ಗದ್ದಲಕ್ಕೆ ಬಲಿಯಾದ ಕಲಾಪ


Team Udayavani, Dec 14, 2018, 6:25 AM IST

session-14-12.jpg

ಹೊಸದಿಲ್ಲಿ: ರಫೇಲ್‌ ಡೀಲ್‌, ರಾಮಮಂದಿರ ನಿರ್ಮಾಣ ವಿವಾದ ಮತ್ತು ಕಾವೇರಿ ನದಿ ನೀರು ಸೇರಿ ವಿವಿಧ ವಿಚಾರಗಳಿಗೆ ಸಂಬಂಧಿಸಿದಂತೆ ವಿಪಕ್ಷಗಳು ಗುರುವಾರವೂ ಪ್ರತಿಭಟನೆ ಮುಂದುವರಿಸಿದ್ದು, ಸತತ ಎರಡನೇ ದಿನವೂ ಲೋಕಸಭೆ ಹಾಗೂ ರಾಜ್ಯಸಭೆ ಕಲಾಪ ಕೊಚ್ಚಿ ಹೋಯಿತು. ಚಳಿಗಾಲದ ಅಧಿವೇಶನ ಆರಂಭವಾಗಿ ಮೂರನೇ ದಿನವಾದ ಗುರುವಾರ, ತಮಿಳುನಾಡು ಸಂಸದರು ಕಾವೇರಿ ವಿಚಾರದಲ್ಲಿ ಪ್ರತಿಭಟನೆ ಹಾಗೂ ಗದ್ದಲ ನಡೆಸಿದ್ದರಿಂದ ಯಾವ ಚರ್ಚೆಯನ್ನೂ ನಡೆಸಲು ಸಾಧ್ಯವಾಗಲಿಲ್ಲ.

ಸಂಸತ್‌ ಭವನದ ಮೇಲೆ 2001ರಲ್ಲಿ ಉಗ್ರರು ನಡೆಸಿದ ದಾಳಿಯಲ್ಲಿ ಮೃತ 9 ವ್ಯಕ್ತಿಗಳಿಗೆ ಗೌರವ ನಮನವನ್ನು ಸದನ ಸಲ್ಲಿಸಿ, ಕಲಾಪ ಆರಂಭಿಸುತ್ತಿದ್ದಂತೆಯೇ ಎಐಎಡಿಎಂಕೆ ಮತ್ತು ಡಿಎಂಕೆ ಸಂಸದರು ಸ್ಪೀಕರ್‌ ಎದುರು ಧಾವಿಸಿ ಘೋಷಣೆ ಕೂಗಲು ಆರಂಭಿಸಿದರು. ಆಂಧ್ರಪ್ರದೇಶದ ಸಂಸದರೂ ವಿಶೇಷ ಸ್ಥಾನಮಾನಕ್ಕಾಗಿ ಆಗ್ರಹಿಸಿ ಪ್ರತಿಭಟನೆ ಆರಂಭಿಸಿದರು. ಇದರಿಂದ ಕ್ರುದ್ಧಗೊಂಡ ಸಭಾಪತಿ ವೆಂಕಯ್ಯ ನಾಯ್ಡು, ‘ಸಂಸತ್‌ ಅನ್ನು ರಕ್ಷಿಸುವ ಸಲುವಾಗಿ 9 ಮಂದಿ ತಮ್ಮ ಪ್ರಾಣವನ್ನೇ ಬಲಿ ನೀಡಿದ್ದಾರೆ. ದಯವಿಟ್ಟು ಇವತ್ತು ಕಲಾಪಕ್ಕೆ ಅಡ್ಡಿ ಮಾಡಬೇಡಿ. ಇವತ್ತೂ ಕಲಾಪ ನಡೆಯದಿದ್ದರೆ ತಪ್ಪು ಸಂದೇಶ ರವಾನೆಯಾಗುತ್ತದೆ’ ಎಂದು ಮನವಿ ಮಾಡಿದರಾದರೂ, ಸಂಸದರು ಬಗ್ಗದ್ದರಿಂದ ಸದನವನ್ನು ಮುಂದೂಡಲಾಯಿತು. ಇದೇ ರೀತಿ ಲೋಕಸಭೆಯಲ್ಲೂ ಗದ್ದಲ ಉಂಟಾದ್ದರಿಂದ ಪ್ರಶ್ನೋತ್ತರ ವೇಳೆಯಲ್ಲೇ ಎರಡು ಬಾರಿ ಮುಂದೂಡಲಾಯಿತು. ನಂತರ ಶೂನ್ಯವೇಳೆಯಲ್ಲಿ ಕಲಾಪವನ್ನು ದಿನದ ಮಟ್ಟಿಗೆ ಮುಂದೂಡಲಾಯಿತು.

5200 ಕೋಟಿ ರೂ. ಜಾಹೀರಾತು: ಸರಕಾರ 2014-15ರಿಂದ ಈವರೆಗೆ ಜಾಹೀರಾತಿಗಾಗಿ 5,200  ಕೋಟಿ ರೂ. ವೆಚ್ಚ ಮಾಡಿದೆ ಎಂದು ಲೋಕಸಭೆಗೆ ಮಾಹಿತಿ ಮತ್ತು ವಾರ್ತಾಪ್ರಸಾರ ಸಚಿವ ರಾಜ್ಯ ವರ್ಧನ ರಾಥೋಡ್‌ ಹೇಳಿದ್ದಾರೆ. 2014-15 ರಲ್ಲಿ 979.78 ಕೋಟಿ ರೂ. 2015-16 ರಲ್ಲಿ 1160.16 ಕೋಟಿ ರೂ., 2016-17 ರಲ್ಲಿ 1264.26 ಕೋಟಿ ರೂ ಮತ್ತು 2017-18 ರಲ್ಲಿ 1313.57 ಕೋಟಿ ರೂ. ವೆಚ್ಚ ಮಾಡಲಾಗಿದೆ ಎಂದಿದ್ದಾರೆ.

ಅಗಲಿದ ಗಣ್ಯರಿಗೆ ಸಂತಾಪ: ಸಂಸತ್‌ ಮೇಲೆ ಉಗ್ರದಾಳಿಯಲ್ಲಿ ಹುತಾತ್ಮ ಯೋಧ ರಿಗೆ ಹಾಗೂ ಇತ್ತೀಚೆಗೆ ಅಗಲಿದ ಬಿಜೆಪಿ ಮುಖಂಡರಿಗೆ ಸಂಸದೀಯ ಪಕ್ಷದ ಸಭೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಗೌರವ ನಮನ ಸಲ್ಲಿಸಿದರು. ಸಂಸದರಾಗಿದ್ದ ಅನಂತಕುಮಾರ್‌, ಮಾಜಿ ಪ್ರಧಾನಿ ಅಟಲ್‌ ಬಿಹಾರಿ ವಾಜಪೇಯಿ ಸೇರಿದಂತೆ ಇತರ ಗಣ್ಯರಿಗೆ ಗೌರವ ನಮನ ಸಲ್ಲಿಸಲಾಯಿತು. ಈ ವೇಳೆ ಸಂಸದರನ್ನುದ್ದೇಶಿಸಿ ಮಾತನಾಡಿದ ಮೋದಿ, ಪಂಚರಾಜ್ಯ ಚುನಾವಣೆಯಲ್ಲಿ ಪಕ್ಷದ ಸೋಲಿನ ಬಗ್ಗೆ ನೇರವಾಗಿ ಪ್ರಸ್ತಾಪ ವನ್ನೇ ಮಾಡಲಿಲ್ಲ.

ಯೋಧರ ಕೃತಕ ಅಂಗಾಂಗಕ್ಕೆ ಸರಕಾರ ವೆಚ್ಚ ಭರಿಸಲಿ: ಕೇಂದ್ರ ಸರ್ಕಾರ ಆರೋಗ್ಯ ಸ್ಕೀಮ್‌ ಅಡಿಯಲ್ಲಿ ಯೋಧರ ಕೃತಕ ಅಂಗಾಂಗ ಅಳವಡಿಕೆ ವೆಚ್ಚದಲ್ಲಿ ಶೇ. 30- 40ರಷ್ಟನ್ನು ಮಾತ್ರ ಸರಕಾರ ಭರಿಸುತ್ತಿದ್ದು, ಉಳಿದ ವೆಚ್ಚವನ್ನು ಸಿಆರ್‌ಪಿಎಫ್ ಭರಿಸುತ್ತಿದೆ. ಬದಲಿಗೆ ಸರಕಾರವೇ ಸಂಪೂರ್ಣ ವೆಚ್ಚ ಭರಿಸಬೇಕು ಎಂದು ಕಾಂಗ್ರೆಸ್‌ ಮುಖಂಡ ಪಿ. ಚಿದಂಬರಂ ನೇತೃತ್ವದ ಸಂಸದೀಯ ಸಮಿತಿಯೊಂದು ಸೂಚಿಸಿದೆ.

ಮೋದಿ, ರಾಹುಲ್‌ ಮಾತಿಲ್ಲ

ಸಂಸತ್‌ ದಾಳಿಯಲ್ಲಿ ಹುತಾತ್ಮರಿಗೆ ಗೌರವ ನಮನ ಸಲ್ಲಿಸುವ ವೇಳೆ ಕಾಂಗ್ರೆಸ್‌ ಅಧ್ಯಕ್ಷ ರಾಹುಲ್‌ ಗಾಂಧಿ ಹಾಗೂ ಪ್ರಧಾನಿ ನರೇಂದ್ರ ಮೋದಿ ಅತ್ಯಂತ ಸಮೀಪದಲ್ಲೇ ಸಾಗಿದ್ದರೂ, ಇಬ್ಬರೂ ಉಭಯ ಕುಶಲೋಪರಿಯನ್ನೂ ನಡೆಸಿಲ್ಲ. ಆದರೆ ಮಾಜಿ ಪ್ರಧಾನಿ ಮನಮೋಹನ್‌ ಸಿಂಗ್‌ರನ್ನು ಭೇಟಿ ಮಾಡಿ ಮೋದಿ ಮಾತನಾಡಿದರು. ಇದೇ ರೀತಿ ಸಚಿವ ವಿಜಯ್‌ ಗೋಯೆಲ್‌ ಹಾಗೂ ಸಚಿವ ರಾಮದಾಸ್‌ ಅಠಾವಳೆ ಅವರು ರಾಹುಲ್‌ ಜೊತೆಗೆ ಮಾತನಾಡಿದ್ದು ಕಂಡುಬಂತು.

ರಾಘವೇಂದ್ರ ಪ್ರಮಾಣ ಸ್ವೀಕಾರ
ಶಿವಮೊಗ್ಗ ಉಪಚುನಾವಣೆಯಲ್ಲಿ ಸಂಸದರಾಗಿ ಆಯ್ಕೆಯಾದ ಬಿ. ವೈ. ರಾಘವೇಂದ್ರ ಗುರುವಾರ ಲೋಕಸಭೆಯಲ್ಲಿ ಪ್ರಮಾಣವಚನ ಸ್ವೀಕರಿಸಿದರು. ತಂದೆ ಬಿ.ಎಸ್‌. ಯಡಿಯೂರಪ್ಪ ರಾಜೀನಾಮೆ ನೀಡಿದ್ದರಿಂದ ತೆರವಾದ ಸ್ಥಾನಕ್ಕೆ ರಾಘವೇಂದ್ರ ಸ್ಪರ್ಧಿಸಿ ಗೆಲುವು ಕಂಡಿದ್ದರು.

ಟಾಪ್ ನ್ಯೂಸ್

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

Karnataka ಮುಷ್ಕರ ಕೈಬಿಟ್ಟ 108 ಆ್ಯಂಬುಲೆನ್ಸ್‌ ಸಿಬಂದಿ

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌

HD ರೇವಣ್ಣ ಜಾಮೀನು ಅರ್ಜಿ: ಎಸ್‌ಐಟಿಗೆ ನೋಟಿಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

CSIR: Opportunity to wear unironed clothes every Monday!

CSIR: ಪ್ರತೀ ಸೋಮವಾರ ಇಸ್ತ್ರಿ ಹಾಕದ ವಸ್ತ್ರ ಧರಿಸಲು ಅವಕಾಶ!

Teacher Recruitment Scam: Supreme Court Slams Bengal Govt

West Bengal; ಶಿಕ್ಷಕರ ನೇಮಕ ಹಗರಣ: ಬಂಗಾಳ ಸರ್ಕಾರಕ್ಕೆ ಸುಪ್ರೀಂ ಕೋರ್ಟ್‌ ತರಾಟೆ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಗೆ ದಾಖಲು

HD ರೇವಣ್ಣಗೆ ಹೊಟ್ಟೆನೋವು, ಎದೆಯುರಿ: ಆಸ್ಪತ್ರೆಯಲ್ಲಿ ಚಿಕಿತ್ಸೆ

Jharkhand 32 crore discovery case: Two arrested

Jharkhand 32 ಕೋಟಿ ಪತ್ತೆ ಪ್ರಕರಣ: ಇಬ್ಬರ ಸೆರೆ

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Loksabha; 3ನೇ ಹಂತದಲ್ಲಿ ಶೇ.61.66ರಷ್ಟು ಮತದಾನ; ಶಾ ಕ್ಷೇತ್ರದಲ್ಲಿ ಮೋದಿ ವೋಟಿಂಗ್‌

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

Puttur ಜಾನಪದ ವಿದ್ವಾಂಸ ಡಾ| ಪಾಲ್ತಾಡಿ ಇನ್ನಿಲ್ಲ

ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Loksabha election; ಆಯೋಗದ ಮತದಾನ ಮಾಹಿತಿಯಲ್ಲಿ ಲೋಪವಿದೆ, ಧ್ವನಿಯೆತ್ತಿ: ಖರ್ಗೆ ಪತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.