ಡೊಂಬಿವಲಿ ಮಹಾನಗರ ಕನ್ನಡ ಸಂಘದಿಂದ ಕರ್ನಾಟಕ ರಾಜ್ಯೋತ್ಸವ 


Team Udayavani, Dec 16, 2018, 5:02 PM IST

2adsa.jpg

ಡೊಂಬಿವಲಿ: ಭಾಷಾ ವಾರು ಪ್ರಾಂತ್ಯಗಳಾಗಿ ಹರಿದು ಹಂಚಿಹೋಗಿದ್ದ ಕನ್ನಡ ನಾಡನ್ನು ಒಂದುಗೂಡಿಸಿದ ಕನ್ನಡದ ಕಟ್ಟಾಳುಗಳ ತ್ಯಾಗ, ಬಲಿದಾನವನ್ನು ಮರೆಯಬಾರದು ಎಂದು ಉದ್ಯಮಿ ಗುರುರಾಜ ಅಗ್ನಿಹೋತ್ರಿ ನುಡಿದರು.

ಡಿ. 8ರಂದು ಡೊಂಬಿವಲಿ ಪೂರ್ವದ ಶ್ರೀ ಗಣೇಶ ಮಂದಿರದ ವಕ್ರತುಂಡ ಸಭಾಗೃಹದಲ್ಲಿ ಸ್ಥಳೀಯ ಡೊಂಬಿವಲಿ ಮಹಾನಗರ ಕನ್ನಡ ಸಂಸ್ಥೆಯ ವತಿಯಿಂದ ನಡೆದ ಕರ್ನಾಟಕ ರಾಜ್ಯೋತ್ಸವ ಸಮಾರಂಭ ದಲ್ಲಿ ಮುಖ್ಯ ಅತಿಥಿಯಾಗಿ ಉಪಸ್ಥಿತ

ರಿದ್ದು ಮಾತನಾಡಿ, ಅಂದು ಕರ್ನಾ ಟಕದ ಏಕೀಕರಣಕ್ಕೆ ಧಾರವಾಡವೇ ವೇದಿಕೆಯಾದರೆ, ರಾ. ಹೆ. ದೇಶಪಾಂಡೆ, ಆಲೂರು ವೆಂಕಟರಾಯರು, ದ. ರಾ. ಬೇಂದ್ರೆ ಮತ್ತಿತರರು ಮುಂದಾಳತ್ವ ವಹಿಸಿದ್ದು, ಕರ್ನಾಟಕದಲ್ಲಿ ಕನ್ನಡ ಆಡಳಿತ ಭಾಷೆಯಾಗಲು ಗೋಕಾಕ ಚಳುವಳಿ ಹಾಗೂ ವರನಟ ಡಾ| ರಾಜ್‌ಕುಮಾರ್‌ ಅವರಂಥಹ ಮಹನೀಯರೆ ಕಾರಣ. ಹೊರ ನಾಡಿನಲ್ಲಿ 

ಕನ್ನಡ ಉಳಿದು ಬೆಳೆಯಲು ಸಮಸ್ತ ಕನ್ನಡದ ಮನಸು ಗಳು ಒಂದಾಗಬೇಕು. ಒಂದು ದಶಕದ ಮಹಾನಗರ ಕನ್ನಡ ಸಂಸ್ಥೆ ಶತಾಯುಷಿಯಾಗಲಿ ಎಂದರು.

ಇನ್ನೋರ್ವ ಅತಿಥಿ ಧಾರವಾಡದ ಖ್ಯಾತ ಉದ್ಯಮಿ ಶಿವಣ್ಣ ಬೆಲ್ಲದ ಅವರು ಕನ್ನಡದ ನಾಡು-ನುಡಿಯ ರಕ್ಷಣೆಗಾಗಿ ಕರ್ನಾಟಕ ವಿದ್ಯಾವರ್ಧಕ ಸಂಘದ ಕೊಡುಗೆಯನ್ನು ವಿವರಿಸಿ, ನಾವು ಪ್ರಾದೇಶಿಕ ಭಾಷೆಗಳಿಗೆ ಹೆಚ್ಚಿನ ಪ್ರಾಶಸ್ತ¤Â ನೀಡಿ ಇಂಗ್ಲಿಷ್‌ ಭಾಷೆಯನ್ನು ಐಚ್ಛಿಕಾ ಭಾಷೆಯನ್ನಾಗಿಕೊಳ್ಳಬೇಕು ಎಂದು ನುಡಿದರು.

ಸಮಾರಂಭದ ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಅಧ್ಯಕ್ಷ ಸುರೇಂದ್ರ ಕುಬೇರ ಅವರು ಮಾತನಾಡಿ, ಇಂದಿನ ದಿನಗಳಲ್ಲಿ ಸಂಘ- ಸಂಸ್ಥೆಗಳನ್ನು ನಡೆ ಸುವುದು ಸುಲಭದ ಮಾತಲ್ಲ. ನಮ್ಮ ಸಿರಿವಂತ ಕನ್ನಡ ಭಾಷೆ, ಸಂಸ್ಕೃತಿ ಹಾಗೂ ಕಲೆ ಉಳಿದು- ಬೆಳೆಯಬೇಕಾದರೆ ಅದನ್ನು ನಮ್ಮ ಮುಂದಿನ ಪೀಳಿಗೆಯ ಮನದಲ್ಲಿ ಬಿಂಬಿಸಬೇಕು. ಕನ್ನಡದ ಕೈಂಕರ್ಯಗಳಿಗೆ ಸಂಘ-ಸಂಸ್ಥೆಗಳು ಮುಂದೆ ಬರಬೇಕು. ನಮ್ಮ ಸಿರಿವಂತ ಕನ್ನಡ ಭಾಷೆಯನ್ನು ಗೌರವಿಸು ವುದರ ಜತೆಗೆ ಇತರ ಭಾಷೆಗಳನ್ನು ಗೌರವಿಸಬೇಕು ಎಂದು ಕರೆ ನೀಡಿದರು.

ಸಂಸ್ಥೆಯ ಕಾರ್ಯಾಧ್ಯಕ್ಷ  ಸತೀಶ್‌ ಆಲಗೂರು ಅವರು ಸ್ವಾಗತಿಸಿ, ಪ್ರಾಸ್ತಾವಿಕವಾಗಿ ಮಾತನಾಡಿ, ಕನ್ನಡ ನಾಡುನುಡಿಯ ರಕ್ಷಣೆಗೆ ನಮ್ಮ ಸಂಸ್ಥೆ ಬದ್ಧವಾಗಿದ್ದು, ಸಂಸ್ಥೆಯ ಅಭಿವೃದ್ಧಿಗೆ ಸಮಸ್ತ ಕನ್ನಡ ಮನಸುಗಳು ಸಹಕರಿಸ ಬೇಕು ಎಂದರು.

ಗೌರವ ಪ್ರಧಾನ ಕಾರ್ಯದರ್ಶಿ ಡಾ| ಬಿ. ಆರ್‌. ದೇಶಪಾಂಡೆ ಅವರು ಸಂಸ್ಥೆಯ ಸಿದ್ಧಿ-ಸಾಧನೆಗಳನ್ನು ವಿವ ರಿಸಿದರು. 

ಇದೇ ಸಂದರ್ಭದಲ್ಲಿ ಸಾಹಿತ್ಯ ಮತ್ತು ಸಾಮಾಜಿಕ ಕ್ಷೇತ್ರಗಳಲ್ಲಿ ಗಮ ನೀಯ ಸಾಧನೆಗೈದ ಡಾ| ಸುಮಾ ದ್ವಾರಕಾನಾಥ್‌ ಮತ್ತು ವೈದ್ಯಕೀಯ ಕ್ಷೇತ್ರದ ಸಾಧಕ ಡಾ| ಗಜಾನನ ಕುಲಕರ್ಣಿ ಅವರನ್ನು ಸಂಸ್ಥೆಯ ವಾರ್ಷಿಕ ಶ್ರೀ ಪ್ರಶಸ್ತಿಯನ್ನು ಪ್ರದಾನಿಸಿ ಗೌರವಿಸಲಾಯಿತು.  ಪ್ರತಿಭಾವಂತ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಕು| ಹುಯಿಲಗೋಳ ನೇಹಾ ಹೆಗಡೆ ಅವರಿಂದ ಭರತನಾಟ್ಯ ಪ್ರದರ್ಶನಗೊಂಡಿತು. ರಾಘವೇಂದ್ರ ಕುಲಕರ್ಣಿ, ಗೌರಿ ಹುಯಿಲಗೋಳ, ಶೀತಲ್‌ ಹುಯಿಲಗೋಳ ಅವರಿಂದ ಗಾಯನ ನಡೆಯಿತು. ವೇದಿಕೆಯಲ್ಲಿ ಸಂಸ್ಥೆಯ ಪದಾಧಿಕಾರಿಗಳಾದ ಸುರೇಂದ್ರ ಕುಬೇರ  ಉಪಸ್ಥಿತರಿದ್ದರು.
ಶ್ರೀಧರ ಹುಯಿಲಗೋಳ, ವೆಂಕಟೇಶ ಕುಲಕರ್ಣಿ, ಎಸ್‌. ಜಿ. ಮಸಳಿ ಅತಿಥಿಗಳನ್ನು ಪರಿಚಯಿಸಿದರು. ವಾಸಂತಿ ದೇಶಪಾಂಡೆ ಕಾರ್ಯಕ್ರಮ ನಿರ್ವಹಿಸಿದರು. ಪ್ರೊ| ಅಜಿತ್‌ ಉಮಾರಾಣಿ ವಂದಿಸಿದರು. ಜಿ. ಬಿ. ಮಠಪತಿ, ಎಂ. ಆರ್‌. ಹೊಸಕೋಟಿ, ಪ್ರತಿಭಾ ಕುಲಕರ್ಣಿ ಅವರು ಸಹಕರಿಸಿದರು. ಸಂಸ್ಥೆಯ ಸದಸ್ಯರು, ತುಳು-ಕನ್ನಡಿಗರು ಉಪಸ್ಥಿತರಿದ್ದರು.

ನಲ್ವತ್ತು ವರ್ಷಗಳ ಹಿಂದೆ ತಾಯ್ನಾಡಿನಿಂದ ಬಂದಾಗ ಕನ್ನಡ ಭಾಷೆಯನ್ನು ಬೆಳೆಸಲು ಪ್ರೇರೇಪಿಸಿದ್ದು ಅಂದಿನ ಡೊಂಬಿವಲಿ ಕರ್ನಾಟಕ ಸಂಘ. ಮಹಿಳೆಯರಿಗಾಗಿಯೇ ಪ್ರತ್ಯೇಕವಾದ ಸಂಘಟನೆಯನ್ನು ಕಟ್ಟಬೇಕು ಎಂಬ ಕನಸು ಅನುಜಾ ಮಹಿಳಾ ಮಂಡಲದ ಮೂಲಕ ನನಸಾಯಿತು. ನನ್ನ ಸಾಧನೆಯ ಪ್ರೇರಣ ಶಕ್ತಿಯೇ ಅನುಜಾ ಮಹಿಳಾ ಸಂಸ್ಥೆಯಾಗಿದೆ. ಆದ್ದರಿಂದ ಈ ಪ್ರಶಸ್ತಿಯನ್ನು ಅನುಜಾ ಮಹಿಳಾ ಸಂಸ್ಥೆಗೆ ಪ್ರೀತಿ-ಗೌರವದಿಂದ ಅರ್ಪಿಸುತ್ತಿದ್ದೇನೆ. ನಿಮ್ಮ ಸಂಸ್ಥೆಯ ನಾಡು-ನುಡಿಯ ಸೇವೆಯನ್ನು ಕಂಡು ಸಂತೋಷವಾಗುತ್ತಿದೆ.
– ಡಾ| ಸುಮಾ ದ್ವಾರಕಾನಾಥ್‌, ಪ್ರಶಸ್ತಿ ಪುರಸ್ಕೃತರು

ನಾನೋರ್ವ ಕನ್ನಡಿಗ ಎಂಬ ಹೆಮ್ಮೆ ನನಗಿದೆ. ನಾನು ಇವತ್ತು ಏನನ್ನಾದರೂ ಸಾಧಿಸಿದ್ದರೆ ಅದಕ್ಕೆ ನನ್ನ ನಾಡು, ಸಮಾಜ, ತಂದೆ-ತಾಯಿ, ಗುರುಗಳ ಪ್ರೇರಣೆಯಾಗಿದೆ. ಮಹಾನಗರ ಕನ್ನಡ ಸಂಸ್ಥೆ ನೀಡಿದ ಶ್ರೀ ಪ್ರಶಸ್ತಿಯನ್ನು ಗೌರವ ಪೂರ್ವಕವಾಗಿ ಸ್ವೀಕರಿಸುತ್ತಿದ್ದೇನೆ. ನಿಮ್ಮ ನಾಡು-ನುಡಿ ಸೇವೆ ಇದೇ ರೀತಿಯಲ್ಲಿ ಮುಂದುವರಿಯಲಿ.
– ಡಾ| ಗಜಾನನ ಕುಲಕರ್ಣಿ, ಪ್ರಶಸ್ತಿ ಪುರಸ್ಕೃತರು 

ಚಿತ್ರ-ವರದಿ: ಗುರುರಾಜ ಪೋತನೀಸ್‌

ಟಾಪ್ ನ್ಯೂಸ್

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

COVID vaccine ಅಡ್ಡಪರಿಣಾಮ ನಿವಾರಣೆ: ಈ ಗಳಿಗೆಯ ತುರ್ತು

Supreme Court slams IMA

Supreme Court; ಪತಂಜಲಿ ಆಯ್ತು, ಈಗ ಐಎಂಎ ವಿರುದ್ಧ ಸುಪ್ರೀಂ ಕೋರ್ಟ್‌ ಗರಂ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

Aranthodu ಅಣ್ಣ – ತಮ್ಮ ಜತೆಯಲ್ಲಿ ನಿಧನ!

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

1500 for women: ಆಂಧ್ರದಲ್ಲಿ ಕರ್ನಾಟಕ ಮಾದರಿ ಎನ್‌ಡಿಎ ಗ್ಯಾರಂಟಿ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Temperature ಕರಾವಳಿಯಲ್ಲಿ ಬಿಸಿ ವಾತಾವರಣದ ಮುನ್ಸೂಚನೆ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Election; ಮೊಹಬ್ಬತ್‌ ಕೀ ದುಕಾನ್‌ನಲ್ಲಿ ಫೇಕ್‌ ವೀಡಿಯೋಗಳು ಮಾರಾಟ: ಮೋದಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.