕರು ನಿರ್ಧರಿಸಿದ್ದಾರೆ. ಮಾಜಿ ಸಚಿವ, ಕಾಂಗ್ರೆಸ್‌ನ ಹಿರಿಯ ನಾಯಕ ಎಚ್‌.
ಕೆ.ಪಾಟೀಲ್‌ ಅವರನ್ನು ಗುರುವಾರ ಭೇಟಿ ಮಾಡಿದ ಉತ್ತರ ಕರ್ನಾಟಕ ಭಾಗದ ಕಾಂಗ್ರೆಸ್‌ ಶಾಸಕರು, ಪಕ್ಷದ ಈ ನಿರ್ಧಾರದ ವಿರುದ್ಧ ಅಸಮಾಧಾನ ಹೊರ ಹಾಕಿದ್ದಾರೆಂದು ತಿಳಿದು ಬಂದಿದೆ. 

ದಕ್ಷಿಣ ಕರ್ನಾಟಕ ಭಾಗಕ್ಕಿಂತ ಉತ್ತರ ಕರ್ನಾಟಕ ಭಾಗದಲ್ಲಿಯೇ ಹೆಚ್ಚಿನ ಸಂಖ್ಯೆಯ ಕಾಂಗ್ರೆಸ್‌ ಶಾಸಕರು ಆಯ್ಕೆಯಾಗಿದ್ದಾರೆ. ಆದರೂ, ಎಲ್ಲಾ ಅಧಿಕಾರವೂ ದಕ್ಷಿಣ ಕರ್ನಾಟಕ ಭಾಗದವರ ಕೈಯಲ್ಲಿದೆ. ಪಕ್ಷ ಹಾಗೂ ಸರ್ಕಾರ ಎರಡೂ ಅಧಿಕಾರಗಳು ಒಂದೇ ಭಾಗದವರ ಕೈಯಲ್ಲಿರುವುದರಿಂದ ಆಡಳಿತ ಪಕ್ಷದಲ್ಲಿದ್ದರೂ ಯಾವುದೇ ಮರ್ಯಾದೆ ಇಲ್ಲದಂತಾಗಿದೆ. ಜೆಡಿಎಸ್‌ಗೆ ಉತ್ತರ ಕರ್ನಾಟಕ ಭಾಗದಲ್ಲಿ ಜನ ಬೆಂಬಲ ನೀಡಿಲ್ಲ ಎನ್ನುವ ಕಾರಣಕ್ಕೆ ಅವರು ಉತ್ತರ ಕರ್ನಾಟಕ ಭಾಗವನ್ನು ನಿರ್ಲಕ್ಷ್ಯ ಮಾಡುತ್ತಿದ್ದಾರೆ.

ಸರ್ಕಾರದ ಪಾಲುದಾರರಾಗಿರುವ ಕಾಂಗ್ರೆಸ್‌, ಉತ್ತರ ಕರ್ನಾಟಕ ಭಾಗದಲ್ಲಿ ಪ್ರಬಲವಾಗಿದ್ದು, ಆಗಿರುವ ಅನ್ಯಾಯವನ್ನು ಸರಿಪಡಿಸುವ ಯತ್ನ ಮಾಡಬೇಕು. ಅದನ್ನು ಬಿಟ್ಟು ಕಾಂಗ್ರೆಸ್‌ ಪಕ್ಷವೂ ಉತ್ತರ ಕರ್ನಾಟಕ ವನ್ನು ನಿರ್ಲಕ್ಷಿಸಿದರೆ, ಮುಂಬರುವ ಚುನಾವಣೆಯಲ್ಲಿ ಯಾವ ಮುಖ ಇಟ್ಟುಕೊಂಡು ಜನರ ಬಳಿ ಮತ ಕೇಳುವುದು ಎಂದು ಖಾರವಾಗಿಯೇ ತಮ್ಮ ಅಸಮಾಧಾನ ಹೊರಹಾಕಿದ್ದಾರೆಂದು ತಿಳಿದು ಬಂದಿದೆ. ಜೆಡಿಎಸ್‌ ನಾಯಕರಾಗಿದ್ದ ಬಸವರಾಜ ಹೊರಟ್ಟಿ ಉತ್ತರ ಕರ್ನಾಟಕ ಭಾಗಕ್ಕೆ ಸೇರಿದವರು.

ಬೆಳಗಾವಿಯಲ್ಲಿ ಅಧಿವೇಶನ ನಡೆಯುತ್ತಿರುವ ಸಂದರ್ಭದಲ್ಲಿಯೇ ಉತ್ತರ ಕರ್ನಾಟಕ ಭಾಗದ ನಾಯಕರಾದ ಅವರನ್ನು ಬದಲಾಯಿಸಿರುವುದು ಉತ್ತರ ಕರ್ನಾಟಕ ಭಾಗದ ಹಿರಿಯ ನಾಯಕರಿಗೆ ಅಪಮಾನ ಮಾಡಿದಂತಾಗಿದೆ. ಜತೆಗೆ, ಪಕ್ಷದ 
ಸೂಚನೆಯಂತೆ ಎಸ್‌.ಆರ್‌. ಪಾಟೀಲ್‌ ಅವರನ್ನು ಸಭಾಪತಿ ಮಾಡುವುದಾಗಿ ಭರವಸೆ ನೀಡಿ, ಕೊನೆ ಘಳಿಗೆಯಲ್ಲಿ ಅವರಿಗೆ ಅವಕಾಶ ತಪ್ಪಿಸಿರುವುದು ಉತ್ತರ ಕರ್ನಾಟಕ ಭಾಗದ ಬಗ್ಗೆ ಪಕ್ಷದ ನಾಯಕರಿಗೆ ಇರುವ ನಿರ್ಲಕ್ಷ್ಯ ಧೋರಣೆಯನ್ನು ಎತ್ತಿ ತೋರಿಸುತ್ತದೆ ಎಂದು
ಕಿಡಿ ಕಾರಿದ್ದಾರೆಂದು ತಿಳಿದು ಬಂದಿದೆ. ಈ ಕುರಿತು ಪಕ್ಷದ ರಾಜ್ಯ ನಾಯಕರು ಹಾಗೂ ಹೈಕಮಾಂಡ್‌ ಗಮನಕ್ಕೆ ತಂದು ಉತ್ತರ ಕರ್ನಾಟಕಕ್ಕೆ ಮೇಲಿಂದ ಮೇಲೆ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವಂತೆ ಒತ್ತಡ ಹೇರಬೇಕೆಂದು ಎಚ್‌. ಕೆ.ಪಾಟೀಲರನ್ನು ಆಗ್ರಸಿದ್ದಾರೆ ಎಂದು ತಿಳಿದು ಬಂದಿದೆ.

ಎಂ.ಬಿ.ಪಾಟೀಲ್‌ರಿಂದ ಬಹಿರಂಗ ಆಕ್ರೋಶ ಇದೇ ವೇಳೆ, ಎಸ್‌.ಆರ್‌.ಪಾಟೀಲರನ್ನು ಕೈ ಬಿಟ್ಟಿರುವ ಪಕ್ಷದ ತೀರ್ಮಾನದ ಬಗ್ಗೆ
ಮಾಜಿ ಸಚಿವ ಎಂ.ಬಿ.ಪಾಟೀಲ್‌, ಬಹಿರಂಗವಾಗಿಯೇ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಉತ್ತರ
ಕರ್ನಾಟಕ ಭಾಗಕ್ಕೆ ಅನ್ಯಾಯ ವಾಗುತ್ತಿದೆ ಎಂಬ ಆರೋಪಗಳು ಕೇಳಿ ಬರುತ್ತಿರುವ ಸಂದರ್ಭದಲ್ಲಿಯೇ ಎಸ್‌. ಆರ್‌.ಪಾಟೀಲರಿಗೆ ಭರವಸೆ ಮೂಡಿಸಿ, ಸಭಾಪತಿ ಸ್ಥಾನ ಕೈತಪ್ಪುವಂತೆ ಮಾಡಿರುವುದು ಉತ್ತರ ಕರ್ನಾಟಕ ಹಾಗೂ ಲಿಂಗಾಯತ ಸಮುದಾಯಕ್ಕೆ ಮಾಡಿರುವ ಅಪಮಾನ ಎಂದು ಆರೋಪಿಸಿದ್ದಾರೆ. ಸಮ್ಮಿಶ್ರ ಸರ್ಕಾರದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ, ಸಮನ್ವಯ ಸಮಿತಿ ಅಧ್ಯಕ್ಷ, ಶಾಸಕಾಂಗ ಪಕ್ಷದ ನಾಯಕ, ವಿಧಾನಸಭೆ ಸಭಾಧ್ಯಕ್ಷ, ಪರಿಷತ್‌ ಸಭಾಪತಿ ಸೇರಿ ಬಹುತೇಕ ಎಲ್ಲ ಸ್ಥಾನಗಳನ್ನೂ ದಕ್ಷಿಣ ಕರ್ನಾಟಕದವರಿಗೆ ನೀಡ ಲಾಗಿದೆ. ಉತ್ತರ ಕರ್ನಾಟಕ ಭಾಗ ದಿಂದ ಕಾಂಗ್ರೆಸ್‌ನಲ್ಲಿ 41 ಶಾಸಕರು ಆಯ್ಕೆಯಾಗಿದ್ದರೆ, ದಕ್ಷಿಣ ಕರ್ನಾ
ಟಕದಿಂದ 36 ಶಾಸಕರು ಮಾತ್ರ ಆಯ್ಕೆಯಾಗಿದ್ದಾರೆ. ಆದರೆ, ಉ.ಕ ಭಾಗಕ್ಕೆ 5 ಮಂತ್ರಿಸ್ಥಾನ ನೀಡಿದ್ದರೆ, ದಕ್ಷಿಣ ಕರ್ನಾಟಕದ 9 ಶಾಸಕರಿಗೆ ಮಂತ್ರಿ ಸ್ಥಾನ ನೀಡಲಾಗಿದೆ. ಅಷ್ಟೇ ಅಲ್ಲದೆ, ಪ್ರಮುಖ ಇಲಾಖೆಗಳಾದ ಇಂಧನ, ಲೋಕೋಪಯೋಗಿ, ಜಲ ಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಇಲಾಖೆಗಳಿಗೆ ದಕ್ಷಿಣ ಕರ್ನಾಟಕದವರೇ ಸಚಿವರಾಗಿದ್ದಾರೆ. ಈ ಮೂಲಕ ಎಲ್ಲಾ
ವಿಭಾಗಗಳಲ್ಲಿಯೂ ಉತ್ತರ ಕರ್ನಾಟಕ ಭಾಗಕ್ಕೆ ಸಮ್ಮಿಶ್ರ ಸರ್ಕಾರದಲ್ಲಿ ಅನ್ಯಾಯ ಆಗುತ್ತಿದೆ ಎಂದು ಆಕ್ರೋಶ ಹೊರ ಹಾಕಿದ್ದಾರೆ.

ಎಚ್ಕೆ ಭರವಸೆ
ಇದಕ್ಕೆ ಸಕಾರಾತ್ಮಕವಾಗಿ ಪ್ರತಿಕ್ರಿಯಿಸಿರುವ ಎಚ್‌. ಕೆ. ಪಾಟೀಲ್‌, ಉತ್ತರ ಕರ್ನಾಟಕ ಭಾಗದ ಶಾಸಕರ ಭಾವನೆಗಳನ್ನು ರಾಜ್ಯ
ನಾಯಕರು ಹಾಗೂ ವಿಶೇಷವಾಗಿ ರಾಹುಲ್‌ ಗಾಂಧಿ ಅವರ ಗಮನಕ್ಕೆ ತಂದು ಅನ್ಯಾಯ ತಡೆ ಗಟ್ಟಲು ಮನವಿ ಮಾಡುತ್ತೇನೆ. ಶೀಘ್ರವೇ ಈ ಬಗ್ಗೆ ಹೈ ಕಮಾಂಡ್‌ಗೆ ಪತ್ರ ಬರೆಯುತ್ತೇನೆಂದು ಭರವಸೆ ನೀಡಿದ್ದಾರೆ ಎಂದು ತಿಳಿದು ಬಂದಿದೆ. 

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.