3 ತಿಂಗಳಿಂದ ಅಂಗನವಾಡಿ ‘ಮೊಟ್ಟೆ’ ಹಣ ಬಾಕಿ


Team Udayavani, Dec 20, 2018, 1:35 AM IST

egg-600.jpg

ಕುಂದಾಪುರ: ಅಂಗನವಾಡಿ ನೌಕರರಿಗೂ ಮಾಸಿಕ ವೇತನವೇ ಸರಿಯಾಗಿ ಪಾವತಿಯಾಗಿಲ್ಲ. ಈಗ ಅಂಗನವಾಡಿ ಮಕ್ಕಳಿಗೆ ನೀಡುವ ಮೊಟ್ಟೆ ಹಣ ಕಳೆದ 3 ತಿಂಗಳಿನಿಂದ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಜಿಲ್ಲೆಯ ಅಂಗನವಾಡಿ ನೌಕರರಿಗೆ ಹೆಚ್ಚುವರಿ ಹೊರೆಯಾಗುತ್ತಿದೆ. ಮಕ್ಕಳಿಗೆ ವಾರಕ್ಕೆ ಎರಡು ದಿನ ಹಾಗೂ ಗರ್ಭಿಣಿ, ಬಾಣಂತಿಯರಿಗೆ ಸೋಮವಾರದಿಂದ ಶನಿವಾರದವರೆಗೆ ಪ್ರತಿ ದಿನ ಅಂಗನವಾಡಿಯಲ್ಲಿ ಮೊಟ್ಟೆ ನೀಡಲಾಗುತ್ತದೆ. ಈ ಮೊಟ್ಟೆಗಳನ್ನು ಅಂಗನವಾಡಿ ಕಾರ್ಯಕರ್ತೆಯರೇ ಮೊದಲು ಖರೀದಿಸಿಕೊಡಬೇಕು. ಆ ಬಳಿಕ ಸರಕಾರ ನಗರ ಭಾಗದಲ್ಲಿ ಒಂದು ಮೊಟ್ಟೆಗೆ 4.50 ರೂ. ಹಾಗೂ ಗ್ರಾಮೀಣ ಭಾಗದಲ್ಲಿ 5 ರೂ. ನೀಡುತ್ತದೆ. ಆದರೆ ಈ ಹಣವನ್ನು ಸೆಪ್ಟೆಂಬರ್‌ವರೆಗೆ ಮಾತ್ರ ಸರಕಾರ ಬಿಡುಗಡೆ ಮಾಡಿದೆ.

ತರಕಾರಿ ಹಣವೂ ಇಲ್ಲ
ಪ್ರತಿ ಗರ್ಭಿಣಿ ಹಾಗೂ ಬಾಣಂತಿಯರಿಗೆ ತಲಾ 3 ರೂ. ತರಕಾರಿಗೆ ಸರಕಾರದಿಂದ ಹಣ ನೀಡಲಾಗುತ್ತದೆ. ಈಗ ಮೊಟ್ಟೆಯ ಹಣದ ಜತೆಗೆ ತರಕಾರಿ ಹಣವೂ ಕೂಡ ಅಂಗನವಾಡಿ ಕಾರ್ಯಕರ್ತೆಯರಿಗೆ ಸಿಕ್ಕಿಲ್ಲ.

ಕೊಡುವ ದರದಲ್ಲಿ ‘ವ್ಯತ್ಯಾಸ’
ಸರಕಾರವು ಒಂದು ಮೊಟ್ಟೆಗೆ ನಗರ ಭಾಗದಲ್ಲಿ 4.50 ರೂ. ನೀಡಿದರೆ, ಗ್ರಾಮೀಣ ಭಾಗದಲ್ಲಿ 5 ರೂ.ಯಂತೆ ನೀಡುತ್ತದೆ. ಆದರೆ ಈಗ ಮೊಟ್ಟೆಗೆ ಮಾರುಕಟ್ಟೆ ದರ 5.50 ರೂ., 6 ರೂ. ಹೀಗೆ ಬೇರೆ ಬೇರೆ ದರ ಇರುತ್ತದೆ. ಈಗ ಇನ್ನು ಕ್ರಿಸ್‌ಮಸ್‌, ಹೊಸ ವರ್ಷ ಸಂದರ್ಭ ಮೊಟ್ಟೆಗೆ ಬೇಡಿಕೆ ಹೆಚ್ಚಿರುವುದರಿಂದ ಒಂದು ಮೊಟ್ಟೆಯ ದರ 6.30 ರೂ. 7 ರೂ. ವರೆಗೂ ಇದೆ. ಸರಕಾರ ಕೊಡುವುದಕ್ಕಿಂತ ಹೆಚ್ಚಿನ ದರ ಮಾರುಕಟ್ಟೆಯಲ್ಲಿ ಇದ್ದು, ಇದರಿಂದ 1 ಮೊಟ್ಟೆಗೆ 1.50 ರೂ. ಅಥವಾ 2 ರೂ.ವನ್ನು ಹೆಚ್ಚುವರಿಯಾಗಿ ಕಾರ್ಯಕರ್ತೆಯರೇ ಭರಿಸಬೇಕಾಗಿದೆ.


ಗೌರವ ಧನ : 3 ತಿಂಗಳಿಂದ ಬಾಕಿ

ಮೊಟ್ಟೆ, ತರಕಾರಿಗೆ ತಮ್ಮ  ಕೈಯಿಂದಲೇ ಹಣ ಹಾಕಿ ಖರೀದಿಸುವ ಅಂಗನವಾಡಿ ಕಾರ್ಯಕರ್ತೆಯರಿಗೆ ಕಳೆದ 3 ತಿಂಗಳಿನಿಂದ ಮಾಸಿಕ ಗೌರವ ಧನವೇ ನೀಡಿಲ್ಲ. ಗೌರವ ಧನವೂ ಸಿಗದೇ, ಇತ್ತ ಮೊಟ್ಟೆ, ತರಕಾರಿ ಹಣವನ್ನೂ ಬಿಡುಗಡೆ ಮಾಡದೆ ಇರುವುದು ಜಿಲ್ಲೆಯ 2,340 ಮಂದಿ ಅಂಗನವಾಡಿ ನೌಕರರನ್ನು ಸಂಕಷ್ಟಕ್ಕೀಡು ಮಾಡಿದೆ.

ನೌಕರರಿಗೆ ಕಷ್ಟ
ವಾರಕ್ಕೆರಡು ದಿನ ಮಕ್ಕಳಿಗೆ, ಗರ್ಭಿಣಿ, ಬಾಣಂತಿಯರಿಗೆ ಪ್ರತಿ ದಿನ ಮೊಟ್ಟೆ ನೀಡಬೇಕಾಗುತ್ತದೆ. ಒಂದು ಅಂಗನವಾಡಿಯಲ್ಲಿ ಕನಿಷ್ಠ 15 – 20 ಮಕ್ಕಳಿ ರುತ್ತಾರೆ. 5-10 ಬಾಣಂತಿ, ಗರ್ಭಿಣಿಯರು ಇರುತ್ತಾರೆ. ಮೊಟ್ಟೆಯನ್ನು ಮೊದಲೇ ಖರೀದಿಸಬೇಕಾಗಿರುವುದರಿಂದ ಆಯಾಯ ತಿಂಗಳಲ್ಲಿ ಹಣ ಬಿಡುಗಡೆ ಮಾಡಿದರೆ ಉತ್ತಮ. ಗೌರವ ಧನವೂ ವಿಳಂಬವಾಗುತ್ತಿರುವುದರಿಂದ ಈ ಮೊಟ್ಟೆಯ ಹಣ ಭರಿಸುವುದು ಕಷ್ಟ.
– ಉಷಾ, ಅಧ್ಯಕ್ಷರು, ಜಿಲ್ಲಾ  ಅಂಗನವಾಡಿ ಕಾರ್ಯಕರ್ತೆಯರ ಸಹಾಯಕಿಯರ ಸಂಘ

2-3 ದಿನಗಳಲ್ಲಿ ಬಿಡುಗಡೆ
ಈಗ ಬೆಳಗಾವಿ ಅಧಿವೇಶನ ನಡೆಯುತ್ತಿರುವುದರಿಂದ ನಿರ್ದೇಶಕರು ಸಹಿತ ಎಲ್ಲ ಅಧಿಕಾರಿ ವರ್ಗದವರು ಅಲ್ಲೇ ಇದ್ದಾರೆ. ಪ್ರಾಯೋಗಿಕವಾಗಿ ಉಡುಪಿ ಹಾಗೂ ಗದಗ ಎರಡು ಜಿಲ್ಲೆಗಳನ್ನು ಕೆ-2 ತಂತ್ರಾಂಶ ಅಳವಡಿಸಿರುವುದಿಂದ ಇದರ ಅನುಮೋದನೆ ಬಾಕಿ ಇದೆ. ಇನ್ನು 2-3 ದಿನಗಳಲ್ಲಿ ನೌಕರರ ಬ್ಯಾಂಕ್‌ ಖಾತೆಗೆ ಮೊಟ್ಟೆ ಹಣ ಬಿಡುಗಡೆಯಾಗಲಿದೆ. 
– ಗ್ರೇಸಿ ಗೋನ್ಸಾಲ್ವಿಸ್‌, ಜಿಲ್ಲಾ ಉಪ ನಿರ್ದೇಶಕರು, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಡುಪಿ 

— ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Shivamogga: ಬಸ್ ನಿಲ್ದಾಣದ ಬಳಿಯ ಮೊಬೈಲ್ ಅಂಗಡಿಯಲ್ಲಿ ಅಗ್ನಿ ಅವಘಡ… ಅಪಾರ ಸೊತ್ತು ನಾಶ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

Tragedy: ತನ್ನ ಅಪಾರ್ಟ್‌ಮೆಂಟ್‌ನಲ್ಲೇ ನೇಣಿಗೆ ಶರಣಾದ ಭೋಜ್‌ಪುರಿ ನಟಿ… ಕಾರಣ ನಿಗೂಢ

3

Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ

Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

Manipal ಕಸ್ತೂರ್ಬಾ ಆಸ್ಪತ್ರೆ ; ಡಾ| ರಾಮದಾಸ್‌ ಎಂ. ಪೈ ಬ್ಲಾಕ್‌ ಇಂದು ಲೋಕಾರ್ಪಣೆ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

ಮಹೋಷದ ಕಲ್ಪ: ಅಮೆರಿಕದ ಪೇಟೆಂಟ್‌ ಹೊಂದಿರುವ ಕ್ಯಾನ್ಸರ್‌ ಚಿಕಿತ್ಸೆ ಕ್ರಮ

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Manipal; ಕೌಶಲಾಧಾರಿತ ಮಾನವ ಶಕ್ತಿ ಇದ್ದರೆ ಸರ್ವ ಸಾಧನೆ: ಕೆ.ವಿ. ಕಾಮತ್‌

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

Karkala ಡಾ| ಟಿಎಂಎ ಪೈ ರೋಟರಿ ಆಸ್ಪತ್ರೆಗೆ ಡಯಾಲಿಸಿಸ್‌ ಯಂತ್ರ ಕೊಡುಗೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Sandalwood: ಧೀರೇನ್‌ ರೀ ಇಂಟ್ರೊಡಕ್ಷನ್‌

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Bengaluru: ಕೆಂಡದಂಥ ಬಿಸಿಲಿಗೆ ಬಳಲಿದ ಬೆಂಗಳೂರಿಗರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.