ಕರಾವಳಿಯ ದೇವಸ್ಥಾನಗಳಲ್ಲಿ ಭಕ್ತ ಸಂದೋಹ
Team Udayavani, Dec 24, 2018, 9:48 AM IST
ಸುಬ್ರಹ್ಮಣ್ಯ/ಕೊಲ್ಲೂರು/ಉಡುಪಿ: ಶಾಲೆ-ಕಾಲೇಜುಗಳು ಮತ್ತು ಸರಕಾರಿ ಕಚೇರಿಗಳಿಗೆ ಸಾಲು ರಜೆಗಳು ಆರಂಭವಾಗಿದ್ದು, ಕರಾವಳಿಯ ದೇಗುಲಗಳಲ್ಲಿ ಅಧಿಕ ಭಕ್ತಸಂದೋಹ ಕಾಣಿಸಿಕೊಂಡಿದೆ. ಸುಬ್ರಹ್ಮಣ್ಯದಲ್ಲಿ ದಾಖಲೆಯ 135 ತುಲಾಭಾರ ಸೇವೆಗಳು ನಡೆದರೆ ಕೊಲ್ಲೂರಿನಲ್ಲಿ ವರ್ಷಾಧಿಕ 20 ಸಾವಿರಕ್ಕೂ ಹೆಚ್ಚು ಭಕ್ತರು ದೇವಿ ದರ್ಶನ ಪಡೆದರು.
ಕುಕ್ಕೆ ಸುಬ್ರಹ್ಮಣ್ಯ ದರ್ಶನಕ್ಕೆ ಭಕ್ತ ಸಾಗರವೇ ಹರಿದು ಬಂದಿದ್ದು, ರವಿವಾರ ದಾಖಲೆಯ 135 ತುಲಾಭಾರ ಸೇವೆ ನೆರವೇರಿದೆ. ಕೊಲ್ಲೂರು ದೇವಸ್ಥಾನದಲ್ಲಿ 20 ಸಾವಿರಕ್ಕೂ ಹೆಚ್ಚು ಭಕ್ತರು ಶ್ರೀದೇವಿಯ ದರ್ಶನ ಪಡೆದಿದ್ದಾರೆ. ಮಧ್ಯಾಹ್ನ 10 ಸಾವಿರಕ್ಕೂ ಅಧಿಕ ಭಕ್ತರು ಅನ್ನಪ್ರಸಾದ ಸ್ವೀಕರಿಸಿದ್ದಾರೆ.
ಸಾಮಾನ್ಯ ದಿನಗಳಲ್ಲಿ ಗರಿಷ್ಠ 3 ಸಾವಿರ ಜನರು ಭೇಟಿ ನೀಡುತ್ತಿದ್ದು, ಇಂದಿನ ಭಕ್ತ ಸಂದೋಹ ವರ್ಷದಲ್ಲಿಯೇ ಅತಿ ಹೆಚ್ಚು ಎಂದು ದೇಗುಲದ ಮೂಲಗಳು ತಿಳಿಸಿವೆ. ಶ್ರೀಕೃಷ್ಣಮಠದಲ್ಲಿ ರವಿವಾರ ಭಕ್ತರ ಸಂಖ್ಯೆ ಹೆಚ್ಚಿಗೆ ಇತ್ತು. ಸರಣಿ ರಜೆ ಇರುವುದರಿಂದ ಸೋಮವಾರ ರಜೆ ಹಾಕಿ ಬರುವ ಪ್ರವಾಸಿಗರ ಸಂಖ್ಯೆ ಹೆಚ್ಚಿಗೆ ಆಗಿದೆ. ಭೋಜನ ಪ್ರಸಾದಕ್ಕೂ ಭಕ್ತರ ಸಂಖ್ಯೆ ಹೆಚ್ಚಿಗೆ ಇತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಮಹಾತ್ಮರ ಸಮಾಜಮುಖಿ ಸಂದೇಶ ಸಾರ್ವಕಾಲಿಕ: ಗುರುಮೂರ್ತಿ ಶ್ರೀ
Kollywood: ಕಮಲ್ ಹಾಸನ್ ʼಥಗ್ ಲೈಫ್ʼ ಅಖಾಡಕ್ಕೆ ಬಾಲಿವುಡ್ನ ಖ್ಯಾತ ನಟರು ಎಂಟ್ರಿ?
ಮೋದಿಯಿಂದ ಬಡತನ ಮುಕ್ತ ಭಾರತ: ಬಸವರಾಜ ಬೊಮ್ಮಾಯಿ
Hubli; ಕುಮಾರಸ್ವಾಮಿ ಎದುರೇ ಕಾಂಗ್ರೆಸ್ – ಜೆಡಿಎಸ್ ಕಾರ್ಯಕರ್ತರ ನಡುವೆ ಮಾರಾಮಾರಿ
Mangaluru ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವಿನ್ನು ಮೌನ! ಇಲ್ಲಿದೆ ಕಾರಣ