ಲೆ| ಜ| ಬಿ.ಸಿ. ನಂದ ಅಂತ್ಯಸಂಸ್ಕಾರ
Team Udayavani, Dec 14, 2018, 10:08 AM IST
ಮಡಿಕೇರಿ: ಭಾರತೀಯ ಸೇನಾ ಪಡೆಯಲ್ಲಿ ತಮ್ಮ ಉನ್ನತ ಸ್ತರದ ಕಾರ್ಯವೈಖರಿಗಳ ಮೂಲಕ ಅಚ್ಚಳಿಯದ ಛಾಪು ಮೂಡಿಸಿದ್ದ ಲೆ| ಜ| ಬಿ.ಸಿ. ನಂದ ಅವರ ಅಂತ್ಯಸಂಸ್ಕಾರ ಸಕಲ ಸೇನಾ ಗೌರವಗಳೊಂದಿಗೆ ನಗರದಂಚಿನ ಅವರ ತೋಟದಲ್ಲಿ ನೆರವೇರಿತು.
ಮೂಲತಃ ಮಹರ್ ರೆಜಿಮೆಂಟಿನ, ಪ್ರಸ್ತುತ ಮೈಸೂರಿನಲ್ಲಿ ಎನ್ಸಿಸಿ ಕಮಾಂಡೆಂಟ್ ಆಗಿರುವ ಕ| ಎಂ.ಕೆ. ಬೆಳ್ಯಪ್ಪ ಮತ್ತು ಮದ್ರಾಸ್ ಸ್ಯಾಪರ್ಸ್ ತಂಡದ ನೇತೃತ್ವ ವಹಿಸಿದ್ದ ಲೆ| ಕ| ದಿನೇಶ್ ಕುಮಾರ್ ನೇತೃತ್ವದ 21 ಮಂದಿಯ ತಂಡ ಅಗಲಿದ ಸೇನಾಧಿಕಾರಿಗೆ ಮೂರು ಸುತ್ತಿನ ಕುಶಾಲತೋಪು ಸಿಡಿಸಿ ಅಂತಿಮ ಗೌರವ ಸಲ್ಲಿಸಿತು.
ಪತ್ನಿ ಲೀಲಾ ನಂದ ಹಾಗೂ ದ್ವಿತೀಯ ಪುತ್ರಿ ದೇವಿಕಾ ಕೊಡವ ಸಂಪ್ರದಾಯದಂತೆ ಅಂತಿಮ ವಿಧಿಗಳನ್ನು ನೆರವೇರಿಸಿದರು. ಫೀ|ಮಾ| ಕಾರ್ಯಪ್ಪ ಮತ್ತು ಜ| ತಿಮ್ಮಯ್ಯ ಫೋರಂನ ಅಧ್ಯಕ್ಷ ನಿವೃತ್ತ ಕ| ಕಂಡ್ರತಂಡ ಸಿ. ಸುಬ್ಬಯ್ಯ, ಸಂಚಾಲಕರಾದ ಮೇ| ಬಿ.ಎ. ನಂಜಪ್ಪ ಮತ್ತು ಕುಟುಂಬಸ್ಥರು ಸಹಕರಿಸಿದರು. ನಂದ ಅವರ ಆಶಯದಂತೆ ಪಾರ್ಥಿವ ಶರೀರವನ್ನು ತೋಟದಲ್ಲಿ ಭೂ ತಾಯಿಯ ಮಡಿಲಿಗೆ ಅರ್ಪಿಸಲಾಯಿತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್
Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ
Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ
BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ
Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!