ರಾಜ್ಯ ಹೆದ್ದಾರಿ ಅಗಲೀಕರಣಕ್ಕೆ ಮುಂದುವರಿದ ಅನಿರ್ದಿಷ್ಟ ಧರಣಿ


Team Udayavani, Dec 22, 2018, 2:57 PM IST

vij-2.jpg

ಮುದ್ದೇಬಿಹಾಳ: ಪಟ್ಟಣದಲ್ಲಿ ನಡೆಯುತ್ತಿರುವ ಹುನಗುಂದ-ಮ ಮುದ್ದೇಬಿಹಾಳ-ತಾಳಿಕೋಟೆ ರಾಜ್ಯ ಹೆದ್ದಾರಿ ಅಗಲೀಕರಣ ಬೇಡಿಕೆ ಮುಂದಿಟ್ಟು ಇಲ್ಲಿನ ಅಂಬೇಡ್ಕರ್‌ ವೃತ್ತದಲ್ಲಿ ರಾಜ್ಯ ಹೆದ್ದಾರಿ ನಿರ್ಮಾಣ ಸಮಿತಿ ನೇತೃತ್ವದಲ್ಲಿ ನಡೆಯುತ್ತಿರುವ ಅನಿರ್ಧಿಷ್ಟಾವಧಿ ಧರಣಿ ಸತ್ಯಾಗ್ರಹ ಶುಕ್ರವಾರ 20 ದಿನ ಪೂರೈಸಿದೆ.

ಈ ಮಧ್ಯೆ ಶುಕ್ರವಾರ ಕಾಮಗಾರಿ ನಿರ್ವಹಿಸುತ್ತಿರುವ ಅಶೋಕಾ ಬಿಲ್ಡಕಾನ್‌ನ ಸಿಬ್ಬಂದಿ, ಕೆಲಸಗಾರರು ಮತ್ತು ಅಂಜುಮನ್‌ ಕಾಂಪ್ಲೆಕ್ಸ್‌ ಬಳಿ ಇರುವ ಕೆಲ ಅಂಗಡಿಕಾರರ ಮಧ್ಯೆ ರಸ್ತೆ ಅಗಲದ ಅಳತೆಗೆ ಸಂಬಂಧಿಸಿದಂತೆ ವಾಗ್ವಾದ ನಡೆದು ಆ ಭಾಗದಲ್ಲಿ ಕಾಮಗಾರಿ ಸ್ಥಗಿತಗೊಳಿಸಿದ ಘಟನೆ ನಡೆಯಿತು.

ಹೋರಾಟಗಾರರ ಬೇಡಿಕೆಯಂತೆ ಈಗಾಗಲೇ ಒಂದು ಬದಿ ರಸ್ತೆಯನ್ನು ಅಗಲೀಕರಣಗೊಳಿಸುವ ಕಾರ್ಯ ನಡೆದಿದೆ. ಇದಕ್ಕಾಗಿ ರಸ್ತೆ ಕೊನೆ ಭಾಗದಲ್ಲಿ ಪುರಸಭೆ ನಿರ್ಮಿಸಿದ್ದ ಚರಂಡಿ ಸ್ಥಳದಲ್ಲೇ ಹೊಸದಾಗಿ ಚರಂಡಿ ನಿರ್ಮಿಸುವ ಕಾರ್ಯವೂ ಪ್ರಗತಿಯಲ್ಲಿದೆ. ರಸ್ತೆಯ ಇನ್ನೊಂದು ಬದಿ ಅಂಜುಮನ್‌ ಕಾಂಪ್ಲೆಕ್ಸ್‌ ಹತ್ತಿರ ಶುಕ್ರವಾರ ರಸ್ತೆ ಅಗಲೀಕರಣ ಕಾಮಗಾರಿಗೋಸ್ಕರ ಚರಂಡಿ ನಿರ್ಮಿಸಲು ಕೆಲಸಗಾರರು ಮುಂದಾದಾಗ ಕೆಲವು ಅಂಗಡಿಕಾರರು ತಕರಾರು ತೆಗೆದು ರಸ್ತೆಯ ವಿಬಿಸಿ ಪ್ರೌಢಶಾಲೆ ಎದುರಿನ ಭಾಗದಲ್ಲಿ ಕಡಿಮೆ ಅಗಲ, ಅಂಜುಮನ್‌ ಕಾಂಪ್ಲೆಕ್ಸ್‌ ಭಾಗದಲ್ಲಿ ಹೆಚ್ಚು ಅಗಲ ಮಾಡುತ್ತಿದ್ದೀರಿ ಎಂದು ಆಕ್ಷೇಪಿಸಿದರು.

ಕೆಲಸಗಾರರು ರಸ್ತೆ ಅಳತೆ ಮಾಡಿದಾಗ ಎರಡೂ ಕಡೆ ರಸ್ತೆಯ ಅಳತೆ ಒಂದೇ ಆಗಿತ್ತು. ಆದರೂ ತಕರಾರು ಮುಂದುವರಿಸಿದ
ಕೆಲವರು ಮೂಲ ಯೋಜನೆಯಲ್ಲಿ ಎಷ್ಟು ಅಗಲದ ರಸ್ತೆ ಇದೆಯೋ ಅಷ್ಟೇ ರಸ್ತೆ ಮಾಡಿ, ಹೆಚ್ಚಿಗೆ ಮಾಡಲು ಅವಕಾಶ ಕೊಡುವುದಿಲ್ಲ ಎಂದು ಪಟ್ಟು ಹಿಡಿದರು. ಇದರಿಂದ ಬೇಸತ್ತ ಕೆಲಸಗಾರರು ಕಾಮಗಾರಿ ಸ್ಥಗಿತಗೊಳಿಸಿ ಸ್ಥಳದಿಂದ ನಿರ್ಗಮಿಸಿದರು. ಹೀಗಾಗಿ ರಸ್ತೆ ಅಗಲೀಕರಣ ಕಾಮಗಾರಿ ನನೆಗುದಿಗೆ ಬೀಳುವ ಸಂಶಯ ತಲೆದೋರಿದಂತಾಗಿದೆ.

20ನೇ ದಿನದಲ್ಲಿ ಧರಣಿ: ಏತನ್ಮಧ್ಯೆ ಧರಣಿಗೆ ಸಂಘಟನೆಗಳ ಬೆಂಬಲ ಹೆಚ್ಚತೊಡಗಿದೆ. ಬುಧವಾರ ಹಡಪದ ಅಪ್ಪಣ್ಣ ಕ್ಷೇಮಾಭಿವೃದ್ಧಿ ಸಂಘದ ಪದಾಧಿಕಾರಿಗಳು, ಸದಸ್ಯರು ಧರಣಿಯಲ್ಲಿ ಪಾಲ್ಗೊಂಡು ಬೆಂಬಲ ಸೂಚಿಸಿದ್ದೂ ಅಲ್ಲದೆ ಹೆದ್ದಾರಿ ಅಗಲೀಕರಣ ಬೇಡಿಕೆ ಈಡೇರಿಕೆ ವಿಳಂಬಗೊಂಡಲ್ಲಿ ಉಗ್ರ ಹೋರಾಟ ನಡೆಸಲೂ ತಾವು ಹಿಂದೇಟು ಹಾಕುವುದಿಲ್ಲ ಎಂದು ಹೋರಾಟಗಾರರಿಗೆ ಭರವಸೆ ನೀಡಿದರು.

ಸಂಘದ ಅಧ್ಯಕ್ಷ ಬಸವರಾಜ ಅಬ್ಬಿಹಾಳ ಬೆಂಬಲ ಸೂಚಿಸಿ ಮಾತನಾಡಿದರು. ಭೀಮರಾಯ ಬಳವಾಟ, ಶಂಕ್ರುಹಡಪದ, ಶಿವಕುಮಾರ ಬಿದರಕುಂದಿ, ಶಾಂತು ತಾರನಾಳ, ಶಿವು ಹಡಪದ, ಬಸವರಾಜ ಹಡಪದ, ಸಂಗಮೇಶ ಹಡಪದ, ಬಸವರಾಜ ಹಡಪದ ಬಂಗಾರಗುಂಡ, ಬಸವರಾಜ ಗಡೇದ ಪಾಲ್ಗೊಂಡಿದ್ದರು. ಗುರುವಾರ ಕರ್ನಾಟಕ ನವ ನಿರ್ಮಾಣ ಸೇನೆ ತಾಲೂಕಾಧ್ಯಕ್ಷ ರಾಜೂಗೌಡ ತುಂಬಗಿ, ಸಮಾಜಸೇವಕ ಶ್ರೀನಿವಾಸ ಗಡೇದ, ಮೌನೇಶ ಪತ್ತಾರ ಮತ್ತಿತರರು ಪಾಲ್ಗೊಂಡಿದ್ದರು.

ಶುಕ್ರವಾರದ ಧರಣಿಯಲ್ಲಿ ಹೋರಾಟದ ನೇತೃತ್ವ ವಹಿಸಿಕೊಂಡಿರುವ ಸಿದ್ದರಾಜ ಹೊಳಿ, ಪರಮೇಶ ಮಾತಿನ ವಕೀಲರು, ಬಸವರಾಜ ನಂದಿಕೇಶ್ವರಮಠ, ಮಹಾಂತಗೌಡ ಬಿರಾದಾರ, ಮೌನೇಶ ಸೋನಾರ, ಅಯ್ಯೂಬ್‌ ಮೋಮಿನ, ಶ್ರೀನಿವಾಸ ಹಂಡರಗಲ್ಲ, ಹಸನಲಿ ಬಾಗವಾನ, ಜಾವಿದ ಮೋಮಿನ್‌ ಮತ್ತಿತರರು ಪಾಲ್ಗೊಂಡಿದ್ದರು.

ಟಾಪ್ ನ್ಯೂಸ್

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

1-modi

Varanasi; 25000 ಮಹಿಳೆಯರ ಜತೆ ಸ್ವಕ್ಷೇತ್ರದಲ್ಲಿ ಪಿಎಂ ಸಂವಾದ

ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

Mangaluru ನೇತ್ರಾವತಿಯಲ್ಲಿ ಹರಿವು ಏರಿಕೆ; ತುಂಬೆಗೆ ಎಎಂಆರ್‌ ನೀರು

MOdi (3)

Odisha ರಾಜ್ಯ ಸರಕಾರವು ಭ್ರಷ್ಟರ ಹಿಡಿತಕ್ಕೆ ಸಿಲುಕಿದೆ: ಪಿಎಂ ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqewewqe

Vijayapura;ದೌರ್ಜನ್ಯದಿಂದ ನೊಂದು ದಯಾ ಮರಣಕ್ಕೆ ಮನವಿ ಸಲ್ಲಿಸಿದ ನಾಲ್ವರ ಕಟುಂಬ

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura; ಕಚೇರಿ ಆವರಣದಲ್ಲೇ ಮದ್ಯ ಸೇವಿಸಿದ ಹೆಸ್ಕಾಂ ಜೆಇ ವಿಡಿಯೋ ವೈರಲ್

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

Vijayapura ಎಪಿಎಂಸಿ ಮಾರುಕಟ್ಟೆಯಲ್ಲಿ ಯುವಕನ‌ ಹತ್ಯೆ; ಆಪ್ತರ ಮೇಲೆ ಶಂಕೆ

1-qwqeewqe

Vijayapura;ದಲಿತರ ಭವನ ನಿರ್ಮಾಣಕ್ಕೆ ಮುಸ್ಲಿಮರ ವಿರೋಧ:ಪೊಲೀಸರ ಮಧ್ಯಸ್ಥಿಕೆ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

ಕ್ಯಾಂಟರ್ ಅಡ್ಡಗಟ್ಟಿ 32 ಲಕ್ಷ ರೂ. ದರೋಡೆ: ಖಾರದ ಪುಡಿ ಎರಚಿ ಹಲ್ಲೆ, ಇಬ್ಬರಿಗೆ ಗಾಯ

MUST WATCH

udayavani youtube

ಬಾವಿಗೆ ಬಿದ್ದು ಒದ್ದಾಡುತ್ತಿದ್ದ ರಾಷ್ಟ್ರಪಕ್ಷಿಯ ರಕ್ಷಣೆ

udayavani youtube

ಮಡಿಕೇರಿಯಲ್ಲೊಂದು ಪಕ್ಕಾ ಉಡುಪಿ ಶೈಲಿಯ ಉಪಹಾರ ಮಂದಿರ

udayavani youtube

ಬಭ್ರುವಾಹನ ಜನ್ಮಸ್ಥಳ ಅರ್ಜುನ ಪ್ರತಿಷ್ಠಾಪಿಸಿದ ಆಂಜನೇಯ ಸ್ವಾಮಿ ದೇವಸ್ಥಾನ

udayavani youtube

ನವಜಾತ ಶಿಶುಗಳಲ್ಲಿ ಉಂಟಾಗುವ ಸಮಸ್ಯೆ ಮತ್ತು ಪರಿಹಾರಗಳು

udayavani youtube

ಶ್ರೀಲಂಕಾದಲ್ಲಿ ಜೀರ್ಣೋದ್ಧಾರಗೊಂಡ ದೇವಾಲಯಕ್ಕೆ ಅಂಜನಾದ್ರಿಯಿಂದ ಜಲ, ಸೀರೆ,ಮಣ್ಣು ಸಮರ್ಪಣೆ

ಹೊಸ ಸೇರ್ಪಡೆ

police USA

China ಶಾಲೆಯಲ್ಲಿ ಚಾಕು ಇರಿತ: 5 ಮಂದಿಗೆ ಗಾಯ

prachanda-nepal

Nepal; 4ನೇ ಬಾರಿಗೆ ವಿಶ್ವಾಸಮತ ಗೆದ್ದ ಪ್ರಧಾನಿ ಪ್ರಚಂಡ

1-wqwewqeewqe

RSS ಸದಸ್ಯ ನಾನು ಎಂದ ಕಲ್ಕತ್ತಾ ಹೈಕೋರ್ಟ್ ನಿವೃತ್ತ ಜಡ್ಜ್

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

5, 8, 9ನೇ ತರಗತಿ ಮಕ್ಕಳ ಸಂಕಟಕ್ಕೆ ಪರಿಹಾರ

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Heavy Rain ಮಳೆಗಾಲದ ವಾತಾವರಣ; ಪೂರ್ವ ಮುಂಗಾರು ಚುರುಕು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.