ರೋಮಾಂಚನ ಮೂಡಿಸಿದ ಟಗರಿನ ಕಾಳಗ


Team Udayavani, Dec 20, 2018, 4:39 PM IST

20-december-17.gif

ಚಿಕ್ಕೋಡಿ: ಚಿಕ್ಕೋಡಿ ಜಿಲ್ಲಾ ಮಟ್ಟದ ಕನಕದಾಸ ಜಯಂತಿ ಉತ್ಸವದ ಅಂಗವಾಗಿ ನಾಗರಮುನ್ನೋಳ್ಳಿ ಗ್ರಾಮದ ಸರ್ಕಾರಿ ಪ್ರೌಢ ಶಾಲೆಯ ಮೈದಾನದಲ್ಲಿ ಹಮ್ಮಿಕೊಂಡ ಅಂತಾರಾಜ್ಯ ಮಟ್ಟದ ಭವ್ಯ ಟಗರಿನ ಕಾಳಗ ನೆರೆದ ಜನರಲ್ಲಿ ರೋಮಾಂಚನ ಮೂಡಿಸಿ ತುದಿಗಾಲಲ್ಲಿ ನಿಂತು ನೋಡುವಂತೆ ಮಾಡಿತು.

ಗ್ರಾಮದಲ್ಲಿ ಮಂಗಳವಾರ ಸಂಜೆ ಆರಂಭವಾದ ಭವ್ಯ ಟಗರಿನ ಕಾಳಗ ಬುಧವಾರ ಬೆಳಗ್ಗೆ 10 ಗಂಟೆಯವರೈಗೂ ನಡೆಯಿತು. ಕಾಳಗದಲ್ಲಿ ಬೆಳಗಾವಿ, ಬಾಗಲಕೋಟೆ, ಧಾರವಾಡ, ಹಾವೇರಿ, ಶಿವಮೊಗ್ಗ, ಬೆಂಗಳೂರು, ವಿಜಯಪುರ, ನೆರೆ ರಾಜ್ಯಗಳಾದ ಮಹಾರಾಷ್ಟ್ರದ ಕೊಲ್ಲಾಪುರ, ಸಾಂಗ್ಲಿ, ಪುಣೆ, ಮುಂಬಯಿ, ಆಂಧ್ರದಿಂದ ಸುಮಾರು 300ಕ್ಕೂ ಹೆಚ್ಚಿನ ಟಗರುಗಳು ಸ್ಪರ್ಧೆಯಲ್ಲಿ ಪಾಲ್ಗೊಂಡು ಬಿರುಸಿನ ಸೆಣಸಾಟ ನಡೆಸಿದವು.

ಅಂತಾರಾಜ್ಯ ಮಟ್ಟದ ಟಗರಿನ ಕಾಳಗ ವೀಕ್ಷಿಸಲು ಚಿಕ್ಕೋಡಿ ಜಿಲ್ಲೆಯ ಮತ್ತು ನೆರೆಯ ಬಾಗಲಕೋಟೆ ಜಿಲ್ಲೆಯ ಸಾವಿರಾರು ಸಂಖ್ಯೆಯ ಜನರು ಆಗಮಿಸಿ ಸ್ಪರ್ಧಾಕಣಕ್ಕೆ ರಂಗೇರಿಸಿದರು. ಸ್ಪರ್ಧೆ ಫಲಿತಾಂಶ: ಟಗರಿನ ಕಾಳಗದಲ್ಲಿ ಐದು ವಿಭಾಗದಲ್ಲಿ ಸ್ಪರ್ಧೆ ನಡೆಯಿತು. ಹಾಲು ಹಲ್ಲಿನ ಟಗರಿನ ಕಾಳಗದಲ್ಲಿ ದುರ್ಗಾ ಪರಮೇಶ್ವರಿ ಗುತ್ತಿಗುಳಿ ಟಗರು ಪ್ರಥಮ, ಅಪ್ಪಾಜಿ ಆಶೀರ್ವಾದ ಬೆಲ್ಲದ ಬಾಗೇವಾಡಿ ಟಗರು ದ್ವಿತೀಯ ಸ್ಥಾನ ಪಡೆಯಿತು.

ಎರಡು ಹಲ್ಲಿನ ಟಗರಿನ ಕಾಳಗದಲ್ಲಿ ವೀರಸಿದ್ದೇಶ್ವರ ಹುಚ್ಚಾ ಕಪರಟ್ಟಿ ಟಗರು ಪ್ರಥಮ, ಮುಗಳಕೋಡ ಟೈಗರ ಜಿಂದಾಲ ಟಗರು ದ್ವಿತೀಯ ಸ್ಥಾನ ಪಡೆಯಿತು. ನಾಲ್ಕು ಹಲ್ಲಿನ ಟಗರಿನ ಪಂದ್ಯದಲ್ಲಿ ಕಪರಟ್ಟಿ ಡೇಂಜರ ಕರಿಯಾ ಟಗರು ಪ್ರಥಮ, ಪೋಳಗಾಂವದ ರವಣಾಥ ಟಗರು ದ್ವಿತೀಯ ಸ್ಥಾನ ಪಡೆಯಿತು. ಆರು ಹಲ್ಲಿನ ಟಗರಿನ ಪಂದ್ಯದಲ್ಲಿ ಹಿರೇ ಮುಚ್ಚಾಳಗುಡ್ಡದ ಕರಿಸಿದ್ದೇಶ್ವರ ಚಿಕ್ಕರಾಯನ ಟಗರು ಪ್ರಥಮ, ರನ್ನ ಬೆಳಗಲಿಯ  ರಮಾನಂದ ಪ್ರಸನ್‌ ಟಗರು ದ್ವಿತೀಯ ಸ್ಥಾನ ಪಡೆಯಿತು. ಎಂಟು ಹಲ್ಲಿನ ಟಗರಿನ ಕಾಳಗದಲ್ಲಿ ಸಾಂಗಲಿಯ ಹುಸೆನ್‌ ಪಟೇಲ ಟಗರು ಪ್ರಥಮ, ಕಪ್ಪಟ್ಟಿ ಗೂಲಿ ಟಗರು ದ್ವಿತೀಯ ಸ್ಥಾನ ಪಡೆದು ನಗದು ಬಹುಮಾನ ಮತ್ತು ಶೀಲ್ಡ್‌ ಪಡೆದುಕೊಂಡವು.

ಗ್ರಾಮ ಪಂಚಾಯತ್‌ ಅಧ್ಯಕ್ಷ ಸಿದ್ದಪ್ಪ ಮರ್ಯಾಯಿ, ಜಿಲ್ಲಾ ಪಂಚಾಯತಿ ಮಾಜಿ ಅಧ್ಯಕ್ಷ ಮಲ್ಲಗೌಡ ನೇರ್ಲಿ ಟಗರಿನ ಕಾಳಗಕ್ಕೆ ಚಾಲನೆ ನೀಡಿದರು. ಜಿಲ್ಲಾ ಕಾಂಗ್ರೆಸ್‌ ಅಧ್ಯಕ್ಷ ಲಕ್ಷ್ಮಣರಾವ ಚಿಂಗಳೆ, ಯುವ ಮುಖಂಡ ಶಿವು ಮರ್ಯಾಯಿ, ನ್ಯಾಯವಾದಿ ಎಚ್‌.ಎಸ್‌.ನಸಲಾಪೂರೆ, ಎಂ.ಕೆ.ಪೂಜೇರಿ, ಬೀರಪ್ಪ ನಾಗರಾಳೆ, ಶಿವಪುತ್ರ ಮನಗೂಳಿ, ಲಕ್ಷ್ಮೀಕಾಂತ ಈಟಿ, ಅನೀಲ ಈಟಿ, ರಾಘವೇಂದ್ರ ಬಡಿಗೇರ ಮುಂತಾದವರು ಇದ್ದರು.

ಟಾಪ್ ನ್ಯೂಸ್

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್‌ ವಿರುದ್ಧ ಕಾಂಗ್ರೆಸ್‌ ವಾಗ್ಧಾಳಿ

Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌Election  ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌

Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್‌ಡ್ರೈವ್‌; ಸಂಕಷ್ಟದಲ್ಲಿ ಜೆಡಿಎಸ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

1-qeqwewqe

Hukkeri;ಧಾರ್ಮಿಕ ಕೇಂದ್ರದಲ್ಲಿ ಚುನಾವಣ ಪ್ರಚಾರ ಗಲಾಟೆ: ದೂರು ದಾಖಲು

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

Belagavi; ನಿಮ್ಮ ಕನಸುಗಳು ನನ್ನ ಸಂಕಲ್ಪ…: ಬೃಹತ್ ಸಮಾವೇಶದಲ್ಲಿ ನರೇಂದ್ರ ಮೋದಿ ಹೇಳಿಕೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್‌ ವಿರುದ್ಧ ಬಿಜೆಪಿ ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.