ಅಂತೂ ಬೋನಿಗೆ ಬಿತ್ತು ನರಭಕ್ಷಕ ಚಿರತೆ!


Team Udayavani, Dec 22, 2018, 4:53 PM IST

bell.jpg

ಕಂಪ್ಲಿ: ಮನೆ ಅಂಗಳದಲ್ಲಿ ಆಟವಾಡುತ್ತಿದ್ದ ಬಾಲಕನ ಹೊತ್ತೂಯ್ದು ಕೊಂದು ಹಾಕಿ ನಂತರ ನಾಪತ್ತೆಯಾಗಿದ್ದ ನರಭಕ್ಷಕ ಚಿರತೆ ಕೊನೆಗೂ ಸೆರೆ ಸಿಕ್ಕಿದೆ. ಸತತ ಹನ್ನೊಂದು ದಿನಗಳಿಂದ ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಸೋಮಲಾಪುರ ಗ್ರಾಮಸ್ಥರಿಗೆ ಚಳ್ಳೆ ಹಣ್ಣು ತಿನಿಸುತ್ತಿದ್ದ ಚಿರತೆ ಶುಕ್ರವಾರ ಬೋನಿಗೆ ಬಿದ್ದಿದ್ದು, ಗ್ರಾಮಸ್ಥರು ನಿಟ್ಟುಸಿರು ಬಿಟ್ಟಿದ್ದಾರೆ.

ಮನೆ ಅಂಗಳದಲ್ಲಿ ಆಟವಾಡುತ್ತಿದ್ದ 3 ವರ್ಷದ ಬಾಲಕನನ್ನು ಹೊತ್ತೂಯ್ದ ನಂತರ ಸೋಮಲಾಪುರ ಗ್ರಾಮದ ಜನ ತಲ್ಲಣಗೊಂಡಿದ್ದರು. ಗುಡ್ಡದ ಬುಡದಲ್ಲೇ ಇದ್ದ ಗ್ರಾಮದಲ್ಲಿ ಆತಂಕ ಮನೆ ಮಾಡಿತ್ತು. ಚಿರತೆ ಸೆರೆಹಿಡಿಯದಿದ್ದಲ್ಲಿ ಮತ್ತಷ್ಟು
ಸಾವು ನೋವು ಸಂಭವಿಸುವ ಸಾಧ್ಯತೆ ಇತ್ತು. ಹೀಗಾಗಿ ಅರಣ್ಯ ಇಲಾಖೆ ಕಾರ್ಯಾಚರಣೆ ಕೈಗೊಂಡು ಚಿರತೆ ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದೆ.
 
 ಅರಣ್ಯ ಇಲಾಖೆ ಮೊದಲ ಹಂತದಲ್ಲಿ ಮೂರು, ಎರಡನೇ ಹಂತದಲ್ಲಿ ನಾಲ್ಕು ಹಾಗೂ ನಂತರ ಒಟ್ಟು ಏಳು ಬೋನ್‌ಗಳನ್ನು ಅಳವಡಿಸಿತ್ತು. ಆದರೆ ಆಗಾಗ ಕಾಣಿಸಿಕೊಳ್ಳುತ್ತಿದ್ದ ಚಿರತೆ ಬೋನಿಗೆ ಮಾತ್ರ ಬೀಳುತ್ತಿರಲಿಲ್ಲ. ಇದು ಅರಣ್ಯ ಇಲಾಖೆ ಸಿಬ್ಬಂದಿ ಹಾಗೂ ಗ್ರಾಮಸ್ಥರ ತಲೆನೋವಿಗೆ ಕಾರಣವಾಗಿತ್ತು.

ಪ್ರತಿದಿನ ಈ ಭಾಗದ ಮೆಟ್ರಿ, ದೇವಲಾಪುರ, ಸೋಮಲಾಪುರ, ಹಳೇದರೋಜಿ, ಮಾದಾಪುರಗಳಲ್ಲಿ ಕಾಣಿಸಿಕೊಳ್ಳುವ ಚಿರತೆ ಕುರಿ ಮತ್ತು ನಾಯಿಗಳನ್ನು ಹೊತ್ತೂಯ್ದು ಗುಡ್ಡದಲ್ಲಿ ಮರೆಯಾಗುತ್ತಿತ್ತು. ಚಿರತೆ ಪತ್ತೆಗಾಗಿ ಡಿಜಿಟಲ್‌ ಕ್ಯಾಮೆರಾ ಮತ್ತು ಟ್ರ್ಯಾಪ್‌ ಕ್ಯಾಮೆರಾ ಅಳವಡಿಸಿದ್ದರೂ ಪ್ರಯೋಜನವಾಗಿರಲಿಲ್ಲ. ಕೊನೆಗೆ ಚಿರತೆಯ ಚಲನವಲನ ಹಾಗೂ ಹೆಜ್ಜೆ ಗುರುತು ಪತ್ತೆ ಹಚ್ಚಲು ಡ್ರೋಣ್‌ ಕ್ಯಾಮೆರಾ ಬಳಸುವ ಜೊತೆಗೆ ಸ್ಥಳೀಯರೊಂದಿಗೆ ಕೂಂಬಿಂಗ್‌ ನಡೆಸಲಾಯಿತು. ಆದರೂ ನರಭಕ್ಷಕ ಚಿರತೆ ಮಾತ್ರ ಯಾರ ಕಣ್ಣಿಗೂ ಬಿದ್ದಿರಲಿಲ್ಲ.

ಆದರೆ ಕೊನೆಗೂ ಶುಕ್ರವಾರ ಬೆಳಗಿನ ಜಾವ ಸೋಮಲಾಪುರ ಗ್ರಾಮದ ಎರದಮಟ್ಟಿಯ ಚೆಕ್‌ ಡ್ಯಾಮ್‌ ಹತ್ತಿರ ಇಡಲಾಗಿದ್ದ ಬೋನ್‌ನಲ್ಲಿ ಚಿರತೆ ಸೆರೆಯಾಗಿದೆ. ಸೆರೆಯಾದ ಚಿರತೆ ನೋಡಲು ಸುತ್ತಮುತ್ತಲಿನ ಗ್ರಾಮದ ಸಾವಿರಾರು ಜನ
ಜಮಾಯಿಸಿದರು. ಜನರನ್ನು ನಿಯಂತ್ರಿಸಲು ಪೊಲೀಸರು ಹಾಗೂ ಅರಣ್ಯ ಇಲಾಖೆ ಸಿಬ್ಬಂದಿ ಹರಸಾಹಸ ಪಟ್ಟರು.
 
ಈ ಸಂದರ್ಭದಲ್ಲಿ ಹೊಸಪೇಟೆ ವಲಯ ಅರಣ್ಯಾಧಿಕಾರಿ ಟಿ.ಭಾಸ್ಕರ್‌, ಉಪವಲಯ ಅರಣ್ಯಾಧಿಕಾರಿ ಎಸ್‌.ದೇವರಾಜ, ಸಿಪಿಐ ಡಿ.ಹುಲುಗಪ್ಪ, ಪಿಎಸ್‌ಐ ಕೆಬಿ ವಾಸುಕುಮಾರ್‌ ಮತ್ತು ಸಿಬ್ಬಂದಿ ಹಾಜರಿದ್ದರು.

ಸ್ಥಳೀಯರು ಮತ್ತು ಇಲಾಖೆ ಸಿಬ್ಬಂದಿ ನಿರಂತರ ಶ್ರಮದಿಂದ ನರಭಕ್ಷಕ ಚಿರತೆಯನ್ನು ಜೀವಂತವಾಗಿ ಸೆರೆ ಹಿಡಿದಿದ್ದು,
ಇದು ಈಗಾಗಲೇ ಮನುಷ್ಯನ ಮೇಲೆ ದಾಳಿ ಮಾಡಿರುವುದರಿಂದ ಇದನ್ನು ಕಾಡಿನಲ್ಲಿ ಬಿಡದೆ ಮೈಸೂರಿನ ಜಯಚಾಮರಾಜೇಂದ್ರ ಮೃಗಾಲಯಕ್ಕೆ ಸ್ಥಳಾಂತರಿಸಲಾಗುವುದು. ಇನ್ಮುಂದೆ ಸಾರ್ವಜನಿಕರು ಭಯಪಡುವ ಅಗತ್ಯವಿಲ್ಲ. ಆದರೂ ಜನತೆ ಎಚ್ಚರಿಕೆಯಿಂದ ಇರುವುದು ಉತ್ತಮ. 
ಡಾ| ಪಿ.ರಮೇಶಕುಮಾರ್‌, ಪ್ರಾದೇಶಿಕ ಉಪ ಅರಣ್ಯ ಸಂರಕ್ಷಣಾಧಿಕಾರಿ, ಬಳ್ಳಾರಿ.

ಟಾಪ್ ನ್ಯೂಸ್

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Kasaragod ರೈಲು ಗಾಡಿಗೆ ಕಲ್ಲೆಸೆತ: ಬಾಲಕಿಗೆ ಗಾಯ

Uppinangady ಬೆಂಕಿ ಅವಘಡ: ಭಾರೀ ನಷ್ಟ

Uppinangady ಮನೆಗೆ ಆಕಸ್ಮಿಕ ಬೆಂಕಿ: ಭಾರೀ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

s suresh kumar

Bellary; ಕಾಂಗ್ರೆಸ್ ಪಕ್ಷದ ಚಿಹ್ನೆ ಚೊಂಬಿಗೆ ಬದಲಾಗಿದೆ: ಸುರೇಶ್ ಕುಮಾರ್ ವ್ಯಂಗ್ಯ

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

badminton

Uber Cup ಬ್ಯಾಡ್ಮಿಂಟನ್‌: ಕೆನಡಾವನ್ನು ಮಣಿಸಿದ ಭಾರತ

1-aade

Archery ವಿಶ್ವಕಪ್‌: ಜ್ಯೋತಿಗೆ ಹ್ಯಾಟ್ರಿಕ್‌ ಚಿನ್ನ

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

KSRTC ಬಸ್‌ -ಆಟೋರಿಕ್ಷಾ ನಡುವೆ ಅಪಘಾತ; ಚಾಲಕ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Kundapura ಮಿನಿ ಗೂಡ್ಸ್‌ ವಾಹನ ಢಿಕ್ಕಿ; ಪಾದಚಾರಿ ಸಾವು

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.