ಕೊಳೆರೋಗಕ್ಕೆ 69.07 ಕೋ.ರೂ. ಪರಿಹಾರ


Team Udayavani, Dec 17, 2018, 9:17 AM IST

kole.jpg

ಮಂಗಳೂರು: ಕೊಳೆರೋಗ ಬಾಧಿತ ಅಡಿಕೆ ಕೃಷಿಕರ ನೋವಿಗೆ ಕೇಂದ್ರ ಸರಕಾರ ಸ್ಪಂದಿಸಿದ್ದು, ದ.ಕ. ಜಿಲ್ಲೆಯ 60 ಕೋ.ರೂ. ಹಾಗೂ ಉಡುಪಿಯ 9.07 ಕೋ.ರೂ. ಪ್ರಸ್ತಾವನೆಗೆ ಅಸ್ತು ಎಂದಿದೆ. ಹೀಗಾಗಿ ಅರ್ಜಿ ಸಲ್ಲಿಸಿದ ಬೆಳೆಗಾರರಿಗೆ ಪರಿಶೀಲನೆಯ ಬಳಿಕ ಎಕರೆಗೆ 6,800 ರೂ.ಗಳಷ್ಟು ಪರಿಹಾರ ದೊರೆಯಲಿದೆ. 

“ದ.ಕ. ಜಿಲ್ಲೆಯಲ್ಲಿ ಅಡಿಕೆ ಬೆಳೆಗಾರರಿಗೆ ಪರಿ ಹಾರ ಇನ್ನೂ ದೊರೆತಿಲ್ಲ’ ಎಂದು ಶಾಸಕ ಹರೀಶ್‌ ಪೂಂಜ ಡಿ.14ರಂದು ವಿಧಾನಸಭೆಯಲ್ಲಿ ಪ್ರಶ್ನಿಸಿದ ಬೆನ್ನಿಗೇ, ಕೇಂದ್ರದಿಂದ ಬಂದ ಪರಿಹಾರ ಮೊತ್ತವನ್ನು ರಾಜ್ಯ ಸರಕಾರ ಹಂಚಿಕೆ ಮಾಡಿದೆ. 

ದ.ಕ.ದಲ್ಲಿ 33,395 ಹೆಕ್ಟೇರ್‌ ತೋಟ ಕೊಳೆರೋಗ ಬಾಧಿತವಾಗಿದ್ದು, ಎನ್‌ಡಿಆರ್‌ಎಫ್‌ ನಿಯಮಾನುಸಾರ 60 ಕೋ.ರೂ. ಪರಿಹಾರ ಒದಗಿಸುವಂತೆ ತೋಟಗಾರಿಕೆ ಇಲಾಖೆ ಸಲ್ಲಿಸಿದ ವರದಿಯ ಅನ್ವಯ ಕೇಂದ್ರವು ಪರಿಹಾರ ಪ್ಯಾಕೇಜ್‌ ಪ್ರಕಟಿಸಿದೆ. ಇದರಂತೆ ತಾಲೂಕು ಅಧಿಕಾರಿಗಳು ಪರಿಶೀಲನೆ ನಡೆಸಿದ ಹಲವು ಅರ್ಜಿ ದಾರರಿಗೆ ಶನಿವಾರ 6 ಕೋ.ರೂ.ಗಳನ್ನು ಬಿಡುಗಡೆ ಮಾಡಿದೆ. ಉಳಿದವನ್ನು ಸೋಮವಾರದಿಂದ ಹಂತ ಹಂತವಾಗಿ ಪರಿಶೀಲಿಸಿ ಬಿಡುಗಡೆ ಮಾಡಲಾಗುತ್ತದೆ. ಉಡುಪಿ ಜಿಲ್ಲೆಯಿಂದ ಸಲ್ಲಿಕೆಯಾದ 9.07 ಕೋ.ರೂ. ಪ್ರಸ್ತಾವನೆಗೂ ಒಪ್ಪಿಗೆ ದೊರೆತಿದ್ದು, ಕೆಲವು ಅರ್ಜಿಗಳ ಪರಿಶೀಲನೆ ನಡೆಸಿ, 47 ಲಕ್ಷ ರೂ. ಬಿಡುಗಡೆ ಮಾಡಲಾಗಿದೆ. ಉಳಿದವು ಸೋಮವಾರದಿಂದ ಪರಿಶೀಲನೆಯಾಗಿ ಪರಿಹಾರ ವಿತರಣೆಯಾಗಲಿದೆೆ.

ಹೊಸ “ಪರಿಹಾರ’
ಇಲ್ಲಿಯವರೆಗೆ ಪರಿಹಾರ ಹಣವು ಜಿಲ್ಲಾಡಳಿತದ ಮೂಲಕ ತಾಲೂಕುಗಳಿಗೆ ವಿತರಣೆಯಾಗುತ್ತಿತ್ತು. ಆದರೆ ಈ ಬಾರಿ “ಪರಿಹಾರ’ ತಂತ್ರಾಂಶದ ಮೂಲಕ ಫಲಾನುಭವಿಗಳ ಖಾತೆಗೆ ನೇರ ವರ್ಗಾಯಿಸಲು ಉದ್ದೇಶಿಸಲಾಗಿದೆ. ಇದಕ್ಕಾಗಿ ಆಯಾ ತಾಲೂಕು ವ್ಯಾಪ್ತಿಯಲ್ಲಿ ಸಲ್ಲಿಕೆಯಾದ ಅರ್ಜಿಗಳ ಬಗ್ಗೆ ತಾ. ಪಂ. ಅಧಿಕಾರಿಗಳು ಪರಾಮರ್ಶೆ ಆರಂಭಿಸಿದ್ದಾರೆ. ಅರ್ಜಿದಾರರ ಆಧಾರ್‌, ಬ್ಯಾಂಕ್‌ ಖಾತೆ ಇತ್ಯಾದಿ ಮಾಹಿತಿಯನ್ನು “ಪರಿಹಾರ’ ತಂತ್ರಾಂಶಕ್ಕೆ ಅಪ್‌ಲೋಡ್‌ ಕೆಲಸ ಪ್ರಗತಿಯಲ್ಲಿದೆ.

ಗರಿಷ್ಠ ಪರಿಹಾರ 
2007, 2013ರ ಅನಂತರ ಈ ವರ್ಷ ದೊಡ್ಡ ಪ್ರಮಾಣದಲ್ಲಿ ಕೊಳೆರೋಗ ಬಾಧಿಸಿತ್ತು. 2007 ರಲ್ಲಿ 20,000 ಹೆ. ಪ್ರದೇಶದಲ್ಲಿ ಕೊಳೆರೋಗ ಕಾಣಿಸಿಕೊಂಡಿದ್ದು, 4.59 ಕೋ.ರೂ. ಪರಿಹಾರ ವಿತರಿಸಲಾಗಿತ್ತು. 2013ರಲ್ಲಿ ರೋಗ ಬಾಧಿತ 25,000 ಹೆಕ್ಟೇರ್‌ಗೆ 30 ಕೋ.ರೂ. ಪ್ಯಾಕೇಜ್‌ ಘೋಷಿಸಲಾಗಿತ್ತು. ಇದಕ್ಕೆ ಹೋಲಿಸಿದಾಗ ಈ ಬಾರಿ ದ.ಕ. ಜಿಲ್ಲೆಗೆ 60 ಕೋ.ರೂ. ಗರಿಷ್ಠ ಪರಿಹಾರ ಪ್ಯಾಕೇಜ್‌ ಬಿಡುಗಡೆ ಮಾಡಲಾಗಿದೆ. 

ಸಾಲದು ಈ ಪರಿಹಾರ! 
ದ.ಕ. ಜಿಲ್ಲೆಯಲ್ಲಿ 2018-19ರಲ್ಲಿ 33,595 ಹೆಕ್ಟೇರ್‌ನಲ್ಲಿ ಕೊಳೆರೋಗದಿಂದ 252 ಕೋ.ರೂ. ನಷ್ಟ ಸಂಭವಿಸಿದೆ ಎಂದು ರಾಜ್ಯ ಸರಕಾರ ಅಂದಾಜಿಸಿದೆ. ಪ್ರಸ್ತುತ ಎನ್‌ಡಿಆರ್‌ಎಫ್‌ ನಿಯಮಾನುಸಾರ ಕೇಂದ್ರದಿಂದ 60 ಕೋ.ರೂ. ಬಂದಿದೆ. ಆದರೆ ಈ ಮೊತ್ತ ಏನೇನೂ ಸಾಲದು. ಒಂದೆಕರೆಯಲ್ಲಿ ಲಕ್ಷಾಂತರ ರೂ. ಬೆಲೆಬಾಳುವ ಅಡಿಕೆ ಬೆಳೆಯುವ ಬೆಳೆಗಾರರಿಗೆ ಈಗ ಕೇವಲ 6,800 ರೂ. ಮಾತ್ರ ಪರಿಹಾರ ಸಿಗಲಿದೆ. ಕೇಂದ್ರ ಮತ್ತು ರಾಜ್ಯ ಸರಕಾರ ಇನ್ನಷ್ಟು ಪರಿಹಾರ ಒದಗಿಸಲು ಕ್ರಮ ಕೈಗೊಳ್ಳಬೇಕು ಎನ್ನುವುದು ಬೆಳೆಗಾರರೊಬ್ಬರ ಅಭಿಪ್ರಾಯ.  

ಪರಿಹಾರ ವಿತರಣೆ
ದ.ಕ. ಜಿಲ್ಲೆಯಿಂದ ಸಲ್ಲಿಕೆಯಾಗಿ ರುವ ಪ್ರಸ್ತಾವನೆಯ ಪ್ರಕಾರ 60 ಕೋ.ರೂ. ಪರಿಹಾರ ಬಂದಿದೆ. “ಪರಿಹಾರ’ ತಂತ್ರಾಂಶದ ಮೂಲಕ ಹಂಚಿಕೆ ಆರಂಭಿಸಲಾಗಿದೆ. ಅರ್ಜಿ ನೀಡಿದ ಬೆಳೆಗಾರರ ಬ್ಯಾಂಕ್‌ ಖಾತೆಗೆ ಪರಿಹಾರ ಮೊತ್ತ ಕೆಲವೇ ದಿನಗಳಲ್ಲಿ ಜಮೆ ಆಗಲಿದೆ. 
 ಶಶಿಕಾಂತ್‌ ಸೆಂಥಿಲ್‌ಜಿಲ್ಲಾಧಿಕಾರಿ, ದ.ಕ. 

ಸಾಲಮನ್ನಾ ಆಗಲಿ
ದ.ಕ. ಜಿಲ್ಲೆಯ ಅಡಿಕೆ ಬೆಳೆಗಾರರ ರಕ್ಷಣೆಗೆ ಕೇಂದ್ರವು ಎನ್‌ಡಿಆರ್‌ಎಫ್‌ನಿಂದ 60 ಕೋ.ರೂ. ಬಿಡುಗಡೆ ಮಾಡಿದೆ. ರಾಜ್ಯ ಸರಕಾರ ಇನ್ನಾದರೂ ವಿಶೇಷ ಪ್ಯಾಕೇಜ್‌ ಪ್ರಕಟಿಸಬೇಕು. ಕೊಳೆರೋಗ ಪೀಡಿತ ಅಡಿಕೆ ಬೆಳೆ ಗಾರನ ಸಾಲವನ್ನು ಸಂಪೂರ್ಣ ಮನ್ನಾ ಮಾಡಲು ಮುಂದಾಗ ಬೇಕು. ಕನಿಷ್ಠ ಬೆಂಬಲ ಬೆಲೆ ಹಾಗೂ ಕೊಳೆರೋಗಕ್ಕೆ ಮೂಲ ಕಾರಣ ಪತ್ತೆಹಚ್ಚಲು ಪೂರ್ಣ ಸಂಶೋಧನೆ ರಾಜ್ಯ ಸರಕಾರದ ಮೂಲಕ ನಡೆಯಬೇಕಾಗಿದೆ. 
 ಹರೀಶ್‌ ಪೂಂಜ, ಶಾಸಕರು 

ಪ್ರಸ್ತಾವನೆಗೆ ಒಪ್ಪಿಗೆ
ಕೊಳೆರೋಗಕ್ಕೆ ಸಂಬಂಧಿಸಿ ಉಡುಪಿಯಲ್ಲಿ 9.07 ಕೋ.ರೂ.ಗಳ ಪ್ರಸ್ತಾವನೆಗೆ ಸರಕಾರ ಒಪ್ಪಿಗೆ ನೀಡಿದ್ದು, “ಪರಿಹಾರ’ದ ಮೂಲಕ ಹಂಚಿಕೆಗೆ ಅನುಮತಿ ನೀಡಲಾಗಿದೆ. ಫಲಾನು ಭವಿಗಳ ಡೇಟಾ ಎಂಟ್ರಿ ನಡೆಸಿ, ಆಧಾರ್‌ ಇನ್ನಿತರ ವಿವರ ದಾಖಲಿಸಿ ಪರಿಹಾರ ವಿತರಿಸಲಾಗುವುದು. 
ಪ್ರಿಯಾಂಕಾ ಮೇರಿ ಫ್ರಾನ್ಸಿಸ್‌, ಜಿಲ್ಲಾಧಿಕಾರಿ, ಉಡುಪಿ

 ದಿನೇಶ್‌ ಇರಾ

ಟಾಪ್ ನ್ಯೂಸ್

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

4-

Thirthahalli: ಚುನಾವಣಾ ಬಹಿಷ್ಕಾರ; ಸ್ವ-ಇಚ್ಛೆಯಿಂದ ಸಾವಿರಕ್ಕೂ ಅಧಿಕ ಮಂದಿಯಿಂದ ನಿರ್ಧಾರ !

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

ಬಿಜೆಪಿ ಅಧಿಕಾರಕ್ಕೆ ಬಂದರೆ ಗ್ಯಾರಂಟಿ ಯೋಜನೆ ರದ್ದು ಕಾನೂನು ತರುತ್ತಾರೆ: ಕೃಷ್ಣ ಬೈರೇಗೌಡ

3-kmc

Kasturba ಆಸ್ಪತ್ರೆಯಲ್ಲಿ ನೂತನವಾಗಿ ನಿರ್ಮಿಸಲಾದ ಡಾ| ರಾಮದಾಸ್ ಎಂ.ಪೈ ಬ್ಲಾಕ್ ಉದ್ಘಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

Ullal: ನೇಣು ಬಿಗಿದು ವ್ಯಕ್ತಿ ಆತ್ಮಹತ್ಯೆಗೆ ಶರಣು

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

“ಕೃಷಿ ರಕ್ಷಣೆಗಾಗಿ ಆಯುಧ ಹಿಂಪಡೆಯಿರಿ’: ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್‌

Dakshina Kannada ಚೆಕ್‌ಪೋಸ್ಟ್‌ ಕಾರ್ಯ ನಿರ್ವಹಣೆಗೆ ಡಿಸಿ ಸೂಚನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Road Mishap; ಬೈಕ್‌-ಪಿಕ್‌ ಅಪ್‌ ಢಿಕ್ಕಿ; ಬೈಕ್ ಸವಾರ ಸ್ಥಳದಲ್ಲೇ ಸಾವು

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

Vijayapura; ಮದುವೆ ಆಹ್ವಾನದಂತೆ ಮತದಾನಕ್ಕೆ ಆಮಂತ್ರಣ ಪತ್ರಿಕೆ…!

5

Panaji: ದೇಶದ ಅತ್ಯಂತ ಶ್ರೀಮಂತ ಅಭ್ಯರ್ಥಿ ಪಲ್ಲವಿ ಧೆಂಪೊ

aravind

Lok Sabha ಚುನಾವಣೆಗೆ ಸಮಯದಲ್ಲೇ ಕೇಜ್ರಿವಾಲ್ ಬಂಧಿಸಿದ್ಯಾಕೆ..?; ಇ.ಡಿಗೆ ಸುಪ್ರೀಂ ಪ್ರಶ್ನೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ನಡೆಯುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Gokarna; 7 ವರ್ಷಗಳಿಂದ ಆಮೆಗತಿಯಲ್ಲಿ ಸಾಗುತ್ತಿರುವ ಮಂಜಗುಣಿ-ಗಂಗಾವಳಿ ಸೇತುವೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.