ಮೋದಿ ಕಾರ್ಯಕ್ರಮದ ಭದ್ರತೆಗಾಗಿ ಶ್ಮಶಾನ ಬಂದ್‌, 3 ಮದುವೆ ರದ್ದು


Team Udayavani, Dec 18, 2018, 5:29 PM IST

modi-speaking-600.jpg

ಮುಂಬಯಿ : ಪ್ರಧಾನಿ ನರೇಂದ್ರ ಮೋದಿ ಇಂದು ಮಂಗಳವಾರ ಇಲ್ಲಿಗೆ ಸಮೀಪದ ಕಲ್ಯಾಣ್‌ ನಲ್ಲಿ ನಡೆದಿದ್ದ  ಕಲ್ಯಾಣ್‌ – ಭಿವಂಡಿ ಮೆಟ್ರೋ ಲೈನ್‌ ಕಾರ್ಯಕ್ರಮದ ಫ‌ಡ್‌ಕೆ ಮೈದಾನಕ್ಕೆ 200 ಮೀಟರ್‌ ದೂರದಲ್ಲಿ ಇರುವ ಶ್ಮಶಾನವನ್ನು  ಭದ್ರತೆಯ ಕಾರಣಕ್ಕೆ ಇಂದು ಮುಚ್ಚಲಾದ ಸಂಗತಿ ಇದೀಗ ಬಹಿರಂಗವಾಗಿದೆ.

ಇದೇ ರೀತಿ ಭದ್ರತೆಯ ಕಾರಣಕ್ಕೆ ಪ್ರಧಾನಿ ಮೋದಿ ಕಾರ್ಯಕ್ರಮದ ಪ್ರಯುಕ್ತ ಸಮೀಪದ ವಾದ್ವಾ ಹಾಲ್‌ ನಲ್ಲಿ ನಡೆಯಲಿದ್ದ ಮೂರು ಮದುವೆ ಕಾರ್ಯಕ್ರಮಗಳನ್ನು ಕೂಡ ರದ್ದು ಪಡಿಸಲಾಯಿತೆಂದು ಗೊತ್ತಾಗಿದೆ. 

ಮೋದಿ ಕಾರ್ಯಕ್ರಮ ತಾಣಕ್ಕೆ ಸಮೀಪದ ಶ್ಮಶಾನದ ಉಸ್ತುವಾರಿ ನಡೆಸುತ್ತಿರುವ ಸಿದ್ಧೇಶ್‌ ಶೇಟೆ ಎಂಬವರಿಗೆ ಸೋಮವಾರ ಮಧ್ಯರಾತ್ರಿ ಫೋನ್‌ ಕರೆಯೊಂದು ಬಂದಿತ್ತು. “ನಮ್ಮ ಕುಟುಂಬದ ಸದಸ್ಯರೊಬ್ಬರು ತೀರಿಕೊಂಡಿದ್ದಾರೆ; ಅವರ ಶವ ಸಂಸ್ಕಾರಕ್ಕೆ ಮಂಗಳವಾರ ರುದ್ರಭೂಮಿ ದೊರಕಬಹುದೇ ?’ ಎಂದು ಫೋನಿನಲ್ಲಿ ವ್ಯಕ್ತಿಯೊಬ್ಬರು ಕೇಳಿದ್ದರು.  ಪ್ರಧಾನಿ ಮೋದಿ ಅವರ ಕಾರ್ಯಕ್ರಮದ ಪ್ರಯುಕ್ತ ಶ್ಮಶಾನ ಮಂಗಳವಾರ ಒಂದು ದಿನ ಮುಚ್ಚಿರುತ್ತದೆ ಎಂದು ಶೇಟೆ ಫೋನ್‌ ಕರೆ ಮಾಡಿದ ವ್ಯಕ್ತಿಗೆ  ಉತ್ತರಿಸಿದ್ದರು. 

“ಮೋದಿ ಕಾರ್ಯಕ್ರಮ ತಾಣದಿಂದ ಕೇವಲ 200 ಮೀಟರ್‌ ದೂರದಲ್ಲಿರುವ ಶ್ಮಶಾನವನ್ನು ಮಂಗಳವಾರದ ಮಟ್ಟಿಗೆ ಮುಚ್ಚುವಂತೆ ಪೊಲೀಸರು ನಮ್ಮನ್ನು ಕೇಳಿಕೊಂಡಿದ್ದರು. ಆ ಪ್ರಕಾರ ನಾವು ಇಂದು ಮಂಗಳವಾರ ಶ್ಮಶಾನವನ್ನು ಮುಚ್ಚಿದ್ದೇವೆ. ಜನರು ಇಲ್ಲಿಂದ ಒಂದೂವರೆ ಕಿ.ಮೀ. ದೂರದಲ್ಲಿರುವ ಬೇಲ್‌ಬಜಾರ್‌ ಶ್ಮಶಾನದಲ್ಲಿ ಶವ ಸಂಸ್ಕಾರ ನಡೆಸಬಹುದಾಗಿದೆ; ಶ್ಮಶಾನ ಮುಚ್ಚಿರುವ ಬಗ್ಗೆ ನಾವು ಹೊರಗೆ ಬೋರ್ಡ್‌ ಕೂಡ ಹಾಕಿದ್ದೇವೆ; ಶ್ಮಶಾನದ ಗೇಟಿನ ಬಳಿ ಪೊಲೀಸರನ್ನು ನಿಯೋಜಿಸಿ ಜನರಿಗೆ ಪರ್ಯಾಯ ಸೌಕರ್ಯ ಬಳಸುವಂತೆ ಸೂಚಿಸಬೇಕು ಎಂದು ನಾನು ಅಧಿಕಾರಿಗಳಿಗೆ ಹೇಳಿದ್ದೇನೆ’ ಎಂದು ಶೇಟೆ ಮಾಧ್ಯಮ ಪ್ರಶ್ನೆಗೆ ಉತ್ತರಿಸಿದರು. 

2014ರಲ್ಲಿ ಪ್ರಧಾನಿ ಮೋದಿ ಅವರು ಇದೇ ಫ‌ಡ್‌ಕೆ ಮೈದಾನದಲ್ಲಿ ರಾಜ್ಯ ವಿಧಾನಸಭಾ ಚುನಾವಣೆಗಳ ಪ್ರಚಾರಾಭಿಯಾನ ನಡೆಸಿದ್ದರು.

ಟಾಪ್ ನ್ಯೂಸ್

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

ಆ*ತ್ಮಹತ್ಯೆಗಾಗಿ 14ನೇ ಮಹಡಿ ಮೇಲಿನಿಂದ ಜಿಗಿದ ಯುವಕ ಬಾಳೆಗಿಡಕ್ಕೆ ಬಿದ್ದು ಬದುಕಿದ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

Horoscope: ಯಾವುದೇ ಪರಿಸ್ಥಿತಿಯನ್ನು ಎದುರಿಸಿ  ಕೆಲಸ ಮಾಡುವ ಧೈರ್ಯ ನಿಮ್ಮದಾಗಿರಲಿದೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

ಕರಾವಳಿ ಜಿಲ್ಲೆಗಳಲ್ಲಿ ಗಗನಕ್ಕೇರಿದ ಹೂವಿನ ಧಾರಣೆ; ಖರೀದಿ ಪ್ರಮಾಣ ಇಳಿಕೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

1-twin

Kerala; ಒಂದೇ ವೇದಿಕೆಯಲ್ಲಿ 150 ಅವಳಿಗಳ ಸಂಭ್ರಮ

1-weweweqwe

Manipal ಹಾಸ್ಪಿಟಲ್ಸ್‌ ಪಾಲಾದ ಮೆಡಿಕಾ ಸಿನರ್ಜಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

B.Y. Raghavendra: ಕಾಂಗ್ರೆಸ್‌ನವರ ಬಳಿ ಗ್ಯಾರಂಟಿ ಅಡ್ವಾನ್ಸ್‌ ಹಣ ಕೇಳಿ: ಬಿವೈಆರ್‌

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.