ಶೀಘ್ರ ಬರಪೀಡಿತ ತಾಲೂಕುಗಳ ಘೋಷಣೆ 


Team Udayavani, Dec 20, 2018, 6:00 AM IST

57.jpg

ವಿಧಾನಸಭೆ: ಡಿಸೆಂಬರ್‌ 31ರ ನಂತರ ರಾಜ್ಯದಲ್ಲಿ ಹಿಂಗಾರು ಹಂಗಾಮಿನಲ್ಲಿ ಮಳೆ ಕೊರತೆಯಾದ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗುವುದು ಎಂದು ಕಂದಾಯ ಸಚಿವ ಆರ್‌ .ವಿ. ದೇಶಪಾಂಡೆ ತಿಳಿಸಿದ್ದಾರೆ. ಬರ ಮೇಲಿನ ಚರ್ಚೆಗೆ ಉತ್ತರ ನೀಡಿದ ಅವರು, ಮುಂಗಾರು ಹಂಗಾಮಿನಲ್ಲಿ 100 ತಾಲೂಕುಗಳನ್ನು ಬರ ಪೀಡಿತ ತಾಲೂಕುಗಳೆಂದು ಘೋಷಣೆ ಮಾಡಲಾಗಿದೆ. ಹಿಂಗಾರು ಹಂಗಾಮಿನಲ್ಲಿಯೂ ಮಳೆಯ ಕೊರತೆಯಿಂದ ಬರಪೀಡಿತ ತಾಲೂಕುಗಳ ಸಂಖ್ಯೆಯಲ್ಲಿ ಹೆಚ್ಚಳವಾಗಲಿದ್ದು, ಡಿ.31ರ ನಂತರ ಹಿಂಗಾರು ಹಂಗಾಮಿನ ಬರಪೀಡಿತ ತಾಲೂಕುಗಳನ್ನು ಘೋಷಣೆ ಮಾಡಲಾಗುವುದು ಎಂದು ಹೇಳಿದರು. 

ರಾಜ್ಯದಲ್ಲಿ 2001ರಿಂದ 2018ರವರೆಗೆ ನಾಲ್ಕು ವರ್ಷ ಹೊರತುಪಡಿಸಿ 14 ವರ್ಷ ಬರ ಪರಿಸ್ಥಿತಿ ನಿರ್ಮಾಣವಾಗಿದೆ. ಬರಪೀಡಿತ ತಾಲೂಕುಗಳ ಘೋಷಣೆಗೆ ಕೇಂದ್ರ ಸರ್ಕಾರವೇ ನಿಯಮ ರೂಪಿಸಿದ್ದು, ಅದರ ಆಧಾರದಲ್ಲಿಯೇ ಬರ ತಾಲೂಕುಗಳನ್ನು ಘೋಷಣೆ ಮಾಡಲಾಗುತ್ತಿದೆ. ಮುಂಗಾರು ಹಂಗಾಮಿನಲ್ಲಿ ಜೂನ್‌ನಿಂದ ಸೆಪ್ಟೆಂಬರ್‌ ಅಂತ್ಯದವರೆಗೆ ವಾಡಿಕೆಯಂತೆ 839 ಮಿಲಿ ಮೀಟರ್‌
ಮಳೆಯಾಗಬೇಕು. ಆದರೆ, ಈ ವರ್ಷ 204 ಮಿಲಿ ಮೀಟರ್‌ ಮಾತ್ರ ಮಳೆಯಾಗಿದೆ. ಕರಾವಳಿ ಹಾಗೂ ಕೊಡಗು ಜಿಲ್ಲೆಗಳಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿದೆ. ಮುಂಗಾರು ಹಂಗಾಮಿನಲ್ಲಿ 74.69 ಲಕ್ಷ ಹೆಕ್ಟೇರ್‌ ಬಿತ್ತನೆ ಪ್ರದೇಶವಿದ್ದು, 2018-19ರಲ್ಲಿ 66.36 ಲಕ್ಷ
ಹೆಕ್ಟೇರ್‌ ಪ್ರದೇಶದಲ್ಲಿ ಬಿತ್ತನೆಯಾಗಿದೆ. ಮುಂಗಾರು ಹಂಗಾಮಿನಲ್ಲಿ ಬೆಳೆ ಹಾನಿಯಿಂದ ಆಗಿರುವ ನಷ್ಟದ ಪ್ರಮಾಣವನ್ನು 16662.48 ಕೋಟಿ ರೂ.ಎಂದು ಅಂದಾಜಿಸಲಾಗಿದ್ದು, ಈಗಾಗಲೇ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇವೆ ಎಂದು ಮಾಹಿತಿ ನೀಡಿದರು.

ಬರ ಪರಿಹಾರ ಒಂದು ಪಕ್ಷದ ಕೆಲಸವಲ್ಲ. ಬಡವರು, ರೈತರು, ಕಷ್ಟದಲ್ಲಿರುವವರ ರಕ್ಷಣೆಗೆ ಎಲ್ಲರೂ ಒಂದಾಗಿ ಕೆಲಸ ಮಾಡಬೇಕು. ಸಂಪುಟ ಉಪ ಸಮಿತಿಯೂ ನಿರಂತರ ಕೆಲಸ ಮಾಡುತ್ತಿದೆ. ಜಿಲ್ಲಾಧಿಕಾರಿಗಳ ಖಾತೆಗಳಲ್ಲಿಯೂ 226 ಕೋಟಿ ರೂ. ಹಣ ಇಡಲಾಗಿದೆ. ಈಗಾಗಲೇ ಏಪ್ರಿಲ್‌ನಿಂದ ನವೆಂಬರ್‌ವರೆಗೆ ಹಣಕಾಸು ಇಲಾಖೆಯಿಂದ 138 ಕೋಟಿ ರೂ.ಹಣ ಬಿಡುಗಡೆ ಮಾಡಲಾಗಿದೆ. ಹಣ ಇದ್ದರೂ ಖರ್ಚು ಮಾಡದಿದ್ದರೆ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಕೊಡಗಿನಲ್ಲಿ ಹಣ ವಿತರಣೆ: ಕೊಡಗಿನಲ್ಲಿ ಪ್ರವಾಹದಿಂದ ಹಾನಿಗೊಳಗಾದ ಕುಟುಂಬಗಳಿಗೆ 7 ಲಕ್ಷ ರೂ.ಪರಿಹಾರ ನೀಡಲಾಗಿದೆ. ಕೇಂದ್ರ ಸರ್ಕಾರ 546 ಕೋಟಿ ರೂ.ಬಿಡುಗಡೆ ಮಾಡಿದ್ದು, ಕಾಫಿ, ಭತ್ತ, ತೋಟಗಾರಿಕಾ ಬೆಳೆ ಹಾನಿಗೊಳಗಾದ ರೈತರಿಗೆ ಒಂದು 
ವಾರದಲ್ಲಿ ಪರಿಹಾರ ವಿತರಿಸಲಾಗುವುದು. ಕೇಂದ್ರದಿಂದ ಎಸ್‌ಡಿಆರ್‌ಎಫ್ ನಿಧಿಯಿಂದ ರಾಜ್ಯಕ್ಕೆ ಬರುವ ಅನುದಾನದಲ್ಲಿ ಅನ್ಯಾಯವಾಗಿದೆ. ಮಹಾರಾಷ್ಟ್ರ, ಗುಜರಾತ್‌, ತಮಿಳುನಾಡು, ಆಂಧ್ರಪ್ರದೇಶ ರಾಜ್ಯಗಳಿಗೆ ಹೆಚ್ಚಿನ ಪರಿಹಾರ ನೀಡಿ ರಾಜ್ಯಕ್ಕೆ ಅರ್ಧದಷ್ಟು ಪರಿಹಾರ ಬಿಡುಗಡೆ ಮಾಡಲಾಗಿದೆ ಎಂದು ಆರೋಪಿಸಿದರು. ದೇಶದಲ್ಲಿ 24 ಜಿಲ್ಲೆಗಳು ನಿರಂತರ ಬರಪೀಡಿತ
ಜಿಲ್ಲೆಗಳೆಂದು ಕೇಂದ್ರದ ಸಂಸ್ಥೆ ಗುರುತಿಸಿದ್ದು, ಅದರಲ್ಲಿ ರಾಜ್ಯದ 16 ಜಿಲ್ಲೆಗಳು ಸೇರಿವೆ. 15ನೇ ಹಣಕಾಸು ಆಯೋಗಕ್ಕೆ ರಾಜ್ಯದ ಬರಗಾಲ ಪರಿಸ್ಥಿತಿಯ ಬಗ್ಗೆ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಹೇಳಿದರು.

ಬಿಜೆಪಿ ಸದಸ್ಯರ ಬಗ್ಗೆ ಸ್ಪೀಕರ್‌ ಗರಂ
ಬರ ಪರಿಸ್ಥಿತಿ ಮೇಲಿನ ಕಂದಾಯ ಸಚಿವರ ಉತ್ತರಕ್ಕೆ ಸ್ಪಷ್ಟೀಕರಣ ಕೇಳಲು ಬಿಜೆಪಿಯ ಎಲ್ಲರೂ ಅವಕಾಶಕ್ಕಾಗಿ ಕೈ ಮೇಲೆತ್ತುತ್ತಿದ್ದರು. ಸಭಾಪತಿ ರಮೇಶ್‌ ಕುಮಾರ್‌ ಹಿರಿತನದ ಆಧಾರದಲ್ಲಿ ಒಬ್ಬೊಬ್ಬರಿಗೆ ಅವಕಾಶ ಕಲ್ಪಿಸಿಕೊಡುವುದಾಗಿ ಹೇಳಿದ್ದರು. ಆದರೂ, ಹಿಂದಿನ ಸಾಲಿನ ಸದಸ್ಯರು ಮೇಲಿಂದ ಮೇಲೆ ಕೈ ಎತ್ತಿದರು. ಅಲ್ಲದೆ, ಸ್ಪಷ್ಟೀಕರಣ ಕೇಳುವ ಬದಲು ತಮ್ಮ ಕ್ಷೇತ್ರಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸುವಂತೆ ಮನವಿ ಮಾಡಿದರು. ಗ್ರಾಮೀಣಾಭಿವೃಫಿ ಸಚಿವ ಕೃಷ್ಣ ಬೈರೆಗೌಡ ಈ ಬಗ್ಗೆ ಸ್ಪಷ್ಟನೆ ನೀಡಿದರೂ, ತಮ್ಮ ತಾಲೂಕುಗಳನ್ನು ಬರಪೀಡಿತ ತಾಲೂಕುಗಳ ಪಟ್ಟಿಗೆ ಸೇರಿಸುವಂತೆ ಕೇಳಿದ್ದರಿಂದ ಸಿಟ್ಟಾದ ರಮೇಶ್‌ ಕುಮಾರ್‌, ನೀವು ಬಯಸಿದ ಹಾಗೆ ಸದನ ನಡೆಸಲು ಆಗುವುದಿಲ್ಲ. ಯಾವ ಸಂದರ್ಭದಲ್ಲಿ ಏನು ಚರ್ಚೆ ಮಾಡಬೇಕೆಂದು ಕಲಿತುಕೊಳ್ಳಿ. ನಿಮಗೆ ಕನ್ನಡ ಅರ್ಥ ಆಗುವುದಿಲ್ಲವೇ ಎಂದು ಖಾರವಾಗಿ ಪ್ರಶ್ನಿಸಿದರು.

ಸಂಪುಟ ಉಪ ಸಮಿತಿ ನಿರ್ಣಯಗಳು
ಜನರು ಗುಳೆ ಹೋಗುವುದನ್ನು ತಡೆಯುವುದು. ಬಯಸಿದವರಿಗೆ ಉದ್ಯೋಗ ಒದಗಿಸುವುದು.
ಬ ರಪೀಡಿತ ತಾಲೂಕುಗಳಿಗೆ ಕುಡಿಯುವ ನೀರಿಗಾಗಿ ಹೆಚ್ಚುವರಿ 50 ಲಕ್ಷ ರೂ.ಹಣ ಮಂಜೂರು ಮಾಡುವುದು.
ಮೇವಿನ ಸಮಸ್ಯೆ ಬಗೆಹರಿಸಲು 10 ಕೋಟಿ ರೂ.ಮಂಜೂರು ಮಾಡುವುದು.
2 019ರ ಮೇ 31ರವರೆಗೂ ಅಂತಾರಾಜ್ಯ ಮೇವು ಸಾಗಣೆಗೆ ನಿರ್ಬಂಧ. 
ಅಂತರ್‌ಜಿಲ್ಲೆ ವ್ಯಾಪ್ತಿಯಲ್ಲಿ ಮೇವು ಸಾಗಾಣಿಕೆಗೆ ಅನುಮತಿ. 
ಡಿ.31ರೊಳಗೆ ಹಿಂಗಾರು ಬರಪೀಡಿತ ಜಿಲ್ಲೆಗಳ ಘೋಷಣೆ.
ಶಾಶ್ವತ ಪರಿಹಾರ ಕಂಡುಕೊಳ್ಳಲು ತಜ್ಞರ ಸಮಿತಿ ರಚನೆಗೆ ನಿರ್ಧಾರ.

ಜಿಲ್ಲಾ ಉಸ್ತುವಾರಿ ಸಚಿವರು ಜಿಲ್ಲೆಗಳಿಗೆ ಭೇಟಿ ನೀಡಿಲ್ಲ. ಹಿಂದಿನ ಅವಧಿಯಲ್ಲಿ ನೀರು ಸರಬರಾಜು ಮಾಡಿದವರಿಗೆ ಬಾಕಿ ಹಣ ನೀಡಿಲ್ಲ. ಮೇವು ಕೇಂದ್ರ, ಗೋಶಾಲೆ ತೆರೆದಿಲ್ಲ. ಕೇಂದ್ರ ಸರ್ಕಾರ ಬೆಂಬಲ ಬೆಲೆ ನೀಡಿದ್ದು, ರಾಜ್ಯ ಸರ್ಕಾರ ಯಾರಿಗೆ ನೀಡಿದೆ ಎಂದು ಗೊತ್ತಿಲ್ಲ.
● ಯಡಿಯೂರಪ್ಪ, ಪ್ರತಿಪಕ್ಷದ ನಾಯಕ

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.