ಸತ್ತ ಮೇಲೆ ಸಿಕ್ಕಿತು ಬೆಳಗಾವಿ ಮಗಳಿಗೆ ಜಯ
Team Udayavani, Dec 16, 2018, 9:25 AM IST
ಬೆಳಗಾವಿ: ಐರ್ಲೆಂಡ್ನಲ್ಲಿ ಗರ್ಭಪಾತವನ್ನು ಕಾನೂನು ಬದ್ಧಗೊಳಿಸುವ ಐತಿಹಾಸಿಕ ಮಸೂದೆ ಅಂಗೀಕರಿಸಲಾಗಿದ್ದು, ಈ ಕಾನೂನಿಗೆ ಸವಿತಾಳ ಹೆಸರಿಡಬೇಕೆನ್ನುವುದು ಈಕೆಯ ಹೆತ್ತವರ ಬಯಕೆಯಾಗಿದೆ.
ಕ್ಯಾಥೋಲಿಕ್ ಸಮುದಾಯವೇ ಅಧಿಕ ಸಂಖ್ಯೆಯಲ್ಲಿರುವ ಐರ್ಲೆಂಡ್ನಲ್ಲಿ ಗರ್ಭಪಾತಕ್ಕೆ ಅವಕಾಶ ಇಲ್ಲದೇ 2012ರಲ್ಲಿ ಬೆಳಗಾವಿಯ ಸವಿತಾ ಹಾಲಪ್ಪನವರ ಅಸುನೀಗಿದ್ದರು. ಹಾವೇರಿ ಮೂಲದ ಎಂಜಿನಿಯರ್ ಪ್ರವೀಣ ಅವರೊಂದಿಗೆ ಸವಿತಾಳ ವಿವಾಹವಾಗಿತ್ತು. ಐರ್ಲೆಂಡ್ನ ಗಾಲ್ವೇಯಲ್ಲಿ ನೆಲೆಸಿದ್ದ ದಂತವೈದ್ಯೆ ಡಾ| ಸವಿತಾ 17 ವಾರಗಳ ಗರ್ಭಿಣಿಯಾಗಿದ್ದಾಗ ರಕ್ತದಲ್ಲಿನ ನಂಜಿನಿಂದಾಗಿ ಮೃತಪಟ್ಟಿದ್ದರು.
ಸವಿತಾಳನ್ನು ಉಳಿಸಿಕೊಳ್ಳಲು ಗರ್ಭಪಾತವೇ ಕೊನೆಯ ಮಾರ್ಗವಾಗಿತ್ತು. ಗರ್ಭಪಾತಕ್ಕೆ ಮನವಿ ಮಾಡಿದರೂ ಐರ್ಲೆಂಡ್ ಕಾನೂನಿನಲ್ಲಿ ಅವಕಾಶ ಇಲ್ಲದ್ದರಿಂದ ವೈದ್ಯರು ಅನುಮತಿ ನೀಡಿರಲಿಲ್ಲ. ಹೀಗಾಗಿ 2012, ಅ.28ರಂದು ಸವಿತಾ ಮೃತಪಟ್ಟಿದ್ದರು. ಅಂದಿನಿಂದ ವಿಶ್ವದಾದ್ಯಂತ ನಡೆದ ತೀವ್ರ ಹೋರಾಟಗಳಿಗೆ ಸರ್ಕಾರ ಮನ್ನಣೆ ಕೊಟ್ಟಿದೆ. ಸವಿತಾಳ ಸಾವಿನ ಬಳಿಕ ಮೂರು ವರ್ಷಗಳ ಕಾಲ ಐರ್ಲೆಂಡ್ನಲ್ಲಿಯೇ ಇದ್ದ ಪತಿ ಪ್ರವೀಣ ಅವರು
ಈಗ ಯುಎಸ್ಎನಲ್ಲಿ ನೆಲೆಸಿದ್ದಾರೆ. ಸವಿತಾ ಸಾವಿನ ನಂತರ ಸಿಡಿದೆದ್ದ ಐರ್ಲೆಂಡ್ ಮಹಿಳೆಯರು ಗರ್ಭಪಾತಕ್ಕೆ ಅವಕಾಶ ನೀಡಬೇಕೆಂದು ದೇಶಾದ್ಯಂತ ಪ್ರತಿಭಟನೆ ನಡೆಸಿದ್ದರು. ಈ ಕೂಗು ಅಂತಾರಾಷ್ಟ್ರೀಯ ಮಟ್ಟದಲ್ಲಿ ಹೋರಾಟ ಚಳವಳಿಗೆ ಕಾರಣವಾಗಿತ್ತು. ಐರ್ಲೆಂಡ್ನ ಧಾರ್ಮಿಕ ನಂಬಿಕೆಯ ಹಿನ್ನೆಲೆಯಲ್ಲಿ ಇದಕ್ಕೆ
ಅವಕಾಶವೇ ಇಲ್ಲ ಎಂದು ವಾದ ಶುರುವಾಯಿತು. ಸತತ ಆರು ವರ್ಷಗಳ ಸುದೀರ್ಘ ಹೋರಾಟದ ಫಲವಾಗಿ ಗರ್ಭಪಾತವನ್ನು ಕಾನೂನು ಬದ್ಧಗೊಳಿಸುವ ಐತಿಹಾಸಿಕ ಮಸೂದೆಗೆ ಅಲ್ಲಿನ ಸಂಸತ್ ಅಂಗೀಕಾರ ನೀಡಿದೆ. ಇದಕ್ಕೆ ನಡೆದ ಜನಮತಗಣನೆಯಲ್ಲಿ ಶೇ.64ರಷ್ಟು ಬೆಂಬಲ ದೊರೆತಿದ್ದು, ಕಾನೂನು ಜಾರಿಗೆ ರಾಷ್ಟ್ರಪತಿಗಳ
ಅಂಕಿತ ಮಾತ್ರ ಬಾಕಿ ಇದೆ.
ಹೆತ್ತವರಲ್ಲಿ ಸಂತಸ: ಸವಿತಾಳ ತಂದೆ 72 ವರ್ಷದ ಅಂದಾನೆಪ್ಪ ಯಾಳಗಿ ನಿವೃತ್ತ ಎಂಜಿನಿಯರ್ ಹಾಗೂ ತಾಯಿ ಅಕ್ಕಮಹಾದೇವಿ ಬೆಳಗಾವಿಯಲ್ಲಿಯೇ ನೆಲೆಸಿದ್ದಾರೆ. ಮಗಳ ಸಾವಿನಿಂದ ನೊಂದಿರುವ ಈ ಹೆತ್ತ ಕರುಳು ಆರು ವರ್ಷವಾದರೂ ಇನ್ನೂ ದು:ಖದಿಂದ ಹೊರ ಬಂದಿಲ್ಲ. ಐರ್ಲೆಂಡ್ನಲ್ಲಿ ಮಸೂದೆ ಪಾಸ್ ಆಗಿದ್ದರಿಂದ ಸಂತಸಗೊಂಡಿರುವ ಪಾಲಕರು, ಕಾನೂನಿಗೆ ಸವಿತಾಳ ನಾಮಕರಣ ಮಾಡುವಂತೆ ಐರ್ಲೆಂಡ್ ಪ್ರಧಾನಿಗೆ ಮನವಿ ಮಾಡಿದ್ದರು. ಗರ್ಭಿಣಿಯರ ಭ್ರೂಣದಲ್ಲಿ ನ್ಯೂನತೆ ಕಂಡು ಬಂದರೆ ಗರ್ಭಪಾತಕ್ಕೆ ಅವಕಾಶ ಸಿಕ್ಕಿದ್ದು ಮಹಿಳಾ ಕುಲಕ್ಕೆ ಜೀವದಾನ ಸಿಕ್ಕಂತಾಗಿದೆ. ಈ ಹಿಂದೆ ಸವಿತಾ ಸೇರಿದಂತೆ ಎಷ್ಟೋ ಹೆಣ್ಣು ಮಕ್ಕಳು ಈ ರಾಕ್ಷಸ ಕಾನೂನಿನಿಂದ ಪ್ರಾಣತ್ಯಾಗ ಮಾಡಿದ್ದಾರೆ. ಹೀಗಾಗಿ ಅಲ್ಲಿಯ ಮಹಿಳೆಯರು ಗರ್ಭಪಾತಕ್ಕೆ ಲಂಡನ್ಗೆ ಹೋಗಬೇಕಾದ ಅನಿವಾರ್ಯತೆ ಇತ್ತು. ಇನ್ನು ಮುಂದೆ ಐರ್ಲೆಂಡ್ನಲ್ಲಿಯೇ ಮಹಿಳೆಯರಿಗೆ ಗರ್ಭಪಾತ ಮಾಡಿಸಿಕೊಳ್ಳುವ ಅವಕಾಶ ನೀಡುವ ನೂತನ ಮಸೂದೆ ಎಲ್ಲರ ಹೋರಾಟದ ಫಲ ಎನ್ನುತ್ತಾರೆ ಸವಿತಾಳ ತಂದೆ ಅಂದಾನಪ್ಪ ಯಾಳಗಿ.
ಮಗಳು ಸವಿತಾಳ ಸಾವಿಗೆ ಇಡೀ ಜಗತ್ತೇ ಮರುಗಿದೆ. ಆರು ವರ್ಷಗಳ ಬಳಿಕ ಗರ್ಭಪಾತಕ್ಕೆ ಅವಕಾಶ ಮಾಡಿಕೊಟ್ಟಿರುವ ಐರ್ಲೆಂಡ್ ಸಂಸತ್ಗೆ ಕೃತಜ್ಞತೆ ಸಲ್ಲಿಸುತ್ತೇನೆ. ಸವಿತಾಳ ಸಾವಿನಿಂದಾಗಿ ಎಚ್ಚೆತ್ತುಕೊಂಡು ಧಾರ್ಮಿಕ ಕಟ್ಟುಪಾಡಿನಿಂದ ಹೊರಬಂದು ಮಸೂದೆ ಪಾಸ್ ಮಾಡಿದ್ದು ಖುಷಿಯಾಗಿದೆ. ಐತಿಹಾಸಿಕ ಮಸೂದೆಯಾಗಿದ್ದರಿಂದ ಇದಕ್ಕೆ ಸವಿತಾಳ ಹೆಸರಿಟ್ಟು ಆಕೆಯ ಆತ್ಮಕ್ಕೆ ಶಾಂತಿ ದೊರಕಿಸಬೇಕು.
ಅಂದಾನೆಪ್ಪ ಯಾಳಗಿ, ಸವಿತಾಳ ತಂದೆ
ಭೈರೋಬಾ ಕಾಂಬಳೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Indi ಲಚ್ಯಾಣ ಮಹಾರಥೋತ್ಸವದಲ್ಲಿ ಅವಘಡ: ರಥದ ಗಾಲಿಗೆ ಸಿಲುಕಿ ಇಬ್ಬರು ಮೃತ್ಯು
China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ
ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ
Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ
MUST WATCH
ಹೊಸ ಸೇರ್ಪಡೆ
Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ
Sirsi ; ಪ್ರಧಾನಿ ಮುಡಿಗೇರಿದ ಬೇಡರ ವೇಷದ ಕಿರೀಟ!
Strike rate; ಜನರು ಏನು ಬೇಕಾದರೂ ಮಾತನಾಡಬಹುದು.. : ವಿರಾಟ್ ಕೊಹ್ಲಿ
Gujarat ಕರಾವಳಿಯಲ್ಲಿ ಪಾಕ್ ಬೋಟ್ ನಿಂದ 600 ಕೋಟಿ ಮೌಲ್ಯದ ಹೆರಾಯಿನ್ ವಶ
Mangaluru Airport; ಗುದನಾಳದಲ್ಲಿ ಬಚ್ಚಿಟ್ಟ 54 ಲಕ್ಷ ರೂ. ಮೌಲ್ಯದ ಅಕ್ರಮ ಚಿನ್ನ ಪತ್ತೆ !