ಬಸ್ಕಿ ಹೊಡೆಸಿದ ಶಿಕ್ಷಕಿ ವಿರುದ್ಧ ದೂರು
Team Udayavani, Dec 16, 2018, 9:31 AM IST
ಶಿವಮೊಗ್ಗ: ತಮ್ಮ ಮಗ ಗಲಾಟೆ ಮಾಡುತ್ತಿದ್ದ ಎಂಬ ಕಾರಣಕ್ಕೆ ಶಿಕ್ಷಕಿಯೊಬ್ಬರು 100 ಬಸ್ಕಿ ಹೊಡೆಸಿದ್ದಲ್ಲದೆ,
ಬೆನ್ನಿನ ಮೇಲೆ ಗುದ್ದಿದ್ದಾರೆ. ದೂರು ದಾಖಲಿಸಿಕೊಳ್ಳಲು ಪೊಲೀಸರು ವಿಳಂಬ ಮಾಡುತ್ತಿದ್ದಾರೆಂದು ಆರೋಪಿಸಿ ಪೋಷಕರು ಶನಿವಾರ ಜಯನಗರ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.
ಜೆ.ಎಚ್.ಪಟೇಲ್ ಬಡಾವಣೆಯ ಸಂಜೀವ್ ಹಾಗೂ ಸಂಗೀತಾ ದಂಪತಿ ಪುತ್ರ, ನಗರದ ದುರ್ಗಿಗುಡಿ ಸರಕಾರಿ
ಶಾಲೆಯಲ್ಲಿ 3ನೇ ತರಗತಿ ಓದುತ್ತಿದ್ದಾನೆ. ಶಿಕ್ಷಕಿ ಕನ್ಯಾಕುಮಾರಿ ಎಂಬುವರು ಈತ ಗಲಾಟೆ ಮಾಡುತ್ತಿದ್ದ ಎಂಬ ಕಾರಣಕ್ಕೆ 100 ಬಸ್ಕಿ ಹೊಡೆಸಿ, ಶಿಕ್ಷೆಯ ರೂಪದಲ್ಲಿ ಬೆನ್ನಿನ ಮೇಲೆ ಗುದ್ದಿದ್ದಾರೆ. ಇದರಿಂದ ಏಳಲು, ಕೂರಲು, ಬಗ್ಗಲು ಆತನಿಗೆ ಕಷ್ಟವಾಗಿದ್ದು, ಖಾಸಗಿ ಹಾಗೂ ಸರಕಾರಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಿದ್ದಾರೆ.
ಈಗ ಆತ ಮನೆಯಲ್ಲಿ ವಿಶ್ರಾಂತಿ ಪಡೆಯುತ್ತಿದ್ದಾನೆ. ಈ ಮಧ್ಯೆ, ಶಿಕ್ಷಕಿ ವಿರುದ್ಧ ದೂರು ದಾಖಲಿಸಲು ಶುಕ್ರವಾರ ಜಯನಗರ ಪೊಲೀಸ್ ಠಾಣೆಗೆ ತೆರಳಿದ್ದ ಪೋಷಕರಿಗೆ ಪೊಲೀಸರು ನಾಳೆ ಬರುವಂತೆ ಹೇಳಿ ಕಳುಹಿಸಿದ್ದರು. ಶನಿವಾರ ದೂರು ನೀಡಲು ಬಂದ ಪೋಷಕರ ಬಳಿ ಪೊಲೀಸರು ಕೋರ್ಟ್ ಅನುಮತಿ ಪತ್ರ ನೀಡುವಂತೆ ಕೇಳಿದರು. ಇದರಿಂದ ಆಕ್ರೋಶಗೊಂಡ ಸಂಜೀವ್ ದಂಪತಿ, ಠಾಣೆ ಎದುರುಶನಿವಾರ ಪ್ರತಿಭಟನೆಗಿಳಿದರು. ಮಾಹಿತಿ ತಿಳಿದು ಸ್ಥಳಕ್ಕೆ ಆಗಮಿಸಿದ ಹಿರಿಯ ಪೊಲೀಸ್ ಅಧಿಕಾರಿಗಳು ಹಾಗೂ ಮಕ್ಕಳ ಹಕ್ಕು ರಕಣಾ ಸಮಿತಿ ಅಧ್ಯಕ್ಷೆ ರೇಖಾ ಜಿ.ಎಂ ಸೂಚನೆ ಮೇರೆಗೆ ಜಯನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ. ಬಳಿಕ, ಸಂಜೀವ್ ದಂಪತಿ
ಪ್ರತಿಭಟನೆ ಅಂತ್ಯಗೊಳಿಸಿದ್ದು, ಶಿಕ್ಷೆ ವಿಧಿಸಿದ ಶಿಕಕಿ ವಿರುದ್ಧ ಕ್ರಮಕ್ಕೆ ಒತ್ತಾಯಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
Temperature; ಮುಂದಿನ 5 ದಿನ ಅರ್ಧ ರಾಜ್ಯಕ್ಕೆ ಉಷ್ಣ ಅಲೆ ಮುನ್ನೆಚ್ಚರಿಕೆ
MUST WATCH
ಹೊಸ ಸೇರ್ಪಡೆ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ
Tragedy: ಛತ್ತೀಸ್ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ