ರಫೇಲ್ ಸುಳ್ಳು ಆಪಾದನೆಗೆ ಕಾಂಗ್ರೆಸ್, ರಾಹುಲ್ ಕ್ಷಮೆಯಾಚಿಸಲಿ: BJP
Team Udayavani, Dec 14, 2018, 11:47 AM IST
ಹೊಸದಿಲ್ಲಿ : ರಫೇಲ್ ಫೈಟರ್ ಜೆಟ್ ಡೀಲ್ನಲ್ಲಿ ಯಾವುದೇ ಅಕ್ರಮ ನಡೆದಿಲ್ಲ ಎಂದು ಸುಪ್ರೀಂ ಕೋರ್ಟ್ ತೀರ್ಪು ನೀಡಿ ಕೇಂದ್ರ ಸರಕಾರಕ್ಕೆ ಕ್ಲೀನ್ ಚಿಟ್ ನೀಡಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ ಮತ್ತು ಅದರ ಅಧ್ಯಕ್ಷ ರಾಹುಲ್ ಗಾಂಧಿ ಅವರು ಸುಳ್ಳು ಆರೋಪ ಮಾಡಿದುದಕ್ಕೆ ಕ್ಷಮೆಯಾಚಿಸಬೇಕು ಎಂದು ಬಿಜೆಪಿ ಇಂದು ಶುಕ್ರವಾರ ಆಗ್ರಹಿಸಿದೆ.
36 ರಫೇಲ್ ಫೈಟರ್ ಜೆಟ್ ಗಳ ಖರೀದಿಯಲ್ಲಿ ಭಾರೀ ಅಕ್ರಮ ನಡೆದಿದೆ ಮತ್ತು ಇದರ ತನಿಖೆ ನಡೆಸುವ ಸಲುವಾಗಿ ಎಫ್ಐಆರ್ ದಾಖಲಿಸುವಂತೆ ಸಿಬಿಐ ಗೆ ನಿರ್ದೇಶ ನೀಡಬೇಕು ಎಂದು ಕೋರಿ ಸಲ್ಲಿಸಲಾಗಿದ್ದ ಎಲ್ಲ ಅರ್ಜಿಗಳನ್ನು ಸುಪ್ರೀಂ ಕೋರ್ಟ್ ಇಂದು ವಜಾ ಮಾಡಿದೆ.
ರಫೇಲ್ ಖರೀದಿಯಲ್ಲಿ ಯಾವುದೇ ಅಕ್ರಮ ನಡೆದಿಲ್ಲ; ಇದರ ಖರೀದಿ ನಿರ್ಧಾರ ಪ್ರಕ್ರಿಯೆಯನ್ನು ಸಂದೇಹಿಸುವುದಕ್ಕೆ ಕಾರಣವೇ ಇಲ್ಲ ಎಂದು ಸುಪ್ರೀಂ ಕೋರ್ಟ್ ಇಂದು ನೀಡಿದ ತನ್ನ ತೀರ್ಪಿನಲ್ಲಿ ಹೇಳಿದೆ.
ಸುಪ್ರೀಂ ಕೋರ್ಟಿನ ಈ ತೀರ್ಪನ್ನು ಸ್ವಾಗತಿಸಿದ ಬಿಜೆಪಿ ವಕ್ತಾರ ಶಹನವಾಜ್ ಹುಸೇನ್ ಅವರು, “ಪ್ರತಿಯೊಂದು ಡೀಲ್ ಬೊಫೋರ್ಸ್ ಡೀಲ್ ಅಲ್ಲ’ ಎಂದು ಕಾಂಗ್ರೆಸ್ ವಿರುದ್ಧ ಚಾಟಿ ಬೀಸಿದರು.
“ಈ ರೀತಿಯ ಡೀಲ್ಗಳಲ್ಲಿ ದೇಶದ ಭದ್ರತೆಯ ವೆಚ್ಚದಲ್ಲಿ ಹಣ ಕೊಳ್ಳೆ ಹೊಡೆಯುವುದು ಕಾಂಗ್ರೆಸ್ ಉನ್ನತ ನಾಯಕರ ಸಂಸ್ಕೃತಿ ಮತ್ತು ಸಂಪ್ರದಾಯವಾಗಿದೆ’ ಎಂದವರು ಟೀಕಿಸಿದರು.
ರಫೇಲ್ ಡೀಲ್ ವಿಷಯದಲ್ಲಿ ಪ್ರಧಾನಿಯವರ ವಿಶ್ವಾಸಾರ್ಹತೆಯನ್ನು ಪ್ರಶ್ನಿಸಿ ಅವರ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಅವರು ನರೇಂದ್ರ ಮೋದಿ ಅವರಲ್ಲಿ ಕ್ಷಮೆಯಾಚಿಸಬೇಕು ಎಂದು ಶಹನವಾಜ್ ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?
ಅಮೃತಶಿಲೆಯಲ್ಲಿ ಕೆತ್ತಿದ 18 ಅಡಿ ಕಾಳಿ ಮಾತೆ ಪ್ರತಿಮೆ ಇಂದು ಕೇರಳಕ್ಕೆ
RSS ಮೀಸಲಾತಿ ವಿರೋಧಿಸಿಲ್ಲ: ಮೋಹನ್ ಭಾಗವತ್
MUST WATCH
ಹೊಸ ಸೇರ್ಪಡೆ
ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ