ಭಾರತ ಮತ್ತೆ ವಿಶ್ವಗುರುವಾಗಿಸಿ


Team Udayavani, Dec 18, 2018, 11:12 AM IST

dvg-1.jpg

ಕಲಬುರಗಿ: ಇಂದಿನ ಯುವ ವಿಜ್ಞಾನಿಗಳಿಗೆ ಸೌಲಭ್ಯ ಮತ್ತು ಅವಕಾಶಗಳು ಹೆಚ್ಚಿದ್ದು, ಸಿಕ್ಕ ಅವಕಾಶ ಉಪಯೋಗಿಸಿಕೊಂಡು ಭಾರತವನ್ನು ಮತ್ತೆ ವಿಶ್ವಗುರುವಾಗಿಸಬೇಕು ಎಂದು ಇಸ್ರೋ ನಿಕಟಪೂರ್ವ ಅಧ್ಯಕ್ಷ ಎ.ಎಸ್‌. ಕಿರಣಕುಮಾರ ಕರೆ ನೀಡಿದರು.

ಗುಲಬರ್ಗಾ ವಿಶ್ವವಿದ್ಯಾಲಯದ ಆವರಣದಲ್ಲಿ ಮೂರು ದಿನಗಳ ಕಾಲ ನಡೆದ 26ನೇ ರಾಜ್ಯ ಮಟ್ಟದ ಮಕ್ಕಳ
ವಿಜ್ಞಾನ ಸಮಾವೇಶದ ಸಮಾರೋಪ ಸಮಾರಂಭದಲ್ಲಿ ವಿದ್ಯಾರ್ಥಿಗಳೊಂದಿಗೆ ಸಂವಾದದಲ್ಲಿ ಪಾಲ್ಗೊಂಡು ಅವರು
ಮಾತನಾಡಿದರು. 

ಭಾರತ ಸಾವಿರಾರು ವರ್ಷಗಳ ಹಿಂದೆ ಜಗತ್ತಿನ ಅಗ್ರಗಣ್ಯ ದೇಶ ಎನಿಸಿತು ಎಂಬುದು ಸಂಶೋಧನೆಗಳಿಂದ
ತಿಳಿದಿದೆ ಎಂದು ಹೇಳಿದರು. ಪಾಶ್ಚಿಮಾತ್ಯ ಮತ್ತು ಯುರೋಪ ರಾಷ್ಟ್ರಗಳಲ್ಲಿ ಅಲ್ಲಿನ ಯುವಕರಿಗೆ ಸೌಲಭ್ಯಗಳು ಹೆಚ್ಚೆಚ್ಚು ಸಿಗುತ್ತಿವೆ ಎಂದು ಭಾವಿಸಲಾಗುತ್ತಿದೆ. ನಮ್ಮಲ್ಲೂ ಪ್ರತಿ ಕ್ಷಣವೂ ಅವಕಾಶಗಳು ಇರುತ್ತವೆ. ನಮ್ಮಲ್ಲಿನ ಬುದ್ಧಿಯನ್ನು ಬೆಳೆಸಿಕೊಂಡು ಪ್ರಶ್ನೆಗಳನ್ನು ಹಾಕಿ ವೈಜ್ಞಾನಿಕವಾಗಿ ಉತ್ತರ ಕಂಡುಕೊಳ್ಳಬೇಕು. ಇಚ್ಛಾ ಶಕ್ತಿ ಇದ್ದರೆ ಸಾಧನೆ ಸಾಧ್ಯ ಎಂಬುವುದು ಈಗಾಗಲೇ ಭಾರತದ ವಿಜ್ಞಾನಿಗಳು ತೋರಿಸಿಕೊಟ್ಟಿದ್ದಾರೆ ಎಂದು ಹೇಳಿದರು.

ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತ ವಿಶ್ವವೇ ಬೆರಗಾಗುವ ಮಾದರಿಯಲ್ಲಿ ಸಾಧನೆ ಮಾಡುತ್ತಿದೆ. ಭಾರತದ ವೈಜ್ಞಾನಿಕ ಕ್ಷಮತೆ, ತಂತ್ರಜ್ಞಾನದ ಕ್ಷಮತೆ ಜಗತ್ತಿನ ಬೇರೆ ದೇಶಗಳ ತಂತ್ರಜ್ಞಾನದ ವಿಸ್ತಾರಕ್ಕೂ ನೆರವಾಗುತ್ತಿದೆ. ಬಾಹ್ಯಾಕಾಶ
ತಂತ್ರಜ್ಞಾನದಲ್ಲಿ ಸ್ವಾವಲಂಬನೆ ಮೂಲಕ ಪ್ರಪಂಚದಲ್ಲಿ ಮುಂಚೂಣಿಯಲ್ಲಿದೆ ಎಂದು ಹೇಳಿದರು.

ಜಗತ್ತಿನಲ್ಲಿ 31 ರಾಷ್ಟ್ರಗಳು ಉಪಗ್ರಹಗಳ ಉಡಾವಣೆ ಮಾಡುತ್ತಿವೆ. ಕಳೆದ ವರ್ಷ ಏಕಕಾಲಕ್ಕೆ ಒಂದೇ ರಾಕೆಟ್‌ನಲ್ಲಿ 104 ಉಪಗ್ರಹಗಳ ಉಡಾವಣೆ ಮಾಡಿದಾಗ ಇಡೀ ಜಗತ್ತು ನಮ್ಮತ್ತ ತಿರುಗಿ ನೋಡಿದೆ. ಇಷ್ಟೊಂದು ಉಪಗ್ರಹಗಳನ್ನು ಏಕಕಾಲಕ್ಕೆ ಉಡಾವಣೆ ಮಾಡಲು ಹೇಗೆ ಸಾಧ್ಯವಾಯಿತು ಎಂಬ ಉದ್ಘಾರಗಳು ಜಗತ್ತಿನಲ್ಲಿ ಎದ್ದಿದ್ದವು.

ನಾವು ಮಂಗಳಯಾನ ತಡವಾಗಿ ಆರಂಭಿಸಿದ್ದರೂ ಒಂದೇ ಯತ್ನದಲ್ಲಿ ಯಶಸ್ವಿಯಾಗಿ ಸಾಧಿಸಬಹುದು ಎಂದು ಪ್ರಪಂಚಕ್ಕೆ ಸಾರಿದ್ದೇ ಎಂದು ಹೇಳಿದರು.

ಪ್ರತಿ 15 ನಿಮಿಷಕ್ಕೊಮ್ಮೆ ವಾತಾವರಣದ ಮಾಹಿತಿ: ಇಸ್ರೋ ಉಡಾವಣೆಗೊಳಿಸಿರುವ ನ್ಯಾವಿಗೇಶನ್‌ ಉಪಗ್ರಹದ ಮೂಲಕ ಭಾರತದ ಸುತ್ತ-ಮುತ್ತಲಿನ ವಾತಾವರಣ ಮತ್ತು ಮೋಡ ಚಲನೆಗಳ ಮಾಹಿತಿಯನ್ನು ಪ್ರತಿ 15 ನಿಮಿಷಕ್ಕೊಮ್ಮೆ ತಿಳಿಯಬಹುದಾಗಿದೆ. ಯಾವ ಸ್ಥಳಕ್ಕೆ ಚಂಡಮಾರುತ ಅಪ್ಪಿಳಿಸುತ್ತಿದೆ ಎಂದು ಐದಾರು ದಿನಗಳ ಮುಂಚೆ ತಿಳಿಯಬಹುದಾಗಿದೆ. ಇದರಿಂದ ಚಂಡಮಾರುತಕ್ಕೆ ಸಿಲುಕಿ ಸಾವನ್ನಪ್ಪುತ್ತಿದ್ದ ಸಹಸ್ರಾರು ಜನರ ಜೀವ ಉಳಿಸಬಹುದಾಗಿದೆ ಎಂದು ಹೇಳಿದರು.

ಸಮುದ್ರದ ಯಾವ ಸ್ಥಳದಲ್ಲಿ ಮೀನುಗಳಿವೆ ಎಂಬುವುದು ಮೀನುಗಾರರಿಗೆ ಸ್ಥಳೀಯ ಭಾಷೆಯಲ್ಲೇ ತಿಳಿಸುವ ತಂತ್ರಜ್ಞಾನ ಹೊಂದಿದೆ. ಜತೆಗೆ ಸೇನೆ, ವೈದ್ಯಕೀಯ ಕ್ಷೇತ್ರ, ಗ್ರಾಪಂ ಮಟ್ಟದಲ್ಲೂ ನೆರವಾಗುವ ಮಾಹಿತಿ ತಿಳಿಯಬಹುದಾಗಿದೆ. ನಮ್ಮ ಬಾಹ್ಯಾಕಾಶ ತಂತ್ರಜ್ಞಾನ ದೈನಂದಿನ ಜೀವನಕ್ಕೆ ಉಪಯೋಗವಾಗುವ ರೀತಿಯಲ್ಲಿ ಅಭಿವೃದ್ಧಿ ಮಾಡಲಾಗಿದೆ ಎಂದು ಹೇಳಿದರು.

ಟಾಪ್ ನ್ಯೂಸ್

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

Puttur: ಧರೆಗೆ ಉರುಳಿದ ಮಾವಿನ ಮರ

Puttur: ಧರೆಗೆ ಉರುಳಿದ ಮಾವಿನ ಮರ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

Mangaluru Airport 45.79 ಲಕ್ಷ ಮೌಲ್ಯದ ಚಿನ್ನ ವಶ

ec-aa

Yoga ದಿನಾಚರಣೆ ಪೂರ್ವ ಕಾರ್ಯಕ್ರಮಕ್ಕೆ ಆಯೋಗದ ಅಸ್ತು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

Kalaburagi; ಕಾಂಗ್ರೆಸ್ ಮುಖಂಡನಿಗೆ ಸೇರಿದ ಎರಡು ಕೋಟಿ ರೂಪಾಯಿ ಹಣ ಸೀಜ್

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qweqwe

Nainital ಹಬ್ಬಿದ ಕಾಳ್ಗಿಚ್ಚು: ಕಾರ್ಯಾಚರಣೆಗೆ ಸೇನೆ ದೌಡು

kejriwal 2

ED ದುರ್ಬಳಕೆಗೆ ನನ್ನ ಬಂಧನವೇ ಸಾಕ್ಷಿ: ಕೇಜ್ರಿವಾಲ್‌

Arif Khan

Kerala; ಸುದೀರ್ಘ‌ ವಿಳಂಬದ ಬಳಿಕ 5 ಮಸೂದೆಗೆ ಗವರ್ನರ್‌ ಒಪ್ಪಿಗೆ

1-wqeqwewqe

AAP ಶಾಸಕ ಅಮಾನತುಲ್ಲಾಗೆ ಬೇಲ್‌ ಬೆನ್ನಲ್ಲೇ ಇ.ಡಿ. ಸಮನ್ಸ್‌

accident

ಅಮೆರಿಕದಲ್ಲಿ ಅಪಘಾತ: 3 ಭಾರತೀಯರ ದುರ್ಮರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.