ರಾಹುಲ್ ಕ್ಷಮೆ ಕೋರುವಂತೆ ಆಗ್ರಹಿಸಿ ಪ್ರತಿಭಟನೆ
Team Udayavani, Dec 20, 2018, 12:13 PM IST
ಬೆಂಗಳೂರು: ರಫೇಲ್ ಯುದ್ಧ ವಿಮಾನ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಸುಳ್ಳು ಅಪಾದನೆ ಮಾಡಿದ್ದ ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ರಾಹುಲ್ ಗಾಂಧಿ ಈ ಕೂಡಲೇ ಪ್ರಧಾನಿಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿ ಬಿಜೆಪಿ ಸದಸ್ಯರು ನಗರದ ಮೌರ್ಯ ವೃತ್ತದ ಬಳಿ ಬುಧವಾರ ಪ್ರತಿಭಟನೆ ನಡೆಸಿದರು.
ರಫೇಲ್ ಯುದ್ಧ ವಿಮಾನದಲ್ಲಿ ಯಾವ ಅಕ್ರಮವು ನಡೆದಿಲ್ಲ ಎಂದು ಸುಪ್ರೀಂ ಕೋರ್ಟ್ ಕೇಂದ್ರ ಸರ್ಕಾರಕ್ಕೆ ಕ್ಲೀನ್ ಚೀಟ್ ನೀಡಿದೆ. ಆದರೆ, ಸುಳ್ಳು ಆರೋಪ ಮಾಡಿದ್ದ ರಾಹುಲ್ ಗಾಂಧಿ ಇನ್ನೂ ಪ್ರಧಾನಿಗಳ ಕ್ಷಮೆ ಕೇಳಿಲ್ಲ. ಇದರಿಂದ ದೇಶದ ಅನೇಕ ಜನರ ಮನಸ್ಸಿಗೆ ನೋವಾಗಿದೆ.
ಈ ಕೂಡಲೇ ರಾಹುಲ್ ಗಾಂಧಿ ದೇಶದ ಜನತೆಯ ಹಾಗೂ ಪ್ರಧಾನಿಗಳ ಕ್ಷಮೆ ಕೇಳಬೇಕು ಎಂದು ಆಗ್ರಹಿಸಿದರು. ರೇಸ್ಕೋರ್ಸ್ ರಸ್ತೆಯ ಕಾಂಗ್ರೆಸ್ ಕಚೇರಿಗೆ ಮುತ್ತಿಗೆ ಹಾಕಲು ಬಿಜೆಪಿ ಕಾರ್ಯಕರ್ತರು ಮುಂದಾದರು. ಈ ವೇಳೆ ಪೊಲೀಸರು ಕೆಲ ಕಾರ್ಯಕರ್ತರನ್ನು ವಶಕ್ಕೆ ಪಡೆದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕ ಮುನಿರಾಜು, ಬಿಜೆಪಿ ರಾಜ್ಯ ಕಾರ್ಯದರ್ಶಿ ಎಂ.ಜಯದೇವ್, ರಾಜ್ಯ ಕೋಶಾಧ್ಯಕ್ಷ ಎಂ ಸುಬ್ಬಣ್ಣ, ನಗರ ಅಧ್ಯಕ್ಷ ಪಿ.ಎನ್.ಸದಾಶಿವ ಸೇರಿದಂತೆ ನೂರಾರು ಮಂದಿ ಕಾರ್ಯಕರ್ತರು ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಲಿಂಗಸೂಗೂರು: ಕಾಲುವೆಗೆ ಬಿದ್ದು ಇಬ್ಬರು ಯುವಕರು ಮೃತ್ಯು…
Kollywood: ದಳಪತಿ ವಿಜಯ್ ʼGOATʼ ಸಿನಿಮಾದಲ್ಲಿ ಧೋನಿ, ರುತ್ ರಾಜ್ ನಟನೆ?
Belagavi: ಮೋದಿ ಸತ್ತರೆ ಯಾರೂ ಪ್ರಧಾನಿ ಆಗುವುದೇ ಇಲ್ವೇ ? ವಿವಾದಾತ್ಮಕ ಹೇಳಿಕೆ ನೀಡಿದ ಶಾಸಕ
ಮುಸ್ಲಿಮರು ಮೋದಿ ಬೆಂಬಲಿಸಲಿ: ರಮೇಶ ಜಾರಕಿಹೊಳಿ
Bidar: ರಾಜ್ಯದ 28 ಸ್ಥಾನದಲ್ಲೂ ಕಾಂಗ್ರೆಸ್ಗೆ ಗೆಲುವು: ಮುನಿಯಪ್ಪ ವಿಶ್ವಾಸ