ಕೆಯ್ಯೂರಿನ ಕುಟುಂಬಕ್ಕೆ ಧನ ಸಹಾಯ, ವಿದ್ಯಾಭ್ಯಾಸಕ್ಕೆ ನೆರವು 


Team Udayavani, Dec 20, 2018, 11:09 AM IST

20-december-5.gif

ಕೆಯ್ಯೂರು: ಕೆಯ್ಯೂರು ಗ್ರಾಮದ ದಲಿತ ಕುಟುಂಬವೊಂದರ ಹೆಣ್ಣು ಮಕ್ಕಳು ಅನುಭವಿಸುತ್ತಿದ್ದ ಸಂಕಷ್ಟದ ಜೀವನದ ಕುರಿತು ಬುಧವಾರ ‘ಉದಯವಾಣಿ’ ಸುದಿನದಲ್ಲಿ ‘ಹೆತ್ತವರಿಲ್ಲದ ನಾಲ್ವರು ಹೆಣ್ಣು ಮಕ್ಕಳಿಗೆ ಸೂರೂ ಇಲ್ಲ’ ಎನ್ನುವ ತಲೆಬರಹದಡಿಯಲ್ಲಿ ಪ್ರಕಟಗೊಂಡ ವರದಿಗೆ ಸ್ಪಂದನೆ ದೊರೆತಿದ್ದು, ಆ ಕುಟುಂಬಕ್ಕೆ ಧನ ಸಹಾಯ, ವಿದ್ಯಾಭ್ಯಾಸಕ್ಕೆ ನೆರವು ನೀಡಲು ದಾನಿಗಳು ಮುಂದೆ ಬಂದಿದ್ದಾರೆ.

10 ಸಾವಿರ ರೂ. ನೆರವು
ಹೆಸರು ತಿಳಿಸಲು ಇಚ್ಛಿಸದ ದಾನಿಯೊಬ್ಬರು ಪರಿಚಿತರ ಮೂಲಕ ಈ ಬಡ ಕುಟುಂಬಕ್ಕೆ 10 ಸಾವಿರ ರೂ. ಧನಸಹಾಯ ನೀಡಿದ್ದಾರೆ. ಜತೆಗೆ ಮನೆ ನಿರ್ಮಾಣಕ್ಕೆ ತನ್ನಿಂದಾದ ಸಹಕಾರವನ್ನೂ ನೀಡುವುದಾಗಿಯೂ ಅವರು ಭರವಸೆ ಇತ್ತಿದ್ದಾರೆ. 10 ಸಾವಿರ ರೂ. ನಗದನ್ನು ನಾಲ್ವರು ಹೆಣ್ಣುಮಕ್ಕಳ ಅಜ್ಜಿ ಭಾಗೀರಥಿ ಅವರಿಗೆ ಹಸ್ತಾಂತರಿ ಸಲಾಯಿತು. ಪದವಿ ವ್ಯಾಸಂಗ ಮಾಡುತ್ತಿರುವ ನೇತ್ರಾ ಅವರ ಒಂದು ವರ್ಷದ ವಿದ್ಯಾಭ್ಯಾಸದ ವೆಚ್ಚವನ್ನು ಭರಿಸುವುದಾಗಿ ಬೆಂಗಳೂರಿನ ವಿದ್ಯಾಮಾತಾ ಫೌಂಡೇಶನ್‌ ಅಧ್ಯಕ್ಷ ಭಾಗೇಶ್‌ ರೈ ತಿಳಿಸಿದ್ದಾರೆ. ವರದಿ ಗಮನಿಸಿದ ಅವರು, ವಾರದೊಳಗೆ ಅವರ ಮನೆಗೆ ಭೇಟಿ ನೀಡಿ ಅವರೊಂದಿಗೆ ಚರ್ಚಿಸಿ ಅಗತ್ಯ ಕ್ರಮ ಕೈಗೊಳ್ಳುವುದಾಗಿ ‘ಉದಯವಾಣಿ’ ಪ್ರತಿನಿಧಿಗೆ ತಿಳಿಸಿದ್ದಾರೆ.

ಪಿಂಚಣಿ ಬಂದರೆ ಊಟ
ಧನಸಹಾಯ ಸ್ವೀಕರಿಸಿದ ಬಳಿಕ ಭಾಗೀರಥಿ ಅವರು ಮಾತನಾಡಿ, ತನಗೆ ಪಿಂಚಣಿ ರೂಪದಲ್ಲಿ ತಿಂಗಳಿಗೆ 600 ರೂ. ಬರುತ್ತದೆ (ಈಗ ಅದು 1,000 ರೂ.ಗೆ ಹೆಚ್ಚಳವಾಗಿದೆ. ಅದಿನ್ನೂ ಕೈಸೇರಿಲ್ಲ). ಆ ಸಂದರ್ಭದಲ್ಲಿ ಅಂಗಡಿಯಿಂದ ಅಕ್ಕಿ ತಂದು ಮನೆಯಲ್ಲಿರುವ ನಾವು ಹೊಟ್ಟೆ ತುಂಬಾ ಊಟ ಮಾಡುತ್ತೇವೆ. ಉಳಿದ ದಿನ ಪಡಿತರ ಅಂಗಡಿಯ ಬಿಳಿ ಅಕ್ಕಿಯ ಊಟವನ್ನೇ ಮಾಡುತ್ತೇವೆ. ಈ ಧನ ಸಹಾಯದಿಂದ ಒಪ್ಪೊತ್ತಿನ ಊಟಕ್ಕೆ ಸಹಾಯ ಆಯಿತು ಎಂದವರು ಆನಂದ ಬಾಷ್ಪದೊಂದಿಗೆ ಹೇಳಿದರು.

ಟಾಪ್ ನ್ಯೂಸ್

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Mangaluru, ಉಡುಪಿಯಲ್ಲಿ ಆ್ಯಂಬುಲೆನ್ಸ್‌ ಸೇವೆ ಯಥಾಸ್ಥಿತಿ

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Manipal ಖಾಸಗಿ ಬಸ್‌ ಮಾಲಕನಿಂದ ನಿರ್ವಾಹಕನಿಗೆ ಹಲ್ಲೆ; ದೂರು ದಾಖಲು

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

Dharmasthala: ಸರಣಿ ಅಪಘಾತ; 5 ವಾಹನಗಳಿಗೆ ಹಾನಿ

PCB

Pakistan ಟಿ20 ವಿಶ್ವಕಪ್‌ ಗೆದ್ದರೆ ಪ್ರತಿ ಆಟಗಾರರಿಗೆ 1 ಲಕ್ಷ ಡಾಲರ್‌ ಬಹುಮಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

Ra

50% ಮಿತಿ ರದ್ದು, ಎಷ್ಟು ಬೇಕೋ ಅಷ್ಟೇ ಮೀಸಲು:ರಾಹುಲ್‌ ಗಾಂಧಿ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Kasaragod ಲಕ್ಷಾಂತರ ರೂ. ವಂಚನೆ ಪ್ರಕರಣ; ಆರೋಪಿಗಳ ಬಂಧನ

Rahul Gandhi 3

Rahul Gandhiವಿರುದ್ಧ ಶಿಕ್ಷಣ ತಜ್ಞರು, ಕುಲಪತಿಗಳು ಗರಂ

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

Kundapura ಹಾಡಹಗಲೇ ದೇವಸ್ಥಾನದಿಂದ ನಗದು, ಸೊತ್ತು ಕಳವು: ಪ್ರಕರಣ ದಾಖಲು

1-jaaa

Jet Airways ನರೇಶ್‌ ಗೋಯಲ್‌ಗೆ ಮಧ್ಯಾಂತರ ಜಾಮೀನು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.