ಮಂಡೆಕೋಲು:  ಕಾಡಾನೆ ಹಿಂಡು


Team Udayavani, Dec 15, 2018, 9:42 AM IST

mandekolu-ajjavara.jpg

ಮಂಡೆಕೋಲು: ಕರ್ನಾಟಕ-ಕೇರಳ ಗಡಿಭಾಗದ ಮಂಡೆಕೋಲು ಗ್ರಾಮದ ವಿವಿಧೆಡೆ ಕಾಡಾನೆಗಳು ಬೀಡುಬಿಟ್ಟಿದ್ದು, ನಿರಂತರ ಕೃಷಿಕರ ತೋಟಗಳಿಗೆ ದಾಳಿ ಮಾಡುತ್ತ ಪರಿಸರದಲ್ಲಿ ಭೀತಿ ಸೃಷ್ಟಿಸುತ್ತಿವೆ.
ವಾರದ ಹಿಂದೆ ಮಂಡೆಕೋಲು ಗ್ರಾಮದಿಂದ ಪಯಸ್ವಿನಿ ನದಿದಾಟಿ ಕೇರಳದ ದೇಲಂಪಾಡಿ ಪರಿಸರದ ಪಂಜಿಕಲ್ಲು ಕಾಡಿಗೆ 9 ಆನೆಗಳು ಪ್ರವೇಶಿಸಿದ್ದವು. ಹಗಲಲ್ಲಿ  ಮಂಡೆ ಕೋಲು ಅರಣ್ಯ ಭಾಗದಲ್ಲಿ ಬೀಡು ಬಿಟ್ಟಿದ್ದು, ರಾತ್ರಿ ವೇಳೆ ತೋಟಗಳಿಗೆ ನುಗ್ಗುತ್ತಿವೆ.

ವ್ಯಾಪಕ ಹಾನಿ
ಎರ್ಕಲ್ಪಾಡಿಯ ಸುಬ್ರಹ್ಮಣ್ಯ ಭಟ್‌ ಅವರ ತೋಟದ 25ಕ್ಕೂ ಹೆಚ್ಚು ಅಡಿಕೆ ಮರಗಳನ್ನು ಉರುಳಿಸಿವೆ. ಹತ್ತಾರು ತೆಂಗು-ಬಾಳೆ ಗಿಡಗಳನ್ನು ನಾಶಪಡಿಸಿವೆ. ರಾಧಾಕೃಷ್ಣ ಹೆಬ್ಟಾರ್‌ ಅವರ ತೋಟಕ್ಕೆ 7 ಆನೆಗಳು ದಾಳಿಯಿಟ್ಟು 20ಕ್ಕೂ ಹೆಚ್ಚು ರಬ್ಬರ್‌  ಮರಗಳು ಹಾಗೂ ಐದು ಅಡಿಕೆ ಮರಗಳನ್ನು ನಾಶಪಡಿಸಿವೆ. ಅರಣ್ಯಾಧಿಕಾರಿಗಳು ಭೇಟಿ ನೀಡಿ ಸ್ಥಳ ಪರಿಶೀಲನೆ ನಡೆಸಿದ್ದಾರೆ. ಮಂಡೆಕೋಲು-ಅಜ್ಜಾವರ ಭಾಗದಲ್ಲಿ ಕಾಡು ಪ್ರದೇಶ ಹೆಚ್ಚಿರುವುದರಿಂದ ಆನೆ- ಚಿರತೆಗಳ ಹಾವಳಿ ಸಾಮಾನ್ಯವಾಗಿವೆ. ಸಾಕುಪ್ರಾಣಿಗಳು ಚಿರತೆಗಳ ಪಾಲಾದರೆ, ಕೃಷಿ ಫ‌ಸಲು ಆನೆಗಳ ಪಾಲಾಗುತ್ತಿವೆ. ರಾತ್ರಿ ವೇಳೆ ಸಂಚರಿಸಲು ಹೆದರಿಕೆಯಾಗುತ್ತಿದೆ ಎಂದು ಗ್ರಾಮಸ್ಥರು ಹೇಳಿದ್ದಾರೆ.

ಶಾಶ್ವತ ಪರಿಹಾರಕ್ಕೆ ಆಗ್ರಹ
ಆನೆಗಳ ಹಾವಳಿ ವ್ಯಾಪಕವಾಗಿ ಇರುವಲ್ಲಿ ಅರಣ್ಯ ಇಲಾಖೆ ಕಂದಕವನ್ನು ನಿರ್ಮಿಸಿದ್ದರೂ ಅನೆಗಳು ಕಂದಕವನ್ನು ದಾಟಿ ಬರುತ್ತಿವೆ. ಸಮಸ್ಯೆಗೆ ಶಾಶ್ವತ ಪರಿಹಾರ  ಬೇಕು ಎಂದು ಅಜ್ಜಾವರ ಗ್ರಾ.ಪಂ. ಮಾಜಿ ಸದಸ್ಯ ಚಂದ್ರಶೇಖರ್‌ ಅತ್ಯಾಡಿ ಆಗ್ರಹಿಸಿದ್ದಾರೆ. 

ಆನೆಗಳು ದಾಳಿ ಮಾಡಿದ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲಿಸಿದ್ದೇವೆ. ಆನೆ ಹಾವಳಿ ಹೆಚ್ಚಾಗಿರುವ ಭಾಗಗಳಲ್ಲಿ ಪಿಲ್ಲರ್‌ ಅಳವಡಿಸಲು ಯೋಜಿಸಲಾಗಿದೆ. ಶೀಘ್ರದಲ್ಲಿ ಸೂಕ್ತ ಕ್ರಮ ಕೈಗೊಳ್ಳುತ್ತೇವೆ.
ಮಂಜುನಾಥ್‌, ವಲಯ ಅರಣ್ಯಾಧಿಕಾರಿ, ಸುಳ್ಯ

ಟಾಪ್ ನ್ಯೂಸ್

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

HDK ಹೇಳುತ್ತಿದ್ದದ್ದು ಪ್ರಜ್ವಲ್‌ ಪೆನ್‌ಡ್ರೈವ್‌ ಇರಬೇಕು: ಜಮೀರ್‌

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

8-

Charmadi ಘಾಟ್‌ನಲ್ಲಿ ಟಾಟಾ ಏಸ್‌ ಪಲ್ಟಿ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

Road Mishap ಸುಳ್ಯ: ಬೈಕ್‌ಗಳ ನಡುವೆ ಅಪಘಾತ

CAR

Road Mishap; ಕಾರು -ಬೈಕ್‌ ಢಿಕ್ಕಿ: ದಂಪತಿಗೆ ತೀವ್ರ ಗಾಯ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

Subramanya: ಕಸ ವಿಲೇವಾರಿ ವಾಹನ ಚರಂಡಿಗೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

19

Malpe ಬೀಚ್‌: ಸಮುದ್ರ ಪಾಲಾಗತ್ತಿದ್ದ ಬಾಲಕನ ರಕ್ಷಣೆ

18

Kaup: ಕೆಲಸಕ್ಕಾಗಿ ಬಂದಿದ್ದ ಯುವತಿ ನಾಪತ್ತೆ

20-one-plus

One Plusನ ಹೊಸ ಫೋನ್ ನಾರ್ಡ್ ಸಿಇ4: ಏನೇನಿದೆ ಇದರಲ್ಲಿ?

16-

Chikkaballapur: ಕೃಷಿ ಹೊಂಡದಲ್ಲಿ ಈಜಲು ಹೋಗಿ ಇಬ್ಬರು ವಿದ್ಯಾರ್ಥಿಗಳು ಸಾವು

13

Gangolli: ಮಹಿಳೆಗೆ ಬೈಕ್‌ ಢಿಕ್ಕಿ; ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.