ಕೆಯ್ಯೂರು: ಶೌಚಾಲಯ ನಿರ್ಮಾಣಕ್ಕೆ ಅನುದಾನ ಹಸ್ತಾಂತರ


Team Udayavani, Dec 23, 2018, 1:44 PM IST

23-december-15.gif

ಕೆಯ್ಯೂರು: ಕೆಯ್ಯೂರು ಗ್ರಾಮದ ಪರಿಶಿಷ್ಟ ಜಾತಿ ಕುಟುಂಬವೊಂದರ ಸಂಕಷ್ಟದ ಜೀವನದ ಬಗ್ಗೆ ಡಿ. 19ರಂದು ಉದಯವಾಣಿ ಸುದಿನದಲ್ಲಿ ಪ್ರಕಟಗೊಂಡ ‘ಹೆತ್ತವರಿಲ್ಲದ ನಾಲ್ವರು ಹೆಣ್ಣು ಮಕ್ಕಳಿಗೆ ಸೂರೂ ಇಲ್ಲ’ ವರದಿ ಹಿನ್ನೆಲೆಯಲ್ಲಿ ಕುಟುಂಬಕ್ಕೆ ಮತ್ತಷ್ಟು ನೆರವು ದೊರೆತಿದೆ. ಬಿಜೆಪಿಯ ದ.ಕ.ಲೋಕಸಭಾ ಕ್ಷೇತ್ರದ ಸಂಚಾಲಕ ಗೋಪಾಲಕೃಷ್ಣ ಹೇರಳೆ, ತಾ.ಪಂ.ಅಧ್ಯಕ್ಷೆ ಭವಾನಿ ಚಿದಾನಂದ ಅವರ ನೇತೃತ್ವದ ತಂಡ ಶನಿವಾರ ಮನೆಗೆ ಭೇಟಿ ನೀಡಿ ಅಲ್ಲಿನ ಪರಿಸ್ಥಿತಿ ಅವಲೋಕಿಸಿ ನೆರವು ನೀಡಿತ್ತು.

ತಾ.ಪಂ.ನಿಂದ 25 ಸಾವಿರ ರೂ.
ತಾ.ಪಂ.ಅನುದಾನದಲ್ಲಿ ಶೌಚಾಲಯ ನಿರ್ಮಾಣಕ್ಕೆ ಬಿಡುಗಡೆಗೊಂಡ ರೂ.25 ಸಾವಿರ ಅನುದಾನವನ್ನು ತಾ.ಪಂ.ಅಧ್ಯಕ್ಷೆ ಭವಾನಿ ಚಿದಾನಂದ ಅವರು ನಾಲ್ವರು ಹೆಣ್ಣುಮಕ್ಕಳ ಅಜ್ಜಿ ಭಾಗೀರಥಿ ಅವರಿಗೆ ಹಸ್ತಾಂತರಿಸಿದರು. ಕೇಂದ್ರ ಸರಕಾರವು ಪ್ರತಿ ಮನೆಯಲ್ಲಿ ಶೌಚಾಲಯ ಇರಬೇಕು ಎಂದು ಆದ್ಯತೆ ನೀಡಿರುವ ಹಿನ್ನೆಲೆಯಲ್ಲಿ ತುರ್ತಾಗಿ ಸ್ಪಂದನೆ ನೀಡಲಾಗಿದೆ ಎಂದ ಅವರು, ಸೋಮವಾರದಿಂದಲೇ ಕಾಮಗಾರಿ ಆರಂಭಿಸುವುದಾಗಿ ಭವಾನಿ ಚಿದಾನಂದ ಅವರು ಈ ಸಂದರ್ಭ ಪತ್ರಿಕೆಗೆ ತಿಳಿಸಿದರು.

ಗ್ರಾ.ಪಂ. ಮತ್ತು ವೈಯಕ್ತಿಕವಾಗಿ ತಲಾ 5 ಸಾವಿರ ರೂ. ವಿತರಣೆ
ಕೆಯ್ಯೂರು ಗ್ರಾ.ಪಂ.ಎಸ್‌ಸಿ/ಎಸ್‌ಟಿ 25 ನಿಧಿ ಮೂಲಕ 5 ಸಾವಿರ ರೂ. ಅನ್ನು ಗ್ರಾ.ಪಂ.ಸದಸ್ಯ ಕಿಟ್ಟು ಅಜಿಲ ಕಣಿಯಾರು ಹಸ್ತಾಂತರಿಸಿದರು. ಸಿವಿಲ್‌ ಗುತ್ತಿಗೆದಾರ ಯೋಗೀಶ್‌ ಪೂಜಾರಿ ಅವರು ವೈಯಕ್ತಿಕ ರೂಪದಲ್ಲಿ 5 ಸಾವಿರ ರೂ. ಸಹಾಯಧನ ನೀಡಿದರು. ಶೌಚಾಲಯ, ಸ್ನಾನಗೃಹಕ್ಕೆ ಹಣ ಸಾಲದಿದ್ದರೆ ಅದಕ್ಕೆ ಬೇಕಾದ ಉಳಿದ ವೆಚ್ಚವನ್ನು ತಾನು ಭರಿಸುವುದಾಗಿ ಗೋಪಾಲಕೃಷ್ಣ ಹೇರಳೆ ಅವರು ಭರವಸೆ ನೀಡಿದರು.

ದಲಿತ್‌ ಸೇವಾ ಸಮಿತಿ ನೆರವು
ಕುಟುಂಬಕ್ಕೆ ದಲಿತ್‌ ಸೇವಾ ಸಮಿತಿ ತಾ| ಅಧ್ಯಕ್ಷ ರಾಜು ಹೊಸ್ಮಠ ಭೇಟಿ ನೀಡಿ, ಸೇವಾ ಸಮಿತಿಯ ನಿಧಿಯಿಂದ ಮನೆಯ ಮೇಲ್ಚಾವಣಿಯ ಕೆಲಸ ಮಾಡಿಸುವ ಭರವಸೆ ನೀಡಿದ್ದಾರೆ.

ಈ ಸಂದರ್ಭ ರುಕ್ಮಯ ಗೌಡ, ಬೆಳ್ಳಾರೆ ಡಾ| ಶಿವರಾಮ ಕಾರಂತ ಪ್ರಥಮ ದರ್ಜೆ ಕಾಲೇಜಿನ ಸಮಾಜ ಕಾರ್ಯ ವಿದ್ಯಾರ್ಥಿಗಳಾದ ಗಣೇಶ್‌, ರಮೇಶ್‌, ಸಂತೋಷ್‌ ಕುಮಾರ್‌, ಪ್ರವೀಣ್‌ ಕುಮಾರ್‌, ಶ್ರೇಯಸ್‌, ಸುಜಿತ್‌, ಸತೀಶ್‌, ಕೀರ್ತನ್‌, ಬಾಲಚಂದ್ರ ಮೊದಲಾದವರು ಉಪಸ್ಥಿತರಿದ್ದರು.ಕಳೆದ ಬುಧವಾರ ಹೆಸರು ತಿಳಿಸಲು ಇಚ್ಛಿಸದ ದಾನಿಯೊಬ್ಬರು ಈ ಕುಟುಂಬಕ್ಕೆ 10 ಸಾವಿರ ರೂ. ಧನಸಹಾಯ ನೀಡಿದ್ದರು. ಬೆಂಗಳೂರಿನ ವಿದ್ಯಾಮಾತಾ ಫೌಂಡೇಶನ್‌ ವತಿಯಿಂದ ಪದವಿ ವ್ಯಾಸಾಂಗ ಮಾಡುತ್ತಿರುವ ನೇತ್ರಾ ಅವರ ಮುಂದಿನ ಒಂದು ವರ್ಷದ ವಿದ್ಯಾಭ್ಯಾಸದ ವೆಚ್ಚ ಭರಿಸಲು ಸಂಸ್ಥೆಯ ಅಧ್ಯಕ್ಷ ಭಾಗೇಶ್‌ ರೈ ಮುಂದಾಗಿದ್ದಾರೆ.

ಟಾಪ್ ನ್ಯೂಸ್

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

Neelavar ಗೋ ಶಾಲೆ: 3 ಸಾವಿರ ಕೆ.ಜಿ. ಕಲ್ಲಂಗಡಿ ಹಣ್ಣು ಸಮರ್ಪಣೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಬೋಂಡಾ, ಬನ್ಸ್ ಮತ್ತು ಕೇಕ್‌

ಬೋಂಡಾ, ಬನ್ಸ್ ಮತ್ತು ಕೇಕ್‌

promegrnate

ಉಪಬೆಳೆಯಾಗಿ ದಾಳಿಂಬೆ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

ಕೂಲ್‌ ಕೂಲ್‌ ಬೇಸಗೆಯಲ್ಲಿ ಜಾನುವಾರುಗಳ ಆರೈಕೆ ಹೀಗಿರಲಿ

go-green

ಮನೆಯಲ್ಲೇ ಹಸಿರು ಕ್ರಾಂತಿಯಾಗಲಿ…

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

ಮನೆಯ ಒಳಾಂಗಣದ ಅಂದ ಹೆಚ್ಚಿಸುವ ಗಾರ್ಡನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

police

Bidar; ಹಣ ಹಂಚುವ ದೂರು: ನಾಗಮಾರಪಳ್ಳಿ‌ ಮನೆಯಲ್ಲಿ ಪರಿಶೀಲನೆ

1-qeqewewq

Vijayapura; 33 ಲಕ್ಷ ರೂ. ಮೌಲ್ಯದ ಮಾದಕ ವಸ್ತು, ವಾಹನ ವಶ : ದೆಹಲಿ ಮೂಲದ ವ್ಯಕ್ತಿ ಬಂಧನ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Temperature; ಕರಾವಳಿಯಲ್ಲಿ ಬಿಸಿಯ ವಾತಾವರಣ

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

Supreme Court ಚಾಟಿ ಬೀಸಿದ್ದರಿಂದ ಕೇಂದ್ರದ ಪರಿಹಾರ: ಹರೀಶ್‌

1-qwqweqwe

Navalgund:ರಾಜಾಹುಲಿ ಭರ್ಜರಿ ರೋಡ್ ಶೋ: ಜೋಶಿ ಗೆಲುವು ನಿಶ್ಚಿತ ಎಂದ ಮಾಜಿ ಸಿಎಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.