ಆಂಬ್ಯುಲೆನ್ಸ್ ಸೇವೆಗೆ ಸಿಕ್ತು ಕಾಯಕಲ್ಪ 


Team Udayavani, Dec 16, 2018, 3:52 PM IST

16-december-17.gif

ಹಾವೇರಿ: ನೂರೆಂಟು ಸಮಸ್ಯೆಗಳ ನಡುವೆ ತೊಳಲಾಡುತ್ತಿದ್ದ ಜಿಲ್ಲೆಯ ‘108’ ಆಂಬ್ಯುಲೆನ್ಸ್‌ ವಾಹನಗಳಿಗೆ ಬಹುದಿನಗಳ ಬಳಿಕ ಕಾಯಕಲ್ಪ ದೊರಕಿದ್ದು, ಈಗ ಆಂಬ್ಯುಲೆನ್ಸ್‌ ವಾಹನಗಳು ಆರೋಗ್ಯಸೇವೆ ಮುಂದುವರಿಸಿವೆ. ಕಳೆದ ಆರೇಳು ತಿಂಗಳುಗಳಿಂದ ಜಿಲ್ಲೆಯಲ್ಲಿ ಆ್ಯಂಬುಲೆನ್ಸ್‌ಗಳು ಸೇವೆಗೆ ಸಿಗುತ್ತಿಲ್ಲ. ವಾಹನಗಳು ಸೇವೆ ನೀಡುವುದಕ್ಕಿಂತ ಹೆಚ್ಚು ದಿನ ದುರಸ್ತಿಗಾಗಿ ಗ್ಯಾರೇಜ್‌ಗಳಲ್ಲಿಯೇ ನಿಲ್ಲುತ್ತಿವೆ ಎಂಬ ಆರೋಪ ವ್ಯಾಪಕವಾಗಿ ಕೇಳಿಬಂದಿತ್ತು. ಅನೇಕ ಕಡೆಗಳಲ್ಲಿ ಸಕಾಲಕ್ಕೆ ಆಂಬ್ಯುಲೆನ್ಸ್‌ ಬಾರದೆ ಇರುವುದನ್ನು ಖಂಡಿಸಿ ಪ್ರತಿಭಟನೆಯೂ ನಡೆದಿತ್ತು. ಇದನ್ನು ಗಂಭೀರವಾಗಿ ಪರಿಗಣಿಸಿದ ಆ್ಯಂಬುಲೆನ್ಸ್‌ ನಿರ್ವಹಣಾ ಕಂಪನಿ, ಕಳೆದ ತಿಂಗಳಷ್ಟೇ ಜಿಲ್ಲೆಗೆ ಆರು ಹೊಸ ಆಂಬ್ಯುಲೆನ್ಸ್‌ಗಳನ್ನು ನೀಡಿದೆ.

ಆಂಬ್ಯುಲೆನ್ಸ್‌ ನಿರ್ವಹಣಾ ವಿಭಾಗದ ಮಾಹಿತಿ ಪ್ರಕಾರ ಜಿಲ್ಲೆಯಲ್ಲಿ ಒಟ್ಟು 20 ಆಂಬ್ಯುಲೆನ್ಸ್‌ ವಾಹನಗಳ ಜತೆಗೆ ಎರಡು ಹೆಚ್ಚುವರಿ ಆಂಬ್ಯುಲೆನ್ಸ್‌ ವಾಹನ ವ್ಯವಸ್ಥೆ ಹೊಂದಲಾಗಿದೆ. ಹಾವೇರಿಯಲ್ಲಿ ನಾಲ್ಕು, ರಾಣಿಬೆನ್ನೂರಿನಲ್ಲಿ ಮೂರು, ಬ್ಯಾಡಗಿಯಲ್ಲಿ ಒಂದು, ಸವಣೂರಿನಲ್ಲಿ ಎರಡು, ಶಿಗ್ಗಾವಿಯಲ್ಲಿ ಮೂರು, ಹಿರೇಕೆರೂರಿನಲ್ಲಿ ನಾಲ್ಕು, ಹಾನಗಲ್ಲನಲ್ಲಿ ಮೂರು ವಾಹನಗಳು ಕಾರ್ಯನಿರ್ವಹಿಸುತ್ತಿವೆ.

ಹೊಸ ವಾಹನಗಳು: ಒಟ್ಟು 22 ವಾಹನಗಳಲ್ಲಿ ಈಗ ಆರು ವಾಹನಗಳು ಹೊಸ ವಾಹನಗಳಾಗಿದ್ದು ಈ ಹೊಸ ವಾಹನಗಳು ಗುತ್ತಲ, ಬಂಕಾಪುರ, ಹಾವೇರಿ, ಕುಪ್ಪೇಲೂರು, ಹಾನಗಲ್ಲ, ಬ್ಯಾಡಗಿ ತಾಲೂಕುಗಳಲ್ಲಿ ಸೇವೆ ನೀಡುತ್ತಿವೆ. ಉಳಿದ ಕಡೆಗಳಲ್ಲಿ 2014ನೇ ಮಾಡೆಲ್‌ನ ವಾಹನಗಳು ಆರೋಗ್ಯ ಸೇವೆ ನೀಡುತ್ತಿವೆ. ಆಂಬ್ಯುಲೆನ್ಸ್‌ ವಾಹನಗಳಲ್ಲಿ ಹವಾನಿಯಂತ್ರಣ ವ್ಯವಸ್ಥೆ, ಆಕ್ಸಿಜನ್‌, ಹೆರಿಗೆ ಕಿಟ್‌, ಪ್ರಥಮ ಚಿಕಿತ್ಸೆಯ ಎಲ್ಲ ಸಲಕರಣೆ ಹಾಗೂ ಔಷಧಿಗಳನ್ನು ಹೊಂದಿದ್ದು ಕೆಲವು ವಾಹನಗಳಲ್ಲಿ ಹಾಳಾಗಿದ್ದ ಸಲಕರಣೆಗಳನ್ನೆಲ್ಲ ಸರಿಪಡಿಸಿ ಈಗ ಎಲ್ಲ ವಾಹನಗಳನ್ನು ಸಮರ್ಪಕ ಆರೋಗ್ಯ ಸೇವೆಗೆ ಸಜ್ಜುಗೊಳಿಸಲಾಗಿದೆ. ಆದರೆ, ವಾಹನದ ದುರಸ್ತಿ, ಉಪಕರಣಗಳ ದುರಸ್ತಿ ವಿಚಾರ ಬಂದಾಗ ಏಜೆನ್ಸಿಯವರು ತಕ್ಷಣ ಸರಿಪಡಿಸಿ ವಾಹನವನ್ನು ಸೇವೆ ಬಿಡುವ ವ್ಯವಸ್ಥೆ ಮಾಡಬೇಕು ಎಂಬುದು ನಾಗರಿಕರ ಅಪೇಕ್ಷೆಯಾಗಿದೆ. ಒಟ್ಟಾರೆ ಕೆಲ ತಿಂಗಳು ಸರಿಯಾದ ನಿರ್ವಹಣೆ ಇಲ್ಲದೇ ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದ್ದ ಆಂಬ್ಯುಲೆನ್ಸ್‌ ವಾಹನಗಳು ಈಗಲಾದರೂ ಜನರಿಗೆ ಸಕಾಲಕ್ಕೆ ಆರೋಗ್ಯ ಸೇವೆ ನೀಡಲು ಮುಂದಾಗಿರುವುದು ಸಮಾಧಾನಕರ ಸಂಗತಿ.

ಜಿಲ್ಲೆಯಲ್ಲಿ 20 ಆಂಬ್ಯುಲೆನ್ಸ್‌ಗಳು ಕಾರ್ಯನಿರ್ವಹಿಸುತ್ತಿವೆ. ಹೆಚ್ಚುವರಿಯಾಗಿ ಎರಡು ಆಂಬ್ಯುಲೆನ್ಸ್‌ಗಳು ಇವೆ. ಇವುಗಳಲ್ಲಿ ಆರು ವಾಹನಗಳು ಹೊಸದಾಗಿದ್ದು ಒಂದು ತಿಂಗಳ ಹಿಂದಷ್ಟೇ ಬಂದಿವೆ. ಇನ್ನೂ ಎರಡು ವಾಹನಗಳು ಬರಲಿವೆ. ಹಳೆಯ ವಾಹನಗಳಿಗೆ ಕಾಲಕಾಲಕ್ಕೆ ಬೇಕಾದ ಅಗತ್ಯ ದುರಸ್ತಿ ಮಾಡಿ ಸೇವೆ ನೀಡಲಾಗುತ್ತಿದೆ.
 ಗಿರೀಶ ಆರ್‌.ಬಿ. ,
ಜಿಲ್ಲಾ ವ್ಯವಸ್ಥಾಪಕರು, ಜಿವಿಕೆ ಕಂಪನಿ

ಎಚ್‌.ಕೆ. ನಟರಾಜ

ಟಾಪ್ ನ್ಯೂಸ್

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

ಕಾಂಗ್ರೆಸ್‌ಗೆ ಶಾಕ್: ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಕ್ಷಯ್ ಕಾಂತಿ ಬಾಮ್

ಕಾಂಗ್ರೆಸ್‌ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ಹಾವೇರಿ: ಕಾಂಗ್ರೆಸ್‌ ಗ್ಯಾರಂಟಿಗೆ ಬೆಲೆ ಇಲ್ಲ- ಬಸವರಾಜ ಬೊಮ್ಮಾಯಿ

ರಾಣಿಬೆನ್ನೂರ: ಸನ್ಮಾರ್ಗ ತೋರುತ್ತಿವೆ ಮಠ-ಮಾನ್ಯಗಳು: ಹರಳಯ್ಯ ಶ್ರೀ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

ಬಿಗ್‌ಬಾಸ್‌ ವಿನ್ನರ್‌ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ, ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.