ದೆಹಲಿ ಕರ್ನಾಟಕ ಸಂಘ: ಕಾರಂತ, ಮಹಿಷಿ, ಕನ್ನಡ ಭಾರತಿ ಪ್ರಶಸ್ತಿ ಪ್ರದಾನ


Team Udayavani, Dec 23, 2018, 5:12 PM IST

2112mum06.jpg

ಹೊಸದಿಲ್ಲಿ/ಮುಂಬಯಿ: ದೆಹಲಿ ಕರ್ನಾಟಕ ಸಂಘವು ನೀಡುವ ಡಾ|  ಶಿವರಾಮ ಕಾರಂತ ಪ್ರಶಸ್ತಿಯನ್ನು ಖ್ಯಾತ ಕವಿ ಸುಬ್ರಾಯ ಚೊಕ್ಕಾಡಿ ಮತ್ತು ಕನ್ನಡ ಭಾರತಿ ರಂಗ ಪ್ರಶಸ್ತಿಯನ್ನು ರಂಗಕರ್ಮಿ ಸುರೇಶ್‌ ಆನಗಳ್ಳಿ ಅವರಿಗೆ ಸಂಘದ ಸಭಾಂಗಣದಲ್ಲಿ ಡಿ.16ರಂದು ಜರಗಿದ ಸಮಾರಂಭದಲ್ಲಿ ಪ್ರದಾನಿಸಲಾಯಿತು.

ಸಂಘದ ಅಧ್ಯಕ್ಷರಾದ ವಸಂತ ಶೆಟ್ಟಿ ಬೆಳ್ಳಾರೆ ಅವರು ಮಾತನಾಡುತ್ತ, ಡಾ. ಸರೋಜಿನಿ ಮಹಿಷಿ ಪ್ರಶಸ್ತಿ ವಿಜೇತರಾದ ಡಾ| ಚಂದ್ರಶೇಖರ ಪಾಟೀಲ್‌ ಅವರು ಕಾರಣಾಂತರಗಳಿಂದ ದಿಲ್ಲಿಗೆ ಬರಲಾಗದಿದ್ದು ದರಿಂದ ಅವರ ಪ್ರಶಸ್ತಿಯನ್ನು ಬೆಂಗಳೂರಿನಲ್ಲಿ ಪ್ರದಾನಿಸಲಾಗುವುದು  ಎಂದರು.  

ಡಾ|  ಶಿವರಾಮ ಕಾರಂತ ಪ್ರಶಸ್ತಿಯನ್ನು ಎರಡು ವರ್ಷಕ್ಕೊಮ್ಮೆ ನೀಡುತ್ತಿದ್ದೇವೆ, ಅದು ಪ್ರತಿ ವರ್ಷ ನೀಡುವಂತಾಗಬೇಕು. ಅಲ್ಲದೇ, ಮುಂದಿನ ವರ್ಷಗಳಲ್ಲಿ ಈ ಪ್ರಶಸ್ತಿಗಳ ಮೊತ್ತವನ್ನು ಕೂಡಾ ಹೆಚ್ಚಿಸಲು ಪ್ರಯತ್ನ ಮಾಡಬೇಕೆಂದು ತಿಳಿಸುತ್ತ  ಈ ಮೂರು ಪ್ರಶಸ್ತಿಗಳ ಆಯ್ಕೆ ಸಮಿತಿಗೆ ಬೆಳ್ಳಾರೆ ಅವರು ಧನ್ಯವಾದ ಸಲ್ಲಿಸಿದರು.

ಡಾ:  ಶಿವರಾಮ ಕಾರಂತ ಪ್ರಶಸ್ತಿ ಸ್ವೀಕರಿಸಿ ಮಾತಾಡಿದ ಸುಬ್ರಾಯ ಚೊಕ್ಕಾಡಿ ಅವರು, ಕಾರಂತರ ಜೊತೆಗಿನ ತಮ್ಮ ಸ್ನೇಹ ಮತ್ತು ಜಗಳಗಳನ್ನು ತಮ್ಮ ಎಂದಿನ ಶೈಲಿಯಲ್ಲಿ ನೆನಪಿಸಿಕೊಂಡರು. ದೆಹಲಿ ಕರ್ನಾಟಕ ಸಂಘದ ಕನ್ನಡ ಭಾರತಿ ಪ್ರಶಸ್ತಿ ಸ್ವೀಕರಿಸಿದ ಸುರೇಶ್‌ ಅನಗಳ್ಳಿ ಅವರು, ರಂಗಕರ್ಮಿಗಳ ದುಡಿಮೆ ಮತ್ತು ಅದು ಬಹಳ ಬೇಗ ಜನಮಾನಸದಿಂದ ಮರೆಯಾಗುವ ಪರಿಯನ್ನು ಸೂಕ್ಷ್ಮ¾ವಾಗಿ ವಿವರಿಸಿದರು.

ಸಮಾರೋಪ ಭಾಷಣ ಮಾಡಿದ ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಪ್ರೊ. ಎಸ್‌.ಜಿ. ಸಿದ್ದರಾಮಯ್ಯ ಅವರು, ಹೊರನಾಡ ಕನ್ನಡಿಗರ ದುಡಿಮೆಯನ್ನು ಕೊಂಡಾಡಿದರು ಹಾಗೂ ಇಂತಹ ಅರ್ಥಪೂರ್ಣ ಕಾರ್ಯಕ್ರಮಗಳು ವಿಶ್ವವಿದ್ಯಾಲಯಗಳಲ್ಲೂ ನಡೆಯುವುದಿಲ್ಲ ಎಂದರು.

ಇದೇ ಸಂದರ್ಭದಲ್ಲಿ ನಡೆದ ವಿಚಾರ ಸಂಕಿರಣದಲ್ಲಿ ಖ್ಯಾತ ಜಾನಪದ ವಿದ್ವಾಂಸರಾದ ಡಾ| ಪುರುಷೋತ್ತಮ ಬಿಳಿಮಲೆ ಅವರು, ದೆಹಲಿ ಕರ್ನಾಟಕ ಸಂಘದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನನಗೆ ತುಂಬ ಕಾಲ ನೆನಪಿನಲ್ಲಿರುತ್ತದೆ ಎಂದು ಹೇಳಿದರು. ಶಿವರಾಮ ಕಾರಂತರು ಮೂವತ್ತರ ದಶಕದಲ್ಲಿ ಇತರ ಬರಹಗಾರರಿಗಿಂತ ಕಾಲದ ದೃಷ್ಟಿಯಿಂದ ಮುಂದಕ್ಕಿದ್ದರು. ಕಾರಂತರ ಎಲ್ಲಾ ಕೃತಿಗಳಲ್ಲಿಯು ಕೂಡಾ ಕಂಡುಬರುವುದು ಅಪೂರ್ವವಾದ ಒಂದು ಜೀವನಶ್ರದ್ಧೆ. ಇದೇ ಬಗೆಯ ಜೀವನಶ್ರದ್ಧೆಯನ್ನು ಇಟ್ಟುಕೊಂಡು ಬದುಕಿದ ಮತ್ತು ಬರೆದ ಇನ್ನೊಬ್ಬ ಬರಹಗಾರರು ಸುಬ್ರಾಯ ಚೊಕ್ಕಾಡಿಯವರು. ಸಂಘವು ಅವರಿಗೆ ಶಿವರಾಮ ಕಾರಂತ ಪ್ರಶಸ್ತಿಯನ್ನು ನೀಡಿ ತನ್ನ ಗೌರವವನ್ನು ಹೆಚ್ಚಿಸಿದೆ ಎಂದರು.

ಸಂಘದ ಪ್ರಧಾನ ಕಾರ್ಯದರ್ಶಿ ಸಿ.ಎಂ. ನಾಗರಾಜ ಅವರು ಧನ್ಯವಾದ ಸಲ್ಲಿಸಿದರು. ಕಾರ್ಯಕಾರಿ ಸಮಿತಿ ಸದಸ್ಯೆ ಪೂಜಾ ಪಿ. ರಾವ್‌ ಕಾರ್ಯಕ್ರಮವನ್ನು ನಿರೂಪಿಸಿದರು.

ಟಾಪ್ ನ್ಯೂಸ್

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

LS Polls: ಲೋಕಸಭಾ ಚುನಾವಣೆಗೆ ಸ್ಪರ್ಧಿಸುತ್ತಾರಾ ಪ್ರಿಯಾಂಕಾ ಗಾಂಧಿ…? ವರದಿ ಹೇಳೋದೇನು

Lok Sabha Polls: ಈ ಬಾರಿಯ ಲೋಕಸಭಾ ಚುನಾವಣೆಗೆ ಪ್ರಿಯಾಂಕಾ ಗಾಂಧಿ ಸ್ಪರ್ಧಿಸಲ್ಲ… ವರದಿ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Tourist spot: ಪ್ರವಾಸಿಗರ ಡೆತ್‌ಸ್ಪಾಟ್‌ ಆಗಿರುವ ಸಂಗಮ

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌

Chilled beer: ಬಿಸಿಲ ಧಗೆ; ಚಿಲ್ಡ್ ಬಿಯರ್‌ಗೆ ಭಾರಿ ಡಿಮ್ಯಾಂಡ್ ‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ಅಪಹಾಸ್ಯ ನೀಡಿದ ಅದೃಷ್ಟ

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ದುಬೈ ವರ್ಲ್ಡ್ ಕಪ್‌ 2024- ಗೆಲ್ಲುವ ಅರಬ್‌ ಕುದುರೆಗಳ ನಾಗಾಲೋಟ!

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

Desi Swara: ಬಾಕ್ಸಿಂಗ್‌ ಟೂರ್ನ್ಮೆಂಟ್‌ -ಚಿನ್ನದ ಪದಕ ಮುಡಿಗೇರಿಸಿದ ಅವನೀಶ್‌ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

JDS: ಆಶ್ಲೀಲ ವಿಡಿಯೋ ಪ್ರಕರಣ; ಜೆಡಿಎಸ್‌ ಪಕ್ಷದಿಂದ ಪ್ರಜ್ವಲ್‌ ರೇವಣ್ಣ ಅಮಾನತು

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

ಈ ಪೆನ್‌ಡ್ರೈವ್‌ನಲ್ಲಿರುವ ವಿಡಿಯೋ ನಿಜ: ನಾನು, ಹೀರೊಯಿನ್ ಸೇರಿ ಮಾಡಿದ ವಿಡಿಯೋ ಇದು; ಪ್ರಥಮ್

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Neha ಹತ್ಯೆ ಪ್ರಕರಣ ಮುಚ್ಚಿ ಹಾಕುವ ಯತ್ನ ನಡೆಯುತ್ತಿದೆ: ಸರಕಾರದ ವಿರುದ್ಧ ಆರ್.ಅಶೋಕ್ ಕಿಡಿ

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೋಟಿಸ್

Fake Video: ಅಮಿತ್ ಶಾ ನಕಲಿ ವಿಡಿಯೋ ಪ್ರಕರಣ… ಓರ್ವ ಬಂಧನ, 3 ವಿಪಕ್ಷ ನಾಯಕರಿಗೆ ನೊಟೀಸ್

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Sandalwood: ಇದು ನಿಜಕ್ಕೂ ಫ್ಯಾಮಿಲಿ ಡ್ರಾಮಾ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.