ಬಿಳೀದು ಕರಿ,ಕರೀದು ಬಿಳಿ ಮಾಡ್ಲಿಕ್ಕೆ ಆಗ್ತದಾ:ಸಿದ್ದರಾಮಯ್ಯ ಪ್ರಶ್ನೆ
Team Udayavani, Dec 23, 2018, 1:55 PM IST
ಬೆಳಗಾವಿ: ನಾನು ಯಡಿಯೂರಪ್ಪನವರ ಮಾತಿಗೆ ಮೂರು ಕಾಸಿನ ಕಿಮ್ಮತ್ತು ಕೊಡುವುದಿಲ್ಲ. ಅವರು ಸತ್ಯ ಹೇಳುವುದಿಲ್ಲ.ಇತ್ತೀಚೆಗೆ ಬಹಳ ಜಾಸ್ತಿನೇ ಸುಳ್ಳು ಹೇಳುತ್ತಿದ್ದಾರೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.
ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿ, ಯಡಿಯೂರಪ್ಪ ಅವರು ಅಧಿಕಾರದ ಹಗಲುಗನಸು ಕಾಣುತ್ತಿದ್ದಾರೆ. ಅವರಿಗೆ ಜನರು ಬಹುಮತ ಕೊಟ್ಟಿಲ್ಲಾ , ಹೇಗೆ ಅಧಿಕಾರಕ್ಕೆ ಬರುವುದು. ಬಿಳೀದು ಕರಿ , ಕರೀದು ಬಿಳಿ ಮಾಡ್ಲಿಕ್ಕೆ ಆಗುತ್ತದಾ ಎಂದು ಪ್ರಶ್ನಿಸಿದರು.
ಸಚಿವ ಸಂಪುಟ ವಿಸ್ತರಣೆ ವಿಚಾರದಲ್ಲಿ ರಮೇಶ್ ಜಾರಕಿಹೊಳಿ ಮತ್ತು ಬಿ.ಸಿ.ಪಾಟೀಲ್ ಅವರಿಗೆ ಅಸಮಾಧಾನ ಇದೆ. ನಾನು ಮಾತುಕತೆ ನಡೆಸುತ್ತೇನೆ.ಆದರೆ ಈ ವಿಚಾರದಲ್ಲಿ ಪಕ್ಷದ ನಿರ್ಧಾರಕ್ಕೆ ಬದ್ಧರಾಗಿರಬೇಕು ಎಂದರು.
ರಾಹುಲ್ ಗಾಂಧಿ ಅವರು ಕರ್ನಾಟಕದಿಂದ ಈ ಬಾರಿ ಕಣಕ್ಕಿಳಿಯುವುದಿಲ್ಲ. ಅವರು ಅಮೇಠಿಯಿಂದಲೇ ಸ್ಪರ್ಧಿಸುತ್ತಾರೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hassan Pen Drive Case: ಕಾಂಗ್ರೆಸ್ ಪ್ರತಿಭಟನಕಾರರ ವಿರುದ್ಧ ಜೆಡಿಎಸ್ ದೂರು
SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು
PM Modi ಭಾಷಣ ತಿರುಚಿದ ಆರೋಪ: ಪ್ರಿಯಾಂಕ್ ವಿರುದ್ಧ ಬಿಜೆಪಿ ದೂರು
Prajwal,ಶಾಸಕ ರೇವಣ್ಣ ಬಂಧನಕ್ಕೆ ಆಗ್ರಹ: ಬಿಜೆಪಿ-ಜೆಡಿಎಸ್ ವಿರುದ್ಧ ಕಾಂಗ್ರೆಸ್ ವಾಗ್ಧಾಳಿ
Election ಹೊಸ್ತಿಲಲ್ಲಿ ಪ್ರಜ್ವಲಿಸಿದ ಪೆನ್ಡ್ರೈವ್; ಸಂಕಷ್ಟದಲ್ಲಿ ಜೆಡಿಎಸ್