ಚಿಂದಿ ಆಯುವವರಿಗೆ ಒಣ ತ್ಯಾಜ್ಯದ ಹೊಣೆ!


Team Udayavani, Dec 15, 2018, 12:32 PM IST

chindi.jpg

ಬೆಂಗಳೂರು: ರಾಜಧಾನಿ ಬೆಂಗಳೂರಿನ ತ್ಯಾಜ್ಯ ಸಮಸ್ಯೆಗೆ ಪರಿಹಾರ ಕಂಡುಕೊಳ್ಳಲು ಈಗಾಗಲೇ ವಾರ್ಡ್‌ವಾರು ಟೆಂಡರ್‌ ಕರೆಯಲು ಮುಂದಾಗಿರುವ ಬಿಬಿಎಂಪಿ, ಚಿಂದಿ ಆಯುವವರಿಗೆ ಒಣತ್ಯಾಜ್ಯ ವಿಲೇವಾರಿ ಜವಾಬ್ದಾರಿ ವಹಿಸಲು ನಿರ್ಧರಿಸಿದೆ.

ನಗರದಲ್ಲಿ ಸಮರ್ಪಕ ತ್ಯಾಜ್ಯ ವಿಲೇವಾರಿಗೆ ಈಗಾಗಲೇ ಹಲವಾರು ಕ್ರಮಗಳನ್ನು ಪಾಲಿಕೆ ಕೈಗೊಂಡಿದೆ. ಮುಂದುವರಿದು ಹಸಿತ್ಯಾಜ್ಯ ಸಮಸ್ಯೆ ಪರಿಹಾರಕ್ಕೆ ವಾರ್ಡ್‌ವಾರು ಟೆಂಡರ್‌ ಕರೆಯಲು ಸಿದ್ಧತೆ ನಡೆಸಿದೆ. ಇದರಿಂದಾಗಿ ಒಣತ್ಯಾಜ್ಯ ವಿಲೇವಾರಿ ಸಮಸ್ಯೆ ಎದುರಾಗುವ ಸಾಧ್ಯತೆಯಿರುವುದರಿಂದ ಒಣತ್ಯಾಜ್ಯ ವಿಲೇವಾರಿಗೆ ಚಿಂದಿ ಆಯುವವರನ್ನು ನಿಯೋಜಿಸಿಕೊಳ್ಳಲು ನಿರ್ಧರಿಸಿದೆ. 

ನಗರದ ಪ್ರಮುಖ ರಸ್ತೆಗಳು, ಮೈದಾನ, ಖಾಲಿ ನಿವೇಶನ ಹಾಗೂ ತ್ಯಾಜ್ಯರಾಶಿ ಹೀಗೆ ಎಲ್ಲೆಂದರಲ್ಲಿ ಬಾಟಲ್‌, ಪ್ಲಾಸ್ಟಿಕ್‌ ವಸ್ತುಗಳ ಸಂಗ್ರಹಣೆಯಲ್ಲಿ ತೊಡಗುವ ಚಿಂದಿ ಆಯುವವರಿಗೆ ಹೊಸದೊಂದು ಕೆಲಸ ಕೊಡಲು ಪಾಲಿಕೆ ಸಜ್ಜಾಗಿದೆ. ಆ ಹಿನ್ನೆಲೆಯಲ್ಲಿ ನಗರದಲ್ಲಿನ 7 ಸಾವಿರ ಅಧಿಕೃತ ಚಿಂದಿ ಆಯುವವರ ಮಾಹಿತಿ ಕಲೆಹಾಕಿದೆ. 

ಅದರಂತೆ ತ್ಯಾಜ್ಯ ವಿಲೇವಾರಿ ಗುತ್ತಿಗೆ ಪಡೆಯುವವರು ಹಸಿತ್ಯಾಜ್ಯ ಹಾಗೂ ಸ್ಯಾನಿಟರಿ ತ್ಯಾಜ್ಯ ಸಂಗ್ರಹಿಸಿದರೆ, ಚಿಂದಿ ಆಯುವ ಸಿಬ್ಬಂದಿ ವಾರದಲ್ಲಿ ಎರಡು ಅಥವಾ ಮೂರು ದಿನಗಳಿಗೆ ಒಮ್ಮೆ ವಾರ್ಡ್‌ನಲ್ಲಿರುವ ಮನೆ ಮನೆಗೆ ತೆರಳಿ ಒಣತ್ಯಾಜ್ಯವನ್ನು ಸಂಗ್ರಹಿಸಲಿದ್ದು, ಸಮೀಪದ ಒಣತ್ಯಾಜ್ಯ ಸಂಗ್ರಹ ಕೇಂದ್ರಕ್ಕೆ ನೀಡಲಿದ್ದು, ಅವರಿಗೆ ಕೇಂದ್ರದಿಂದ ಹಣ ಪಾವತಿಸಲಾಗುತ್ತದೆ. ಇದರಿಂದಾಗಿ ಒಣತ್ಯಾಜ್ಯ ವಿಲೇವಾರಿಗೆ ಮತ್ತೆ ಟೆಂಡರ್‌ ಕರೆಯುವುದು ತಪ್ಪಲಿದೆ. 

ಒಣತ್ಯಾಜ್ಯ ಸಂಗ್ರಹ ಪಾಲಿಸಿ ತರಲು ಚಿಂತನೆ: ತ್ಯಾಜ್ಯ ವಿಂಗಡಣೆ ಹಾಗೂ ವಿಲೇವಾರಿಯನ್ನು ಸರಿದಾರಿಗೆ ತರುವ ಉದ್ದೇಶದಿಂದ ಪಾಲಿಕೆಯಲ್ಲಿ ಹೊಸ ಒಣತ್ಯಾಜ್ಯ ಸಂಗ್ರಹ ಕಾಯ್ದೆ ತರಲು ಅಧಿಕಾರಿಗಳು ನಿರ್ಧರಿಸಿದ್ದಾರೆ. ಅದರ ಸಾಧಕ-ಬಾಧಕಗಳ ಕುರಿತು ಈಗಾಗಲೇ ಪರಿಶೀಲನೆ ನಡೆಸಿರುವ ಅಧಿಕಾರಿಗಳು, ಶೀಘ್ರದಲ್ಲಿಯೇ ಕಾಯ್ದೆಯನ್ನು ಪಾಲಿಕೆಯ ಮುಂದೆ ಮಂಡಸಿ ಅನುಮೋದನೆ ಪಡೆಯುವ ಸಾಧ್ಯತೆಯಿದೆ. ಹೊಸ ಕಾಯ್ದೆ ಚಿಂದಿ ಆಯುವವರನ್ನು ಸೇವೆಗೆ ನಿಯೋಜಿಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. 

ಪ್ರೋತ್ಸಾಹ ಧನ ನೀಡಲಾಗುತ್ತದೆ: ಒಣತ್ಯಾಜ್ಯ ಸಂಗ್ರಹ ಕೇಂದ್ರಗಳು ಇಲ್ಲದ ಕಡೆಗಳಲ್ಲಿ ಚಿಂದಿ ಆಯುವವರನ್ನು ಸಮರ್ಪಕವಾಗಿ ಬಳಸಿಕೊಳ್ಳಲು ಪಾಲಿಕೆ ನಿರ್ಧರಿಸಿದೆ. ಅದರಂತೆ ಸೇವೆಗೆ ನಿಯೋಜನೆ ಮಾಡಿಕೊಳ್ಳುವವರಿಗೆ ಪಾಲಿಕೆಯಿಂದ ಅಗತ್ಯ ವಾಹನ ಸೌಲಭ್ಯ, ಸುರಕ್ಷತಾ ಪರಿಕರಗಳು ಹಾಗೂ ಪ್ರೋತ್ಸಾಹ ಧನ ಸೇರಿ ಇನ್ನಿತರ ಸಹಾಯ ಮಾಡಲಾಗುತ್ತದೆ. 

ಪಾಲಿಕೆಯಿಂದ ಹಸಿತ್ಯಾಜ್ಯ ಹಾಗೂ ಸ್ಯಾನಿಟರಿ ತ್ಯಾಜ್ಯ ವಿಲೇವಾರಿಗೆ ವಾರ್ಡ್‌ವಾರು ಟೆಂಡರ್‌ ಕರೆಯಲಾಗುತ್ತಿದ್ದು, ಒಣತ್ಯಾಜ್ಯ ವಿಲೇವಾರಿಗೆ ಚಿಂದಿ ಆಯುವವರನ್ನು ಬಳಸಿಕೊಳ್ಳಲು ಚಿಂತನೆ ನಡೆಸಲಾಗಿದೆ. ಆ ಹಿನ್ನೆಲೆಯಲ್ಲಿ ಅವರ ದಾಖಲೆಗಳನ್ನು ಕಲೆಹಾಕಲಾಗಿದ್ದು, ಸೇವೆ ನಿಯೋಜಿಸಿಕೊಂಡವರಿಗೆ ಪಾಲಿಕೆಯಿಂದಲೇ ಗುರುತಿನ ಚೀಟಿ ಸಹ ನೀಡಲಾಗುತ್ತದೆ. ಫೆಬ್ರುವರಿಯವರೆ ಹಳೆಯ ಪದ್ಧತಿ ಮುಂದುವರಿಲಿದ್ದು, ನಂತರದಲ್ಲಿ ಹೊಸ ಪ್ರಯತ್ನಗಳಿಗೆ ಮುಂದಾಗುತ್ತೇವೆ. 
-ರಂದೀಪ್‌, ವಿಶೇಷ ಆಯುಕ್ತರು (ಘನತ್ಯಾಜ್ಯ ನಿರ್ವಹಣೆ)

ಟಾಪ್ ನ್ಯೂಸ್

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Davanagere; ಮೋದಿ ಹೆಸರಲ್ಲಿ ಮತಯಾಚನೆಗೆ ಸಂಕೋಚವಿಲ್ಲ: ಗಾಯಿತ್ರಿ ಸಿದ್ದೇಶ್ವರ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

Baghdad; ಜೈಲು ಶಿಕ್ಷೆಗೆ ಒಳಗಾಗಿದ್ದ ಟಿಕ್ ಟಾಕ್ ಸ್ಟಾರ್ ಉಮ್ ಫಾಹದ್ ಹತ್ಯೆ

14-rishab-pant

Rishabh Pant : ಸಾವಿನ ಕದ ತಟ್ಟಿ, ಮತ್ತೆ ಆಡಲಿಳಿದ ರಿಷಭ್‌ ಪಂತ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Bengaluru: ಬೂತ್‌ನಲ್ಲಿ ಕುಸಿದ ಮಹಿಳೆಗೆ ಜೀವದಾನ

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

Traffic jam: ತುಮಕೂರು, ಮೈಸೂರು ರಸ್ತೇಲಿ ಟ್ರಾಫಿಕ್‌ ಜಾಮ್‌!

4

ವಿಚ್ಛೇದನ ನೀಡದಿದ್ದರೆ ತಲೆಯನ್ನು ಕಡಿದು ಕುಕ್ಕರ್‌ನಲ್ಲಿ ಬೇಯಿಸುವೆ ಎಂದ ಪತಿ ವಿರುದ್ಧ FIR

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Bangalore: ಕೇಸರಿ ಶರ್ಟ್‌ ಧರಿಸಿದ್ದಕ್ಕೆ ಯುವಕನಿಗೆ ಹಲ್ಲೆ; ಆರೋಪ

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

Voting: ರಾಜಧಾನಿಯಲ್ಲಿ ಶಾಂತಿಯುತ ಮತದಾನ; ಬಿ.ದಯಾನಂದ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

2-baikampady

Baikampady: ಲಾರಿಗಳ ನಡುವೆ ಅಪಘಾತ; ಚಾಲಕ ಗಂಭೀರ ಗಾಯ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Gyani Uncle; ಪ್ರಧಾನಿ ಮೋದಿಯನ್ನು ಉಪದೇಶ ನೀಡುವ ಅಂಕಲ್ ಎಂದ ಪ್ರಿಯಾಂಕಾ ಗಾಂಧಿ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

Belagavi; ಕುಂದಾನಗರಿಯಲ್ಲಿ ಮೋದಿ ಸಮಾವೇಶ: ಹರಿದು ಬಂದ ಜನಸಾಗರ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

by-raghavendra

Loksabha Election: ಶಿವಮೊಗ್ಗ ಕ್ಷೇತ್ರಕ್ಕೆ 20 ಸಾವಿರ ಕೋಟಿ ಅನುದಾನ: ಬಿ.ವೈ. ರಾಘವೇಂದ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.