ಸಚಿವ ಸಂಪುಟ ವಿಸ್ತರಣೆಗೆ ಸೂತ್ರ ಸಿದ್ಧ


Team Udayavani, Dec 19, 2018, 10:01 AM IST

12.jpg

ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಗೆ ಕಾಲ ಕೂಡಿ ಬಂದಂತಿದ್ದು ಜಾತಿವಾರು, ಪ್ರಾದೇಶಿಕವಾರು ಅಸಮಾಧಾನ ಸ್ಫೋಟವಾಗದಂತೆ ಎಚ್ಚರವಹಿಸಲು ಕಾಂಗ್ರೆಸ್‌ ಹಾಗೂ ಜೆಡಿಎಸ್‌ ಮುಂದಾಗಿವೆ. ಸಮ್ಮಿಶ್ರ ಸರ್ಕಾರವಾದ್ದರಿಂದ ಕಾಂಗ್ರೆಸ್‌ ಹಾಗೂ
ಜೆಡಿಎಸ್‌ ಎರಡೂ ಪಕ್ಷಗಳಿಂದ ಸಮುದಾಯವಾರು -ಪ್ರಾದೇಶಿಕವಾರು ಲೆಕ್ಕಾಚಾರದಲ್ಲಿ ಅವಕಾಶ ಕಲ್ಪಿಸಲು  ತೀರ್ಮಾನಿಸಲಾಗಿದೆ. ಸಂಪುಟ ವಿಸ್ತರಣೆ ವಿಚಾರದಲ್ಲಿ ಮಾಜಿ ಪ್ರಧಾನಿ ಎಚ್‌.ಡಿ.ದೇವೇಗೌಡರು ಹಾಗೂ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಅಧ್ಯಕ್ಷರೂ ಆದ ಸಮನ್ವಯ ಸಮಿತಿ ಅಧ್ಯಕ್ಷ ಸಿದ್ದರಾಮಯ್ಯ ಅವರು ಸಮಾಲೋಚಿಸಿಯೇ ಸೂತ್ರ ರಚಿಸಿದ್ದಾರೆ.

ಮುಖ್ಯಮಂತ್ರಿ ಸೇರಿ 34 ಸದಸ್ಯ ಬಲದ ಸಂಪುಟದಲ್ಲಿ ಪ್ರಸ್ತುತ ಕಾಂಗ್ರೆಸ್‌ನ 16, ಜೆಡಿಎಸ್‌ನ 10 ಮಂದಿ ಸಂಪುಟದಲ್ಲಿದ್ದಾರೆ. ವಿಸ್ತರಣೆಯಾದರೆ ಕಾಂಗ್ರೆಸ್‌-6, ಜೆಡಿಎಸ್‌-2 ಸ್ಥಾನ ತುಂಬಬೇಕಿದೆ. ಪ್ರಸ್ತುತ ಒಕ್ಕಲಿಗ ಸಮುದಾಯಕ್ಕೆ ಸಂಪುಟದಲ್ಲಿ ಹೆಚ್ಚು (ಕಾಂಗ್ರೆಸ್‌-ಜೆಡಿಎಸ್‌ ಸೇರಿ 9 ಮಂದಿ) ಅವಕಾಶ ಸಿಕ್ಕಿದೆ. ಲಿಂಗಾಯತ-4, ಕುರುಬ ಸಮುದಾಯ-2, ಮುಸ್ಲಿಂ -2 ದಲಿತ (ಬಲಗೈ)- 2 , ಕ್ರಿಶ್ಚಿಯನ್‌-1, ಉಪ್ಪಾರ-1, ಈಡಿಗ-1 ಬ್ರಾಹ್ಮಣ-1, ಬೋವಿ-1, ಎಸ್‌ಟಿ-1 ರೆಡ್ಡಿ-1 ಅವಕಾಶ ಸಿಕ್ಕಿದೆ. ಜೆಡಿಎಸ್‌ನ ಎರಡು ಕೋಟಾದಡಿ ಒಂದು ಮುಸ್ಲಿಂ, ಮತ್ತೂಂದು ಪರಿಶಿಷ್ಟ ಜಾತಿಗೆ ಅವಕಾಶ ಕಲ್ಪಿಸಲು ಜೆಡಿಎಸ್‌ ತೀರ್ಮಾನಿಸಿದೆ. ಆ ಪೈಕಿ ಬಿ.ಎಂ.ಫರೂಕ್‌, ಎಚ್‌.ಕೆ.ಕುಮಾರಸ್ವಾಮಿ, ಅನ್ನದಾನಿ , ಶ್ರೀನಿವಾಸಮೂರ್ತಿ ರೇಸ್‌ನಲ್ಲಿದ್ದಾರೆ. ಜತೆಗೆ ಮಾಜಿ ಸಚಿವ ಎನ್‌.ಮಹೇಶ್‌ ಮತ್ತೆ ಬಿಎಸ್‌ಪಿ ಕೋಟಾದಡಿ ಸಚಿವರಾಗಲು ಬಯಸಿದ್ದು ಪಕ್ಷದ ಅಧ್ಯಕ್ಷೆ ಮಾಯಾವತಿ ಮೇಲೆ ಒತ್ತಡ ಹೇರುತ್ತಿದ್ದಾರೆಂದು ಹೇಳಲಾಗಿದೆ.

ಇನ್ನು ಕಾಂಗ್ರೆಸ್‌ನ ಆರು ಸ್ಥಾನಗಳಲ್ಲಿ ರೆಡ್ಡಿ, ಕುರುಬ, ಲಿಂಗಾಯತ, ಮುಸ್ಲಿಂ, ದಲಿತ ಎಡಗೈ, ಎಸ್‌ಟಿ ಸಮುದಾಯಕ್ಕೆ ತಲಾ ಒಂದೊಂದು ಸ್ಥಾನ ನೀಡುವ ಲೆಕ್ಕಾಚಾರ ಹಾಕಲಾಗಿದೆ. ರೆಡ್ಡಿ ಸಮುದಾಯದಲ್ಲಿ ಎಚ್‌.ಕೆ.ಪಾಟೀಲ್‌, ರಾಮಲಿಂಗಾರೆಡ್ಡಿ, ಲಿಂಗಾಯತ ಸಮುದಾಯಲ್ಲಿ ಎಂ.ಬಿ.ಪಾಟೀಲ್‌, ಬಿ.ಸಿ.ಪಾಟೀಲ್‌, ಸಂಗಮೇಶ್‌, ಅಮರೇಗೌಡ ಬಯ್ನಾಪುರ, ಮುಸ್ಲಿಂ ಸಮುದಾಯದಲ್ಲಿ ರಹೀಂ ಖಾನ್‌, ತನ್ವೀರ್‌ ಸೇs…, ದಲಿತ ಎಡಗೈ ಸಮುದಾಯದಲ್ಲಿ ರೂಪಾ ಶಶಿಧರ್‌, ಆರ್‌.ಬಿ. ತಿಮ್ಮಾಪುರ್‌, ಧರ್ಮಸೇನಾ, ಕುರುಬ ಸಮುದಾಯದಲ್ಲಿ ಸಿ.ಎಸ್‌.ಶಿವಳ್ಳಿ, ಎಂ.ಟಿ.ಬಿ.ನಾಗರಾಜ್‌, ಎಸ್‌ಟಿ ಸಮುದಾಯದಲ್ಲಿ ತುಕಾರಾಂ, ನಾಗೇಂದ್ರ ಪೈಕಿ ಒಬ್ಬರಿಗೆ ಅವಕಾಶ ಸಿಗುವ ಸಾಧ್ಯತೆಯಿದೆ. ಆಗ ಒಟ್ಟಾರೆ ಲೆಕ್ಕಾಚಾರದಲ್ಲಿ ಒಕ್ಕಲಿಗರಿಗೆ-10, ಲಿಂಗಾಯತ-5, ಕುರುಬ-3, ಮುಸ್ಲಿಂ-3, ದಲಿತ
ಬಲಗೈ-3, ಎಡಗೈ-1, ಕ್ರಿಶ್ಚಿಯನ್‌-1, ಉಪ್ಪಾರ-1, ಬ್ರಾಹ್ಮಣ-1, ಈಡಿಗ-1, ಎಸ್‌ಟಿ-2, ಬೋವಿ-1, ರೆಡ್ಡಿ-2 ಆಗಲಿದೆ.

ಜೆಡಿಎಸ್‌ನಲ್ಲಿ ಮುಸ್ಲಿಂ ಸಮುದಾಯಕ್ಕೆ ಅವಕಾಶ ಮಾಡಿಕೊಟ್ಟರೆ ಕಾಂಗ್ರೆಸ್‌ನಲ್ಲಿ ಕೊಡಬೇಕೇ? ಬೇಡವೇ? ಈಗಾಗಲೇ ಸಂಪುಟದಲ್ಲಿ ದಲಿತ ಬಲಗೈ ಪಂಗಡಕ್ಕೆ 2 ಸ್ಥಾನ ನೀಡಲಾಗಿದ್ದು ಮತ್ತೆ ಜೆಡಿಎಸ್‌ನಿಂದಲೂ ಬಲಗೈ ಪಂಗಡಕ್ಕೆ ಕೊಡಬೇಕೇ? ಎಂಬ ಚರ್ಚೆಯೂ ಇದೆ. ಕರಾವಳಿ ಭಾಗಕ್ಕೆ ಸಂಪುಟದಲ್ಲಿ ಯು.ಟಿ.ಖಾದರ್‌, ಜಯಮಾಲಾ ಹೊರತುಪಡಿಸಿ ಬೇರೆ ಅವಕಾಶ ಕಲ್ಪಿಸಲಾಗಿಲ್ಲ ಎಂಬ ಕಾರಣಕ್ಕೆ ಪ್ರತಾಪಚಂದ್ರ ಶೆಟ್ಟಿ ಅವರಿಗೆ ಸಭಾಪತಿ ಸ್ಥಾನ ಕಲ್ಪಿಸಲಾಯಿತು. ಜೆಡಿಎಸ್‌ನಿಂದ ಆ ಭಾಗಕ್ಕೆ ಪ್ರಾತಿನಿಧ್ಯ ಕಲ್ಪಿಸಲು
ಬಿ.ಎಂ. ಫರೂಕ್‌ಗೆ ಅವಕಾಶ ಕಲ್ಪಿಸಲು ನಿರ್ಧರಿಸಲಾಗಿದೆ. ಹೀಗಾಗಿ, ಉತ್ತರ ಕರ್ನಾಟಕ, ಕರಾವಳಿ, ಹಳೇ ಮೈಸೂರು ಎಲ್ಲ ಭಾಗಕ್ಕೂ ಒಟ್ಟಾರೆ ಸಂಪುಟದಲ್ಲಿ ಸಮಾನ ಅವಕಾಶ ಕಲ್ಪಿಸಿದಂತಾಗಿದೆ ಎಂಬುದು ಕಾಂಗ್ರೆಸ್‌ನ ವಾದ. 

ಉತ್ತರ ಕರ್ನಾಟಕಕ್ಕೆ 34 ರಲ್ಲಿ 10 
ಉತ್ತರ ಕರ್ನಾಟಕ ಭಾಗದಲ್ಲಿ ಕಾಂಗ್ರೆಸ್‌ನಿಂದ ಪ್ರಸ್ತುತ ರಮೇಶ್‌ ಜಾರಕಿಹೊಳಿ, ಪ್ರಿಯಾಂಕ್‌ ಖರ್ಗೆ, ಶಿವಾನಂದ ಪಾಟೀಲ್‌, ರಾಜಶೇಖರ ಪಾಟೀಲ್‌ ಹುಮ್ನಾಬಾದ್‌, ಜೆಡಿಎಸ್‌ನಿಂದ ಬಂಡೆಪ್ಪ ಖಾಶೆಂಪೂರ್‌, ಎಂ.ಸಿ.ಮನಗೂಳಿ ಹಾಗೂ ವೆಂಕಟರಾವ್‌ ನಾಡಗೌಡ ಅವರಿಗೆ ಅವಕಾಶ ಕಲ್ಪಿಸಲಾಗಿದೆ. ಸಂಪುಟ ವಿಸ್ತರಣೆಯಲ್ಲಿ ಮುಸ್ಲಿಂ, ಲಿಂಗಾಯತ , ಕುರುಬ, ಎಸ್‌ಟಿ ಸಮುದಾಯದಿಂದ
ಕನಿಷ್ಠ ಮೂವರು ಸಂಪುಟಕ್ಕೆ ಸೇರಲಿದ್ದಾರೆ. ಆಗ ಒಟ್ಟಾರೆ ಸಂಪುಟದಲ್ಲಿ 10 ಸ್ಥಾನ ಸಿಕ್ಕಂತಾಗುತ್ತದೆ. ಒಂದೊಮ್ಮೆ ಸಂಪುಟ ಪುನಾರಚನೆ ಆದರೂ 10 ಸಂಖ್ಯೆಗೆ ಕಡಿಮೆಯಾಗದಂತೆ ನೋಡಿಕೊಳ್ಳುವುದು. ಆಗ ಯಾವುದೇ ರೀತಿಯ ಅಸಮಾಧಾನ ಬಾರದು ಎಂಬ ಲೆಕ್ಕಾಚಾರ ಕಾಂಗ್ರೆಸ್‌-ಜೆಡಿಎಸ್‌ನದು.

ಸಿಎಂಗೆ ಕಾಂಗ್ರೆಸ್‌ ಒತ್ತಡ
ನಿಗಮ ಮಂಡಳಿಗಳಲ್ಲಿ 20 ಕಾಂಗ್ರೆಸ್‌, 10 ಜೆಡಿಎಸ್‌ ಸ್ಥಾನ ತುಂಬಲಿದ್ದು, 10 ಸಂಸದೀಯ ಕಾರ್ಯದರ್ಶಿಗಳಲ್ಲಿ 7 ಕಾಂಗ್ರೆಸ್‌, 3 ಜೆಡಿಎಸ್‌ ತುಂಬಲಿದ್ದು ಅಲ್ಲಿ ಸಂಪುಟ ವಂಚಿತರು ಹಾಗೂ ಸಂಪುಟದಲ್ಲಿ ಕಡಿಮೆ ಅವಕಾಶ ದೊರೆಯುವ ಸಮುದಾಯಗಳಿಗೆ ಹೆಚ್ಚಾಗಿ ಹಿಂದುಳಿದ, ಅಲ್ಪಸಂಖ್ಯಾತರಿಗೆ ಅವಕಾಶ ಕಲ್ಪಿಸಲು ಲೆಕ್ಕಾಚಾರ ಹಾಕಲಾಗಿದೆ. ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ತಮ್ಮ ಪಕ್ಷದವರನ್ನು ನೇಮಿಸಲು ಕಾಂಗ್ರೆಸ್‌ ಒತ್ತಡ ಹಾಕುತ್ತಿದೆ. ಆದರೆ, ಆ ಸ್ಥಾನಕ್ಕೆ ಕುಮಾರಸ್ವಾಮಿಯವರು ಮಧು ಬಂಗಾರಪ್ಪ ಅವರನ್ನು ನೇಮಿಸಿಕೊಳ್ಳುವ ಬಗ್ಗೆ ಒಲವು ಹೊಂದಿದ್ದಾರೆ ಎಂದು ಹೇಳಲಾಗಿದೆ.

ಎಸ್‌.ಲಕ್ಷ್ಮಿನಾರಾಯಣ

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Lok Sabha Election: ಗ್ಯಾರಂಟಿಗೆ ಮೋಸ ಹೋಗದೆ ಬಿಜೆಪಿಗೆ ಮತ ನೀಡಿ: ಬಿವೈಆರ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.