ಮದರಂಗಿ ಕೃಷ್ಣ ಹೊಸ ಚಿತ್ರ ಲವ್‌ಮಾಕ್ಟೆಲ್‌


Team Udayavani, Dec 24, 2018, 4:33 PM IST

ನಟ ಮದರಂಗಿ ಕೃಷ್ಣ ನಿರ್ದೇಶಕರಾಗುತ್ತಿದ್ದಾರೆ ಎಂಬ ಸುದ್ದಿ ಈ ಹಿಂದೆ ಇದೇ “ಬಾಲ್ಕನಿ’ಯಲ್ಲಿ ಬಂದಿತ್ತು. ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದು ನಿರ್ದೇಶನದ ಜವಾಬ್ದಾರಿ ಹೊತ್ತಿರುವ ಕೃಷ್ಣ, ಆಗ ತಮ್ಮ ಚಿತ್ರಕ್ಕಿನ್ನೂ ನಾಮಕರಣ ಮಾಡಿರಲಿಲ್ಲ. ಈಗ ಚಿತ್ರಕ್ಕೆ “ಲವ್‌ ಮಾಕ್ಟೆಲ್‌’ ಎಂದು ಹೆಸರಿಟ್ಟಿದ್ದಾರೆ.

ವಿಶೇಷವೆಂದರೆ, ಚಿತ್ರದ ಶೀರ್ಷಿಕೆ ಹಾಗೂ ಮೊದಲ ಪೋಸ್ಟರ್‌ ಅನ್ನು ನಟ ಸುದೀಪ್‌ ಅವರು ಬಿಡುಗಡೆ ಮಾಡುತ್ತಿದ್ದಾರೆ. ಹೌದು, ಈ ಕುರಿತು “ಉದಯವಾಣಿ’ ಜೊತೆ ಮಾತನಾಡಿದ ನಿರ್ದೇಶಕ ಕಮ್‌ ನಟ ಕೃಷ್ಣ, “ಹೊಸ ವರ್ಷಕ್ಕೆ  ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್‌ ಅನ್ನು ಸುದೀಪ್‌ ಅವರು ಅನಾವರಣ ಮಾಡಲಿದ್ದಾರೆ. ಸದ್ಯಕ್ಕೆ ಶೀರ್ಷಿಕೆ, ಪೋಸ್ಟರ್‌ ವಿನ್ಯಾಸದ ಕೆಲಸ ನಡೆಯುತ್ತಿದೆ. ಇನ್ನು, “ಲವ್‌ ಮಾಕ್ಟೆಲ್‌’ ಶೀರ್ಷಿಕೆ ಬಗ್ಗೆ ಹೇಳುವುದಾದರೆ, ಮಾಕ್ಟೆಲ್‌ ಜ್ಯೂಸ್‌ ಬಗ್ಗೆ ಎಲ್ಲರಿಗೂ ಗೊತ್ತು. ಹಣ್ಣುಗಳ ಮಿಕ್ಸ್‌ ಜ್ಯೂಸ್‌ಗೆ “ಮಾಕ್ಟೆಲ್‌’ ಎನ್ನುತ್ತಾರೆ.

ಹಾಗೆಯೇ, ಚಿತ್ರದಲ್ಲೂ ಸಹ ನಾಯಕ ಮೂರ್‍ನಾಲ್ಕು ಹುಡುಗಿಯರ ಜೊತೆ ಲವ್‌ ಮಾಡ್ತಾನೆ. ಕಥೆ ಕೂಡ ಸಂಪೂರ್ಣವಾಗಿ ಪ್ರೀತಿ ಮೇಲೆಯೇ ಸಾಗುತ್ತದೆ. ಚಿತ್ರದ ಕಥೆಯಲ್ಲಿ ಸಾಕಷ್ಟು ಪ್ರೀತಿಗೆ ಸಂಬಂಧಿಸಿದ ವಿಷಯಗಳಿವೆ. ಹಾಗಾಗಿ, ಚಿತ್ರಕ್ಕೆ “ಲವ್‌ ಮಾಕ್ಟೆಲ್‌’ ಎಂದು ಹೆಸರಿಟ್ಟಿದ್ದೇನೆ.
ಅದು ಕಥೆಗೆ ಪೂರಕವಾಗಿದ್ದು, ಈಗಿನ ಟ್ರೆಂಡ್‌ಗೂ ಸರಿಹೊಂದುತ್ತೆ ಎಂಬ ಭಾವನೆಯಿಂದ ಇಡಲಾಗಿದೆ. ಸುದೀಪ್‌ ಅವರ ಬಳಿ ಹೋಗಿ, ಚಿತ್ರದ ಶೀರ್ಷಿಕೆ ಮತ್ತು ಪೋಸ್ಟರ್‌ ಬಿಡುಗಡೆ ಮಾಡಿಕೊಡಬೇಕು ಎಂಬ ಮನವಿ ಇಟ್ಟಾಗ, ಪ್ರೀತಿಯಿಂದಲೇ ಅವರು ಗ್ರೀನ್‌ಸಿಗ್ನಲ್‌ ಕೊಟ್ಟಿದ್ದಾರೆ.

ಹೊಸ ವರ್ಷದ ದಿನದಂದು “ಲವ್‌ ಮಾಕ್ಟೆಲ್‌’ ಶೀರ್ಷಿಕೆ ಜೊತೆಗೆ ಮೊದಲ ಪೋಸ್ಟರ್‌ ಕೂಡ ಬಿಡುಗಡೆಯಾಗಲಿದೆ’ ಎಂದು ಮಾಹಿತಿ ಕೊಡುತ್ತಾರೆ ಕೃಷ್ಣ. ಈಗಾಗಲೇ ಚಿತ್ರದ ಚಿತ್ರೀಕರಣ ಶೇ.50 ರಷ್ಟು ನಡೆದಿದೆ. ಮೊದಲ ನಿರ್ದೇಶನವಾಗಿರುವುದರಿಂದ ಸಾಕಷ್ಟು ಅನುಭವ ಕೂಡ ಆಗಿದೆ ಎನ್ನುವ ಮದರಂಗಿ ಕೃಷ್ಣ, “ಇಲ್ಲಿ ಯಾವುದೇ ಫ‌ಲಿತಾಂಶ ಬಂದರೂ ನಾನೇ ಜವಾಬ್ದಾರಿ ಹೊರಬೇಕು. ಹಾಗಾಗಿ, ತುಂಬಾ ಕಾಳಜಿ ವಹಿಸಿ, ಎಲ್ಲಾ ವಿಭಾಗದಲ್ಲೂ ಎಚ್ಚರಿಕೆಯಿಂದ ಕೆಲಸ ಮಾಡುತ್ತಿದ್ದೇನೆ. ಇನ್ನೂ ಒಂದು ತಿಂಗಳ ಕಾಲ ಚಿತ್ರೀಕರಣ ನಡೆಯಲಿದೆ.

ಚಿತ್ರದಲ್ಲಿ ನಾಲ್ಕು ಮಾಂಟೇಜಸ್‌ ಹಾಡುಗಳಿವೆ. ಆದರೆ, ಸಂಗೀತ ನಿರ್ದೇಶಕರಿನ್ನೂ ಫಿಕ್ಸ್‌ ಆಗಿಲ್ಲ. ಕ್ರೇಜಿಮೈಂಡ್ಸ್‌ನ ಶ್ರೀ ಸಂಕಲನದ ಜೊತೆಗೆ ಇದೇ ಮೊದಲ ಬಾರಿಗೆ ಛಾಯಾಗ್ರಹಣ ಮಾಡುತ್ತಿದ್ದಾರೆ. ಕೃಷ್ಣ ಟಾಕೀಸ್‌ ಬ್ಯಾನರ್‌ನಲ್ಲೇ ತಯಾರಾಗುತ್ತಿರುವ ಈ ಚಿತ್ರದಲ್ಲಿ ಮೂವರು ನಾಯಕಿಯರಿದ್ದಾರೆ. ಆ ಪೈಕಿ ಈಗ ಮಿಲನ ನಾಗರಾಜ್‌ ಮಾತ್ರ ಪಕ್ಕಾ ಆಗಿದ್ದಾರೆ. ಉಳಿದಂತೆ ಇಬ್ಬರು ಆಯ್ಕೆಯಾಗಬೇಕಿದೆ.

ಇದೊಂದು ಎಮೋಷನಲ್‌ ಲವ್‌ಸ್ಟೋರಿಯಾಗಿದ್ದು, ಮೂರು ಭರ್ಜರಿ ಆ್ಯಕ್ಷನ್‌ ಕೂಡ ಇರಲಿದೆ. ನಾಯಕನ ಬದುಕಿನಲ್ಲಿ ಮೂರು ಹಂತಗಳು ಬರಲಿದ್ದು, ಒಂದೊಂದು ಹಂತದಲ್ಲಿ ಒಂದೊಂದು ಕಥೆ ಬಿಚ್ಚಿಕೊಳ್ಳುತ್ತಾ ಹೋಗುತ್ತದೆ. ಆ ಕಥೆ ಮೂಲಕ ನಾಯಕನ ಲೈಫ್ ಕೂಡ ಬದಲಾಗುತ್ತಾ
ಹೋಗುತ್ತದೆ’ ಎಂಬುದು ಕಥೆ ಎನ್ನುತ್ತಾರೆ ಕೃಷ್ಣ.

ಟಾಪ್ ನ್ಯೂಸ್

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Bangarapet ಕೆರೆಯಲ್ಲಿ ಸೆಲ್ಫಿ ತೆಗೆಯಲು ಹೋಗಿ ಅಪ್ಪ, ಮಗಳು ಸಾವು

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

Andhra Pradesh ರಾಜಮಂಡ್ರಿ ಲೋಕಸಭಾ ಕ್ಷೇತ್ರಕ್ಕೆ ಸುಧಾಕರ್‌ ಉಸ್ತುವಾರಿ

1-wewewqewqew

Hosapete; ಕೆಲವು ದೇಶಗಳು ಭಾರತ ಸರ್ಕಾರ ದುರ್ಬಲವಾಗಿರಲು ಬಯಸುತ್ತಿವೆ: ಮೋದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಮಣಿಪಾಲ ಸಂಸ್ಥೆಗಳಿಗೆ ಜಾಗತಿಕ ಸ್ಥಾನ ಕಲ್ಪಿಸಿದ ಡಾ|ರಾಮದಾಸ್‌ ಪೈ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

ಹೌತಿ ದಾಳಿ: ಹಡಗನ್ನು ರಕ್ಷಿಸಿದ ಭಾರತ ನೌಕಾಪಡೆ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

MP Prajwal Revanna ವಿರುದ್ಧ ಮಹಿಳೆಯರು ಕೆಂಡ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

Prajwal Revanna ತಪ್ಪು ಮಾಡಿದ್ದರೆ ಶಿಕ್ಷೆ ಆಗಲೇಬೇಕು: ಎಚ್‌ಡಿಕೆ

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

UPA ಅವಧಿಯಲ್ಲಿ ರಾಜ್ಯಕ್ಕೆ ಸಿಕ್ಕಿದ್ದು ಬರೀ ಚಿಪ್ಪು: ಅಶೋಕ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.