ಐಟಿ ಅಧಿಕಾರಿಗಳಿಂದ ಶಶಿಕಲಾ ವಿಚಾರಣೆ
Team Udayavani, Dec 14, 2018, 11:24 AM IST
ಬೆಂಗಳೂರು: ಆದಾಯ ಮೀರಿ ಆಸ್ತಿ ಗಳಿಕೆ ಆರೋಪ ಪ್ರಕರಣದಲ್ಲಿ ಬೆಂಗಳೂರಿನ ಪರಪ್ಪನ ಅಗ್ರಹಾರ ಜೈಲಿನಲ್ಲಿ ವಿಚಾರಣಾಧೀನ ಕೈದಿಯಾಗಿರುವ ತಮಿಳುನಾಡಿನ ಎಐಎಡಿಎಂಕೆ ನಾಯಕಿ ಶಶಿಕಲಾ ನಟರಾಜನ್ ಅವರನ್ನು ಗುರುವಾರ ಚೆನ್ನೈನ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಸುಮಾರು 6 ಗಂಟೆಗಳ ಕಾಲ ವಿಚಾರಣೆ ನಡೆಸಿದ್ದಾರೆ.
ಬೆಳಗ್ಗೆ 11 ಗಂಟೆ ಸುಮಾರಿಗೆ ಚೆನ್ನೈನ ಆದಾಯ ತೆರಿಗೆ ಇಲಾಖೆ ಅಧಿಕಾರಿ ವೀರರಾಘವ ನೇತೃತ್ವದ ತಂಡ ಆಗಮಿಸಿ ಸಂಜೆ 6 ಗಂಟೆವರೆಗೆ ಶಶಿಕಲಾ ನಟರಾಜನ್ ಅವರನ್ನು ವಿಚಾರಣೆ ನಡೆಸಿದೆ. ಇದೇ ವೇಳೆ ಐದು ಬ್ಯಾಗ್ಗಳಲ್ಲಿ ತಂದಿದ್ದ ಕಡತಗಳನ್ನು ಶಶಿಕಲಾ ಮುಂದೆಯೇ ಪರಿಶೀಲಿಸಿದರು. ಪ್ರಕರಣ ಕುರಿತು ಸಂಪೂರ್ಣ ಮಾಹಿತಿ ಪಡೆದುಕೊಂಡರು.
ಶುಕ್ರವಾರ ಕೂಡ ವಿಚಾರಣೆಗೆ ನಡೆಸುವ ಸಾಧ್ಯತೆಯಿದೆ ಎಂದು ಪರಪ್ಪನ ಅಗ್ರಹಾರ ಕಾರಾಗೃಹದ ಅಧಿಕಾರಿಗಳು ತಿಳಿಸಿದ್ದಾರೆ. ಈ ಹಿಂದೆ ತಮಿಳುನಾಡಿನ ಚೆನ್ನೈನಲ್ಲಿರುವ ಶಶಿಕಲಾ ನಟರಾಜನ್ ಮನೆ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ, ಅಕ್ರಮ ಆಸ್ತಿಗಳಿಕೆಗೆ ಸಂಬಂಧಿಸಿದ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ