ಮನುಷ್ಯ ಜನ್ಮದ ಮೂಲ ಉದ್ದೇಶ ಸತ್ಯಾನ್ವೇಷಣೆ: ಗಣೇಶಾನಂದ ಶ್ರೀ


Team Udayavani, Dec 17, 2018, 12:20 PM IST

bid-1.jpg

ಭಾಲ್ಕಿ: ಮಾನವ ಜನ್ಮದ ಮೂಲ ಉದ್ದೇಶ ಸತ್ಯಾನ್ವೇಷಣೆಯಾಗಿದೆ. ಸತ್ಯದ ಅರಿವು ನಮಗಾಗಬೇಕಾದರೆ. ನಾವು ಸಂತರ ಸಂಗ ಮಾಡಬೇಕು ಎಂದು ಬೀದರ ಗುರುದೇವಾಶ್ರಮದ ಶ್ರೀ ಗಣೇಶಾನಂದ ಮಹಾರಾಜರು ಹೇಳಿದರು.

ತಾಲೂಕಿನ ಬ್ಯಾಲಹಳ್ಳಿ(ಕೆ) ಗ್ರಾಮದ ಶಿವಾನಂದ ಕೈಲಾಸ ಆಶ್ರಮದಲ್ಲಿ ಶ್ರೀ ಸಚ್ಚಿದಾನಂದ ಮಹಾಸ್ವಾಮಿಗಳು ಮತ್ತು ಶ್ರೀ ಶಿವಾನಂದ ಮಹಾಸ್ವಾಮಿಗಳ ಪುಣ್ಯಾರಾಧನೆ ಕಾರ್ಯಕ್ರಮ ನಿಮಿತ್ತ ನಡೆದ ಪ್ರವಚನ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಸ್ವಾಮೀಜಿ ಮಾತನಾಡಿದರು.
 
ಹೂವಿನ ಮೇಲಿನ ಪರಿಮಳ ಬಂದರೆ ಸುಗಂಧದ ಅರಿವಾಗುವಂತೆ ಸಂತರ ಸಂಗದ ಪರಿಮಳದಿಂದ ಸತ್ಯದ
ಅರಿವಾಗುವುದು. ಮನುಷ್ಯ ಜನ್ಮದ ಮೂಲ ಧೇಯ ಆತ್ಮ ಸಾಕ್ಷಾತ್ಕಾರ. ಈ ನಿಟ್ಟಿನಲ್ಲಿ ಪ್ರವೃರ್ತರಾಗಲು ಸಾಧು ಸಂತರ ಸೇವೆ ಮಾಡುತ್ತ ಸನ್ಮಾರ್ಗದಲ್ಲಿ ನಡೆಯಬೇಕು. ಸಂತರ ಮಾತುಗಳು ನಮ್ಮ ಬದುಕಿನಲ್ಲಿ ಪ್ರೇರಣೆ ನೀಡುತ್ತವೆ. ಹೀಗಾಗಿ ಸಂತರ ಸಂಗ ಬಯಸಿ ಜೀವನ ಸಾರ್ಥಕ ಮಾಡಿಕೊಳ್ಳಬೇಕು ಎಂದು ಹೇಳಿದರು.

ಮಳಚಾಪುರ ಶಂಭುಲಿಂಗಾಶ್ರಮದ ಶ್ರೀ ಸದ್ರೂಪಾನಂದ ಭಾರತಿ ಸ್ವಾಮಿಗಳು ಮಾತನಾಡಿ, ಯಾವುದನ್ನು ಕೇಳುವುದರಿಂದ ದ್ವೈತ ಪ್ರವೃತ್ತಿ ನಾಶವಾಗಿ ಅದ್ವೈತ್ವ ಪ್ರವೃತ್ತಿ ಉಂಟಾಗುವುದೋ ಅದೇ ನಿಜವಾದ ಶಾಸ್ತ್ರವಾಗಿದೆ. ಪಶ್ಚಾತಾಪದಿಂದ ಭಕ್ತಿ ಉಂಟಾಗುವುದು. ಆತ್ಮ ಪರಮಾತ್ಮನನ್ನು ಮರೆತಾಗಲೇ ಜೀವನದ ಅಧೋಗತಿಯಾಗುವುದು ಎಂದು ವಿಶ್ಲೇಷಿಸಿದರು.

ನೇತೃತ್ವ ವಹಿಸಿ ಮಾತನಾಡಿದ ಶ್ರೀ ನಾಗಯ್ಯ ಸ್ವಾಮಿಗಳು, ನಾವು ನಮ್ಮ ಅಜ್ಞಾನ, ಅಂಧಕಾರ ಕಳೆಯುವಂತಹ ಶಾಸ್ತ್ರ ಕೇಳಬೇಕು. ದ್ವೈತ ಬುದ್ಧಿನಾಶವಾಗುವ ಶಾಸ್ತ್ರ ಕೇಳುವುದರಿಂದ ಜೀವನೋಧಾರವಾಗುವುದು ಎಂದು ಹೇಳಿದರು. ಅಧ್ಯಕ್ಷತೆ ವಹಿಸಿ ಮಾತನಾಡಿದ ಶ್ರೀ ಗುರುಲಿಂಗ ಮಹಾಸ್ವಾಮಿಗಳು, ಭೇದವಿದ್ದಲ್ಲಿ ದುಃಖವಿದೆ. ಅಭೇದವಿದ್ದಲ್ಲಿ ಸುಖವಿದೆ. ನಾವು ಯಾವುದಕ್ಕೂ ಭೇದಮಾಡದೇ ಸುಖಜೀವನ ಸಾಗಿಸಬೇಕು ಎಂದು ಹೇಳಿದರು.

ಪ್ರಸಾದ ದಾನಿಗಳಾದ ಬುಧೇರಾ ಗ್ರಾಮದ ಚಂದ್ರಪ್ಪ ಮಾನಾ, ಕಾಶಿನಾಥ ಮಾನಾ, ವಿಶ್ವನಾಥ ಮಾನಾ, ಬಸವರಾಜ ಮಾನಾ ಮತ್ತು ಕಲಬುರಗಿಯ ಅಕ್ಕಮಹಾದೇವಿ ಸಂಜೀವಕುಮಾರ ಪಡಶೆಟ್ಟಿ ಅವರನ್ನು ಸನ್ಮಾನಿಸಿ ಸತ್ಕರಿಸಲಾಯಿತು. 

ವೈಜಿನಾಥಪ್ಪ ಕನಕಟ್ಟೆ, ಮಲ್ಲಿಕಾರ್ಜುನ ವೀರಶೆಟ್ಟೆ, ಡಿ.ಕೆ. ಗಣಪತಿ, ಡಾ| ಸುಭಾಷ ಅಂಬೆಸಿಂಗಿ, ಸಂಜುಕುಮಾರ ಬಿರಾದಾರ, ಶಿವರಾಜ ಶರಗಾರ, ತೇಜಮ್ಮ ಸುಭಾಷ ಬಾಯಪ್ನೋರ, ವಿಜಯಕುಮಾರ ಬಾಯಪ್ನೋರ, ರಾಜಕುಮಾರ ನಾಗನಾಥರಾವ ಪಾಟೀಲ, ಸಿರಾಮಪ್ಪ ವಡ್ಡಿ ಇದ್ದರು. ವೈಜಿನಾಥಪ್ಪ ದಾಬಶೆಟ್ಟಿ ಸ್ವಾಗತಿಸಿದರು. ರಮೇಶ ಶ್ರೀಮಂಡಲ ನಿರೂಪಿಸಿದರು. ಶಾಮರಾವ ಮಂದಕನಳ್ಳಿ ವಂದಿಸಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

ಈಶ್ವರ ಖಂಡ್ರೆ

ಕೇಂದ್ರದಿಂದ 3454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ: ಈಶ್ವರ ಖಂಡ್ರೆ

12

B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್‌ವೈ ಗರಂ

1-wqqwewqe

BJP; ಖೂಬಾ ಮತ್ತೊಮ್ಮೆ ಸಚಿವರಾಗ್ತಾರೆ : ಔರಾದ್ ನಲ್ಲಿ ಯಡಿಯೂರಪ್ಪ ಘೋಷಣೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.