ಮನ್ನಾ ಆಗುವವರೆಗೆ ಸಾಲ ಮರುಪಾವತಿಸುವುದಿಲ್ಲ: ಬಸವರಾಜು


Team Udayavani, Dec 19, 2018, 12:22 PM IST

19-december-7.gif

ನಗರ : ಸಾಲ ವಿಚಾರದಲ್ಲಿ ಮನೆ- ಮಠ ಜಪ್ತಿ ಮಾಡುವ ಅವಕಾಶ ಕಾನೂನಿನಲ್ಲಿ ಇಲ್ಲ. ಆದ್ದರಿಂದ ಸಂಪೂರ್ಣ ಮನ್ನಾ ಆಗುವವರೆಗೆ ಸಾಲ ಮರುಪಾವತಿಸುವುದಿಲ್ಲ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಕಾರ್ಯಾಧ್ಯಕ್ಷ ಎಚ್‌.ಆರ್‌. ಬಸವರಾಜು ಹೇಳಿದರು. ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪುತ್ತೂರಿನ ಮಿನಿ ವಿಧಾನಸೌಧದ ಎದುರು ಮಂಗಳವಾರ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಸಮಿತಿ ನೇತೃತ್ವದಲ್ಲಿ ನಡೆದ ಪ್ರತಿಭಟನೆಯಲ್ಲಿ ಮಾತನಾಡಿದರು.

ಗೊಂದಲದ ಗೂಡು
ರಾಜ್ಯದಲ್ಲಿ ಶೇ. 65ರಷ್ಟು ಸಂಖ್ಯೆಯಲ್ಲಿ ರೈತರಿದ್ದಾರೆ. ಜಮೀನು ಹರಾಜು ಪ್ರಕ್ರಿ ಯೆಗೆ ಮುಂದಾದರೆ ಸರ್ಕಾರ ಮೂರು ಗಂಟೆಯೂ ಉಳಿಯುವುದಿಲ್ಲ. ಸಾಲ ಮನ್ನಾ ವಿಚಾರದಲ್ಲಿ ರಾಜ್ಯದ ಮುಖ್ಯಮಂತ್ರಿಗಳು ಹಾಗೂ ಸಚಿವರು ದಿನಕ್ಕೊಂದು ಹೇಳಿಕೆ ನೀಡುತ್ತಿದ್ದಾರೆ. ಈ ವರ್ಷ ಬಡ್ಡಿ ಮನ್ನಾ ಮಾಡುವುದಾಗಿ ಹೇಳುತ್ತಿದ್ದು, ಸಾಲ ಮನ್ನಾ ವಿಚಾರವೇ ಗೊಂದಲದ ಗೂಡಾಗಿದೆ. ಬ್ಯಾಂಕ್‌ಗಳಲ್ಲಿಯೂ ಈ ಬಗ್ಗೆ ಸ್ಪಷ್ಟತೆ ಇಲ್ಲ. ಸಾಲದ ವಿಚಾರದಲ್ಲಿ ಜಪ್ತಿಗೆ ಬಂದರೆ ಪ್ರತಿಭಟಿಸಿ ಎಂದು ಕರೆ ನೀಡಿದರು.

ಡಾ| ಸ್ವಾಮಿನಾಥನ್‌ ವರದಿಯ ಜಾರಿಗೆ ಯಾವುದೇ ಸರಕಾರ ಕ್ರಮ ಕೈಗೊಂಡಿಲ್ಲ. ಈ ವರದಿಯನ್ನು ಜಾರಿಗೊಳಿಸುವುದಾಗಿ ವಾಗ್ಧಾನ ನೀಡಿದ ಬಿಜೆಪಿ ಸರಕಾರ, ಅದಕ್ಕೆ ಮೊದಲಿದ್ದ ಕಾಂಗ್ರೆಸ್‌ ಸರಕಾರ ಭರವಸೆಯನ್ನು ಈಡೇರಿಸಿಲ್ಲ. ಇದರಿಂದಾಗಿ ರೈತ ವರ್ಗಕ್ಕೆ ಬೇಡುವ ಸ್ಥಿತಿ ಬಂದಿದೆ ಎಂದರು. ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ರಾಜ್ಯ ಸಮಿತಿ ಸಂಚಾಲಕ ರಾಜು ಹಿಟ್ಟೂರು ಮಾತನಾಡಿ, ಕನಿಷ್ಠ ಶಿಕ್ಷಣ ಪಡೆದವರಿಗೆ ರೈತರು ಉದ್ಯೋಗ ನೀಡುವ ಪರಿಸ್ಥಿತಿ ಇಂದು ಬಂದಿದೆ ಎಂದರು.

ರಾಜ್ಯ ರೈತ ಸಂಘ ಹಾಗೂ ಹಸಿರುಸೇನೆಯ ಜಿಲ್ಲಾಧ್ಯಕ್ಷ ಶ್ರೀಧರ್‌ ರೈ ಬೈಲುಗುತ್ತು ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ಕುಮಾರ ಸುಬ್ರಹ್ಮಣ್ಯ ಶಾಸ್ತ್ರಿ, ರಾಜ್ಯ ರೈತ ಸಂಘ- ಹಸಿರುಸೇನೆಯ ಶಿವಮೊಗ್ಗ ಜಿಲ್ಲಾ ಸಮಿತಿಯ ಅಧ್ಯಕ್ಷ ಶೇಖರಪ್ಪ, ದ.ಕ. ಜಿಲ್ಲಾ ಸಮಿತಿಯ ಉಪಾಧ್ಯಕ್ಷ ಧರ್ಣಪ್ಪ ಗೌಡ ಇಡ್ಯಾಡಿ, ಪ್ರಧಾನ ಕಾರ್ಯದರ್ಶಿಗಳಾದ ಈಶ್ವರ ಭಟ್‌ ಬಡಿಲ ಮತ್ತು ಹೊನ್ನಪ್ಪ ಗೌಡ ಪರಣೆ, ಗೌರವ ಸಲಹೆಗಾರ ಮುರುವ ಮಹಾಬಲ ಭಟ್‌, ಕಾರ್ಯದರ್ಶಿ ಈಶ್ವರ ಗೌಡ ಕುಂತೂರು, ಕಡಬ ತಾಲೂಕು ಅಧ್ಯಕ್ಷ ವಿಕ್ಟರ್‌ ಡಿ’ಸೋಜಾ, ಬಂಟ್ವಾಳ ತಾಲೂಕು ಕಾರ್ಯದರ್ಶಿ ಸುದೇಶ್‌ ಭಂಡಾರಿ, ಸುಳ್ಯ ತಾಲೂಕು ಕಾರ್ಯದರ್ಶಿ ಸಿರಿಲ್‌ ಕ್ರಾಸ್ತಾ, ಸಂಘಟನೆಯ ಪ್ರಮುಖರಾದ ಸುದೇಶ್‌ ಮಯ್ಯ, ಶೇಖರ್‌ ರೈ ಕುಂಬ್ರ, ಸುದರ್ಶನ್‌ ನಾೖಕ್‌ ಕಂಪ, ಜಯಪ್ರಕಾಶ್‌ ರೈ ನೂಜಿಬೈಲು ಉಪಸ್ಥಿತರಿದ್ದರು.

ಸರಕಾರ ರೈತ ಪರವಾಗಿಲ್ಲ
ಅಧಿಕಾರಕ್ಕೆ ಬಂದ ಒಂದೇ ಗಂಟೆಯೊಳಗೆ ಸಾಲ ಮನ್ನಾ ಮಾಡುವುದಾಗಿ ಹೇಳಿದ್ದ ಮೋದಿ ಅವರು ಭರವಸೆ ಈಡೇರಿಸಿಲ್ಲ. ಫಸಲ್‌ ಬಿಮಾ ಯೋಜನೆ ರೈತ ಪರವಾಗಿಲ್ಲ. ಮಧ್ಯಪ್ರದೇಶದಲ್ಲಿ ರೈತರ ಮೇಲೆ ಗೋಲಿಬಾರ್‌ ನಡೆಸಲಾಯಿತು. ರೈತರನ್ನು ದಿಲ್ಲಿಗೆ ಹೋಗದಂತೆ ತಡೆಯಲಾಯಿತು. ಇದರ ಪರಿಣಾಮ ಇತ್ತೀಚೆಗೆ ನಡೆದ ಪಂಚ ರಾಜ್ಯಗಳ ಚುನಾವಣೆಯಲ್ಲಿ ರೈತರು ಅವರ ನ್ನು ರಾಜ್ಯಕ್ಕೆ ಬಾರದಂತೆ ತಡೆಯುವ ಕೆಲಸ ಮಾಡಿದ್ದಾರೆ ಎಂದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.