ಕುರುಂಜಿಗುಡ್ಡೆ ಒಳಾಂಗಣ ಕ್ರೀಡಾಂಗಣ ಶೀಘ್ರ ಲೋಕಾರ್ಪಣೆ


Team Udayavani, Dec 23, 2018, 10:30 AM IST

23-december-4.gif

ಸುಳ್ಯ : ಎಂಟು ವರ್ಷಗಳಿಂದ ನನೆಗುದಿಗೆ ಬಿದ್ದಿರುವ ಕುರುಂಜಿಗುಡ್ಡೆ ಒಳಾಂಗಣ ಕ್ರೀಡಾಂಗಣ ಕೊನೆಗೂ ಉದ್ಘಾಟನೆಗೆ ಸಿದ್ಧವಾಗಿದೆ. ಡಿ. 25ರ ಒಳಗೆ ಉದ್ಘಾಟಿಸಲಾಗುವುದು ಎಂದು ನ.ಪಂ .ಸಾಮಾನ್ಯ ಸಭೆಯಲ್ಲಿ ಅಧ್ಯಕ್ಷರು ಹೇಳಿಕೆ ನೀಡುವ ಮೂಲಕ ಲಕ್ಷಾಂತರ ರೂ. ವೆಚ್ಚದ ಕ್ರೀಡಾಂಗಣ ವಾರದೊಳಗೆ ಕ್ರೀಡಾಪಟುಗಳ ಉಪಯೋಗಕ್ಕೆ ತೆರೆದುಕೊಳ್ಳಲಿದೆ.

ಪ್ರತಿ ಸಾಮಾನ್ಯ ಸಭೆಯಲ್ಲಿ ಒಳಾಂಗಣ ಕ್ರೀಡಾಂಗಣ ಉದ್ಘಾಟನೆ ಆಗದಿರುವ ಬಗ್ಗೆ ಚರ್ಚೆ ಆಗುತಿತ್ತು. ಅಕ್ಟೋಬರ್‌ ತಿಂಗಳಲ್ಲಿ ನಡೆದ ಸಾಮಾನ್ಯ ಸಭೆಯಲ್ಲಿ ಪಾಳು ಬಿದ್ದ ಸ್ಥಿತಿಯಲಿದ್ದ ಕ್ರೀಡಾಂಗಣ ತತ್‌ಕ್ಷಣ ದುರಸ್ತಿ ಮಾಡಿ ಹಸ್ತಾಂತರಿಸುವಂತೆ ಗುತ್ತಿಗೆ ಸಂಸ್ಥೆಗೆ ನ.ಪಂ. ಸೂಚಿಸಿತ್ತು. ಕಾಮಗಾರಿ ಮುಗಿದ ಮೇಲೆ ನ.ಪಂ. ವತಿಯಿಂದ ಪರಿಶೀಲನೆ ನಡೆಸಿ, ಗುತ್ತಿಗೆ ಸಂಸ್ಥೆಗೆ ಬಾಕಿ ಮೊತ್ತದ ಪಾವತಿಸಿ ಉದ್ಘಾಟಿಸಲು ತೀರ್ಮಾನಿಸಲಾಗಿತ್ತು.

2010ರಲ್ಲಿ ಶಿಲಾನ್ಯಾಸ
ಕುರುಂಜಿಗುಡ್ಡೆಯ ಎತ್ತರದ ಪ್ರದೇಶದಲ್ಲಿ ಸಿ.ಎಂ.ಎಸ್‌.ಎಂ.ಟಿ.ಡಿ.ಪಿ. ಯೋಜನೆಯಡಿ 50 ಲಕ್ಷ ರೂ. ಅಂದಾಜಿನ ಒಳಾಂಗಣ ಕ್ರೀಡಾಂಗಣ ನಿರ್ಮಾಣಕ್ಕೆ 2010 ಜೂ. 29ರಂದು ಅಂದಿನ ರಾಜ್ಯ ಸರಕಾರದ ದಿಲ್ಲಿ ಪ್ರತಿನಿಧಿ, ಮಾಜಿ ಸಂಸದ ಧನಂಜಯ ಕುಮಾರ್‌ ಶಿಲಾನ್ಯಾಸ ನೆರವೇರಿಸಿದ್ದರು. ಆ ಅನುದಾನದಲ್ಲಿ ಕಾಮಗಾರಿ ಪೂರ್ಣಗೊಳ್ಳದ ಕಾರಣ ಮತ್ತೆ ನಿರ್ಮಿತಿ ಕೇಂದ್ರದ ನಿರ್ವಹಣೆಯಡಿ ಎರಡು ಬಾರಿ 15.57 ಲಕ್ಷ ರೂ. ಮತ್ತು 9.40 ಲಕ್ಷ ರೂ. ಅನ್ನು ಮಂಜೂರು ಮಾಡಲಾಗಿತ್ತು. ಇದರಿಂದ ಉದ್ದೇಶಿತ ಒಳಾಂಗಣ ಕ್ರೀಡಾಂಗಣದ ವೆಚ್ಚ 50 ಲಕ್ಷದಿಂದ 74.97 ಲಕ್ಷ ರೂ.ಗೆ ಏರಿಕೆ ಕಂಡಿತ್ತು. ಅದಾಗ್ಯೂ ಕ್ರೀಡಾಂಗಣ ಅಂತಿಮಗೊಳ್ಳದೆ ಉದ್ಘಾಟನೆ ಹಂತಕ್ಕೆ ಬಂದಿರಲಿಲ್ಲ.

ಮೂರನೇ ಹಂತದಲ್ಲಿ 2016-17ನೇ ಸಾಲಿನ ಯೋಜನೆಯಡಿ 9.40 ಲಕ್ಷ ರೂ. ವೆಚ್ಚದಲ್ಲಿ ಅಳವಡಿಸಿದ ಎ.ಸಿ. ಶೀಟು ತೆಗೆಯುವುದು, ಹೆಚ್ಚುವರಿ ಜಿ.ಐ. ರಿಪೀಸು ಒದಗಿಸುವುದು, ಗ್ಯಾಲೋಲಿಯಂ ಶೀಟು ಅಳವಡಿಕೆ, ದುರಸ್ತಿ ಕಾಮಗಾರಿಗೆ ಅಂದಾಜು ಪಟ್ಟಿ ತಯಾರಿಸಿ ಕೈಗೆತ್ತಿಕೊಳ್ಳಲಾಗಿತ್ತು.

ಡಿ. 25ರ ಒಳಗೆ ಉದ್ಘಾಟನೆ
ಒಳಾಂಗಣ ಕ್ರೀಡಾಂಗಣದ ಬಾಕಿ ಉಳಿದಿರುವ ಕಾಮಗಾರಿ ಹಾಗೂ ದುರಸ್ತಿ ಕಾರ್ಯ ಪೂರ್ಣಗೊಂಡಿದೆ. ಶಾಸಕರು ಡಿ. 22ರ ತನಕ ಅಧಿವೇಶನದಲ್ಲಿ ಪಾಲ್ಗೊಳ್ಳಲಿದ್ದಾರೆ. ಅನಂತರ ಅವರ ಉಪಸ್ಥಿತಿಯಲ್ಲಿ ಡಿ. 25ರ ಒಳಗೆ ಉದ್ಘಾಟಿಸಲಾಗುವುದು.
-ಶೀಲಾವತಿ ಮಾಧವ,
ಅಧ್ಯಕ್ಷರು, ಸುಳ್ಯ ನ.ಪಂ.

ಕಿರಣ್‌ ಪ್ರಸಾದ್‌ ಕುಂಡಡ್ಕ

ಟಾಪ್ ನ್ಯೂಸ್

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

love birds

Supreme Court ಸಲಹೆ; ಹೊಂದಾಣಿಕೆಯು ಸುಖ ದಾಂಪತ್ಯದ ಅಡಿಪಾಯ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ

Parashurama Park 2 ವಾರದಲ್ಲಿ ಕ್ರಮ ಕೈಗೊಳ್ಳಲು ನಿರ್ಮಿತಿ ಕೇಂದ್ರಕ್ಕೆ ಹೈಕೋರ್ಟ್‌ ಸೂಚನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

Puttur ಅಡಿಕೆಗೂ ಬಿಸಿಲ ತಾಪ: ಉದುರುತ್ತಿವೆ ನಳ್ಳಿ! ಶೇ. 50ರಷ್ಟು ಫಸಲು ನಷ್ಟದ ಭೀತಿ

CRZ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

ಸಿಆರ್‌ಝಡ್‌ ಮರಳು ಇನ್ನು ಸದ್ಯಕ್ಕೆ ಮರೀಚಿಕೆ

24-saturday

Horoscope: ಧೈರ್ಯ, ಸಾಹಸದ ಪ್ರವೃತ್ತಿ ಯಶಸ್ಸಿಗೆ ಪೂರಕ, ವ್ಯಾಪಾರಿಗಳಿಗೆ ನಿರೀಕ್ಷಿತ ಲಾಭ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Udupi ಇನ್ನೂ ನಡೆಯದ ಟೆಂಡರ್‌ ಪ್ರಕ್ರಿಯೆ; ರಾಜ್ಯದಲ್ಲಿ ಅಗ್ನಿಶಾಮಕ ವಾಹನ ಕೊರತೆ

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Covishield Vaccine; ಹಾಕಿಸಿಕೊಂಡವರು ಐಸ್‌ಕ್ರೀಮ್‌ ತಿನ್ನಬಾರದಾ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.