ಕೋಟೆ ಪುರಸಭೆ ಗದ್ದುಗೆಗೆ ಪೈಪೋಟಿ


Team Udayavani, Dec 16, 2018, 11:21 AM IST

m4-kote.jpg

ಎಚ್‌.ಡಿ.ಕೋಟೆ: ಕಳೆದ 3 ತಿಂಗಳ ಹಿಂದೆ ಎಚ್‌.ಡಿ.ಕೋಟೆ ಪುರಸಭೆ ಚುನಾವಣೆ ನಡೆದು 23 ಸದಸ್ಯರು ಆಯ್ಕೆಯಾಗಿದ್ದರೂ ಮೀಸಲಾತಿ ಗೊಂದಲದಿಂದ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನೆನಗುದಿಗೆ ಬಿದ್ದಿತ್ತು. ಇದೀಗ ಸರ್ಕಾರದ ಸೂಚನೆಯಂತೆಯೇ ಮೀಸಲಾತಿಗೆ ಹೈಕೋರ್ಟ್‌ ಸಮ್ಮತಿ ನೀಡಿರುವುದರಿಂದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ.

ಪುರಸಭೆಯಲ್ಲಿ ಸ್ಪಷ್ಟ ಬಹುಮತ ಹೊಂದಿರುವ ಕಾಂಗ್ರೆಸ್‌ ಸದಸ್ಯರು ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಭರ್ಜರಿ ಕಸರತ್ತು ನಡೆಸುತ್ತಿದ್ದಾರೆ. ಸರ್ಕಾರ ನಿಗದಿಪಡಿಸಿದ್ದ ಅಧ್ಯಕ್ಷ, ಉಪಾಧ್ಯಕ್ಷ ಪಟ್ಟಿಗೆ ಹೈಕೋರ್ಟ್‌ ತಡೆಯಾಜ್ಞೆ ನೀಡಿದ್ದರಿಂದ ಆಯ್ಕೆ ನಡೆದಿರಲಿಲ್ಲ.

ಕಳೆದ 5 ದಿನಗಳ ಹಿಂದಷ್ಟೆ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ ತೆರವಾಗಿದ್ದು, ಸೆ.3 ರಂದು ಸರ್ಕಾರ ಹೊರಡಿಸಿದ್ದ ಮಿಸಲಾತಿ ಅನ್ವಯ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ನಡೆಸಲು ಸೂಚಿಸಿದೆ. ಅಧ್ಯಕ್ಷ, ಉಪಾಧ್ಯಕ್ಷ ಗಾದಿಗೆರಲು ಚುನಾವಣೆ ದಿನಾಂಕ ಘೋಷಣೆಗೂ ಮುನ್ನವೇ ತೆರೆಮರೆಯಲ್ಲಿ ಕಸರತ್ತು ಜೋರಾಗಿ ನಡೆಯುತ್ತಿದೆ.

ಕಳೆದ 2 ವರ್ಷಗಳ ಹಿಂದೆ ಕ್ಷೇತ್ರದ ಸಂಸದರು ಹಾಗೂ ಅಂದಿನ ಶಾಸಕರಾಗಿದ್ದ ಎಸ್‌.ಚಿಕ್ಕಮಾದು ಪರಿಶ್ರಮದ ಫಲವಾಗಿ ಪಟ್ಟಣ ಪಂಚಾಯಿತಿಯನ್ನು ಸರ್ಕಾರ 2 ಪುರಸಭೆಯನ್ನಾಗಿ ಮೇಲ್ದರ್ಜೆಗೆರಿಸಿತ್ತು. ಪುರಸಭೆಗೆ ಪಟ್ಟಣದ 3 ಕಿ.ಮೀ ವ್ಯಾಪ್ತಿಯ 10ಕ್ಕೂ ಹೆಚ್ಚು ಗ್ರಾಮಗಳು ಸೇರಿದ್ದರಿಂದ ಹೊಸದಾಗಿ ವಾರ್ಡ್‌ ಪುನರ್‌ ರಚನೆಯಾಗಿ ಹಿಂದೆ ಇದ್ದ 13 ವಾರ್ಡ್‌ಗಳ ಬದಲು 23 ವಾರ್ಡ್‌ಗಳಾಗಿದ್ದವು. 

ಮೀಸಲಾತಿ ಗೊಂದಲ: ಕಳೆದ ಆಗಸ್ಟ್‌ 29 ರಂದು ಪುರಸಭೆಗೆ ಚುನಾವಣೆ ನಡೆದಿತ್ತು. ಸರ್ಕಾರ ಸೆ.3 ರಂದು ನೂತನ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಮಿಸಲಾತಿ ಪಟ್ಟಿಯನ್ನು ಪ್ರಕಟಿಸಿತ್ತು. ಬಳಿಕ ಆದ ಬದಲಾವಣೆಯಲ್ಲಿ ಸರ್ಕಾರ ಮತ್ತೆ ಸೆ.6 ರಂದು ಮೊದಲು ಹೊರಡಿಸಿದ್ದ ಮಿಸಲಾತಿ ಪಟ್ಟಿಯಲ್ಲಿ 40 ಸ್ಥಳೀಯ ಸಂಸ್ಥೆಗಳ ಮಿಸಲಾತಿಯನ್ನು ಅದಲು ಬದಲು ಮಾಡಿ ಅಧಿಸೂಚನೆ ಹೊರಡಿಸಿತ್ತು.

ಸರ್ಕಾರ ಮೊದಲು ಹೊರಡಿಸಿದ್ದ ಮಿಸಲಾತಿ ಪಟ್ಟಿಯನ್ನು ತಿದ್ದುಪಡಿ ಮಾಡಿ ಮಿಸಲಾತಿಯನ್ನು ಬದಲಿಸಿದ ಕೆಲ ಸ್ಥಳೀಯ ಸಂಸ್ಥೆಗಳ ಸದಸ್ಯರು ನ್ಯಾಯಾಲಯದ ಮೊರೆ ಹೋದ ಪರಿಣಾಮ ಸರ್ಕಾರ ತಿದ್ದುಪಡಿ ಮಾಡಿ ಎರಡನೇ ಬಾರಿ ಹೊರಡಿಸಿದ್ದ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ಪಟ್ಟಿಗೆ ತಡೆಯಾಜ್ಞೆ ನೀಡಿತ್ತು. ಇದರಿಂದಾಗಿ ಕಳೆದ 3 ತಿಂಗಳ ಹಿಂದೆ ಪುರಸಭೆಗೆ ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆ ನೆನಗುದಿಗೆ ಬಿದ್ದತ್ತು.

ಗರಿಗೆದರಿದ ರಾಜಕೀಯ: ಮೀಸಲಾತಿ ಅನ್ವಯ ಎಚ್‌.ಡಿ.ಕೋಟೆ ಪುರಸಭೆ ಅಧ್ಯಕ್ಷ ಸ್ಥಾನವು ಪರಿಶಿಷ್ಟ ಜಾತಿ, ಉಪಾಧ್ಯಕ್ಷ ಸ್ಥಾನವು ಸಾಮಾನ್ಯ ವರ್ಗಕ್ಕೆ ನಿಗದಿಯಾಗಿದ್ದು, ಅಧ್ಯಕ್ಷ, ಉಪಾಧ್ಯಕ್ಷರ ಆಯ್ಕೆಗೆ ಇನ್ನೂ ದಿನಾಂಕ ಘೋಷಣೆ ಆಗದಿದ್ದರೂ ಕಳೆದೆರಡು ದಿನಗಳಿಂದ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. 23 ಸದಸ್ಯ ಬಲದ ಪುರಸಭೆಗೆ 11 ಕಾಂಗ್ರೆಸ್‌ ಸದಸ್ಯರು ಆಯ್ಕೆಯಾಗಿದ್ದು, ಸ್ಪಷ್ಟ ಬಹುಮತ ಹೊಂದಿದೆ. ಸ್ವ-ಪಕ್ಷದಲ್ಲೇ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಕ್ಕೆ ಆಕಾಂಕ್ಷಿಗಳ ಸಂಖ್ಯೆ ಹೆಚ್ಚಿದ್ದು, ಪಕ್ಷದ ವರಿಷ್ಠರಿಗೆ ತಲೆನೋವಾಗಿ ಪರಿಣಮಿಸಿದೆ. 

ಅನುದಾನ ಸಿಗದೆ ಅಭಿವೃದ್ಧಿ ಕುಂಠಿತ: ಸುಮಾರು ನಾಲ್ಕು ತಿಂಗಳ ಕಳೆದರೂ ಪುರಸಭೆಯಲ್ಲಿ ನೂತನ ಅಧ್ಯಕ್ಷ, ಉಪಾಧ್ಯಕ್ಷರನ್ನೊಳಗೊಂಡ ಆಡಳಿತ ಮಂಡಳಿ ಅಸ್ತಿತ್ವಕ್ಕೆ ಬಾರದೆ, ವಾರ್ಡ್‌ಗಳ ಅಭಿವೃದ್ಧಿಗೂ ಅನುದಾನ ಸಿಗದೇ ನೂತನ ಸದಸ್ಯರು ಪರಿತಪಿಸುತ್ತಿದ್ದರು.

ಸಾರ್ವಜನಿಕರು ಕೂಡ ಮೂಲಭೂತ ಸೌಲಭ್ಯಕ್ಕಾಗಿ ಪರದಾಡುವಂತಾಗಿತ್ತು. ಈಗ ಕೊನೆಗೂ ನ್ಯಾಯಾಲಯ ನೀಡಿದ್ದ ತಡೆಯಾಜ್ಞೆ ತೆರವಾಗಿದ್ದು, ಸದಸ್ಯರಲ್ಲಿ ಸಂತಸ ಮೂಡಿದೆ. ನಗರಾಭಿವೃದ್ಧಿ ಇಲಾಖೆ ಕಾರ್ಯದರ್ಶಿಗಳು ದಿನಾಂಕ ನಿಗದಿಪಡಿಸಿ ಜಿಲ್ಲಾಧಿಕಾರಿಗೆ ನೂತನ ಅಧ್ಯಕ್ಷ, ಉಪಾಧ್ಯಕ್ಷ ಗಾದಿಗೆ ಚುನಾವಣೆ ನಡೆಸಲು ಸೂಚಿಸದಲ್ಲಿ, ಇಲ್ಲಿನ ಪುರಸಭೆ ಆಡಳಿತಾಧಿಕಾರಿಗಳಾಗಿರುವ ಉಪವಿಭಾಗಾಕಾರಿಗಳು ಚುನಾವಣೆ ನಡೆಸಲಿದ್ದಾರೆ.

* ಬಿ.ನಿಂಗಣ್ಣ ಕೋಟೆ

ಟಾಪ್ ನ್ಯೂಸ್

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-hunsur

Hunsur: ಕುಡಿತದ ಚಟಕ್ಕೆ ಯುವಕ ಬಲಿ

14

Hunsur: ಅಪರಿಚಿತ ವಾಹನ ಡಿಕ್ಕಿಯಾಗಿ ಪಾದಚಾರಿ ಸಾವು

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

BJP ಅಧಿಕಾರಕ್ಕೆ ಬಂದರೆ ಸ್ತ್ರೀಯರು ಅನಾಥರಾದಾರು: ಯತೀಂದ್ರ ಸಿದ್ದರಾಮಯ್ಯ

1-aaweewq

Nagarahole; ಹುಲಿ ಶವ ಪತ್ತೆ: ದುಷ್ಕರ್ಮಿಗಳ ಕೃತ್ಯಕ್ಕೆ ತಿಂಗಳೊಳಗೆ 3 ಕಾಡುಕೋಣ ಬಲಿ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

Congress ನಾಯಕರಿಗೆ ಚೊಂಬೇ ಗತಿ: ಬಿ.ವೈ.ವಿಜಯೇಂದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.