ಕಂಪ್ಯೂಟರ್‌ ಕಣ್ಗಾವಲು


Team Udayavani, Dec 22, 2018, 9:57 AM IST

computer.png

ಹೊಸದಿಲ್ಲಿ: ಕಂಪ್ಯೂಟರಿನಲ್ಲಿರುವ ಮಾಹಿತಿ ಅರ್ಥಾತ್‌ ಡೇಟಾದ ಬಗ್ಗೆ ನಿಗಾ ಇಡುವ ಅಧಿಕಾರವನ್ನು 10 ತನಿಖಾ ಸಂಸ್ಥೆಗಳಿಗೆ ನೀಡಿ ಕೇಂದ್ರ ಸರಕಾರ ಹೊರಡಿಸಿದ ಆದೇಶವು ಈಗ ವಿವಾದಕ್ಕೆ ಕಾರಣವಾಗಿದೆ.

ಗೃಹ ಸಚಿವಾಲಯದ ಕಾರ್ಯದರ್ಶಿ ರಾಜೀವ್‌ ಗೌಬಾ, ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಗುರುವಾರ ತಡರಾತ್ರಿ ಈ ಆದೇಶ ಹೊರಡಿಸಿದ್ದಾರೆ. ಸಿಬಿಐ, ಇ.ಡಿ. ಹಾಗೂ ಗುಪ್ತಚರ ದಳ ಸಹಿತ 10 ತನಿಖಾ ಸಂಸ್ಥೆಗಳು ಈ ಅಧಿಕಾರ ಹೊಂದಿರುತ್ತವೆ. ಅದರಂತೆ ದೇಶದ ಯಾವುದೇ ವ್ಯಕ್ತಿ ಕಂಪ್ಯೂಟರಿನಲ್ಲಿ ಸಂಗ್ರಹಿಸಿರುವ, ತಯಾರಿಸಿರುವ, ವರ್ಗಾಯಿಸಿರುವ ಅಥವಾ ಸ್ವೀಕರಿಸಿರುವ ಯಾವುದೇ ಮಾಹಿತಿಯ ಮೇಲೆ ನಿಗಾ ಇಡಬಹುದಾಗಿದೆ. 2009ರಲ್ಲಿ ಯುಪಿಎ ಸರಕಾರ ಜಾರಿಗೊಳಿಸಿದ್ದ ಮಾಹಿತಿ ತಂತ್ರಜ್ಞಾನ ಕಾಯ್ದೆಯ 69ನೇ ವಿಭಾಗದಲ್ಲಿ ಈ ಅಧಿಕಾರವನ್ನು ನೀಡಲಾಗಿದೆ.

10 ಏಜೆನ್ಸಿಗಳ ಪೈಕಿ ಯಾವುದೇ ತನಿಖಾ ಸಂಸ್ಥೆಗೆ ಕಂಪ್ಯೂಟರ್‌ ಮೇಲೆ ನಿಗಾ ಇಡಲು ಅನುವು ಮಾಡಬೇಕು. ಇದಕ್ಕೆ ಅಡ್ಡಿಪಡಿಸಿದರೆ ಏಳು ವರ್ಷಗಳವರೆಗೆ ಜೈಲು ಹಾಗೂ ದಂಡ ವಿಧಿಸಬಹುದಾಗಿದೆ.

ವಿಪಕ್ಷಗಳ ವಿರೋಧ
ಆದೇಶ ಹೊರಬೀಳುತ್ತಲೇ ವಿಪಕ್ಷಗಳು ಸರಕಾರದ ಮೇಲೆ ಮುಗಿಬಿದ್ದಿವೆ. ಈ ಆದೇಶ ಅಸಾಂವಿಧಾನಿಕ, ಪ್ರಜಾಪ್ರಭುತ್ವ ವಿರೋಧಿ ಮತ್ತು ಜನಸಾಮಾನ್ಯರ ಮೂಲ ಹಕ್ಕುಗಳ ಮೇಲೆ ನಡೆಸಿದ ದಾಳಿ ಎಂದು ಕಾಂಗ್ರೆಸ್‌ ಆಕ್ಷೇಪಿಸಿದೆ. ಸಿಪಿಎಂ, ಸಮಾಜವಾದಿ ಪಕ್ಷ, ರಾಷ್ಟ್ರೀಯ ಜನತಾದಳ ಮತ್ತು ತೃಣಮೂಲ ಕಾಂಗ್ರೆಸ್‌ ಸಹಿತ ಎಲ್ಲ ವಿಪಕ್ಷಗಳೂ ಕಾಂಗ್ರೆಸ್‌ ಆಕ್ಷೇಪಕ್ಕೆ ದನಿಗೂಡಿಸಿವೆ. ಭಾರತವನ್ನು “ವಿಚಕ್ಷಣೆಯ ದೇಶ’ವನ್ನಾಗಿ ಬಿಜೆಪಿ ಬದಲಿಸುತ್ತಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ. ಮೋದಿ ಸರಕಾರ ಈಗ ವಿಚಕ್ಷಣೆಯ ಸರಕಾರವಾಗಿದೆ. ಚುನಾವಣೆಯಲ್ಲಿ ಸೋತು ಕಂಗೆಟ್ಟ ಬಿಜೆಪಿ ಈ ಕ್ರಮ ಕೈಗೊಂಡಿದೆ ಎಂದು ಕಾಂಗ್ರೆಸ್‌ ಆರೋಪಿಸಿದೆ.

ಇಲಿಯನ್ನು ಹುಲಿಯೆನ್ನುತ್ತಿರುವ ವಿಪಕ್ಷಗಳು
ಸರಕಾರದ ನಿರ್ಧಾರವನ್ನು ವಿತ್ತ ಸಚಿವ ಅರುಣ್‌ ಜೇಟಿÉ ಸಮರ್ಥಿಸಿಕೊಂಡಿದ್ದಾರೆ. ರಾಜ್ಯಸಭೆಯಲ್ಲಿ ಈ ವಿಚಾರವನ್ನೆತ್ತಿ ವಿಪಕ್ಷಗಳು ಗದ್ದಲವೆಬ್ಬಿಸಿದ ಹಿನ್ನೆಲೆಯಲ್ಲಿ ಸ್ಪಷ್ಟನೆ ನೀಡಿರುವ ಅವರು, ವಿಪಕ್ಷಗಳು ಆರೋಪಿಸುವ ಮೊದಲು ವಾಸ್ತವವನ್ನು ತಿಳಿದುಕೊಳ್ಳಬೇಕು. ಇದು ಕಾಂಗ್ರೆಸ್‌ ಸರಕಾರವಿದ್ದಾಗ ಜಾರಿಗೆ ತಂದ ಕಾನೂನು. ಇದರ ಅಡಿಯಲ್ಲಿ ಪ್ರತಿ ವರ್ಷ ಆದೇಶ ಮರುಜಾರಿಗೊಳ್ಳುತ್ತಿದೆ. ಅದರಂತೆಯೇ ಗುರುವಾರ ಆದೇಶ ಮರುಜಾರಿಗೊಳಿಸಲಾಗಿದೆ. 2009ರಿಂದ ಪ್ರತಿ ವರ್ಷ ಡಿ.20ರಂದು ಇದೇ ಆದೇಶ ಪುನರಾವರ್ತನೆಯಾಗುತ್ತಿದೆ ಎಂದಿದ್ದಾರೆ.

ಕಂಪ್ಯೂಟರ್‌ ಮಾತ್ರವಲ್ಲ
ಮಾಹಿತಿ ತಂತ್ರಜ್ಞಾನ ಕಾಯ್ದೆ ಅಡಿಯಲ್ಲಿ ಜಾರಿಗೊಳಿಸಿದ ಆದೇಶದಲ್ಲಿರುವ “ಯಾವುದೇ ಕಂಪ್ಯೂಟರ್‌’ ಎಂಬ ಪದಕ್ಕೆ ವ್ಯಾಪಕ ಅರ್ಥವಿದೆ. ಅದು ಕೇವಲ ಕಂಪ್ಯೂಟರನ್ನಷ್ಟೇ ಉಲ್ಲೇಖೀಸುವುದಿಲ್ಲ. ಬದಲಿಗೆ ಯಾವುದೇ ಕಂಪ್ಯೂಟಿಂಗ್‌ ಸಾಧನ ಎಂಬ ವ್ಯಾಖ್ಯಾನ ನೀಡಲಾಗಿದೆ. ಅಂದರೆ ಲ್ಯಾಪ್‌ಟಾಪ್‌, ಡೆಸ್ಕ್ಟಾಪ್‌, ಟ್ಯಾಬ್ಲೆಟ್‌ಗಳು, ಸ್ಮಾರ್ಟ್‌ಫೋನ್‌ಗಳು ಹಾಗೂ ಡೇಟಾ ಸಂಗ್ರಹ ಸಾಧನಗಳೂ ಇದರ ವ್ಯಾಪ್ತಿಗೆ ಒಳಪಟ್ಟಿವೆ. ತನಿಖಾ ಸಂಸ್ಥೆಗಳು ಯಾವುದೇ ಕಂಪ್ಯೂಟಿಂಗ್‌ ಸಾಧನದಲ್ಲಿರುವ ಭೌತಿಕ ಡೇಟಾವನ್ನು ನಮ್ಮನ್ನು ಕೇಳಿಯೇ ಪಡೆಯುತ್ತವೆ. ಒಂದು ವೇಳೆ ಯಾವುದೋ ಆಕ್ಷೇಪಾರ್ಹ ಡೇಟಾವನ್ನು ವ್ಯಕ್ತಿ ತನ್ನ ಕಂಪ್ಯೂಟರ್‌ ಅಥವಾ ಮೊಬೈಲ್‌ನಲ್ಲಿ ಸಂಗ್ರಹಿಸಿದ್ದರೆ ಅದನ್ನು ತನಿಖಾ ಏಜೆನ್ಸಿಯು ನಮ್ಮನ್ನು ಕೇಳಿಯೇ ತೆಗೆದುಕೊಳ್ಳುತ್ತದೆ. ಆದರೆ ನಾವು ಬೇರೆ ಯಾರಿಗಾದರೂ ಡೇಟಾವನ್ನು ಕಳುಹಿಸಿದ್ದರೆ, ಆಗ ನಮಗೆ ಇಂಟರ್ನೆಟ್‌ ಸೇವೆ ಒದಗಿಸಿದ ಸಂಸ್ಥೆಯನ್ನು ತನಿಖಾ ಸಂಸ್ಥೆಗಳು ಸಂಪರ್ಕಿಸುತ್ತವೆ.

ಕಾನೂನಿನಲ್ಲಿ ಹೊಸತೇನಿದೆ?
ವಾಸ್ತವವಾಗಿ 2009ರಲ್ಲಿ ಕಾಂಗ್ರೆಸ್‌ ಸರಕಾರ ಹೊರಡಿಸಿದ ಮಾಹಿತಿ ತಂತ್ರಜ್ಞಾನ ಕಾಯ್ದೆಯಲ್ಲಿ ಕಂಪ್ಯೂಟರ್‌ಗಳ ಮೇಲೆ ವಿಚಕ್ಷಣೆ ನಡೆಸಲು ನಿರ್ದಿಷ್ಟ ತನಿಖಾ ಸಂಸ್ಥೆಗಳನ್ನು ಹೆಸರಿಸಿ ಅಧಿಕಾರ ನೀಡಿರಲಿಲ್ಲ. ಅಂದರೆ ಕಂಪ್ಯೂಟರ್‌ಗಳ ಮೇಲೆ ವಿಚಕ್ಷಣೆ ನಡೆಸಬೇಕಿದ್ದರೆ ಅದನ್ನು ಅನುಮೋದಿತ ತನಿಖಾ ಸಂಸ್ಥೆಯೇ ನಡೆಸಬೇಕು ಎಂದಷ್ಟೇ ಉಲ್ಲೇಖೀಸಲಾಗಿತ್ತು. ಈ ಅನುಮೋದಿತ ತನಿಖಾ ಸಂಸ್ಥೆಗಳು ಯಾವುವು ಎಂಬ ಬಗ್ಗೆ ವಿವರವನ್ನು ನೀಡಿರಲಿಲ್ಲ. ಇದರಿಂದ ಈ ಆದೇಶ ದುರ್ಬಳಕೆಯಾಗುವ ಸಾಧ್ಯತೆಯಿತ್ತು. ಹೀಗಾಗಿ ಕೇಂದ್ರ ಸರಕಾರ ಈ ಬಾರಿ 10 ತನಿಖಾ ಸಂಸ್ಥೆಗಳಿಗೆ ಈ ಆದೇಶವನ್ನು ಮಿತಿಗೊಳಿಸಿದ್ದು, ಈ ಸಂಸ್ಥೆಗಳಿಗಷ್ಟೇ ಕಂಪ್ಯೂಟರ್‌ಗಳ ಮೇಲೆ ನಿಗಾ ಇಡುವ ಅಧಿಕಾರವನ್ನು ನೀಡಿದೆ.

ಟಾಪ್ ನ್ಯೂಸ್

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Bengaluru: ಇನ್‌ಸ್ಟಾದಲ್ಲಿ ಯುವತಿ ನಗ್ನ ಫೋಟೋ ವೈರಲ್‌; ಅಪರಿಚಿತನ ಮೇಲೆ ಕೇಸು

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Chamarajanagara: ಇಂಡಿಗನತ್ತದಲ್ಲಿ ಮರುಮತದಾನ ಆರಂಭ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

laxmi-hebbalkar

Belagavi; ಪ್ರಧಾನಿ ಮೋದಿ ಯಾಕೆ ಪ್ರಜ್ವಲ್ ‌ವರ್ತನೆ ಖಂಡಿಸಲಿಲ್ಲ…: ಲಕ್ಷ್ಮೀ ಹೆಬ್ಬಾಳ್ಕರ್

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಕ್ರೈಂ ತಡೆಗೆ ರಾತ್ರಿ ಗಸ್ತು ಹೆಚ್ಚಳ; ದಯಾನಂದ್‌

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಮೆಟ್ರೋ ಶೌಚದಲ್ಲಿ ಕ್ಯೂಆರ್‌ ಕೋಡ್‌ ಅಂಟಿಸಿದ್ದ ಉದ್ಯಮಿ ಸೆರೆ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

Bengaluru: ಗ್ರಾಹಕನ ಗುಪ್ತಾಂಗ ಮುಟ್ಟಿ ಡೆಲಿವರಿ ಬಾಯ್‌ ನೀಚ ಕೃತ್ಯ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

ಚಾಕೋಲೆಟ್‌ ಕೊಡ್ತೇನೆಂದು ಮನೆಗೆ ಕರೆದು ಬಾಲಕಿಗೆ ಲೈಂಗಿಕ ದೌರ್ಜನ್ಯ: ಇಬ್ಬರು ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.